ಲೇಖಕ: admin

ಮಡಿಕೇರಿ ಮಾ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸುಳ್ಯದ ಸದಾಶಿವ ಮಾವಜಿ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ, ಮಾ.16 NEWS DESK :  ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ದಕ್ಷಿಣ ಕೊಡಗಿನ‌ ಇರ್ಪೂವಿನಲ್ಲಿ ಜಲಪಾತ ಪ್ರವಾಸ ಹಾಗೂ ಕವಿಗೋಷ್ಠಿ ಏರ್ಪಡಿಸಲಾಗಿದೆ. ಮಾ.24ರಂದು ಕವಿಗೋಷ್ಠಿ ನಡೆಯಲಿದ್ದು, ಮೊದಲು ನೋಂದಾಯಿಸಿಕೊಳ್ಳುವ 50 ಮಂದಿಗೆ ಅವಕಾಶ ನೀಡಲಾಗುವದು. ಭಾಗವಹಿಸಲು ಇಚ್ಛಿಸುವವರು ಬಳಗದ ಅಧ್ಯಕ್ಷ ಲೋಕೇಶ್ ಸಾಗರ್(9980988123), ಕುಡೆಕಲ್ ಸಂತೋಷ್(9972538584), ನ.ಲ. ವಿಜಯ(8762983849) ಇವರುಗಳನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳುವಂತೆ ಬಳಗದ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಮಾ 16 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿಯ ಮುಕ್ತ ಕಥಾ ಸ್ಪರ್ಧೆಯಲ್ಲಿ ಜಿಲ್ಲೆಯ 23 ಕತೆಗಾರರು ಭಾಗವಹಿಸಿದ್ದು, ತೀರ್ಪುಗಾರರು ಮೌಲ್ಯಮಾಪನ ಮಾಡಿ ನೀಡಿದ ಫಲಿತಾಂಶದಂತೆ ಪ್ರಥಮ ಸ್ಥಾನವನ್ನು ಕುಶಾಲನಗರದ ಕುಕ್ಕನೂರು ರೇಷ್ಮಾ ಮನೋಜ್, ದ್ವಿತೀಯ ಸ್ಥಾನವನ್ನು ನಾಪೋಕ್ಲುವಿನ ಮಧುಸೂದನ್, ಬಿಳಿಗುಲಿ ಮತ್ತು ತೃತಿಯ ಸ್ಥಾನವನ್ನು ಮೂರ್ನಾಡಿನ ಕಿಗ್ಗಾಲು ಗಿರೀಶ್  ಪಡೆದು ಕೊಂಡಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ  ಸಂಯುಕ್ತ ಆಶ್ರಯದಲ್ಲಿ ಶಕ್ತಿ ಪತ್ರಿಕೆಯ ಸಂಸ್ಥಾಪಕರಾದ ದಿ. ಜಿ ಗೋಪಾಲಕೃಷ್ಣ ದತ್ತಿನಿಧಿ ಕಾರ್ಯಕ್ರಮ ಹಾಗೂ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ  ಮಾ.19 ರಂದು 10.30ಕ್ಕೆ ನಡಯುವ ದತ್ತಿ ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ…

Read More

ವಿರಾಜಪೇಟೆ ಮಾ.16 NEWS DESK :  ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಶ್ರೀ ಮುತ್ತಪ್ಪನ್ ದೇವರ ವಾರ್ಷಿಕ ತೆರೆ ಮಹೋತ್ಸವ ವವು ಶ್ರದ್ಧಾಭಕ್ತಿಯಿಂದ ನೆರವೇರಿತು. ವಿರಾಜಪೇಟೆ ನಗರದ ಹೊರ ವಲಯದ ಮಡಿಕೇರಿ ರಸ್ತೆಗೆ ಹೊಂದಿಕೊಂಡಿರು ಕುಕ್ಲೂರು ಗ್ರಾಮದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಮಾ.10 ರಂದು ಆರಂಭಗೊಂಡ ತೆರೆ ಮಹೋತ್ಸವವು ಬಸುರೀಮಾಲ ತೆರೆಯ ಮೂಲಕ  ತೆರೆ ಕಂಡಿತು. ಮುತ್ತಪ್ಪನ್ ವೆಳ್ಳಾಟಂ, ನಂತರ ಶ್ರೀ ಶಾಸ್ತಪ್ಪ ವೆಳ್ಳಾಟಂ, ಗುಳಿಗ ವೆಳ್ಳಾಟಂ, ಪ್ರಮುಖ ಆಕರ್ಷಣೆ ಯಾದ ಬಸುರಿಮಾಲ ವೆಳ್ಳಾಟಂ, ಕರಿಂಗುಟ್ಟಿ ಶಾಸ್ತಪ್ಪನ್ ವೆಳ್ಳಾಟಂ, ನಡೆಯಿತು. ನಂತರ ಗುಳಿಗನ ತೆರೆ, ಮುತ್ತಪ್ಪನ್ ಮತ್ತು ತಿರುವಪ್ಪನ್ ತೆರೆ, ಶಾಸ್ತಪ್ಪನ್ ತೆರೆ, ಕರಿಂಗುಟ್ಟಿ ಶಾಸ್ತಪ್ಪನ್ ತೆರೆ, ವೆಳ್ಳಾಟಂ  ಬಸುರಿಮಾಲ ತೆರೆ ನಡೆಯಿತು. ಇದೇ ಸಂದರ್ಭ ಜರುಗಿದ  ದೈವನರ್ತ ವಿಶೇಷವಾಗಿತ್ತು. ಎರಡು ದಿನಗಳು ನಡೆದ ವಾರ್ಷಿಕ ತೆರೆ ಮಹೋತ್ಸವ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಭಕ್ತರಿಗೆ ಅನ್ನದಾನ ನಡೆಯಿತು. ಮಹೋತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಕುಕ್ಲೂರು ಗ್ರಾಮಸ್ಥರು, ನಗರ…

Read More

ಬೆಂಗಳೂರು, ಮಾ.16 NEWS DESK :  ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ…

Read More

ಮಡಿಕೇರಿ ಮಾ.16 NEWS DESK : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಡಿಕೇರಿಯ ಬಂಗಾಡುಮನೆ ವಸಂತಿ ಅವರು ಐದು ಪದಕಗಳನ್ನು ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಉದ್ದ ಜಿಗಿತದಲ್ಲಿ ಚಿನ್ನದ ಪದಕ, 200ಮೀ ಓಟದಲ್ಲಿ ಬೆಳ್ಳಿ ಪದಕ, 400*4 ರಿಲೆಯಲ್ಲಿ ಕಂಚಿನ ಪದಕ, ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಮತ್ತು ಲಯಬದ್ಧ ಜೋಡಿ ಯೋಗಾಸನದಲ್ಲಿ ಬೆಳ್ಳಿ ಪದಕ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವಸಂತಿ ಅವರು, ಪ್ರಸ್ತುತ ಬಡ್ತಿ ಹೊಂದಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸೀನಿಯರ್ ನರ್ಸಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು ಇಲ್ಲಿಯವರೆಗೆ ಅನೇಕ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ದಾಖಲೆ ಸಂಖ್ಯೆಯ ಪದಕಗಳನ್ನು ಗೆದ್ದಿದ್ದಾರೆ.

Read More

ಮಡಿಕೇರಿ ಮಾ.16 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳ ಪದವಿ ಪ್ರಧಾನ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್ ಪ್ರಾಸ್ತಾವಿಕ ಮಾತನಾಡಿ “ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಉನ್ನತ ಮಟ್ಟಕ್ಕೆ ಏರುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಪಿ.ಎನ್.ವಿನೋದ್ ಮಾತನಾಡಿ ನಮ್ಮ ಶಾಲೆಯು ವಿದ್ಯಾರ್ಥಿಗಳಲ್ಲಿ ಒಳ್ಳೆಯ ಅರಿವನ್ನು ಮೂಡಿಸಿ ಸಮಾಜಕ್ಕೆ ಒಳ್ಳೆಯ ನಾಗರೀಕರನ್ನು ನೀಡುವಂತಹ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇವೆ. ಇದಕ್ಕೆ ಮೂಲ ಕಾರಣಕರ್ತರು ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಎಂದರು. ಯುಕೆಜಿ ವಿದ್ಯಾರ್ಥಿಗಳಾದ ಹೆಚ್.ಕೆ.ಪ್ರೀತಮ್ ಹಾಗೂ ಬಿ.ವಿ.ಯುಕ್ತಿ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ತಾವು ಕಲಿತ ಕ್ಷಣಗಳನ್ನು ನೆನದು ಮುದ್ದು ಮಾತುಗಳನ್ನಾಡಿದರು. ನಂತರ 10ನೇ ತರಗತಿಯ ವಿದ್ಯಾರ್ಥಿಗಳಾದ ನೀಯ ಭೋಜಮ್ಮ ಹಾಗೂ ಸಿ.ಪಿ.ಅನುಷ್ಕಾ ತಮ್ಮ ವಿದ್ಯಾರ್ಥಿ ಜೀವನದ ಬಗ್ಗೆ ಹಾಗೂ ತಮ್ಮ ಸಹಪಾಠಿಗಳ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯನಿಯವರಾದ…

Read More

ಮಡಿಕೇರಿ, ಮಾ.16 NEWS DESK : ಹನ್ನೆರಡನೇ ಶತಮಾನದಲ್ಲಿ ಭಕ್ತಿ ಭಂಡಾರಿ ಬಸವಣ್ಣನ ನೇತೃತ್ವದಲ್ಲಿ ನಡೆದ ಶರಣ ಸಂಸ್ಕೃತಿ ಅದೊಂದು ಜನಸಮುದಾಯದ ಭಕ್ತಿಯ ತೀರ್ಥೋದ್ಭವ. ಮಾನವ ಕಲ್ಯಾಣದ ಆತ್ಮೋನ್ನತಿಯ ಮಹೋತ್ಸವ ಎಂದು ಕೊಡಗು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಹಮ್ಮಿಕೊಂಡಿದ್ದ “ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ಮಡಿಕೇರಿ ಮಹದೇವಪೇಟೆಯ ಮುರುಗೇಶ್ ಹಾಗೂ ಶಿವಮ್ಮ ಅವರು ಸ್ಥಾಪಿಸಿರುವ ಶೀಲವಂತ ಹಾಗೂ ಸಿದ್ದಲಿಂಗಪ್ರಸಾದ್ ದತ್ತಿ ಕಾರ್ಯಕ್ರಮ ಶರಣ ಸಂಸ್ಕೃತಿ ” ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, 900 ವರ್ಷಗಳ ವರ್ತಮಾನದ ಅಂದಿನ ಶರಣರು ಕಟ್ಟಿದ ಹಾಗೂ ಸೃಷ್ಟಿಸಿದ ವಚನಗಳು ಎಲ್ಲಾ ಕಾಲಕ್ಕೂ ಅನ್ವಯವಾಗಿ ಇಂದಿನ ಆಧುನಿಕ ಕಾಲಘಟ್ಟದಲ್ಲಿಯೂ ಪ್ರಸ್ತುತತೆಯನ್ನು ಭಿತ್ತರಿಸುತ್ತಿವೆ ಎಂದು ವಿಶ್ಲೇಷಿಸಿದರು. ಹನ್ನೆರಡನೇ ಶತಮಾನದಲ್ಲಿ ಧರ್ಮದ ಹೆಸರಿನಲ್ಲಿ ಮಾನವೀಯ ಮೌಲ್ಯಗಳು ಮಣ್ಣುಪಾಲಾಗುತ್ತಿದ್ದ ಮತಿ ಹೀನ ಗತಿಯನ್ನು ಗಮನಿಸಿ ನಡೆ -…

Read More

ಮಡಿಕೇರಿ ಮಾ.16 NEWS DESK : 2024-25 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಸರ್ಕಾರಿ ಮುಸ್ಲಿಂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6 ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ , ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಒಬಿಸಿ) ಶೇ.25 ಸೀಟು ಲಭ್ಯವಿದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, 5 ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು https://sevasindhu.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಮಾರ್ಚ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ವಸತಿ ಶಾಲೆಯಲ್ಲಿ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ…

Read More

ಕುಶಾಲನಗರ ಮಾ.16 NEWS DESK : ಶಾಲೆಯಲ್ಲಿನ ಅತ್ಯಾಧುನಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಕೆಡೆಟ್‌ಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದ ಆಕಾಂಕ್ಷೆಗಳನ್ನು ಉತ್ಸಾಹದಿಂದ ಮುಂದುವರಿಸಿ, ಆದರ್ಶ ನಾಗರೀಕರಾಗಬೇಕು ಎಂದು ಪುಣೆಯ ಡೆಪ್ಯುಟಿ ಕಮಾಂಡೆಂಟ್ ಮತ್ತು ಮುಖ್ಯ ತರಬೇತುದಾರರು, ನ್ಯಾಷನಲ್ ಡಿಫೆನ್ಸ್ ಅಕಾಡೆಮಿ, ಖಡಕ್ವಾಸ್ಲಾ, ಮೇಜರ್ ಜನರಲ್ ಸಂಜೀವ್ ಡೋಗ್ರಾ ಹೇಳಿದರು. ಕೊಡಗು ಜಿಲ್ಲೆಯ ಕೂಡಿಗೆ ಸೈನಿಕ ಶಾಲೆಗೆ ವಿಶೇಷ ಅತಿಥಿಯಾಗಿ ಆಗಮಿಸಿ ಶಾಲೆಯ ವಿದ್ಯಾರ್ಥಿಗಳೊಂದಿಗೆ  ಪ್ರೇರಣಾತ್ಮಕ ಸಂವಾದದಲ್ಲಿ ಮಾತನಾಡಿದ ಅವರು ಸಮಾಜದ ಆದರ್ಶ ವ್ಯಕ್ತಿಗಳನ್ನು ರೂಪಿಸುವಲ್ಲಿ ಶಾಲೆಯ ತರಬೇತಿ ಹಾಗೂ ಸೌಲಭ್ಯಗಳ  ವ್ಯವಸ್ಥೆಯನ್ನು ಶ್ಲಾಘಿಸಿದರು.  ಕೇಂದ್ರ ಲೋಕಸೇವಾ ಆಯೋಗದ ಎನ್‌ ಡಿ ಎ ಪರೀಕ್ಷೆ ಮತ್ತು ವಿವಿಧ ರಕ್ಷಣಾ ತರಬೇತಿ ಅಕಾಡೆಮಿಗಳಿಗೆ ಶಿಸ್ತುಬದ್ಧ ತಯಾರಿ ಮಾಡುವ ಕುರಿತು ಅವರು ಅಮೂಲ್ಯವಾದ ಮಾರ್ಗದರ್ಶನವನ್ನು ನೀಡಿದರು. ಇಂತಹ ಸ್ಪರ್ಧಾತ್ಮಕ ಪ್ರಯತ್ನಗಳಲ್ಲಿ ಯಶಸ್ಸನ್ನು ಸಾಧಿಸುವಲ್ಲಿ ಸಕಾರಾತ್ಮಕ ಮನೋಭಾವ, ಕಠಿಣ ಪರಿಶ್ರಮ, ದೃಢಸಂಕಲ್ಪ, ತೆರೆದ ಮನಸ್ಸು ಮತ್ತು ಸಾಂಘಿಕ ಕಾರ್ಯಗಳ…

Read More