ಮಡಿಕೇರಿ ಏ.6 NEWS DESK : ಲೋಕಸಭಾ ಚುನಾವಣಾ ಸಂಬಂಧ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಭದ್ರತಾ ಕೊಠಡಿ ಮತ್ತು ಮತಗಟ್ಟೆ ಅಧಿಕಾರಿಗಳಿಗೆ ನೀಡುವ ತರಬೇತಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ, ಪರಿಶೀಲಿಸಿದರು. ತಾಲೂಕು ಕಚೇರಿಯಲ್ಲಿ ಚುನಾವಣೆ ಕರ್ತವ್ಯದ ಬಗ್ಗೆ ಕೈಕೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದರು. ಅಲ್ಲದೇ ತಾಲೂಕು ಕಚೇರಿ ರೆಕಾರ್ಡ್ ಶಾಖೆಯಲ್ಲಿ ನಡೆಯುತ್ತಿರುವ ಕಡತಗಳ ಡಿಜಿಟಲೀಕರಣ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ತಹಶಿಲ್ದಾರರಾದ ರಾಮಚಂದ್ರ ಹಾಗೂ ಇತರರು ಇದ್ದರು.
ಲೇಖಕ: admin
ಮಡಿಕೇರಿ ಏ.6 NEWS DESK : ನಗರದ ಕೊಡಗು ವಿದ್ಯಾಲಯ ಶಾಲೆಯಲ್ಲಿ ಯು ಕೆ ಜಿ ಮಕ್ಕಳಿಗೆ ಪದವಿ ಪ್ರದಾನ ಸಮಾರಂಭ ಜರುಗಿತು. ಸುಂಟಿಕೊಪ್ಪದ ಶಾಂತಿ ಭವನ್ ನರ್ಸರಿ ಶಾಲೆಯ ಸಂಸ್ಥಾಪಕಿ ಲಿಂಡಾ ಸಿಂಗಮ್ ಯು.ಕೆ.ಜಿ ಮಕ್ಕಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಸಣ್ಣ ಮಕ್ಕಳು ಉದ್ಯಾನವನದಲ್ಲಿ ಇರುವ ಹೂವಿನ ಹಾಗೆ, ಪುಪ್ಪ ಸಸಿಯಲ್ಲಿರುವ ಮೊಗ್ಗು ಎಷ್ಟು ಸುಂದರವಾದ ಹೂವಾಗಿ ಅರಳುತ್ತದೋ,, ಅದೇ ರೀತಿ ಸುಂದರ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಕ್ಕಳ ಬೆಳವಣಿಗೆಗೆ ತಾಳ್ಮೆ ಮುಖ್ಯ ಎಂದು ಪೋಷಕರಿಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಕೆ.ಎಸ್.ಸುಮಿತ್ರ, ಆಡಳಿತ ನಿರ್ವಹಣಾಧಿಕಾರಿ ಪಿ.ರವಿ, ಆಡಳಿತ ಮಂಡಳಿ ಸದಸ್ಯ ಸಿ.ಎಸ್.ಗುರುದತ್ತ್, ಹಿರಿಯ ವಕೀಲರು ಹಾಗೂ ಶಾಲೆಯ ಕಾನೂನು ಸಲಹೆಗಾರ ಡಿ.ಜಿ.ಕಿಶೋರ್, ಪೋಷಕರು, ಬೋಧಕ ಹಾಗೂ ಬೋಧಕೇತರ ವರ್ಗದವರು ಪಾಲ್ಗೊಂಡಿದ್ದರು. ಪ್ಲೆ ಹೋಮ್, ಎಲ್ ಕೆ ಜಿ, ಯು ಕೆ ಜಿ ಹಾಗೂ ಒಂದನೇ ತರಗತಿಯ ಪುಟಾಣಿ ಮಕ್ಕಳಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ನೆರೆದಿದ್ದ…
ಮಡಿಕೇರಿ ಏ.6 NEWS DESK : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಡಾ.ಮಮತಾ ಕೇಶವ್ ಅವರು ಬಿಜೆಪಿ ವೃತ್ತಿಪರ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಪಕ್ಷದ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತ್ತಾ, ತಳಮಟ್ಟದಲ್ಲಿ ಪಕ್ಷ ಸಂಘಟನೆಗೊಳಿಸಿ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಮತ್ತು ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸುವಂತೆ ವೃತ್ತಿಪರ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿರಣ್ಕುಮಾರ್ ಅಣ್ಣೇಗೇರಿ ತಿಳಿಸಿದ್ದಾರೆ. ಮಮತಾ ಕೇಶವ್ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇವರ ಸೇವಾ ಮನೋಭಾವವನ್ನು ಗುರುತಿಸಿ ಹೊಸುರು ಏಷ್ಯಾ ಕಲ್ಚರಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಅಲ್ಲದೆ ದೆಹಲಿಯಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ , ಹೃದಯ ವಾಹಿನಿ ಲಯನ್ಸ್ ಇಂಟರ್ ನ್ಯಾಷನಲ್ ಅವರಿಂದ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಗ್ಲೋಬಲ್ ಮೆನ್ ಅವಾರ್ಡ್, ಅಂತರಾಷ್ಟ್ರೀಯ ಸಾಧನೆ ಐಕಾನ್ ಪ್ರಶಸ್ತಿ ,…
ನಾಪೋಕ್ಲು ಏ.1 NEWS DESK : ದೊಡ್ಡ ಪುಲಿಕೋಟು ಗ್ರಾಮದ ಕೋಟೆ ಭಗವತಿ ದೇವಿಯ ವಾರ್ಷಿಕ ಉತ್ಸವವು ಏ.7 ರಿಂದ ಏ.9ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ನೆರವೇರಲಿದೆ. ಏ.7 ರಂದು ರಾತ್ರಿ ಅಂದಿ ಬೊಳಕ್, ಮಹಾಪೂಜೆ, ಏ.8 ರಂದು ಎತ್ತು ಪೋರಾಟ, ಪಟ್ಟಣಿ ದೇವಿಯ ದರ್ಶನ ಬಲಿ ಜರುಗಲಿದೆ. ಏ.9 ರಂದು ಬೊಳಕಾಟ್, ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಬಳಿಕ ಕಾವೇರಿ ನದಿಯಲ್ಲಿ ಭಗವತಿ ದೇವಿಯ ಜಳಕ ನಡೆಯಲಿದೆ. ದೇವಾಲಯದ ಸುತ್ತ ದೇವಿಯ ನೃತ್ಯಬಲಿ ಪ್ರದರ್ಶನ, ಆರಾಟು ಒಪ್ಪಿಸುವುದು ಹಾಗೂ ಮಹಾಪೂಜೆ ನೆರವೇರಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ವಿನಂತಿಸಿಕೊಂಡಿದ್ದಾರೆ.
ನಾಪೋಕ್ಲು ಏ.6 NEWS DESK : ಪೊನ್ನುಮುತ್ತಪ್ಪ ದೇವರ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಅಂಗವಾಗಿ ಗಣಪತಿ ಹೋಮ ಹಾಗೂ ಶುದ್ಧ ಕಳಸ ನಡೆಯಿತು. ಕೇರಳದ ನೀಲೇಶ್ವರದ ಮುರಳಿ ಕೃಷ್ಣ ತಂತ್ರಿ ಅವರ ನೇತೃತ್ವದಲ್ಲಿ ಗುರು ಪೂಜೆ ಹಾಗೂ ಶ್ರೀದೇವಿ ಪೂಜೆ ನಡೆಯಿತು. ಸಂಜೆ ಮುತ್ತಪ್ಪ ದೇವರ ಕಳಸ ಜರುಗಿತು. ಕಾವೇರಿ ನದಿಯಲ್ಲಿ ಸ್ನಾನದ ನಂತರ ಪ್ರಖ್ಯಾತ ಕೇರಳದ ಚಂಡೆಯೊಂದಿಗೆ ಪಟ್ಟಣದ ಮುಖ್ಯಬೀದಿಯಲ್ಲಿ ಮೆರವಣಿಗೆ ನೆರವೇರಿತು. ಮೆರವಣಿಗೆಯಲ್ಲಿ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಕೇರಳದ ಚಂಡೆ ಹಾಗೂ ನೃತ್ಯ ಜನಮನ ಸೆಳೆಯಿತು. ಆಕರ್ಷಕ ಬಿರುಸು ಬಾಣದ ಪ್ರದರ್ಶನವು ನಡೆಯಿತು. ಬಳಿಕ ಮುತ್ತಪ್ಪ ದೇವರ ವೆಳ್ಳಾಟಂ, ಕುಟ್ಟಿಚ್ಚಾತ ದೇವರ ಹಾಗೂ ಗುಳಿಗ ದೇವರ ವೆಳ್ಳಾಟಂ ನಡೆಯಿತು. ತಿರುವಪ್ಪ ಮತ್ತು ಮುತ್ತಪ್ಪ ಕೊಲಗಳು ಜನರನ್ನು ಆಕರ್ಷಿಸಿದವು. ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಭಕ್ತಾರಿಗೆ ಅನ್ನದಾನ ನಡೆಯಿತು. ವಿವಿಧೆಡೆಯಿಂದ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ಅಧ್ಯಕ್ಷ ಎ.ಕೆ.ಚಂದ್ರನ್,…
ನಾಪೋಕ್ಲು ಏ.6 NEWS DESK : ಕಕ್ಕುಂದಕಾಡು ಶ್ರೀ ಕರಿಚಾಮುಂಡಿ ದೈವಸ್ಥಾನದ ವಾರ್ಷಿಕೋತ್ಸವವು ಏ.13 ಮತ್ತು 14 ರಂದು ನಡೆಯಲಿದೆ. ಏ.13 ರಂದು ರಾತ್ರಿ 8.30 ಗಂಟೆಗೆ ಭಂಡಾರ ಹೊರಡುವುದು, ನಂತರ ತೋತ, ಚನ್ನಾಲೆ ಮೂರ್ತಿ, ತಮ್ಮಚ್ಚ, ಪೊಟ್ಟುಗುಳಿಗ, ಕೊರತಿ, ಅಂಗಾರೆ ದೈವಗಳ ಕೋಲ ನಡೆಯಲಿದೆ. ಏ.14 ರಂದು ಬೆಳಗ್ಗೆ 10 ಗಂಟೆಗೆ “ಗುಳಿಗ ” ಕೋಲ ಜರುಗಲಿದೆ. ಪ್ರಸಾದ ವಿತರಣೆ ನಂತರ ಮಧ್ಯಾಹ್ನ 2 ಗಂಟೆಗೆ “ಶ್ರೀ ಚಾಮುಂಡಿ” ದೈವದ ಕೋಲ ಜರುಗಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಬೆಂಗಳೂರು ಏ.6 NEWS DESK : ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಕ್ಷದ ಹಿರಿಯರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಪ್ರಮುಖರು ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.
ಮಡಿಕೇರಿ ಏ.5 NEWS DESK : ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ತಂತ್ರಿಗಳಾದ ಕೇರಳದ ಪಯ್ಯನ್ನೂರಿನ ಬ್ರಹ್ಮಶ್ರೀ ಕುನ್ನತ್ತಿಲ್ಲತ್ತ್ ಮುರಳಿಕೃಷ್ಣನ್ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ನಾಲ್ಕುದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿತು. ಏ.3 ರಂದು ಸಂಜೆ ಯಿಂದ ಆರಂಭಗೊಂಡ ಜಾತ್ರಮಹೋತ್ಸವದಲ್ಲಿ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ವಾಸ್ತು ಬಲಿ, ವಾಸ್ತು ಪುಣ್ಯಾಹ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು. ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಗಣಪತಿ ಹೋಮ, ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಷ್ಟಾಭಿಷೇಕ, ಶ್ರೀ ಅಯ್ಯಪ್ಪ ಸ್ವಾಮಿಗೆ ತುಪ್ಪಾಭಿಷೇಕ, ಶ್ರೀ ನಾಗ ದೇವರಿಗೆ ತಂಬಿಲ…
ಮಡಿಕೇರಿ ಏ.6 NEWS DESK : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಡಾ.ಮಮತಾ ಕೇಶವ್ ಗೆ ಹೊಸುರು ಏಷ್ಯಾ ಕಲ್ಚರಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಲಭಿಸಿದೆ. ಮಮತಾ ಕೇಶವ್ ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಇವರ ಸೇವಾ ಮನೋಭಾವವನ್ನು ಗುರುತಿಸಿ ಹೊಸುರು ಏಷ್ಯಾ ಕಲ್ಚರಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಅಲ್ಲದೆ ದೆಹಲಿಯಲ್ಲಿ ನಡೆದ ಕನ್ನಡ ಸಮ್ಮೇಳನದಲ್ಲಿ ರಾಷ್ಟ್ರೀಯ ಐಕಾನಿಕ್ ಪ್ರಶಸ್ತಿ , ಹೃದಯ ವಾಹಿನಿ ಲಯನ್ಸ್ ಇಂಟರ್ ನ್ಯಾಷನಲ್ ಅವರಿಂದ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಗ್ಲೋಬಲ್ ಮೆನ್ ಅವಾರ್ಡ್, ಅಂತರಾಷ್ಟ್ರೀಯ ಸಾಧನೆ ಐಕಾನ್ ಪ್ರಶಸ್ತಿ , ಕರ್ನಾಟಕ ಸೇವಾ ರತ್ನ ಪ್ರಶಸ್ತಿ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗಿದೆ.
ಮಡಿಕೇರಿ ಏ.6 NEWS DESK : ಕೊಡವ ಕೂಟಾಳಿಯಡ ಕೂಟದ ವತಿಯಿಂದ ಏ.7 ರಂದು “ಪೆತ್ತವಡ ಆರೈಕೆ” ಎನ್ನುವ ನೂತನ ಕೊಡವ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಟಿ.ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆಯಲಿದ್ದು, ಇದರೊಂದಿಗೆ ಸಂಘಟನೆಯು ಇದುವರೆಗೆ ನಡೆಸಿದ ಕೊಡಗ್’ರ ಚುಪ್ಪಿ ಕೋಗಿಲೆಯ, ಸಮ್ಮಂದ ಅಡ್ಕುವ ಶಿಬಿರದ ಹಾಗೂ ಆಟ್ ಪಾಟ್ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ. ಕೊಡವಾಮೆಲ್ ಪೆತ್ತವಡ ಆರೈಕೆ ಎನ್ನುವ ವಿಷಯದ ಬಗ್ಗೆ ಮಾಹಿತಿ, ಸಾಂಸ್ಕೃತಿಕ ಕಾರ್ಯಕ್ರಮ, ಸಮ್ಮಂದ ಅಡ್ಕುವ ಪುಸ್ತಕ, ಮತ್ತು ಪೆತ್ತವಡ ಆರೈಕೆ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ಮೇಳವು ಇರಲಿದೆ ಎಂದು ಕೂಟದ ಪ್ರಮುಖರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






