ಸಿದ್ದಾಪುರ ಮಾ.13 NEWS DESK : ಧಾರ್ಮಿಕ ಆಚರಣೆಗಳ ಮೂಲಕ ಆಚಾರ ವಿಚಾರ ಸಂಸ್ಕೃತಿ ಪರಂಪರೆಯೊಂದಿಗೆ ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆದಲ್ಲಿ ಸಂಸ್ಕೃತಿಯನ್ನು ಬೆಳೆಸಲು ಸಾಧ್ಯವಾಗಲಿದೆ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಅಮ್ಮತ್ತಿ ಸಮೀಪದ ಪುಲಿಯೇರಿ ಗ್ರಾಮದಲ್ಲಿರುವ ಮಂಗುಯಿಯಿಲ್ ಶ್ರೀ ಭಗವತಿ ಕ್ಷೇತ್ರದ ವಾರ್ಷಿಕ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಗ್ರಾಮಗಳಲ್ಲಿರುವ ದೇವಾಲಯಗಳಲ್ಲಿ ಭಕ್ತಿ ಪೂರಕವಾಗಿ ಇಷ್ಟಾರ್ಥ ಪ್ರಾರ್ಥನೆ ಮಾಡಿದರೆ ಉತ್ತಮ ಮಳೆ ಬೆಳೆ ಅಭಿವೃದ್ಧಿಯೊಂದಿಗೆ ಶಾಂತಿ ಸಹ ಬಾಳ್ವೆಯ ಜೀವನ ನಡೆಸಲು ಸಾಧ್ಯವಾಗಲಿದೆ. ಇಂತಹ ಆಚರಣೆಗಳ ಮೂಲಕ ಎಲ್ಲರೂ ಒಗ್ಗೂಡಿ ಧಾರ್ಮಿಕ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದರು. ಎಸ್.ಎನ್.ಡಿ.ಪಿ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶ್ರೀ ಭಗವತಿ ದೇವಸ್ಥಾನ ಪ್ರಾರಂಭಿಸಿ ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡುವುದರೊಂದಿಗೆ ವಾರ್ಷಿಕ ಪೂಜಾ ಮಹೋತ್ಸವವನ್ನು ಆಚರಣೆ ಮಾಡುವ ಮೂಲಕ ಈ ಭಾಗದ ಹೆಚ್ಚಿನ ಸಂಖ್ಯೆಯ ಭಕ್ತರ ಇಷ್ಟಾರ್ಥ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಿರುವ ಮಂಗುಯಿಯಿಲ್ ಕುಟುಂಬಸ್ಥರ ಸೇವಾ ಕಾರ್ಯ ಜಿಲ್ಲೆಗೆ…
ಲೇಖಕ: admin
ಮಡಿಕೇರಿ ಮಾ.13 NEWS DESK : ನಾಡಿನ ಹೆಸರಾಂತ ಚಿನ್ನಾಭರಣ ಸಂಸ್ಥೆಯಾಗಿರುವ ಮುಳಿಯ ಜ್ಯುವೆಲ್ಲರ್ಸ್ ನ ಅಂಗಸಂಸ್ಥೆಯಾದ ಮುಳಿಯ ಪ್ರತಿಷ್ಠಾನದ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆಯ ವಿವಿಧ ಕ್ಷೇತ್ರಗಳ 9 ಸಾಧಕಿಯರಿಗೆ ಮುಳಿಯ ನವರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕೃಷಿ, ಸಾಹಿತ್ಯ, ಶಿಕ್ಷಣ, ಉದ್ಯಮ, ಸಮಾಜಸೇವೆ, ಕ್ರೀಡೆ, ಕಲಾವಿದೆ, ಬಾಲಪ್ರತಿಭೆ ಮತ್ತು ಮಹಿಳಾ ಸಂಘ-ಸಂಸ್ಥೆಗಳಿಗೆ ನವರತ್ನ ಪ್ರಶಸ್ತಿಯನ್ನು ಮುಳಿಯ ಪ್ರತಿಷ್ಠಾನದ ವತಿಯಿಂದ ನೀಡಿ ಗೌರವಿಸಲಾಗುತ್ತದೆ. ಆಯ್ಕೆಯಾದ ಸಾಧಕಿಯರಿಗೆ ಚಿನ್ನದ ಪದಕ, 5 ಸಾವಿರ ರು. ನಗದು ನೀಡಿ ಪುರಸ್ಕರಿಸಲಾಗುತ್ತದೆ. ಸಾಧಕಿಯರ ಆಯ್ಕೆಗೆ ಸಾವ೯ಜನಿಕ ವಲಯದಿಂದ ಪ್ರತ್ಯೇಕ ಸಮಿತಿಯನ್ನು ರಚಿಸಲಾಗಿದ್ದು, ಅತ್ಯಂತ ಪಾರದಶ೯ಕವಾಗಿ ಈ ಸಮಿತಿಯು ಮುಳಿಯ ನವರತ್ನ ಪ್ರಶಸ್ತಿಗೆ ಸಾಧಕಿಯರನ್ನು ಆಯ್ಕೆ ಮಾಡಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. ಈ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಸಾಧಕಿಯರಿಂದ ಮಾಹಿತಿ ಆಹ್ವಾನಿಸಲಾಗಿದೆ. ಸಾಧಕಿಯರು ತಮ್ಮ ಸಾಧನೆಗಳನ್ನು ಸೂಕ್ತ ಮಾಹಿತಿಯೊಂದಿಗೆ ನೀಡಬಹುದಾಗಿದೆ. ಅಂತೆಯೇ ತಮಗೆ ಪರಿಚಯವಿರುವ ಅಹ೯ ಸಾಧಕಿಯರ ಬಗ್ಗೆಯೂ ಇತರರೂ ಮಾಹಿತಿ…
ಮಡಿಕೇರಿ ಮಾ.13 NEWS DESK : ಕೊಡಗಿನ ಗಡಿ ಗ್ರಾಮ ಕರಿಕೆಯ ಕೆಲವು ಭಾಗದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಕಂಡು ಬರುತ್ತಿದ್ದು, ಇದು ಕೇರಳದ ತ್ಯಾಜ್ಯವೆಂದು ಸ್ಥಳೀಯ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ಲಾಸ್ಟಿಕ್ ಮತ್ತು ಮಾಂಸದ ತ್ಯಾಜ್ಯಗಳು, ಮಾರಾಟವಾಗದ ಹಳೆಯ ಆಹಾರ ಪದಾರ್ಥಗಳು ಸೇರಿದಂತೆ ನಿಷ್ಪ್ರಯೋಜಕ ವಸ್ತುಗಳನ್ನು ಚೆಂಬೇರಿ ಗ್ರಾಮ ವ್ಯಾಪ್ತಿಯ ಸುತ್ತಮುತ್ತ ಸುರಿಯಲಾಗಿದೆ. ಕೇರಳದ ವ್ಯಕ್ತಿಗಳು ಮಾತ್ರವಲ್ಲದೆ ಅಕ್ಕಪಕ್ಕದ ಗ್ರಾಮದವರೂ ಕಸ ತಂದು ಹಾಕುತ್ತಿರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಕಸ ವಿಲೇವಾರಿ ಘಟಕವಿದ್ದರೂ ನಿಷ್ಪ್ರಯೋಜಕವಾಗಿದೆ. ಎಲ್ಲೆಂದರಲ್ಲಿ ಕಸದ ರಾಶಿ ಇರುವುದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ಹಲವು ಬಾರಿ ಗ್ರಾ.ಪಂ ಗೆ ದೂರು ನೀಡಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಕರಿಕೆ- ಕೇರಳ ಗಡಿಯಲ್ಲಿ ಸಿಸಿ ಕ್ಯಾಮರಾಗಳಿದ್ದರೂ ಕಸ ತಂದು ಹಾಕುತ್ತಿರುವವರನ್ನು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹಿರಿಯ ಅಧಿಕಾರಿಗಳು ಕಸದ ಸಮಸ್ಯೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಮಾ.13 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳ ವಿವರ ಹೀಗಿದೆ >>>
ಮಡಿಕೇರಿ ಮಾ.13 NEWS DESK : ದೇಶದ ಒಕ್ಕೂಟ ವ್ಯವಸ್ಥೆಗೆ, ಬಲವರ್ಧನೆಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯವರ್ಧನೆಗೆ ಶ್ರೇಷ್ಠ ಸಂವಿಧಾನ ಸೂಕ್ತ ಅಡಿಪಾಯ ಹಾಕಿಕೊಟ್ಟಿದೆ ಎಂದು ಮಡಿಕೇರಿಯ ಆರ್.ಆರ್.ಆಸ್ಪತ್ರೆಯ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಭಾರತದ ಸಂವಿಧಾನದ ಬಗ್ಗೆ ವಿಚಾರ ಮಂಡನೆ ಹಾಗೂ 2022-23ನೇ ಸಾಲಿನಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅತಿ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನದ ಆಶಯಗಳ ಕುರಿತು ವಿಚಾರ ಮಂಡನೆ ಮಾಡಿದರು. ಸಂವಿಧಾನ ಎನ್ನುವುದು ದೇಶದ ಜೀವ ಸಂಕುಲಗಳನ್ನು ರಕ್ಷಿಸಿ ಉತ್ತಮವಾದ ಬದುಕು ಕಟ್ಟಿಕೊಡುವ ಆಡಳಿತಾತ್ಮಕ ಕಾನೂನು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಲ್ಲುವ ಹಕ್ಕು ಮತ್ತು ಕರ್ತವ್ಯವನ್ನು ಅಳವಡಿಸುವ ಮೂಲಕ ಜವಾಬ್ದಾರಿಯುತ ಭಾರತವನ್ನು ನಿರ್ಮಿಸಿ ಕೊಡುವಲ್ಲಿ ಸಂವಿಧಾನ…
ನಾಪೋಕ್ಲು ಮಾ.13 NEWS DESK : ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯಲ್ಲಿ 1 ಕೋಟಿ 75 ಲಕ್ಷ ರೂಗಳ ಅನುದಾನದ ಹಲವು ಕಾಮಗಾರಿಗಳಿಗೆ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತವು ದೇವಾಲಯದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಸದ್ಯದಲ್ಲಿಯೇ ಲೋಕಸಭಾ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇರುವುದರಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಆ ಬಳಿಕ ಕಾಮಗಾರಿಗಳಿಗೆ ಚಾಲನೆ ನೀಡಲು ಸಾಧ್ಯವಾಗುವುದಿಲ್ಲ. ಜೊತೆಯಲ್ಲೇ ಮಳೆಗಾಲ ಆರಂಭಗೊಂಡರೆ ಕಾಮಗಾರಿಗಳು ಸ್ಥಗಿತಗೊಳ್ಳಲಿವೆ. ಶೀಘ್ರಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು. ಗ್ರಾಮ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕು ಹಾಗೂ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು. ಇದಕ್ಕೆ ಸಾರ್ವಜನಿಕರ ಸಂಪೂರ್ಣ ಸಹಕಾರ ಅಗತ್ಯ. ಸಾರ್ವಜನಿಕರ ಸಹಕಾರದಿಂದ ಅಭಿವೃದ್ದಿ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ…
ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳನ್ನು ಬಲಪಡಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಮಾ.15 ರಂದು ಮಡಿಕೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ತಿಳಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕಾವೇರಿ ಹಾಲ್ ನಲ್ಲಿ ಸಮಾವೇಶ ನಡೆಯಲಿದ್ದು, ಇದಕ್ಕೂ ಮೊದಲು ಖಾಸಗಿ ಬಸ್ ನಿಲ್ದಾಣದಿಂದ ಬೃಹತ್ ಮೆರವಣಿಗೆ ಸಾಗಲಿದೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಅಶ್ವಥ್ ನಾರಾಯಣ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್,…
ಮಡಿಕೇರಿ ಮಾ.13 NEWS DESK : ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. :: *ಪಕ್ಷಕ್ಕೆ ಬಲ* :: ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ…
ಸಕಲೇಶಪುರ ಮಾ.13 NEWS DESK : ಅನಿಲ ಸಾಗಾಟದ ಟ್ಯಾಂಕರ್ ವೊಂದು ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾಗಿ ಆತಂಕ ಸೃಷ್ಟಿಯಾದ ಘಟನೆ ಬುಧವಾರ ಬೆಳಗ್ಗೆ ಶಿರಾಡಿಘಾಟ್ ರಸ್ತೆ ಎನ್ಎಚ್-75 ರಲ್ಲಿ ಡಬಲ್ ಕ್ರಾಸ್ ಬಳಿ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ. ಮಂಗಳೂರು-ಹಾಸನ-ಬೆಂಗಳೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ರಸ್ತೆಯಲ್ಲಿ ಕಳುಹಿಸಲಾಗುತ್ತಿದೆ. ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಬಹುದಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು, ಮಂಗಳೂರಿನ ಎಮ್. ಆರ್. ಪಿ. ಎಲ್ ನಿಂದ ತಜ್ಞರ ತಂಡ ಆಗಮಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿದ್ದು, ಟ್ಯಾಂಕರ್ ನ್ನು ತೆರವುಗೊಳಿಸಿದ ನಂತರವಷ್ಟೇ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಮಾ.13 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶವನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಸಂಸದ ಪ್ರತಾಪ್ ಸಿಂಹರಿಗೆ ಇದೀಗ ಅಭಿಮಾನಿಗಳ ಬೆಂಬಲ ದೊರೆತ್ತಿದೆ. ತಮ್ಮ ನಾಯಕ ಪ್ರತಾಪ್ ಸಿಂಹರಿಗೆ ಟಿಕೆಟ್ ನೀಡಲೇಬೇಕೆಂದು ಅಭಿಮಾನಿಗಳು ಮೈಸೂರಿನಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ದೇಶಕ್ಕೆ ಮೋದಿ, ಮೈಸೂರಿಗೆ ಪ್ರತಾಪ್ ಸಿಂಹ, ಪ್ರತಾಪ್ ಸಿಂಹ ಬೇಕೇ ಬೇಕು ಎಂದು ಪ್ರತಿಭಟನಾಕಾರರು ಘೋಷಣೆ ಕೂಗುತ್ತಿದ್ದಾರೆ. ಕಳೆದ 10 ವರ್ಷಗಳ ಕಾಲ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರೂ ಟಿಕೆಟ್ ನೀಡದೆ ಇರಲು ಕಾರಣ ಏನು ಎಂದು ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪ್ರತಾಪ್ ಸಿಂಹ ಪರ ಇಂದು ಬೆಂಬಲಿಗರು ಸಾಲು ಸಾಲು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.






