ಮಡಿಕೇರಿ ಮಾ.14 NEWS DESK : ಕಿರ್ಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.
ಲೇಖಕ: admin
ಬೆಂಗಳೂರು ಮಾ.14 NEWS DESK : ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ (KSIIDC) ದ 19.84 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ.ಸತೀಶ, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ ಮತ್ತಿತರರು ಇದ್ದರು.
ಸಿದ್ದಾಪುರ ಮಾ.14 NEWS DESK : ನಲ್ವತ್ತೇಕರೆ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಸುಳ್ಯ ಕೆವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ, ಮಾಹಿತಿ ಕಾರ್ಯಗಾರ, ಉಚಿತ ಔಷಧಿ ವಿತರಣೆ ಹಾಗೂ ರಕ್ತದಾನ ಶಿಬಿರ ನಡೆಯಿತು. ನೆಲ್ಯಹುದಿಕೇರಿ ಶಾದಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸ್ವರ್ಣ ಕ್ಲಿನಿಕ್ ನ ಡಾ.ಉದಯ್ ಕುಮಾರ್ ಉದ್ಘಾಟಿಸಿ, ಮಾತನಾಡಿ ಬಡವರ, ಸಾಮಾನ್ಯರ ಪಾಲಿಗೆ ಇಂತಹ ವೈದ್ಯಕೀಯ ಶಿಬಿರ ಉಪಯುಕ್ತವಾಗಿದೆ. ಆರೋಗ್ಯದಲ್ಲಿ ಮುಂದೆ ಬರಬಹುದಾದ ಸವಾಲುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಇಂತಹ ಶಿಬಿರ ಸಹಕಾರಿ ಇದನ್ನು ಸಾವ೯ಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಶಿಬಿರದಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಇಎನ್ ಟಿ, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಎಲುಬು ಮತ್ತು ಕೀಲು ರೋಗ, ದಂತ ಚಿಕಿತ್ಸೆ, ಶ್ವಾಸಕೋಶ ಹಾಗೂ ತುರ್ತು ಚಿಕಿತ್ಸೆ ವಿಬಾಗ ಸೇರಿದಂತೆ ನುರಿತ…
ನಾಪೋಕ್ಲುಮಾ.14 NEWS DESK : ಕೊಡಗಿನ ಆರಾಧ್ಯ ದೈವ ಪಾಡಿ ಇಗ್ಗುತ್ತಪ್ಪ ದೇವಾಲಯದ ರಸ್ತೆ ಕಾಮಗಾರಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲನೆ ನಡೆಸಿದರು. ಸಂಪೂರ್ಣ ಹಾನಿಯಾಗಿದ್ದ ರಸ್ತೆಯ ಕಾಮಗಾರಿ ನಡೆಸಲು ಜನರ ಕೋರಿಕೆ ಮೇರೆಗೆ ಕೆಲವು ದಿನಗಳ ಹಿಂದೆ ಎ.ಎಸ್.ಪೊನ್ನಣ್ಣ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಕಾಮಗಾರಿಯ ಗುಣಮಟ್ಟವನ್ನು ಶಾಸಕರು ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಮಾ.23ರಂದು ಕಲ್ಲಡ್ಚ ಹಬ್ಬ ನಡೆಯಲಿದೆ .ಅದರೊಳಗೆ ಗುಣಮಟ್ಟದ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಿ ಮಾ. 22ರಂದು ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಅಕ್ರಮ,ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿ.ಸಿ.ಸಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ, ಕಲಿಯಂಡ ಸಂಪನ್ ಅಯ್ಯಪ್ಪ, ಕರ್ತಂಡ ಶೈಲಾ ಕೊಟ್ಟಪ್ಪ, ಸಾಬು, ಶುಭಾಷ್…
ನಾಪೋಕ್ಲು ಮಾ.14 NEWS DESK : ಹೊದ್ದೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಭಗವತಿ ದೇವಾಲಯದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ಅಧಿಕ ಸಂಖ್ಯೆಯ ಗ್ರಾಮಸ್ಥರು ಪ್ರತಿಷ್ಠಾಪನೆ ಕಾರ್ಯಕ್ಕೆ ಸಾಕ್ಷಿಯಾದರು. ಬೆಳಗ್ಗೆ ಮೇಷಲಗ್ನ, ಶುಕ್ಲ ಪಕ್ಷ, ಚತುರ್ಥ ತಿಥಿ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ ,ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ , ಸಂಜೆ ಆದಿವಾಸ ಹೋಮ , ದೀಪಾರಾಧನೆ, ಮಹಾಬಲಿ ಪೀಠ, ಆದಿವಾಸ, ತ್ರಿಕಾಲ ಪೂಜೆ, ಕಲಶಾದಿ ವಾಸ ರಾತ್ರಿ ಪೂಜಾ ಮತ್ತಿತರ ಪೂಜಾ ಕೈಂಕರ್ಯಗಳು ಜರುಗಿತು. ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ದೇವಾಲಯ ಗ್ರಮದ ದೈವಿಕ ತಾಣವಾಗಿ ರೂಪುಗೊಂಡಿತು. ಮರಕಡ ಶ್ರೀ ಗುರಪರಾಶಕ್ತಿ ಮಠದ ಪರಮಪೂಜ್ಯ ನರೇಂದ್ರನಾಥ ಯೋಗೇಶ್ವರ ಮಹಾಸ್ವಾಮಿಯವರ ಪೂರ್ಣ ಅನುಗ್ರಹದೊಂದಿಗೆ ನಿತಿನ್ ನರೇಂದ್ರನಾಥ ಯೋಗೇಶ್ವರ ಸ್ವಾಮಿ ಮತ್ತು ಮಾತೆ ಶಕುಂತಲಾ ಅಮ್ಮ ನವರ ದಿವ್ಯ ನೇತೃತ್ವದಲ್ಲಿ ನೂತನವಾಗಿ ಜೀರ್ಣೋದ್ಧಾರ ಗೊಂಡಿದೆ. ಬ್ರಹ್ಮ ಶ್ರೀ ಕೆ.ಯು.ಪದ್ಮನಾಭ ತಂತ್ರಿಗಳು ಮತ್ತು…
ಮಡಿಕೇರಿ ಮಾ.14 NEWS DESK : ಇತ್ತೀಚೆಗೆ ಮಡಿಕೇರಿ ಸಮೀಪ ತಾಳತ್ತಮನೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬೈಕ್ ಚಾಲಕ ಕಾಟಕೇರಿಯ ಚರಣ್ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗಾಗಿ ಲಕ್ಷಾಂತರ ರೂ.ಗಳ ಅಗತ್ಯವಿದ್ದು, ಬಡ ಕುಟುಂಬ ಇದನ್ನು ಭರಿಸಲು ಸಾಧ್ಯವಾಗದ ಅಸಹಾಯಕ ಸ್ಥಿತಿಯಲ್ಲಿದೆ. ಮಡಿಕೇರಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚರಣ್ ಈಗ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದಾರೆ. ದಾನಿಗಳು ಆರ್ಥಿಕ ಸಹಕಾರವನ್ನು ನೀಡುವಂತೆ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ.
ಮಡಿಕೇರಿ ಮಾ.14 NEWS DESK : ಪೊನ್ನಂಪೇಟೆಯ ತಾಲ್ಲೂಕು ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ 94 ಸಿ ಫಲಾನುಭಾವಿಗಳಿಗೆ ಹಕ್ಕು ಪತ್ರ ಮತ್ತು ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಕ್ಕುಪತ್ರ ವಿತರಿಸಿದರು.
ಬೆಂಗಳೂರು ಮಾ.14 NEWS DESK : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಯದುವೀರ್ ಅವರನ್ನು ಸ್ವಾಗತಿಸಿದರು. ಬಳಿಕ ಯದುವೀರ್ ಒಡೆಯರ್ ಅವರು ಭಾರತಮಾತೆಯ ಭಾವಚಿತ್ರಕ್ಕೆ ಹಾಗೂ ಜಗನ್ನಾಥ್ ರಾವ್ ಜೋಶಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್, ಪ್ರೀತಂ ಗೌಡ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಮಾಜಿ ಸಚಿವರಾದ ಸಿ.ಟಿ.ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಕುಶಾಲನಗರ NEWS DESK 14 : ಶರಣರ ಚಳುವಳಿ ನಡೆದು 900 ವರ್ಷಗಳು ಕಳೆದರೂ ಕೂಡ ಇಂದಿಗೂ ಮನುಕುಲದ ಉದ್ಧಾರಕ್ಕೆ ಸಾಧನವಾಗಿರುವ ವಚನ ಚಳುವಳಿ ಇಂದಿನ ಮನುಕುಲಕ್ಕೆ ಬಳುವಳಿಯಾಗಿದೆ ಎಂದು ಕುಶಾಲನಗರ ಪುರಸಭೆ ಸದಸ್ಯೆ ಜಯಲಕ್ಷ್ಮಿ ಬಣ್ಣಿಸಿದರು. ಕುಶಾಲನಗರದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಸುತ್ತೂರು ಜಗದ್ಗುರು ಗುರುಚನ್ನಬಸವ ಶಿವಾಚಾರ್ಯ ದತ್ತಿ ಕಾರ್ಯಕ್ರಮದಲ್ಲಿ “ಶರಣ ಸಾಹಿತ್ಯ ಪ್ರಸಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದ ಜನರಲ್ಲಿದ್ದ ಮೌಡ್ಯಗಳು, ಮೂಢನಂಬಿಕೆಗಳು ಮೊದಲಾದ ಕಂದಾಚಾರಗಳ ವಿರುದ್ಧ ಬಸವಾದಿ ಶರಣರು ಸಮರ ಸಾರುವ ಮೂಲಕ ಜನಸಮಾನ್ಯರ ಬವಣೆಗಳ ಊರುಗೋಲಾದರು ಎಂದು ವಿಶ್ಲೇಷಿಸಿದ ಜಯಲಕ್ಷ್ಮಿ , ವಚನಕಾರ್ತಿಯರಾದ ಅಕ್ಕಮಹಾದೇವಿ, ಸತ್ಯಕ್ಕ, ಸಂಕವ್ವಾ ಮೊದಲಾದ ಶರಣೆಯ ಹೋರಾಟದ ಮಜಲುಗಳನ್ನು ವಿದ್ಯಾರ್ಥಿಗಳ ಮುಂದೆ ವಿವರಿಸಿದರು. ರಂಗಕರ್ಮಿ, ಉಪನ್ಯಾಸಕ ಎಂ.ನಂಜುಂಡಸ್ವಾಮಿ ಮಾತನಾಡಿ, 12 ನೇ ಶತಮಾನದಲ್ಲಿ ಮೇಲು-ಕೀಳು, ಬಡವ – ಬಲ್ಲಿದ ಮೊದಲಾದ ಶೋಷಣೆಯುಕ್ತ ಪರಿಸರ, ಅಂದಿನ ಜನರ ನೆಮ್ಮದಿಯನ್ನು…
ಮಡಿಕೇರಿ ಮಾ.14 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಇಂದು ಮುಹೂರ್ತದ ಕೊಳ್ಳಿ ಕಡಿಯುವ ಮೂಲಕ ಚಾಲನೆ ನೀಡಲಾಯಿತು. ಪ್ರತಿವರ್ಷದಂತೆ ಈ ಬಾರಿ ಕೂಡ ಮಾ.28 ರಿಂದ 30 ರವರೆಗೆ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಮಾ.21 ರಂದು ಬೆಳಿಗ್ಗೆ ಗೊನೆ ಕಡಿಯುವುದು, ಮಾ.27 ರಂದು ಬೆಳಿಗ್ಗೆ 5.30 ಗಂಟೆಗೆ ದೈವಸ್ಥಾನದಲ್ಲಿ ಗಣಹೋಮ, ಮಾ.28 ರಂದು ರಾತ್ರಿ 7.30 ಗಂಟೆಗೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಿಂದ ಭಂಡಾರ ಹೊರಡುವುದು, 9 ಗಂಟೆಗೆ ಮೇಲೇರಿಗೆ ಅಗ್ನಿ ಸ್ಪರ್ಷ, 12.30 ಗಂಟೆಗೆ ಕುಲ್ಚಾಟ ಹೊರಡುವುದು, ಮಾ.29 ರಂದು ಬೆಳಿಗ್ಗೆ 6 ಗಂಟೆಗೆ ಅಗ್ನಿ ಪ್ರವೇಶ, 7 ಗಂಟೆಗೆ ಪ್ರಸಾದ ವಿತರಣೆ, 8 ಗಂಟೆಗೆ ಮಾರಿಕಳ ಪ್ರವೇಶ ಹಾಗೂ ಮಾರಿಕಳದಿಂದ ಬಂದ ನಂತರ ಹರಕೆಯ ಸುರಿಗೆಗಳನ್ನು ಒಪ್ಪಿಸುವುದು. ನಂತರ ಪ್ರಸಾದ ವಿತರಣೆ…






