ಮಡಿಕೇರಿ ಮಾ.17 NEWS DESK : ಪ್ರಜಾಪ್ರಭುತ್ವ ಬಲಪಡಿಸಲು 18 ವರ್ಷ ಪೂರ್ಣಗೊಂಡ ಎಲ್ಲರೂ ಮತದಾನ ಮಾಡಬೇಕು. ಸಂವಿಧಾನ ಆಶಯಗಳಿಗೆ ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮತದಾನದ ಮಹತ್ವ ಜಾಗೃತಿ ಅಭಿಯಾನ ಹಾಗೂ ಸಮಾಜ ಕಲ್ಯಾಣ ಇಲಾಖಾ ನೌಕರರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶ. ನಿತ್ಯ ಒತ್ತಡದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಾರೆ. ಆದ್ದರಿಂದ ಕ್ರೀಡಾಕೂಟ ಸಂದರ್ಭದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುತ್ತಿರುವುದು ಮೆಚ್ಚುವಂತಹದ್ದು ಎಂದರು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಅರ್ಹರೆಲ್ಲರೂ ತಪ್ಪದೆ ಮತಹಕ್ಕು ಚಲಾಯಿಸಬೇಕು ಎಂದರು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಸ್ವೀಪ್ ಕಾರ್ಯಕ್ರಮದಡಿ ಕ್ರೀಡಾಕೂಟ ಆಯೋಜಿಸಿ ಮತದಾನ ಜಾಗೃತಿ ಮೂಡಿಸುವುದರೊಂದಿಗೆ ಮತದಾನಕ್ಕೆ ಎಲ್ಲರನ್ನು…
ಲೇಖಕ: admin
ಮಡಿಕೇರಿ ಮಾ.17 NEWS DESK : ಇದೇ ಮಾ.25 ರಿಂದ ಆರಂಭವಾಗಲಿರುವ 10ನೇ ತರಗತಿ ವಾರ್ಷಿಕ ಪರೀಕ್ಷೆಯನ್ನು ಎದುರಿಸಲು ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆ ಬೆಳೆಸಿ ಆತ್ಮಸ್ಥೈರ್ಯ ತುಂಬಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಸಲಹೆ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಸಿದ್ಧತೆ ಕುರಿತು ಕುಶಾಲನಗರದ ಫಾತಿಮ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯ ಬಗ್ಗೆ ಭೀತಿ ಮೂಡಿಸದೆ ಆತ್ಮವಿಶ್ವಾಸ ಬೆಳೆಸಬೇಕು ಎಂದರು. ಜಿಲ್ಲೆಯಲ್ಲಿ 10ನೇ ತರಗತಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲಾ ಪ್ರೌಢಶಾಲೆಗಳಲ್ಲಿ ಮಕ್ಕಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ ಎಂದು ಭಾಗ್ಯಮ್ಮ ಹೇಳಿದರು. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು…
ಸೋಮವಾರಪೇಟೆ ಮಾ.17 NEWS DESK : ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯವೆಂದು ಕೋಡಿಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದರು. ಮಠದ ಆವರಣದಲ್ಲಿ ನಡೆದ ಕೊಡಗು ಮತ್ತು ಹಾಸನ ಮಠಾಧೀಶರ ಪರಿಷತ್ತಿನ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಇವತ್ತಿನ ಸನ್ನಿವೇಶದಲ್ಲಿ ಒಗ್ಗಟ್ಟು, ಪರಸ್ಪರ ಪ್ರೀತಿ ವಿಶ್ವಾಸ ಎನ್ನುವುದು ಅನಿವಾರ್ಯವಾಗಿದೆ. ಜನಸಾಮಾನ್ಯರು ಹಾಗೂ ಮಠ ಮಾನ್ಯಗಳ ನಡುವೆ ಉತ್ತಮ ಸಂಬಂಧ, ಸಾಮರಸ್ಯವಿದ್ದರೆ ಸಮಾಜ ನೆಮ್ಮದಿಯಿಂದ ಉತ್ತಮವಾಗಿರುತ್ತದೆ ಎಂದರು. ಹಿಂದಿನ ಕಾಲದಿಂದಲೂ ಸಮಾಜಕ್ಕೆ ವೀರಶೈವ ಲಿಂಗಾಯತ ಮಠಗಳ ಕೊಡುಗೆ ಬಹಳಷ್ಟಿದೆ, ಇದು ಮುಂದುವರೆಯಬೇಕು. ಇಂದು ಹಲವು ಮಠಗಳು, ಸ್ವಾಮೀಜಿಗಳು ಸಂಕಷ್ಟದಲ್ಲಿದ್ದಾರೆ. ಅದಕ್ಕಾಗಿ ಎಲ್ಲಾ ಮಠಾಧೀಶರು ಸಂಘಟಿತರಾಗಬೇಕು, ಪರಸ್ಪರ ಸೌಹಾರ್ಧತೆಯಿಂದ ಇರಬೇಕು. ಆ ಮೂಲಕ ಮಠಗಳ ಆಸ್ತಿಗಳನ್ನು ರಕ್ಷಿಸಿಕೊಂಡು ಹೋಗಬೇಕು ಎಂದರು. ಸಭೆಯಲ್ಲಿ ಕೊಡಗು, ಹಾಸನ ಮಠದೀಶರ ಪರಿಷತ್ತು ರಚನೆ ಸಂಬಂಧ ಸುದೀರ್ಘ ಚರ್ಚೆ ನಡೆದು ಕೊಡಗು, ಹಾಸನ ವೀರಶೈವ ಲಿಂಗಾಯತ ಮಠಾದೀಶರ ನೂತನ ಆಡಳಿತ ಮಂಡಳಿ ರಚಿಸಲಾಯಿತು. ಗೌರವಾದ್ಯಕ್ಷರಾಗಿ ಕೋಡಿಮಠದ ಸ್ವಾಮೀಜಿ, ಅಧಕ್ಷರಾಗಿ ಅರಕಲಗೂಡು ದೊಡ್ಡ ಮಠದ ಶ್ರೀಮಲ್ಲಿಕಾರ್ಜುನ…
ಸೋಮವಾರಪೇಟೆ ಮಾ.17 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿಯಲ್ಲಿ 5 ಕೋಟಿ ರೂ. ಅನುದಾನದಲ್ಲಿ ಪ್ರಾರಂಭಿಸಿದ ಕಾಮಗಾರಿಗಳು ನೆನಗುದಿಗೆ ಬಿದ್ದಿದ್ದು, ತಕ್ಷಣ ಕಾಮಗಾರಿ ಆರಂಭಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ ನಗರೋತ್ಥಾನ ಯೊಜನೆಯಡಿ ಅನುದಾನ ಒದಗಿಸಿದ್ದು, ಕಳೆದ ಒಂದೂವರೆ ವರ್ಷದ ಹಿಂದೆಯೇ ಅಂದಿನ ಶಾಸಕರು ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ, ಇಂದಿಗೂ ಕೆಲವು ಕಾಮಗಾರಿ ಸಮರ್ಪಕವಾಗಿ ಪೂರ್ಣಗೊಂಡಿಲ್ಲ ಎಂದು ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಆರೋಪಿಸಿದ್ದಾರೆ. ಹಾಸನ ಜಿಲ್ಲೆಯ ಗುತ್ತಿಗೆದಾರರೊಬ್ಬರು ಈ ಕಾಮಗಾರಿಯ ಗುತ್ತಿಗೆ ಪಡೆದು ಸೋಮವಾರಪೇಟೆಯ ಗುತ್ತಿಗೆದಾರನಿಗೆ ತುಂಡು ಗುತ್ತಿಗೆ ನೀಡಿದ್ದಾರೆ. ಆದರೆ, ಇವರು ಕಾಮಗಾರಿಯನ್ನು ಮಾಡಿಲ್ಲ. ಕರ್ಕಳ್ಳಿ ಗ್ರಾಮದಲ್ಲಿ ಉದ್ಯಾನವನ ನಿರ್ಮಿಸುವ ನೆಪದಲ್ಲಿ ಕೆರೆಯೊಳಗೆ ತ್ಯಾಜ್ಯ ವಸ್ತುಗಳನ್ನು ತುಂಬಿ ದುರ್ವಾಸನೆ ಬರುವಂತೆ ಮಾಡಿದ್ದಾರೆ. ಕೆಲವೆಡೆ ಕಾಮಗಾರಿಗಾಗಿ ಭೂಮಿ ಅಗೆದು ಹಾಕಿ ವರ್ಷವಾಗುತ್ತಾ ಬಂದರೂ ಕೆಲಸ ಆರಂಭಿಸಿಲ್ಲ ಎಂದು ದೂರಿದ್ದಾರೆ. ಹಣ ವಿನಿಯೋಗವಾಗದೆ ಆರ್ಥಿಕ ವರ್ಷಾಂತ್ಯಕ್ಕೆ…
ಸುಂಟಿಕೊಪ್ಪ ಮಾ.17 NEWS DESK : ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. 7ನೇ ಹೊಸಕೋಟೆ ಕಲ್ಲೂರು ಗ್ರಾಮದ ನಿವಾಸಿ ಅಬ್ಬಾಸ್ ಎಂಬುವವರ 15 ವರ್ಷದ ಪುತ್ರ ಅಲ್ಟೋ ಕಾರನ್ನು ಚಲಾಯಿಸಿಕೊಂಡು ಬಸವನಹಳ್ಳಿ ಮಾರ್ಗವಾಗಿ ಅತೀ ವೇಗದಿಂದ ರೆಸಾರ್ಟ್ ಬಳಿ ಧಾವಿಸಿ ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯ ಇನ್ನೊಂದು ಬದಿಯಲ್ಲಿರುವ ರೆಸಾರ್ಟ್ ನ ವಾಹನ ಪಾರ್ಕಿಂಗ್ ಸ್ಥಳದಲ್ಲಿನ ಕಾಂಪೌಂಡ್ ಗೆ ಅಪ್ಪಳಿಸಿ ರಸ್ತೆಯಲ್ಲಿ ಮೂರು ಪಲ್ಟಿಯಾಗಿದೆ. ಈ ಸಂದರ್ಭ ಕಾಂಪೌಂಡ್ ಸಮೀಪ ಕರ್ತವ್ಯ ನಿರತರಾಗಿದ್ದ ಇಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕಾರು ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.
ಮಡಿಕೇರಿ ಮಾ.17 NEWS DESK : ಮಡಿಕೇರಿ ನಗರದ ಶರ್ಮ ಕಾಫಿ ವರ್ಕ್ಸ್ ನ ಮಾಲೀಕ, ಹೊಸ ಬಡಾವಣೆ ನಿವಾಸಿ ಶ್ರೀಧರ್ ಶರ್ಮ(60) ಅವರು ಇಂದು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ. ಶ್ರೀಧರ್ ಶರ್ಮ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ ಮಾ.17 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (DCC) ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ (ಬಾಂಡ್ ಗಣಪತಿ), ಕೆ.ಎಸ್ ಪೂವಯ್ಯ, ಹೊಸೂರು ಕೆ ಸತೀಶ್ ಕುಮಾರ್, ಸತೀಶ್ ಎನ್ ಕಾಂಗಿರ, ರಮೇಶ್ ಹೆಚ್.ಎಂ, ಪೂಳಂಡ ಪಿ.ಪೆಮ್ಮಯ್ಯ, ಕೆ.ಬಿ.ಅರುಣ, ಹೆಚ್.ಕೆ.ಮಾದಪ್ಪ, ಎನ್.ಸಿ.ಶರತ್ ಶೇಖರ್, ಎನ್.ಎಮ್.ಉತ್ತಪ್ಪ, ಗುಮ್ಮಟ್ಟೀರ ಎಸ್.ಕಿಲನ್ ಗಣಪತಿ, ಶರವಣ ಕುಮಾರ್ ಟಿ.ಆರ್, ಜಲಜಾಕ್ಷಿ ವೈ.ಪಿ, ಆಡಳಿತ ಮಂಡಳಿ ನಿರ್ದೇಶಕರಾಗಿ ಗೆಲುವು ಸಾಧಿಸಿದ್ದಾರೆ.
ಮಡಿಕೇರಿ ಮಾ.17 NEWS DESK : ಮಡಿಕೇರಿ ನಗರದ ಜೂನಿಯರ್ ಕಾಲೇಜು ರಸ್ತೆಯಲ್ಲಿರುವ ಪೂಜಾ ಕಾಂಪ್ಲೆಕ್ಸ್ ನ 3ನೇ ಅಂತಸ್ತಿನಲ್ಲಿ ಇಂದು ಯುವ ಉದ್ಯಮಿ ರಾಜು ರಾವ್ ಹಾಗೂ ಬಾಡಿಬಿಲ್ಡರ್ ಗಣೇಶ್ ಪೂಜಾರಿ ಅವರ ಅತ್ಯಾಧುನಿಕ ‘ರಾಯಲ್ ಗೋಲ್ಡ್’ ಜಿಮ್ ಉದ್ಘಾಟನೆಗೊಂಡಿತು.
ಮಡಿಕೇರಿ ಮಾ.17 NEWS DESK : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದಕಂಡಿ ಎಂಬಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.NEWS DESK ಪಿರಿಯಾಪಟ್ಟಣ ತಾಲ್ಲೂಕು ದೊಡ್ಡಹೊಸೂರು ಗ್ರಾಮದ ನಿವಾಸಿ ಬಸವರಾಜು(37) ಬಂಧಿತ ಆರೋಪಿಯಾಗಿದ್ದು, 245 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ಮನೆಯ ಶೌಚಾಲಯದ ಹಿಂಭಾಗದಲ್ಲಿ ಮಣ್ಣಿನಡಿ ಬಚ್ಚಿಟ್ಟಿದ್ದ ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿರುವ “ಕಾಪರ್” ಎಂಬ ಶ್ವಾನ ಯಶಸ್ವಿಯಾಗಿರುವುದು ವಿಶೇಷ.NEWS DESK ಸೋಮವಾರಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್.ಕೆ, ಪಿಎಸ್ಐ ಮೋಹನ್ ರಾಜು.ಪಿ ಹಾಗೂ ಸಿಬ್ಬಂದಿಗಳ ತನಿಖಾ ತಂಡ ಕಾರ್ಯಾಚರಣೆ ನಡೆಸಿತು.NEWS DESK ಶ್ವಾನ ಕಾಪರ್, ಕಾಪರ್ ನ ತರಬೇತುದಾರರಾದ ಮನಮೋಹನ್.ಬಿ.ಪಿ ಹಾಗೂ ತನಿಖಾ ತಂಡದ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.NEWS DESK
ಮಡಿಕೇರಿ ಮಾ.16 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಅವರು AC ROOM ನಿಂದ ಬೀದಿ ಬದಿಯ ಎಳನೀರು ವರೆಗೆ ಬಂದಾಗಿದೆ. ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈ ತಪ್ಪಿತು ಎಂದು ಬೇಸರಗೊಂಡಿದ್ದ ಕಾರ್ಯಕರ್ತರು ಕೂಡ ಯದುವೀರ್ ಅವರ ಚುನಾವಣಾ ಉತ್ಸಾಹ ಕಂಡು ಬೆರಗಾಗಿದ್ದಾರೆ. ಕೊಡಗು ಮತ್ತು ಮೈಸೂರು ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿರುವ ಯದುವೀರ್ ಅವರು ಮತದಾರರ ಹೃದಯ ತಟ್ಟುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.






