ಮಡಿಕೇರಿ ಮಾ.14 NEWS DESK : ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ವಿರಾಜಪೇಟೆಯಲ್ಲಿ ಹೊಲಿಗೆ ಯಂತ್ರಗಳನ್ನು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಬ್ಸಿಡಿ ಲೋನ್ ಮತ್ತು ಟ್ಯಾಕ್ಸಿಯನ್ನು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ವಿತರಿಸಿದರು.
ಲೇಖಕ: admin
ಸುಂಟಿಕೊಪ್ಪ ಮಾ.14 NEWS DESK : ಸುಂಟಿಕೊಪ್ಪ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ನಡೆಯಿತು. ಶ್ರೀ ಮಂಜುನಾಥಯ ಮೀನಾಕ್ಷಿಮ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಸಭೆಯನ್ನು ಉದ್ದೇಶಿಸಿ ನಿಕಟ ಪೂರ್ವ ಅಧ್ಯಕ್ಷ ಮನುಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸೋಮವಾರಪೇಟೆ ತಾಲೂಕು ಮಂಡಲ ಅಧ್ಯಕ್ಷರಾದ ಗೌತಮ್ ಸಮ್ಮುಖದಲ್ಲಿ ಸುಂಟಿಕೊಪ್ಪ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಸುಂಟಿಕೊಪ್ಪದ ನಗರಾಧ್ಯಕ್ಷರಾಗಿ ಧನು ಕಾವೇರಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ವಿ.ಕೆ.ರಾಜು ಅವರನ್ನು ಆಯ್ಕೆ ಮಾಡಲಾಯಿತು. ಸೋಮವಾರಪೇಟೆ ಮಂಡಳ ಒಬಿಸಿ ಅಧ್ಯಕ್ಷರಾಗಿ ಆಯ್ಕೆಗೊಂಡ ಪಿ.ಆರ್.ಸುನಿಲ್ ಕುಮಾರ್ ಅವರನ್ನು ಯುವ ಮೋರ್ಚಾದ ಅಧ್ಯಕ್ಷರಾದ ವಿಜ್ಞೇಶ್ ಸೇರಿದಂತೆ ಹಿರಿಯರು ಸನ್ಮಾನಿಸಿ, ಗೌರವಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಶಾಂತ್ (ಕೋಕ) ವಹಿಸಿದ್ದರು ಗ್ರಾ.ಪಂ ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಒಬಿಸಿ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಗ್ರಾಮ ಪಂಚಾಯಿತಿ ಸದಸ್ಯಗಳಾದ ಬಿ.ಎಂ.ಸುರೇಶ್, ಮಂಜುನಾಥ್, ಹಿರಿಯರಾದ ಲೀಲಾ ಮೇದಪ್ಪ, ವಿ.ಎ.ಸಂತೋಷ್ ಹಾಗೂ ಎಲ್ಲಾ ಕಾರ್ಯಕರ್ತರು ಉಪಸ್ಥಿದ್ದರು.
ಸುಂಟಿಕೊಪ್ಪ ಮಾ.14 NEWS DESK : ಕಾಜೂರಿನ ಶ್ರೀ ಹರಿಹರ ಯುವಕ ಸಂಘದ 33ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶಿವರಾತ್ರಿ ಉತ್ಸವ ಕಾರ್ಯಕ್ರಮವನ್ನು ಐಗೂರು ಗ್ರಾ.ಪಂ ಅಧ್ಯಕ್ಷ ಜಿ.ಕೆ.ವಿನೋದ್, ಕಾಜೂರು ಕಾಫಿ ತೋಟದ ವ್ಯವಸ್ಥಾಪಕ ರಾಬಿನ್ ಪೆಮ್ಮಯ್ಯ ಉದ್ಘಾಟಿಸಿದರು. ಕ್ರೀಡಾಕೂಟಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ರಾಬಿನ್ ಪೆಮ್ಮಯ್ಯ ಗ್ರಾಮೀಣ ಕ್ರೀಡಾಕೂಟಗಳು ಉಳಿಯಬೇಕಾದರೆ, ಪ್ರತಿ ಗ್ರಾಮಗಳಲ್ಲಿಯೂ ಹೆಚ್ಚಿನ ಗ್ರಾಮೀಣ ಕ್ರೀಡಾಕೂಟಗಳು ಆಯೋಜನೆಗೊಳ್ಳಬೇಕು, ಕ್ರೀಡಾಕೂಟದಿಂದ ಮಾನಸಿಕ ಸ್ಥರ್ಯ, ಬಾಂಧವ್ಯ ಬೆಸೆಯಲು ಸಹಕಾರಿಯಾಗಲಿದೆ ಎಂದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಳೆದ 33ವರ್ಷಗಳಿಂದ ಸಂಘವೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತ ಬಂದಿರುವ ಬಗ್ಗೆ ಶ್ಲಾಘಿಸಿದರು, ರಾಜಕೀಯ ಬದಿಗಿರಿಸಿ ಗ್ರಾಮದ ಅಭಿವೃದ್ಧಿಗೆ ಜೊತೆಯಾಗಿ ನಿಲ್ಲುವುದರೊಂದಿಗೆ ಸಂಘದ ಮುಂದುವರೆದ ಕಾಮಗಾರಿಗೆ ಸರ್ಕಾರದಿಂದ ಅನುದಾನ ಕೊಡಿಸಿಕೊಡುವುದಾಗಿ ಭರವಸೆ ನೀಡಿದರು. ರಾಮನಗರ ಜಿಲ್ಲೆಯ ಮುರಾರಿ ಸ್ವಾಮಿಗಳ ಪುಣ್ಯಕ್ಷೇತ್ರದ ಪೀಠಾಧಿಪತಿಗಳಾದ ಶ್ರೀ ಕುಮಾರಸ್ವಾಮಿಗಳು ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸೋಮವಾರಪೇಟೆ ತಾಲ್ಲೂಕಿನ…
ಮಡಿಕೇರಿ ಮಾ.13 NEWS DESK : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಜಬಾನು (37) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸ್ಥಳಿಯ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭ ತೀವ್ರವಾಗಿ ಗಾಯಗೊಂಡ ಅಜಬಾನು ಅವರನ್ನು ಪಾಲಿಬೆಟ್ಟ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಘಟನೆಯಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಹಾಗೂ ಕಾರ್ಮಿಕರು ಅರಣ್ಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದು, ಮುಗ್ಧ ಜೀವಗಳು ಬಲಿಯಾಗುತ್ತಿವೆ. ಅರಣ್ಯ ಅಧಿಕಾರಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು.
ಮಡಿಕೇರಿ ಮಾ.13 NEWS DESK : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಕಳಪೆ ಮತ್ತು ಅವೈಜ್ಞಾನಿಕ ಕಾಮಗಾರಿಯ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಯ ತಡೆಗೋಡೆಯನ್ನು ಕೆಡವಲು ಕ್ರಮ ಕೈಗೊಳ್ಳಲಾಗಿದ್ದು, ಮಾ.14 ರಂದು ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದ ಸಮಿತಿ ಸ್ಥಳ ಪರಿಶೀಲನೆ ನಡೆಸಲಿದೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ನಡೆದ ತಡೆಗೋಡೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಮತ್ತು ಅಪಾಯಕಾರಿಯಾಗಿದೆ ಎಂದು ಆರೋಪಿಸಿ ಅಂದು ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ಹೋರಾಟ ನಡೆಸಿತ್ತು. ಅಲ್ಲದೆ ಮಳೆಗಾಲದಲ್ಲಿ ತಡೆಗೋಡೆ ಕುಸಿಯುವ ಆತಂಕವೂ ಎದುರಾಗಿತ್ತು. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯ ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ತಡೆಗೋಡೆ ನಿರ್ವಹಣೆ ಹೊತ್ತ ಇಂಜಿನಿಯರ್ ಅಮಾನತಿಗೆ ಒಳಗಾದರು. ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನೂ ಕೆಲವು ಅಧಿಕಾರಿಗಳು ವರ್ಗಾವಣೆ ಶಿಕ್ಷೆಗೆ ಗುರಿಯಾದರು. ಮಡಿಕೇರಿ ಕ್ಷೇತ್ರದ ಶಾಸಕ…
ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಥಾಸ್ಪರ್ಧೆ ಕಾರ್ಯಕ್ರಮವು ಮಡಿಕೇರಿ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಥೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಕಥಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು 3 ಮಂದಿ ತೀರ್ಪುಗಾರರು ಮೌಲ್ಯಮಾಪನ ಮಾಡಿ ನೀಡಿದ ಫಲಿತಾಂಶದಂತೆ ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ವೈಷ್ಣವಿ ಡಿ.ಪಿ.(ಪ್ರಥಮ), ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಮೇಘ ಶ್ರೀ ಕೆ.(ದ್ವಿತೀಯ) ಹಾಗೂ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೋನಿಷಾ(ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ. ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಮಾರ್ಚ್, 22 ರಂದು ಬೆಳಗ್ಗೆ 10 ಗಂಟೆಗೆ ಮುತ್ತಪ್ಪ ದೇವಾಲಯದ ಬಳಿ ಇರುವ ಸಹಕಾರಿ ತರಬೇತಿ ಕೇಂದ್ರದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ್ ಕಾಮತ್ ಅವರ…
ಮಡಿಕೇರಿ ಮಾ.14 NEWS DESK : ನಗರಸಭೆಯ 2024-25 ನೇ ಸಾಲಿನ ಆಯವ್ಯಯ ಮಂಜೂರಾತಿಗೆ ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಮಾ.15 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಕೌನ್ಸಿಲ್ ವಿಶೇಷ ಸಭೆಯು ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರಾದ ವಿಜಯ್ ತಿಳಿಸಿದ್ದಾರೆ.
ಮಡಿಕೇರಿ ಮಾ.13 NEWS DESK : ಭಾರತದ ಕಾಫಿ ಬೆಳೆಗಾರರಿಗೆ ಆಶಾದಾಯಕವಾದ “ಫಾರ್ಮ್ 360” ಹೆಸರಿನ ಕಾರ್ಬನ್ ಮಾನಿಟರಿಂಗ್ ಫ್ಲಾಟ್ಫಾರ್ಮ್ ಅಂಡ್ ಅಸೆಸ್ಮೆಂಟ್ ಟೂಲ್ಸ್ ನ್ನು ಮಡಿಕೇರಿ ನಗರದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಕೊಡಗಿನ ಪ್ರತಿಷ್ಠಿತ ಸಾಯಿಲ್ ಹೆಲ್ತ್ ಅನಾಲೈಸಸ್ ಅಂಡ್ ಇಕೋಲಾಜಿಕಲ್ ಅಗ್ರಿಕಲ್ಚರಲ್ ಪ್ರಾಕ್ಟಿಸ್ ಸಂಸ್ಥೆಯಾದ ಐಮರ ಇಕೋಲಾಜಿಕಲ್ ಫಾರ್ಮಿಂಗ್ ಟೆಕ್ನಾಲಜೀಸ್ ವತಿಯಿಂದ ನಗರದ ಕ್ರಿಸ್ಟಲ್ ಕೋರ್ಟ್ನಲ್ಲಿ ಕಾಫಿ ಬೆಳೆಗಾರರ ಸಮ್ಮುಖದಲ್ಲಿ “ಫಾರ್ಮ್ 360” ನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಪನ್ಮೂಲ ವ್ಯಕ್ತಿಗಳು, ಭೂಮಿಯ ವಾತಾವರಣದಲ್ಲಿ ಇಂಗಾಲದ ಪ್ರಮಾಣ ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಭೂಮಿಯ ತಾಪಮಾನ ಅಪಾಯದ ಮಟ್ಟ ಮೀರುತ್ತಿದೆ ಎಂದರು. “ಫಾರ್ಮ್ 360” ಭಾರತ ದೇಶದಲ್ಲಿ ಮಣ್ಣು ಆರೋಗ್ಯ ಪರೀಕ್ಷೆ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆಯಾದ ಕೃಷಿತಂತ್ರ, ಭಾರತ ಸರ್ಕಾರದ ಅಧೀನ ಸಂಸ್ಥೆಯಾದ ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಚರ್ ರಿಸರ್ಚ್ ನ ಅಂಗಸಂಸ್ಥೆ National Bureau of Soil Survey & Land Use Planning ಹಾಗೂ ಜಪಾನ್…
ಮಡಿಕೇರಿ ಮಾ.13 NEWS DESK : ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮಾ.14 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮಾ.14 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆ ನಡೆಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ಜಿಲ್ಲಾಡಳಿತ ಭವನದ ಮುಂದೆ ಕಟ್ಟಿರುವ ತಡೆಗೋಡೆ ಸಂಬಂಧ ಸ್ಥಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಎಸ್.ಬಿ.ಶ್ರೀಪಾದ ತಿಳಿಸಿದ್ದಾರೆ.
ನಾಪೋಕ್ಲು ಮಾ.13 : ಕೊಟ್ಟಮುಡಿ ಮಾರ್ಕಝುಲ್ ಹಿದಾಯದ ಸಂಸ್ಥೆಯ ಅಧೀನದಲ್ಲಿ ಆರ್ಸಿಎಫ್ಐ ಅನುದಾನದಡಿ ನಿರ್ಮಿಸಿದ “ಕಾಫಿಲ “ಸಂಸ್ಥೆಯನ್ನು ಮರ್ಕಝ್ ನಾಲೆಜ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮರ್ಕಝುಲ್ ಹಿದಾಯ ಕೊಡಗು ಸಂಸ್ಥೆಯ ಅಧ್ಯಕ್ಷ ಡಾ. ಮೊಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅನಾಥ ಮಕ್ಕಳಿಗೆ ಅನ್ನ ಮತ್ತು ವಸತಿಯನ್ನು ಮಾತ್ರ ನೀಡಿದರೆ ಸಾಲದು , ಅವರಿಗೆ ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಉತ್ತಮ ಶಿಕ್ಷಣ ಹಾಗೂ ಉತ್ತಮ ನಡತೆಯನ್ನು ಕಲಿಸಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ. ಆ ಕೆಲಸವನ್ನು ಮರ್ಕಝುಲ್ ಸಂಸ್ಥೆ ಮಾಡಲಿದೆ ಅದಕ್ಕೆ ದಾನಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಭಾ ಕಾರ್ಯಕ್ರಮವನ್ನು ಎಸ್ವೈಎಸ್ ರಾಜ್ಯ ನಾಯಕ ಸೈಯದ್ ಇಲ್ಯಾಸ್ ತಙಳ್ ಉದ್ಘಾಟಿಸಿದರು. ಸಂಸ್ಥೆಯ ಉಪಾಧ್ಯಕ್ಷ ಅಹಮದ್ ಹಾಜಿ, ಮೊಹಿದ್ದೀನ್ ಕುಟ್ಟಿ ಹಾಜಿ, ಕಾರ್ಯದರ್ಶಿ ಯೂಸುಫ್ ಹಾಜಿ ಕೋಶಾಧಿಕಾರಿ ಅಬ್ದುಲ್ಲಾ, ನಿರ್ದೇಶಕರಾದ ಮಹಮ್ಮದ್ ಹಾಜಿ ಕುಂಜಿಲ, ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್ ಅಧ್ಯಕ್ಷ ಹಾಗೂ ನಿರ್ದೇಶಕ ಲತೀಫ್…






