ಬೆಂಗಳೂರು ಏ.6 NEWS DESK : ಜಾಗತಿಕ ರೋಬಸ್ಟಾ ಬೆಲೆಗಳು ಸರ್ವ ಕಾಲಿಕ ದಾಖಲೆ ನಿರ್ಮಿಸಿದ ಸಮಯದಲ್ಲಿಯೇ , ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಭಾರತದ ಕಾಫಿ ರಫ್ತು ಮೌಲ್ಯವು ಹೊಸ ಎತ್ತರವನ್ನು ಮುಟ್ಟಿದೆ. ಅಲ್ಪ ಪ್ರಮಾಣದ ಕುಸಿತದ ಹೊರತಾಗಿಯೂ, ರಫ್ತು ಹೊಸ ದಾಖಲೆ ಬರೆದಿದೆ. . ವಾಸ್ತವವಾಗಿ, 2023-24 ರ ಆರ್ಥಿಕ ವರ್ಷವು ಸೇರಿದಂತೆ ಸತತ ಮೂರು ವರ್ಷಗಳಿಂದ ಭಾರತೀಯ ಕಾಫಿ ರಫ್ತು ಏರಿಕೆಯನ್ನೇ ದಾಖಲಿಸುತ್ತಾ ಬಂದಿದೆ. ಡಾಲರ್ ಲೆಕ್ಕದಲ್ಲಿ, ಭಾರತೀಯ ಕಾಫಿ ರಫ್ತು 2022-23 ಹಣಕಾಸು ವರ್ಷದಲ್ಲಿ $1.12 ಶತಕೋಟಿಗಿಂತ $1.26 ಶತಕೋಟಿಗೆ ಏರಿಕೆ ದಾಖಲಿಸಿ 12.5 ಶೇಕಡಾವಾರು ಹೆಚ್ಚಳವನ್ನು ದಾಖಲಿಸಿದೆ. ಅದೇ ರೀತಿ ರೂಪಾಯಿ ಲೆಕ್ಕದಲ್ಲಿ ರಫ್ತು ಶೇ.16ರಷ್ಟು ಏರಿಕೆಯಾಗಿದ್ದು ₹9,033 ಕೋಟಿಗಿಂತ ರೂ.10,491 ಕೋಟಿಗೆ ತಲುಪಿದೆ. ಕಾಫಿಯ ಮೌಲ್ಯ ಜಾಸ್ತಿ ಇದ್ದರೂ ರಫ್ತು ಪ್ರಮಾಣ 2022-23 ರಲ್ಲಿ 3.98 ಲಕ್ಷ ಟನ್ಗಳಿಂದ 3.88 ಲಕ್ಷ ಟನ್ಗಳಿಗೆ 2.5 ಶೇಕಡಾ ಇಳಿಕೆ ಕಂಡಿವೆ. ಜಾಗತಿಕ…
ಲೇಖಕ: admin
ಮಡಿಕೇರಿ ಏ.5 NEWS DESK : ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿಗೆ ತಾಲ್ಲೂಕು ಹಂತದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದರು. ಮಳೆಯ ಅಭಾವದಿಂದಾಗಿ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಿದ್ದು, ಆ ಗ್ರಾಮಗಳಿಗೆ ಅಧಿಕಾರಿಗಳು ತೆರಳಿ ನೀರು ಪೂರೈಕೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ನೀರು ಪೂರೈಕೆ ಮಾಡಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿನ…
ಸುಂಟಿಕೊಪ್ಪ ಏ.5 NEWS DESK : ನಾರ್ಗಾಣೆ ಗ್ರಾಮದಲ್ಲಿ ನೆಲೆಗೊಂಡಿರುವ ಶ್ರೀ ಅಣ್ಣಪ್ಪ ಸ್ವಾಮಿದೇವಾಲಯದಲ್ಲಿ ಏ.13, 14 ಮತ್ತು 15ರಂದು ಧರ್ಮದೈವದ ನೇಮೋತ್ಸವ ನಡೆಯಲಿದೆ ಎಂದು ದೇವಾಲಯದ ಮೇಲ್ವಿಚಾರಕರಾದ ಬಿ.ಡಿ.ರಾಜುರೈ ತಿಳಿಸಿದ್ದಾರೆ. ಏ.13 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ ಮತ್ತು ಶುದ್ಧ ಕಲಶ ನಡೆಯಲಿದೆ. ಏ.14 ರಂದು ಸಂಜೆ 6 ಗಂಟೆಗೆ ಶ್ರೀ ಸ್ವಾಮಿ ಮತ್ತು ಅಮ್ಮನವರ ಭಂಡಾರ ಮೆರವಣಿಗೆ, 6.30ಕ್ಕೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನೆರವೇರಲಿದೆ. ರಾತ್ರಿ 8.30ಕ್ಕೆ ಧೂಮಾವತಿ ಕೋಲ, ರಾತ್ರಿ 10.30ಕ್ಕೆ ಆದಿ ದೇವತೆ ಕಲ್ಲುರ್ಟಿದೈವದ ಕೋಲ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಏ.15 ರಂದು ಬೆಳಿಗ್ಗೆ 8 ಗಂಟೆಯಿಂದ ಧರ್ಮದೈವಗಳಿಗೆ ಹರಕೆ, ಬೇಡಿಕೆಗಳನ್ನು ಒಪ್ಪಿಸುವುದು, ಮಧ್ಯಾಹ್ನ 12 ಗಂಟೆಯಿಂದ ಅನ್ನದಾನ, ಮಧ್ಯಾಹ್ನ 1 ಗಂಟೆಗೆ ಧರ್ಮದೈವ, ಶ್ರೀ ಅಣ್ಣಪ್ಪ, ಪಂಜುರ್ಲಿ ದೈವದ ಕೋಲ, 3.30 ಗಂಟೆಯಿಂದ ಗುಳಿಗ ಹಾಗೂ ಶ್ರೀ ಚಾಮುಂಡೇಶ್ವರಿ ಧರ್ಮದೈವದ ಕೋಲ ನಡೆಯಲಿದೆ ಎಂದು ರಾಜುರೈ ಮತ್ತು ಕುಟುಂಬಸ್ಥರು…
ಪುತ್ತೂರು ಏ.5 NEWS DESK : ತಂತ್ರಜ್ಞಾನವು ಅಪರಿಮಿತ ವೇಗದಲ್ಲಿ ಬದಲಾವಣೆಯಾಗುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ಅಗಾಧವಾದ ಬದಲಾವಣೆಗಳಾಗುತ್ತಿದೆ. ಹೊಸ ಪಠ್ಯಕ್ರಮದ ಮೂಲಕ ನೂತನ ತಂತ್ರಜ್ಞಾನಗಳು ನಮ್ಮನ್ನು ತಲಪುವುದಕ್ಕೆ ಸಮಯಾವಕಾಶ ಬೇಕಾಗುತ್ತದೆ ಇದನ್ನು ತಪ್ಪಿಸುವುದಕ್ಕಾಗಿ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮಗಳನ್ನು ಮಾಡುವುದು ಆವಶ್ಯಕ ಎಂದು ಬೆಂಗಳೂರಿನ ಮೇದಿನಿ ಟೆಕ್ನಾಲಜೀಸ್ ಸಂಸ್ಥೆಯ ಡಿಸೈನ್ ಇಂಜಿನಿಯರ್ ಮೋಹನ್ ಪ್ರಭು ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಬೆಂಗಳೂರಿನ ಮೇದಿನೀ ಟೆಕ್ನಾಲಜೀಸ್, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ 5 ದಿನಗಳ ಬಿಲ್ಡಿಂಗ್ ಇನ್ಫಾರ್ಮೇಶನ್ ಮಾಡೆಲಿಂಗ್ ಇನ್ ಸಿವಿಲ್ ಇಂಜಿನಿಯರಿಂಗ್-ಎಂಪವರಿಂಗ್ ಎಜುಕೇಟರ್ಸ್ ವಿಷಯದ ಬಗ್ಗೆ ಉಪನ್ಯಾಸಕರ ಉದ್ದೀಪನಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮೂಲ ಇಂಜಿನಿಯರಿಂಗ್ ವಿಭಾಗಗಳಿಗೆ ಯಾವತ್ತೂ ಅಳಿವಿಲ್ಲ ಇತರ ವಿಭಾಗಗಳ ಏರುಗತಿಯ ಬೆಳವಣಿಗೆಯಿಂದಾಗಿ…
ಮಡಿಕೇರಿ ಏ.5 NEWS DESK : ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ ಆದರ್ಶ ಜೀವನ ಮೌಲ್ಯಗಳು ನಮ್ಮೆಲ್ಲರಿಗೂ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿಭವನದಲ್ಲಿ ನಡೆದ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ 117ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಬು ಜಗಜೀವನ್ ರಾಂ ಅವರು ಬಿಹಾರದಲ್ಲಿ ಬಡ ಕುಟುಂಬದಲ್ಲಿ ಜನಿಸಿ ಬಾಲ್ಯ ಜೀವನವನ್ನು ಕಷ್ಟದಿಂದಲೇ ಎದುರಿಸಿದವರು. ತಮ್ಮ ಜೀವನದುದ್ದಕ್ಕೂ ಹೋರಾಟದ ಮೂಲಕ ಬೆಳವಣಿಗೆ ಕಂಡು ರಾಜಕೀಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅತ್ಯಂತ ಕಿರಿ ವಯಸ್ಸಿನ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ ಸಾಧನೆ ಬಾಬು ಜಗಜೀವನ್ ರಾಂ ಅವರದ್ದಾಗಿದೆ ಎಂದರು. ಕಾರ್ಮಿಕ ಸಚಿವರಾಗಿ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಹಲವು ಕಾನೂನು ಜಾರಿಗೊಳಿಸುವ ಮೂಲಕ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಜೊತೆಗೆ ಕೃಷಿ ಸಚಿವರಾಗಿ…
ಮಡಿಕೇರಿ ಏ.5 NEWS DESK : ಭಾರತ ಚುನಾವಣಾ ಆಯೋಗವು ಏ.26 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಕೊಡಗು ಜಿಲ್ಲೆಯಲ್ಲಿ ಮತದಾನ ದಿನವಾಗಿದ್ದು, ಈ ದಿನದಂದು ಜಿಲ್ಲೆಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ, ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ ಸಂಸ್ಥೆಯವರು ಅನುವು ಮಾಡಿ ಕೊಡುವಂತೆ ಕೊಡಗು ಉಪವಿಭಾಗದ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಏ.5 NEWS DESK : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಸಂಪಾಜೆ ಫೀಡರ್ನ ವಿದ್ಯುತ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ಏ.6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕಾಟಕೇರಿ, ಮದೆನಾಡು, ಜೋಡುಪಾಲ, ದೇವರಕೊಲ್ಲಿ, ಕೊಯನಾಡು, ಸಂಪಾಜೆ, ಚೆಂಬು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ವಿರಾಜಪೇಟೆ ಏ.5 NEWS DESK : ವಿರಾಜಪೇಟೆಯ ಕೊಡಗು ಮಹಿಳಾ ಸಹಕಾರ ಸಂಘದ (ನಿ) ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ ನಿರ್ಮಲ ಕಾಮತ್ ಮಾತನಾಡಿ, ಮಹಿಳೆ ಮನೆಯಿಂದಲೇ ದೇಶಭಕ್ತಿ, ದೈವಭಕ್ತಿ ಗಳಿಸುತ್ತಾಳೆ. ಅಲ್ಲದೇ ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾರೆ ಆದರೆ ಮನ್ನಣೆ ಸಿಗುವುದು ಮಾತ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುವರಿಗೆ. ದೇಶದ ಯಶಸ್ಸಿನ ಹಿಂದೆ ಎಷ್ಟೋ ಕೋಟಿ ಮಹಿಳೆಯರ ಶ್ರಮವಿದೆ. ಅಂತಹ ಪರಿಶ್ರಮಕ್ಕೆ ಬೆಲೆ ನೀಡಬೇಕು ಎಂದರು. ನಿವೃತ್ತ ಶಿಕ್ಷಕಿ ಮುಕ್ತ ಬಾಯಿ ಮಾತನಾಡಿ, ಸ್ತ್ರೀ ಪುರುಷರಿಗಿಂತ ಯಾವುದರಲ್ಲಿಯೂ ಕಡಿಮೆ ಇಲ್ಲ ಅನ್ನುವದು ಈಗಾಗಲೇ ಸಾಬೀತಾಗಿದೆ, ಆದರೂ ಪುರುಷ ಪ್ರದಾನ ಸಮಾಜದಲ್ಲಿ ಎಷ್ಟೋ ಪ್ರತಿಭಾನ್ವಿತ ಮಹಿಳೆಯರು ಮೂಲೆಗುಂಪಾಗುತ್ತಿದ್ದಾರೆ. ಇಂತಹ ಸಮಾಜದ ಮುಂದೆ ಸಾಧಕ ಮಹಿಳೆಯರನ್ನು ಗುರುತಿಸಿ ಆತ್ಮ ಸ್ಥೈರ್ಯವನ್ನು ತುಂಬಿಸುವ ಕಾರ್ಯ ನಡೆಯುತ್ತಿದೆ. ಈಗಿನ ಮಹಿಳೆಯರಿಗೆ ಪುರುಷರಿಂದ ಪ್ರೋತ್ಸಾಹ ಇರುವುದರಿಂದ ಮನೆ ಒಳಗೆ ಹೊರಗೆ ಕೆಲಸ ಮಾಡಲು ಉತ್ಸಾಹವಿದೆ…
ಪಣಂಬೂರು ಕಡಲತೀರವು ಭಾರತದ ಕರ್ನಾಟಕ ರಾಜ್ಯದ ಮಂಗಳೂರು ನಗರದಲ್ಲಿದೆ. ಈ ಕಡಲತೀರವು ಅರಬ್ಬೀ ಸಮುದ್ರದ ತೀರದಲ್ಲಿದೆ. ಇದು ಭಾರತದ ಸುರಕ್ಷಿತವಾದ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟ ಕಡಲತೀರಗಳಲ್ಲಿ ಒಂದಾಗಿದೆ. ಇದು ಕರಾವಳಿ ಕರ್ನಾಟಕದ ಅತ್ಯಂತ ಜನಪ್ರಿಯ, ಉತ್ತಮವಾಗಿ ಸಂಪರ್ಕ ಹೊಂದಿದ ಮತ್ತು ಹೆಚ್ಚು ಭೇಟಿ ನೀಡಿದ ಕಡಲ ತೀರಗಳಲ್ಲಿ ಒಂದಾಗಿದೆ. ಈ ಬೀಚ್ ನಗರದಿಂದ 10 ಕಿ.ಮೀ ಉತ್ತರಕ್ಕೆ ಪಣಂಬೂರು ಎಂಬ ಸ್ಥಳದಲ್ಲಿದೆ.ಇದು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತದಲ್ಲಿದೆ. ಸದ್ಯಕ್ಕೆ ಇದು ಖಾಸಗಿ ಉದ್ಯಮಿಗಳಿಂದ ಪಣಂಬೂರು ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಡಿಯಲ್ಲಿ ನಿರ್ವಹಿಸಲಾಗುತ್ತಿದೆ.ಇತರ ಆಕರ್ಷಣೆಗಳಲ್ಲಿ ಜೆಟ್ ಸ್ಕೈ ಸವಾರಿಗಳು, ಬೋಟಿಂಗ್, ಡಾಲ್ಫಿನ್ ವೀಕ್ಷಣೆ, ಆಹಾರ ಮಳಿಗೆಗಳು ಸೇರಿವೆ ಮತ್ತು ಸಂದರ್ಶಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಡಲತೀರದಲ್ಲಿ ಗಸ್ತು ತಿರುಗುವ ಹೆಚ್ಚು ನುರಿತ ಮತ್ತು ತರಬೇತಿ ಪಡೆದ ಜೀವರಕ್ಷಕರಿಗೆ ಹೆಸರುವಾಸಿಯಾಗಿದೆ. ಈ ಬೀಚ್ ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಪಿಕ್ನಿಕ್ ತಾಣವಾಗಿದೆ ಮತ್ತು ಸೂರ್ಯಾಸ್ತದ ವೀಕ್ಷಣೆಗಳನ್ನು ನೀಡುತ್ತದೆ. ನಗರಕ್ಕೆ ಹತ್ತಿರದಲ್ಲಿರುವುದರಿಂದ ಬೀಚ್ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಬಂದರಿನಲ್ಲಿ ಬೆರ್ತ್ಗಾಗಿ…
ಮಡಿಕೇರಿ ಏ.5 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಆರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಕಾಂಗ್ರೆಸ್ ಮಟ್ಟದ ಅಧ್ಯಕ್ಷರುಗಳು, ಬಿಎಲ್ಎ ಗಳು, ವಲಯ ಅಧ್ಯಕ್ಷರುಗಳು ಹಾಗೂ ಬೂತ್ ಪ್ರಮುಖರ ಸಭೆ ಏ.6 ರಿಂದ 9ರ ವರೆಗೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ. ನಾಲ್ಕು ದಿನಗಳ ಕಾಲ ನಡೆಯುವ ಸಭೆಗಳ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಅವರು, ಏ.6 ರಂದು ಅಪರಾಹ್ನ 2.30 ಗಂಟೆಗೆ ಮಡಿಕೇರಿ ನಗರ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಭೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಏ.7 ರಂದು ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪಲು ಕಿತ್ತಳೆ ಸಹಕಾರ ಸಂಘದ ಸಭಾಂಗಣದಲ್ಲಿ ಪೆÇನ್ನಂಪೇಟೆ ಬ್ಲಾಕ್ ಸಭೆ, ಅಪರಾಹ್ನ 2.30 ಗಂಟೆಗೆ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಸಭೆ ಶಾಸಕ ಎ.ಎಸ್.ಪೊನ್ನಣ್ಣ ಅವರ ನಿವಾಸದ ಬಳಿ…






