ಕೊರಟಗೆರೆ ಏ.4 NEWS DESK : ಅರಣ್ಯ ಸಿಬ್ಬಂದಿಗಳು ನಾಲ್ವರು ಬೇಟೆಗಾರರನ್ನು ಸೆರೆ ಹಿಡಿದು ಬರೋಬರಿ 7 ಕಾಡುಹಂದಿಗಳನ್ನು ರಕ್ಷಿಸಿದ ಪ್ರಕರಣ ಕೊರಟಗೆರೆಯ ಸುರಪುರದಲ್ಲಿ ನಡೆದಿದೆ. ಕಾಡುಹಂದಿಗಳನ್ನು ಯಾದಗಿರಿಯಿಂದ ಕೊರಟಗೆರೆ ಪಟ್ಟಣಕ್ಕೆ ತಂದು ಮಾರಾಟಕ್ಕೆ ಯತ್ನಿಸುವ ಸಂದರ್ಭ ಅರಣ್ಯ ಸಿಬ್ಬಂದಿಗಳು ದಾಳಿ ನಡೆಸಿದರು. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೂಲ್ಪೇಟೆಯ ಸುರೇಶ(28), ರಂಗಮಪೇಟೆಯ ಪರಶುರಾಮ(22), ಕೊಪ್ಪಳ ಜಿಲ್ಲೆ ಕೊಪ್ಪಳ ಗಾಂಧಿನಗರದ ಮಂಜುನಾಥ(28) ಹಾಗೂ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ವಿನಾಯಕ ನಗರದ ಮಾರುತಿ(39) ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿ ಭೀಮಾ(38) ಎಂಬಾತ ತಲೆ ಮರೆಸಿಕೊಂಡಿದ್ದು, ತನಿಖೆ ಮುಂದುವರೆದಿದೆ. ವಾಹನವನ್ನು ವಶಕ್ಕೆ ಪಡೆಯಲಾಗಿದೆ. ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ.ಹೆಚ್, ಮಧುಗಿರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ಕೊರಟಗೆರೆ ವಲಯಅರಣ್ಯಾಧಿಕಾರಿ ರವಿ.ಸಿ, ಉಪ ವಲಯಅರಣ್ಯಾಧಿಕಾರಿದಿಲೀಪ್ಕುಮಾರ್, ಸಿಬ್ಬಂಧಿಗಳಾದ ವಿಜಯಕುಮಾರ್, ಮಂಜುನಾಥ, ಚಾಂದುಪಾಷ, ಕಾವ್ಯಶ್ರೀ, ನರಸರಾಜು, ಬಾಬು ಸೇರಿದಂತೆಇತರರು ದಾಳಿಯಲ್ಲಿ ಭಾಗವಹಿಸಿದ್ದರು.
ಲೇಖಕ: admin
ಮಡಿಕೇರಿ ಏ.4 NEWS DESK : ಕಾಳುಮೆಣಸು ಕುಯ್ಲಿಗೆ ಬಳಸಿದ ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ಸ್ಪರ್ಶಗೊಂಡು ಕಾರ್ಮಿಕ ಸಾವಿಗೀಡಾದ ಘಟನೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೈಸೂರು ಜಿಲ್ಲೆಯ ಪಂಚವಳ್ಳಿ ಗ್ರಾಮದ ಪುಷ್ಪಗಿರಿ ಎಂಬುವವರೇ ಉಸಿರು ಚೆಲ್ಲಿದವರಾಗಿದ್ದಾರೆ. ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಗ್ರಾಮದ ತೋಟದಲ್ಲಿ ಕರಿಮೆಣಸು ಕೊಯ್ಲಿಗೆ ಬಂದಿದ್ದ ಪುಷ್ಪಗಿರಿ, ಅಲ್ಯುಮಿನಿಯಂ ಏಣಿಯನ್ನು ಮರಕ್ಕೆ ಇಡುವಾಗ ಪಕ್ಕದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ತಗುಲಿದ್ದು, ಈ ಸಂದರ್ಭ ವಿದ್ಯುತ್ ಪ್ರವಹಿಸಿ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಕೊಡಗು ಜಿಲ್ಲೆಯಲ್ಲಿ ಬಹುತೇಕ ವಿದ್ಯುತ್ ಲೈನ್’ಗಳು ಕಾಫಿ ತೋಟಗಳ ನಡುವೆ ಹಾದು ಹೋಗಿದ್ದು, ತೋಟದ ಕೆಲಸದ ಸಂದರ್ಭ ಅಲ್ಯುಮಿನಿಯಂ ಏಣಿಗೆ ಬದಲಾಗಿ ಮರ, ಫೈಬರ್ ಅಥವಾ ಬಿದಿರಿನ ಏಣಿಯನ್ನು ಬಳಸುವಂತೆ ಸೆಸ್ಕ್ ಅಧಿಕಾರಿಗಳು ಎಚ್ಚರಿಸುತ್ತಲೇ ಬಂದಿದ್ದಾರೆ.
ಕೊರಟಗೆರೆ ಏ.4 NEWS DESK : ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಬೋನು ಇರಿಸಿತ್ತು. ಒಂದು ತಿಂಗಳ ಹಿಂದೆಯಷ್ಟೇ ಉಪಟಳ ನೀಡುತ್ತಿದ್ದ ಚಿರತೆಯೊಂದನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಎರಡನೇ ಚಿರತೆ ಬೋನಿಗೆ ಬಿದ್ದಿದೆ. ಈ ಚಿರತೆ ಗ್ರಾಮಸ್ಥರು ಸಾಕಿದ ಪ್ರಾಣಿಗಳನ್ನು ಭಕ್ಷಿಸಿ ಆತಂಕ ಸೃಷ್ಟಿಸಿತ್ತು.
ಮಡಿಕೇರಿ ಏ.4 NEWS DESK : ಐರಿ ಸಮುದಾಯದ 10ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾವಳಿ, ಈ ಬಾರಿ ಏಪ್ರಿಲ್ 27 ರಿಂದ ಮೂರು ದಿನಗಳ ಕಾಲ ಮೂರ್ನಾಡುವಿನ ಬಾಚೆಟ್ಟಿರ ಲಾಲೂ ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಐರಿ ಮಕ್ಕಡ ಕೂಟ, ಕ್ರೀಡಾಕೂಟವನ್ನು ಕೊಡಗು ಐರಿ ಸಮಾಜ ಸಹಯೋಗದಲ್ಲಿ ಈ ನಡೆಸಲಾಗುತ್ತಿದ್ದು ಪುರುಷರಿಗೆ ಕ್ರಿಕೆಟ್ ಹಾಗೂ ಮಹಿಳೆಯರಿಗೆ ಹಗ್ಗ ಜಗ್ಗಾಟ ಪಂದ್ಯಾವಳಿ ಏರ್ಪಡಿಸಲಾಗುತ್ತದೆ ಎಂದು ತಿಳಿಸಿದೆ. ಕ್ರೀಡೆಯೊಂದಿಗೆ ಸಂಸ್ಕೃತಿಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಈ ಬಾರಿ ಕ್ರಿಕೆಟ್ನಲ್ಲಿ ಚಾಂಪಿಯನ್ ಆಗುವ ತಂಡಕ್ಕೆ ಕೊಡವ ಭಾಷಿಕ ಸಂಸ್ಕೃತಿಯ ಪ್ರತೀಕವಾಗಿರುವ ಗೆಜ್ಜೆತಂಡ್ ಅನ್ನು ಟ್ರೋಫಿಯಾಗಿ ನೀಡಲಾಗುತ್ತದೆ ಎಂದು ಕ್ರೀಡಾಕೂಟದ ಸಂಚಾಲಕ ಐಮಂಡ ಶರತ್ ಬೆಳ್ಯಪ್ಪ ಪ್ರಟಣೆಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿ ಕ್ರೀಡಾ ಕೂಟಕ್ಕೆ ಗೆಜ್ಜೆತಂಡ್ ಟ್ರೋಫಿ-2024ಎಂದು ಹೆಸರಿಡಲಾಗಿದೆ. ಕ್ರೀಡಾಕೂಟಕ್ಕೆ ಖ್ಯಾತ ಕಲಾವಿದ ಐಮಂಡ ರೂಪೇಶ್ ನಾಣಯ್ಯ ಆಕರ್ಷಕ ಲೋಗೋ ವಿನ್ಯಾಸಗೊಳಿಸಿದ್ದಾರೆ. ಏಪ್ರಿಲ್…
ಕರಿಕೆ ಏ.4 NEWS DESK : ಕೊಡಗಿನ ಗಡಿ ಗ್ರಾಮ ಕರಿಕೆಯಲ್ಲಿ ತೋಟಂ ಶ್ರೀ ಮುತ್ತಪ್ಪ ಬೆಳ್ಳಾಟ ಶ್ರದ್ಧಾಭಕ್ತಿಯಿಂದ ನಡೆಯಿತು. ನೂರಾರು ಭಕ್ತರ ಸಮ್ಮುಖದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಮಹಾಪೂಜೆಯ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಪುತ್ತೂರು ಏ.4 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್.ಎಸ್.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ಕಂಪ್ಯೂಟರ್ ಎಯ್ಡೆಡ್ ಡಯಾಗ್ನೋಸಿಸ್ ಆಫ್ ಏಟ್ರಿಯಲ್ ಫೈಬ್ರಿಲ್ಲೇಶನ್ ಯೂಸಿಂಗ್ ಮೆಷಿನ್ ಲರ್ನಿಂಗ್ ಎಪ್ರೋಚ್ (Computer aided Diagnosis of Atrial fibrillation using machine learning approach) ಎನ್ನುವ ವಿಷಯದ ಬಗ್ಗೆ ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಅಸೋಸಿಯೇಟ್ ಪ್ರೊಫೆಸರ್ ಡಾ.ರೋಶನ್ ಜಾಯ್ ಮಾರ್ಟಿಸ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಮಾಡಿದ್ದಾರೆ. ಇವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಲ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು 18 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ. ಡಾ.ಶ್ರೀಕಾಂತ್ ರಾವ್.ಎಸ್.ಕೆ ಅವರ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.
ಮಡಿಕೇರಿ ಏ.4 NEWS DESK : ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಗೊಂಡ ಕೊಂಡದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಉಪಾಧ್ಯಕ್ಷ ಕೇಕಡ ವಿಜುದೇವಯ್ಯ, ಜಂಟಿಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ಮೂವೆರ ಜಯರಾಂ ಹಾಜರಿದ್ದರು.
ಮಡಿಕೇರಿ ಏ.4 NEWS DESK : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ನಿರ್ಣಯ ಹಾಗೂ ಎಸ್ಟಿ ಟ್ಯಾಗ್ ಕುರಿತು ಎರಡು ರಾಷ್ಟ್ರೀಯ ರಾಜಕೀಯ ಪಕ್ಷಗಳ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಭರವಸೆ ನೀಡುವ ಮೂಲಕ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಲೋಕದ ಅದಮ್ಯ ಧ್ವನಿ ಹಾಗೂ ಆದಿಮಸಂಜಾತ ಕೊಡವರ ಸಾಮಾಜಿಕ-ಭೂ ರಾಜಕೀಯ ಮತ್ತು ಜನಾಂಗೀಯ-ಸಾಂಸ್ಕೃತಿಕ ಸಂಘಟನೆಯಾದ ಸಿಎನ್ಸಿ, ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ನಿರ್ಣಯ, ಎಸ್ಟಿ ಟ್ಯಾಗ್ ಸೇರಿದಂತೆ ಪ್ರಧಾನ ಕೊಡವ ಕುಲ ಸಮಸ್ಯೆಗೆ ಸಂಬಂಧಿಸಿದ 10 ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟು ಕಳೆದ 34 ವರ್ಷಗಳಿಂದ ಶಾಂತಿಯುತ ಹೋರಾಟ ನಡೆಸುತ್ತಾ ಬಂದಿದೆ. ಇಲ್ಲಿಯವರೆಗೆ ಈಡೇರದ ಈ ಬೇಡಿಕೆಗಳ ಕುರಿತು ಅಭ್ಯರ್ಥಿಗಳು ತಮ್ಮ ಬದ್ಧತೆಯನ್ನು ಶುದ್ಧ ಅಂತ:ಕರಣದಿಂದ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ. ಕೊಡವ ಲ್ಯಾಂಡ್ಗಾಗಿ ನಮ್ಮ ಸಂವಿಧಾನದ ಆರ್ಟಿಕಲ್ 224(ಎ)…
ಮಡಿಕೇರಿ ಏ.4 NEWS DESK : ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಭಾರತೀಯ ಚುನಾವಣಾ ಆಯೋಗ ಜಿಲ್ಲಾಡಳಿತ ಕೊಡಗು ಜಿಲ್ಲೆ ಹಾಗೂ ಮಡಿಕೇರಿ ನಗರಸಭೆಯ ವತಿಯಿಂದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ರಂಗೋಲಿ ಮತ್ತು ಚಿತ್ರಕಲೆ ಸ್ಪರ್ಧೆ ನಡೆಯಿತು. ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮುಖ್ಯ ಲೆಕ್ಕಾಧಿಕಾರಿಗಳಾದ ಜ಼ುವೆಲ್ ಖಾನ್ , ನಗರಸಭೆಯ ಪೌರಾಯುಕ್ತ ವಿಜಯ , ಎಇಇ ಸೌಮ್ಯ , ಕಂದಾಯ ಅಧಿಕಾರಿಗಳಾದ ಎಂ.ಎ.ತಾಹಿರ್ ಹಾಗೂ ಬೂತ್ ಮಟ್ಟದ ಅಧಿಕಾರಿಗಳು, ನಗರಸಭೆ ಸಿಬ್ಬಂದಿಗಳು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭ ಕಾಲೇಜಿನ ವತಿಯಿಂದ ಪ್ರಾಂಶುಪಾಲ ಮೇಜರ್ ಪ್ರೊ. ಬಿ.ರಾಘವ, ಸಹ ಪ್ರಠ್ಯ ಚಟುವಟಿಕೆಯ ಸಂಯೋಜಕರಾದ ಡಾ.ರೇಣುಶ್ರೀ, ಕಾಲೇಜಿನ ಅಧ್ಯಾಪಕ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಮತದಾನ ಪ್ರತಿಜ್ಞಾವಿಧಿಯನ್ನು ನಗರಸಭೆಯ ಪೌರಾಯುಕ್ತ ವಿಜಯ ಬೋಧಿಸಿದರು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. :: ರಂಗೋಲಿ ಸ್ಪರ್ಧೆ ವಿಜೇತರು :: ಶಿವ – ದ್ವಿತೀಯ ಎಂ.ಕಾಂ…
ಮಡಿಕೇರಿ ಏ.4 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷರಾಗಿ ಕೊಡಂದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷರಾಗಿ ಕೇಟೋಳಿರ ಹರೀಶ್ ಪೂವಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೊಡಂದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೇಟೋಳಿರ ಹರೀಶ್ ಪೂವಯ್ಯ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. 2ನೇ ಬಾರಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಾಂಡ್ ಗಣಪತಿ ಹಾಗೂ ಹರೀಶ್ ಪೂವಯ್ಯ ಅವರು ಅಧಿಕಾರ ಸ್ವೀಕರಿಸಿದರು. ಕಳೆದ 5 ವರ್ಷಗಳ ಆಡಳಿತಾವಧಿಯಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದೇನೆ. ಮುಂದಿನ ಅವಧಿಯಲ್ಲೂ ಬ್ಯಾಂಕ್ನ ನಿರ್ದೇಶಕರ ಸಲಹೆ ಸೂಚನೆಗಳೊಂದಿಗೆ ಸರ್ವಾಂಗೀಣ ಪ್ರಗತಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಡಿಸಿಸಿ ಬ್ಯಾಂಕ್ 103 ವರ್ಷ ಇತಿಹಾಸ ಹೊಂದಿದ್ದು, ಕಳೆದ 5 ವರ್ಷಗಳ ತಮ್ಮ ಆಡಳಿತಾವಧಿಯಲ್ಲಿ ಬ್ಯಾಂಕ್ನ ನೂತನ ಕಟ್ಟಡ ನಿರ್ಮಾಣ, ಶತಮಾನೋತ್ಸವ ಆಚರಣೆ, ಸಾಲ ಮೇಳದಂತಹ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದರು. ಚುನಾವಣಾಧಿಕಾರಿಯಾದ ಉಪವಿಭಾಗಾಧಿಕಾರಿ…






