ಲೇಖಕ: admin

ಕುಶಾಲನಗರ, ಮಾ.15 NEWS DESK :  ಕೊಡಗು ಜಿ.ಪಂ ಹಾಗೂ ಕೂಡುಮಂಗಳೂರು ಗ್ರಾ.ಪಂ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ರೂ.5.20 ವೆಚ್ಚದಲ್ಲಿ ಕೈಗೊಂಡಿರುವ ಶೌಚಾಲಯ ನಿರ್ಮಾಣ ಕಾಮಗಾರಿಗೆ ಗ್ರಾ.ಪಂ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್  ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಭಾಸ್ಕರ್ ನಾಯಕ್, ಭಾರತ ಸರ್ಕಾರವು ಬಯಲು ಶೌಚವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಸ್ವಚ್ಛ ಭಾರತ್ ಮಿಷನ್ ಅನ್ನು ಪ್ರಾರಂಭಿಸುವ ಮೂಲಕ ಶೌಚಾಲಯ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಿದೆ. ಮಕ್ಕಳು ಶೌಚಾಲಯವನ್ನು ಸಮರ್ಪಕವಾಗಿ ಬಳಕೆಯನ್ನು ಮಾಡಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಸರ್ಕಾರ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದರು. ಈ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ಗುಣಮಟ್ಟದ ಕಲಿಕಾ ಪ್ರಗತಿ ಇದೆ. ಈ ಶಾಲೆಗೆ ಮುಂದಿನ ದಿನಗಳಲ್ಲಿ ಸುಸಜ್ಜಿತ ಉದ್ಯಾನವನ ನಿರ್ಮಾಣ ಮಾಡುವ ಮೂಲಕ ಶಾಲೆಯನ್ನು ಆಕರ್ಷಣೀಯವಾಗಿ ಮಾಡಲಾಗುವುದು…

Read More

ಮಡಿಕೇರಿ ಮಾ.14 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಮಾ.15 ರಂದು ಮಡಿಕೇರಿಗೆ ಭೇಟಿ ನೀಡಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ತಿಳಿಸಿದ್ದಾರೆ. ಸಮಾವೇಶ ಕಾವೇರಿ ಹಾಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

Read More

ಸೋಮವಾರಪೇಟೆ ಮಾ.14 NEWS DESK  : ಪಟ್ಟಣದಲ್ಲಿ ಕಸವಿಲೇವಾರಿ ಕಗ್ಗಂಟಾಗಿ ಪರಿಣಮಿಸಿದ್ದು, ಸಿಕ್ಕ ಸಿಕ್ಕವರು ಕಸತಂದು ಹಾಕುತ್ತಿರುವುದರಿಂದ ವಿರಕ್ತ ಮಠದ ಜಮೀನು ಕಸದಕೊಂಪೆಯಾಗಿದೆ ಆದರೆ ಮಠದ ವ್ಯವಸ್ಥಾಪಕರಾಗಲಿ, ಪಟ್ಟಣ ಪಂಚಾಯಿತಿಯಾಗಲಿ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಜನವಸತಿ ಪ್ರದೇಶ, ಪಕ್ಕದಲ್ಲಿಯೇ ಶಾಲೆ ಹಾಗೂ ದೇವಾಲಯ ಅದರ ಸುತ್ತಾಮುತ್ತಾ ಪಾಳುಬಿದ್ದ ಜಮೀನು ಕೆಲವು ಪುಂಡ ಪೋಕರಿಗಳಿಗೆ ಹಾಗೂ ಕಸಹಾಕುವವರಿಗೆ ಇನ್ನೇನು ಬೇಕು ಇದು ಪಟ್ಟಣದ ವಾರ್ಡ್ ನ0. 3ರ ಕರ್ಕಳ್ಳಿ ರಸ್ತೆಯ ಮಠದ ಶಾಲೆ ಹಾಗೂ ಕಟ್ಟೆ ಬಸವೇಶ್ವರ ದೇವಾಲಯದ ಸಮೀಪದ ಕಥೆ-ವ್ಯಥೆ. ಸಿಕ್ಕ ಸಿಕ್ಕವರೆಲ್ಲಾ ತಮ್ಮ ಮನೆಯ ಅನುಪಯುಕ್ತ ವಸ್ತುಗಳು, ದಿನನಿತ್ಯದ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದರಿಂದ ಅಕ್ಕಪಕ್ಕದ ಮನೆಯವರು, ಶಾಲೆಯ ಮಕ್ಕಳು ಮೂಗುಮುಚ್ಚಿ ಕುಳಿತುಕೊಳ್ಳಬೇಕಾಗಿದೆ. ಮಠದ ಜಮೀನಿನಲ್ಲಿ ಹಲವು ವರ್ಷಗಳಿಂದ ಶುಂಠಿ ಕೃಷಿ ಮಾಡಿಕೊಂಡಿರುವವರು ಪಂಚಾಯಿತಿಯ ಚರಂಡಿಯನ್ನು ಮುಚ್ಚಿ ರಸ್ತೆ ಮಾಡಿಕೊಂಡಿರುವುದರಿಂದ ವಾಹನಗಳಲ್ಲಿ ಕಸವನ್ನು ತಂದು ಸುರಿಯುತ್ತಿದ್ದಾರೆ. ಕಟ್ಟಡ ಒಡೆದ ಇಟ್ಟಿಗೆ, ಸಿಮೆಂಟ್ ವಸ್ತುಗಳು, ಸಮೀಪದ ಕೋಳಿಮಾಂಸ ಅಂಗಡಿಯವರು ಚೀಲ, ಚೀಲಗಳಲ್ಲಿ ರೆಕ್ಕೆ,…

Read More

ಮಡಿಕೇರಿ ಮಾ.14 NEWS DESK :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಸಿಸಿ ಟಿವಿ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯು ಏ.15 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಏ.10 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು…

Read More

ಮಡಿಕೇರಿ ಮಾ.14 NEWS DESK  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯೂನಿಯನ್ ಬ್ಯಾಂಕ್, ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಇವರ ಸಹಯೋಗದಲ್ಲಿ” ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಜೀವನ ಕೌಶಲ್ಯ ಮತ್ತು ಉದ್ಯಮಶೀಲತೆ ಜಾಗೃತಿ ಕಾರ್ಯಾಗಾರವು ಕೂಡಿಗೆಯ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ ಮಾತನಾಡಿ, ಶಿಬಿರಾರ್ಥಿಗಳಿಗೆ ಮಹಿಳಾ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದರು. ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಕುರಿತು ವಿವರಿಸುತ್ತಾ ಹೆಣ್ಣು ಮಕ್ಕಳ ಶಿಕ್ಷಣ, ಲಿಂಗಾನುಪಾತ, ಭ್ರೂಣಹತ್ಯೆ, ಜೀವನ ಕೌಶಲ್ಯ ಮತ್ತು ಉದ್ಯಮ ಶೀಲತೆಯ ಪ್ರಾಮುಖ್ಯತೆ ಕುರಿತು ತಿಳಿಸಿದರು. ಅಲ್ಲದೇ ಮಹಿಳೆಯರಿಗಾಗಿ ಇಲಾಖೆಯಲ್ಲಿರುವ ವಿವಿಧ ಯೋಜನೆಗಳಾದ ಗೃಹಲಕ್ಷ್ಮೀ ಯೋಜನೆ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ,…

Read More

ಮಡಿಕೇರಿ ಮಾ.14 NEWS DESK : ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಂಬಂಧ ಕೊಡಗು ಜಿಲ್ಲೆಗೆ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಅವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಂಜಯ ಜೀವಿಜಯ, ಕೆ.ಸಿ.ಶಾರಿ ಗಿರೀಶ, ಕೆ.ಸಿ.ಭೀಮಯ್ಯ, ಸಿ.ಎ.ನಾಸೀರ್., ಪಂಕಜ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದೆ. ಹಾಗೆಯೇ ಕೃಷ್ಣ ಕುಟ್ಟಂಡ, ಅಣ್ಣಯ್ಯ, ಅಬ್ದುಲ್ ರಹೀಮಾನ್(ಬಾಪು), ಸುಂದರ್, ಕೆ.ಎಂ.ಬಶೀರ್, ಮುಸ್ತಾಪ ನೆಲ್ಲಿಹುದಿಕೇರಿ, ಹರಿ ಪ್ರಸಾದ್, ಪಿ.ಎಲ್.ಸುರೇಶ್, ಧನ್ಯ, ಕೆ.ಜಿ.ಪೀಟರ್, ವಿ.ಪಿ.ಶಶಿಧರ ಕುಶಾಲನಗರ, ಕಾಂತರಾಜ್ ಸೋಮವಾರಪೇಟೆ, ಎಂ.ಜಿ.ಮೋಹನ್ ದಾಸ್ ಮಡಿಕೇರಿ, ಜಾನ್ಸನ್ ವಿರಾಜಪೇಟೆ, ಕೆ.ಎ. ಪ್ರಶಾಂತ್ ಪೊನ್ನಂಪೇಟೆ, ಇವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದೆ. ಸದಸ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಮತ್ತು…

Read More

ಮಡಿಕೇರಿ ಮಾ.14 NEWS DESK : ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆಯ ಸದಸ್ಯರು ಹಾಗೂ ವಿಧಾನಸಭೆಯ ಸದಸ್ಯರಾದ ಎಸ್.ಸುರೇಶ್ ಕುಮಾರ್, ಎ.ಮಂಜು, ಸಿ.ವಿ.ಸುರೇಶ್ ಬಾಬು, ಡಾ.ಮಂತರ್ ಗೌಡ ಹಾಗೂ ಮಹೇಂದ್ರ ಕಲ್ಲಪ್ಪ ತಮ್ಮಣ್ಣನವರ್ ಅವರು ನಗರದ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆಯನ್ನು ವೀಕ್ಷಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯನಾರಾಯಣ, ಅಂದಾಜು ಸಮಿತಿಯ ಜಯಪ್ರಸಾದ್, ಸದಸ್ಯರಾದ ಭುರ್ಜಿ, ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕರಾದ ಶಿವಕುಮಾರ್ ಇತರರು ತಡೆಗೋಡೆಯನ್ನು ವೀಕ್ಷಿಸಿ ಸಮಿತಿ ಸದಸ್ಯರಿಗೆ ಹಲವು ಮಾಹಿತಿ ನೀಡಿದರು. ಬಳಿಕ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಹಂತದ ಎಂಜಿನಿಯರ್‍ಗಳು, ಭಾರತೀಯ ವಿಜ್ಞಾನ ಸಂಸ್ಥೆ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿ, ಮಾಹಿತಿ ಪಡೆದು, ಹಲವು ನಿರ್ದೇಶನ ನೀಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ…

Read More

ಮಡಿಕೇರಿ ಮಾ.14 NEWS DESK : ಕೇವಲ ಬರೆಯುವುದನ್ನು ಮಾತ್ರ ಸಾಹಿತ್ಯ ಸೇವೆ ಎಂದು ಹೇಳಲಾಗುವುದಿಲ್ಲ, ಬರಹವನ್ನು ಪ್ರಕಾಶನದ ರೂಪದಲ್ಲಿ ಹೊರತರುವುದು ಮತ್ತು ಜನರ ಮನೆಮನೆಗೆ ತಲುಪಿಸುವುದು ಕೂಡ ಸಾಹಿತ್ಯ ಸೇವೆ ಎಂದು ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 84ನೇ ಪುಸ್ತಕ ಬಾಚರಣಿಯಂಡ ರಾಣು ಅಪ್ಪಣ್ಣ ಅವರ “ಪ್ರಕೃತಿ ಆರಾಧನೆ ಪಿಂಞ ಕೃಷಿ ಸಂಸ್ಕೃತಿ”, 85ನೇ ಪುಸ್ತಕ “ಕೊಡಗ್‍ರ ವಾಣಿಜ್ಯ ಬೊಳೆ” ಹಾಗೂ 86ನೇ ಪುಸ್ತಕ ಬಾಚರಣಿಯಂಡ ಅಪ್ಪಣ್ಣ ಅವರ “ಜನಪದ ಸಿರಿ” ಲೋಕಾರ್ಪಣೆಗೊಂಡಿತು. ಕೊಡವ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಾಚರಣಿಯಂಡ ಪಿ.ಅಪ್ಪಣ್ಣ ಅವರು ಹಿಂದಿನ ಕಾಲದಲ್ಲಿ ಸಾಹಿತಿಗಳಿಗೆ ಅಷ್ಟು ಪ್ರೋತ್ಸಾಹ ಸಿಗುತ್ತಿರಲಿಲ್ಲ. ಆದರೆ ಪ್ರಸ್ತುತ ದಿನಗಳಲ್ಲಿ ದೃಶ್ಯ ಮಾಧ್ಯಮ, ಶ್ರವಣ ಮಾಧ್ಯಮ ಜನರಿಗೆ ಅದರ ಸಾರವನ್ನು ತಿಳಿಸಿ, ಇಂದಿನ ಸಮಾಜವನ್ನು ಜಾಗೃತ ಮಾಡುವಲ್ಲಿ ಮುಖ್ಯ ಪಾತ್ರವಹಿಸುತ್ತಿದೆ ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎಂ.ಎ ಕೊಡವ…

Read More

ಮಡಿಕೇರಿ ಮಾ.14 NEWS DESK : ಮಡಿಕೇರಿ ಶಾಖೆಯ ಬ್ರಹ್ಮಕುಮಾರೀಸ್  ಲೈಟ್ ಹೌಸ್ ಸಭಾಂಗಣದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಅಮೃತೇಶ್ವರ ದರ್ಶನ ಮತ್ತು  88ನೇ ತ್ರಿಮೂರ್ತಿ ಶಿವಜಯಂತಿ ಹಾಗೂ ವಿಶ್ವ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬ್ರಹ್ಮಕುಮಾರೀಸ್ ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯತ್ರಿಜೀ ಅವರ ದಿವ್ಯಸಾನ್ನಿಧ್ಯದಲ್ಲಿ  ಶಿವಧ್ವಜ ಹಾರಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹೆಚ್.ಸಿ.ಶ್ಯಾಂಪ್ರಸಾದ್‍ ಕಾರ್ಯಕ್ರಮವನ್ನು ಉದ್ಘಾಟಿಸಿ,  ಶಿವರಾತ್ರಿಯ ಶುಭಾಶಯಗಳನ್ನು ನೀಡಿ ಬ್ರಹ್ಮಾಕುಮಾರಿ ಸಹೋದರಿಯರ ಸೇವೆಯನ್ನು ಶ್ಲಾಘೀಸಿದರು. ಇಂದಿನ ಒತ್ತಡಗಳ ಜೀವನದಲ್ಲಿ  ಪರಮಾತ್ಮನ ಶಕ್ತಿಯ ಅವಶ್ಯಕತೆಯಿದೆ, ಆದ್ದರಿಂದ ಇಂತಹ ಶಾಂತಿಯ ಸ್ಥಾನಗಳಿಗೆ ಆಗಾಗ ಭೇಟಿ ಕೊಡುವುದು ಅವಶ್ಯಕವೆಂದು ಅಭಿಪ್ರಾಯಪಟ್ಟರು. ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಬಿ. ಜಯಲಕ್ಷ್ಮಿ  ಮಾತನಾಡಿ, ತಮ್ಮ ವಿದ್ಯಾಭ್ಯಾಸದ ದಿನಗಳಲ್ಲಿ ಆಶ್ರಮದ ಒಡನಾಟವಿದ್ದು, ಈಗ ಅದನ್ನು ಪುನರಾರಂಭಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು.  ಪ್ರಶಾಂತ ವಾತಾವರಣದಲ್ಲಿ ಎಲ್ಲರೊಂದಿಗೆ ಶಿವರಾತ್ರಿಯ ಆಚರಣೆ ತುಂಬಾ ಖುಷಿ ನೀಡಿದೆ ಎಂದರು. ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ…

Read More

ಮಡಿಕೇರಿ ಮಾ.14 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಭಾಗದಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ರಸ್ತೆಗಳು ಅಭಿವೃದ್ಧಿಯಾಗುತ್ತಿವೆ. ಹಲವು ವರ್ಷಗಳ ನಂತರ ಕರಡಿಗೋಡು ಗ್ರಾಮದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ನಂತರ ಶಾಸಕ ಪೊನ್ನಣ್ಣ ಅವರು ದುಬಾರೆ ಸಾಕಾನೆ ಶಿಬಿರದ ಬುಡಕಟ್ಟು ನಿವಾಸಿಗಳಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಯೋಜನೆಯನ್ನು ಉದ್ಘಾಟಿಸಿದರು. ವಿದ್ಯುತ್ ಬೆಳಕಿಲ್ಲದೆ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದ ಸುಮಾರು 16 ಕುಟುಂಬಗಳಿಗೆ ಇದೀಗ ವಿದ್ಯುತ್ ಭಾಗ್ಯ ದೊರೆತ್ತಿದೆ. ::: ಪರಿಹಾರ ವಿತರಣೆ ::: ಪಾಲಿಬೆಟ್ಟದ ತೋಟವೊಂದರಲ್ಲಿ ಕಾಡಾನೆ ದಾಳಿಗೆ ಬಲಿಯಾದ ಅಸ್ಸಾಂ ಮೂಲದ ಮಹಿಳೆಯ ಕುಟುಂಬದ ಸದಸ್ಯರಿಗೆ ಇದೇ ಸಂದರ್ಭ ಶಾಸಕರು ಪರಿಹಾರದ ಚೆಕ್ ವಿತರಿಸಿದರು. ಅಲ್ಲದೆ ಮೃತದೇಹವನ್ನು ಅಸ್ಸಾಂ ಗೆ ಕೊಂಡೊಯ್ಯಲು ಬೇಕಾದ ಎಲ್ಲಾ…

Read More