ಮಡಿಕೇರಿ ಏ.3 NEWS DESK : ಮಡಿಕೇರಿ ನಗರಸಭಾ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಅಧಿಕಾರಿಗಳ ಸಭೆಯು ನಗರಸಭೆ ಸಭಾಂಗಣದಲ್ಲಿ ನಡೆಯಿತು. 12ಡಿ, ಪಿಡಬ್ಲ್ಯುಡಿ ಮತದಾರರು ಹಾಗೂ ಮತಗಟ್ಟೆ ಕೇಂದ್ರಗಳ ಮೂಲಭೂತ ಸೌಕರ್ಯಗಳು ಸ್ವೀಪ್ ಕಾರ್ಯಕ್ರಮದ ಚಟುವಟಿಕೆಗಳು ಮುಂತಾದ ಚುನಾವಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಸೂಚನೆಗಳನ್ನು ನೀಡಿ ಪ್ರಮುಖವಾಗಿ ಕಡಿಮೆ ಮತದಾನವಾಗಿರುವ ಬಗ್ಗೆ ಮತದಾರರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಿ ಶೇಕಡವಾರು ಮತದಾನದ ಪ್ರಮಾಣವು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಾಗಲು ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನಗಳನ್ನು ನೀಡಿ ತಿಳಿಸಲಾಯಿತು.
ಲೇಖಕ: admin
ಮಡಿಕೇರಿ ಏ.3 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರುತ್ತದೆ. ಚುನಾವಣೆ, ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳು, 21-ಮೈಸೂರು ಲೋಕಸಭಾ ಕ್ಷೇತ್ರರವರೆಗೆ ಸಂಬಂಧಪಟ್ಟ ರಾಜಕೀಯ ಪಕ್ಷ, ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಕಡ್ಡಾಯವಾಗಿ ಅನುಮತಿಯನ್ನು ಪಡೆದ ನಂತರ ಕಾರ್ಯಕ್ರಮವನ್ನು ನಡೆಸಬೇಕು. ಅದಲ್ಲದೇ ಈ ಕಚೇರಿಗೆ ಧಾರ್ಮಿಕ ಕಾರ್ಯಕ್ರಮಗಳು, ಕೌಟುಂಬಿಕ ಕಾರ್ಯಕ್ರಮ (ಮದುವೆ, ಗೃಹ ಪ್ರವೇಶ, ದೇವರ ಪೂಜೆ ಇತ್ಯಾದಿ) (ರಾಜಕೀಯ ಕಾರ್ಯಕ್ರಮಗಳನ್ನು ಹೊರತುಪಡಿಸಿ) ಗಳಿಗೆ ಈ ಕಚೇರಿಗೆ ಅರ್ಜಿಗಳು ಸ್ವೀಕೃತವಾಗುತ್ತಿರುತ್ತದೆ. ನಿಯಮಗಳಂತೆ ಧಾರ್ಮಿಕ ಕಾರ್ಯಕ್ರಮಗಳು, ಕೌಟುಂಬಿಕ ಕಾರ್ಯಕ್ರಮಗಳಿಗೆ ಯಾವುದೇ ಅನುಮತಿಯ ಅವಶ್ಯಕತೆ ಇರುವುದಿಲ್ಲ. ಆ ರೀತಿ ಕಾರ್ಯಕ್ರಮವನ್ನು ನಡೆಸುವವರು ಮಾಹಿತಿಯನ್ನು ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳಿಗೆ ಹಾಗೂ ಸ್ಥಳೀಯ ಪ್ರಾಧಿಕಾರಗಳಿಗೆ ನೀಡುವಂತೆ ಕೋರಿದೆ. ಚುನಾವಣೆ ಸಂದರ್ಭದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ಮೇಲೆ ನಿಗಾ ವಹಿಸುವಂತೆ ಚುನಾವಣಾ ತಂಡಗಳಿಗೆ ಈಗಾಗಲೇ ನಿರ್ದೇಶನವನ್ನು ನೀಡಿರುವುದರಿಂದ, ಮಾದರಿ ನೀತಿ ಸಂಹಿತೆ ಜಾರಿ ಸಂಬಂಧ ನಿಯೋಜಿಸಿರುವ ಫ್ಲೈಯಿಂಗ್ ಸ್ಕ್ವಾಡ್,…
ಮಡಿಕೇರಿ ಏ.3 NEWS DESK : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸ್ವೀಪ್ನ ಅಂಗವಾಗಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು. ತಹಶೀಲ್ದಾರ್ ನವೀನ್ ಕುಮಾರ್ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಬೂತ್ ಮಟ್ಟದ ಸೈನಿಕರಿದ್ದಂತೆ, ಬೂತ್ ಮಟ್ಟದ ಮತಗಟ್ಟೆಯಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ ಹಾಗೂ ವಿದ್ಯುತ್ ಸಂಪರ್ಕದ ವ್ಯವಸ್ಥೆ ಹೀಗೆ ಇನ್ನಿತರ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚು ಗಮನಹರಿಸಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ಮತದಾನ ಪವಿತ್ರವಾದ ಕಾರ್ಯವಾಗಿದ್ದು, ಜನರಿಗೆ ಧ್ವನಿಯನ್ನು ನೀಡುತ್ತದೆ. ಎಲ್ಲ ಜನಸಾಮಾನ್ಯರು ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು. ಏ.26 ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ನಾವು ಸಮಯ ವ್ಯರ್ಥ ಮಾಡದೆ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲೆಗಳನ್ನು ತೆಗೆದುಕೊಂಡು…
ಕಡಂಗ ಏ.3 NEWS DESK : ಅರಪಟ್ಟು ಗ್ರಾಮದೇವತೆಯಾದ ಚೊಯಿಲಿ ಶ್ರೀ ಭಗವತಿ ದೇವಿಯ ವಾರ್ಷಿಕ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಅಂದಿಬೋಳಕ್ ನೊಂದಿಗೆ ಪ್ರಾರಂಭವಾದ ಉತ್ಸವದಲ್ಲಿ ಪ್ರತಿ ದಿನ ದೇವರ ಉತ್ಸವ ಮೂರ್ತಿಯ ಪ್ರದರ್ಶನ, ಎತ್ತು ಪೊರಾಟ ಮತ್ತು ಭಕ್ತಾದಿಗಳಿಂದ ಬೊಳ್ಕಾಟ್ ನೆರವೇರಿತು. ನಂತರ ಅಲಂಕಾರ ಪೂಜೆ , ವಸಂತ ಪೂಜೆ, ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳನ್ನು ಅರ್ಚಕರಾದ ಕೀರ್ತಿಶ್ , ಕಿರಣ್, ಲಕ್ಷ್ಮಶ್ ನೆರವೇರಿಸಿದರು. ಉತ್ಸವದಲ್ಲಿ ದೇವಸ್ಥಾನದ ಅಧ್ಯಕ್ಷರಾದ ನೇರ್ಪoಡ ಚಿತ್ರ ಬೆಳ್ಯಪ್ಪ ಹಾಗೂ ಆಡಳಿತ ಮಂಡಳಿಯವರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ನೌಫಲ್ ಕಡಂಗ
ಸೋಮವಾರಪೇಟೆ ಏ.3 NEWS DESK : ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸಿದ್ದಗಂಗಾ ಮಠದ ಕೊಡುಗೆ ಅನನ್ಯ ಎಂದು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ತಿಲೊತ್ತಮೆ ಬಣ್ಣಿಸಿದರು. ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗೂ ವೀರಶೈವ ಸಮಾಜದ ಆಶ್ರಯದಲ್ಲಿ ಏರ್ಪಡಿಸಿದ್ದ ಶಿವಕುಮಾರ ಸ್ವಾಮೀಜಿ ಜಯಂತ್ಯೋತ್ಸವದ ಗುರುವಂದನಾ ಸಮಾರಂಭ ವನ್ನುದ್ದೇಶಿಸಿ ಮಾತನಾಡಿದರು. ಇಡೀ ದೇಶದಲ್ಲಿಯೇ ಗಮನ ಸೆಳೆದಿರುವ ಸಿದ್ದಗಂಗಾ ಕ್ಷೇತ್ರ ಇಂದು ಜನಸಾಮಾನ್ಯರ ಬಾಳಿನ ಆಶಾಕಿರಣವಾಗಿದೆ. ಜಾತಿ, ಮತ, ಬೇಧವಿಲ್ಲದೆ ಬಡವ, ಬಲ್ಲಿದನೆಂಬ ತಾರತಮ್ಯವಿಲ್ಲದೆ ಪ್ರತಿವರ್ಷ ಹತ್ತು, ಹದಿನೈದು ಸಾವಿರ ವಿಧ್ಯಾರ್ಥಿ ಗಳಿಗೆ ವಿದ್ಯೆ, ವಸತಿ, ಆಹಾರಗಳೆಂಬ ತ್ರಿವಿಧ ದಾಸೋಹ ನೀಡುತ್ತಿದೆ ಎಂದರು. ಅಂದು ಪೂಜ್ಯ ಶಿವಕುಮಾರ ಸ್ವಾಮೀಜಿ ಹಳ್ಳಿ, ಹಳ್ಳಿ ತಿರುಗಿ ಬಿಕ್ಷೇ ಎತ್ತಿ ಕಷ್ಟಪಟ್ಟು ಕಟ್ಟಿದ ಮಠ ಇಂದು ಹೆಮ್ಮರವಾಗಿ ಬೆಳೆದು ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಮಾಜಕ್ಕೆ ಆಶ್ರಯ ನೀಡುತ್ತಿರುವುದು ಇಂದಿನ ಜನಾಂಗ ಕೃತಘ್ನತೆಯಿಂದ ಸ್ಮರಿಸಿ ಕೊಳ್ಳಬೇಕಾಗಿದೆ ಹಾಗೂ ತಮ್ಮ ಕೈಯಾಲಾದ…
ಮಡಿಕೇರಿ ಏ.3 NEWS DESK : ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಾಸಕರಾದ ವೆಂಕಟೇಶ್, ತನ್ವೀರ್ ಸೇಠ್ ಹಾಜರಿದ್ದರು.
ಮಡಿಕೇರಿ ಏ.3 NEWS DESK : ಶ್ರೀ ಕಾವೇರಮ್ಮೇ ಅಮ್ಮ ಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಎಂ.ಬಿ ದೇವಯ್ಯ ಹಾಗೂ ಪ್ರಮುಖರು ಭಾಗಮಂಡಲದ ಭಗಂಡೇಶ್ವರ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ನಂತರ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸದರು. ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿ, ನಾಡಿನೆಲ್ಲೆಡೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಪ್ರಾರ್ಥಿಸಿದರು. ಟ್ರಸ್ಟಿಗಳಾದ ಹಂಚೆಟ್ಟಿರ ಮನು ಮುದ್ದಪ್ಪ, ಪಾಸುರ ಕಾವೇರಪ್ಪ, ಎನ್.ಕೆ.ಅಯ್ಯಣ್ಣ, ಸೋಮಯ್ಯ, ಪಿ.ಎ.ನಂದ ಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಮಡಿಕೇರಿ ಏ.3 NEWS DESK : ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯದ ಕಾಂಗ್ರೆಸ್ ಮುಖಂಡ ಟಿ.ಎಂ.ಶಾಹೀದ್ ತೆಕ್ಕಿಲ್ ಅವರನ್ನು ಎ.ಐ.ಸಿ.ಸಿ ನೇಮಕ ಮಾಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಶಿಫಾರಸ್ಸಿನೊಂದಿಗೆ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯೊಂದಿಗೆ ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕೆ.ಪಿ.ಸಿ.ಸಿ ಗೆ ಶಾಹೀದ್ ತೆಕ್ಕಿಲ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ನೀಡಿದೆ. ಟಿ.ಎಂ.ಶಾಹಿದ್ ತೆಕ್ಕಿಲ್ ಅವರು ಎನ್.ಎಸ್.ಯು.ಐ ನ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ದ .ಕ ಜಿಲ್ಲಾ ಎನ್.ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿ, ರಾಜ್ಯ ಎನ್.ಎಸ್.ಯು.ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಅಲ್ಪಸಂಖ್ಯಾತರ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ, ಹಾವೇರಿ ಜಿಲ್ಲೆಯ ಹಿರೆಕೆರೂರು, ಕೊಡಗು ಜೆಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ, ದ .ಕ ಜಿಲ್ಲೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ…
ಸೋಮವಾರಪೇಟೆ ಏ.3 NEWS DESK : ಅಪರಿಚಿತರು ಹಾರಿಸಿದ ಗುಂಡೇಟಿನಿಂದ ರೈತ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರೊಬ್ಬರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಗಣಗೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಚಂದ್ರಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಅಪರಿಚಿತ ವ್ಯಕ್ತಿಗಳು ಗುಂಡುಹಾರಿಸಿದ ಪರಿಣಾಮ ಬೆರಳುಗಳಿಗೆ ಗಾಯವಾಗಿದೆ. ಗಾಯಾಳು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್.ಪಿ ರಾಮರಾಜನ್. ಡಿವೈಎಸ್ಪಿ ಆರ್.ವಿ ಗಂಗಾಧರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿಕೇರಿ ಏ.3 NEWS DESK : ತಾಳತ್ತಮನೆ ನೇತಾಜಿ ಯುವಕ ಮಂಡಲದ 32ನೇ ವಾರ್ಷಿಕ ಮಹಾ ಸಭೆಯು ನೇತಾಜಿ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪಿ.ಕೆ.ಜೀವನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ವಿವಿಧ ಕಾರ್ಯಚಟುವಟಿಕೆಯ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಹಿರಿಯ ಸಲಹಾ ಸಮಿತಿ ಸದಸ್ಯ ಗಿರೀಶ್ ತಾಳತ್ತಮನೆ, ಸಂಘ ಬೆಳೆದು ಬಂದದಾರಿ ಹಾಗೂ ಸಂಘದ ಮೂಲ ಉದ್ದೇಶಗಳನ್ನು ಸದಸ್ಯರಿಗೆ ತಿಳಿಸಿದರು. ಅಲ್ಲದೇ ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಘದ ಪ್ರಗತಿಗೆ ಸಹಕರಿಸುವಂತೆ ಕೋರಿದರು. ಸಂಘದ ಕಾರ್ಯದರ್ಶಿ ಡಿ.ಪಿ.ಮಿಲನ್ ವಾರ್ಷಿಕ ವರದಿಯನ್ನು ವಾಚಿಸಿದರು. ಖಜಾಂಚಿ ಬಿ.ಆರ್.ಯತೀಶ್ ರೈ 2023-24ನೇ ಸಾಲಿನ ಖರ್ಚು ವೆಚ್ಚಗಳ ವರದಿಯನ್ನು ಮಂಡಿಸಿದರು. ನೂತನ ಸಮಿತಿ ರಚನೆ :: ಸಭೆಯಲ್ಲಿ 2024-25ನೇ ಸಾಲಿಗೆ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೊಂಡಿರ ಪಿ.ಕಾರ್ಯಪ್ಪ, ಉಪಾಧ್ಯಕ್ಷರಾಗಿ ಗಣೇಶ್ ಕೊಕ್ಕಲೆ, ಕಾರ್ಯದರ್ಶಿಯಾಗಿ ಬಿ.ಬಿ.ದಿವೇಶ್ ರೈ, ಸಹ ಕಾರ್ಯದರ್ಶಿಯಾಗಿ ಬಿ.ಆರ್.ಯತೀಶ್…






