ಮಡಿಕೇರಿ ಏ.3 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ನಾಮಪತ್ರ ಸಲ್ಲಿಸುತ್ತಿರುವ ಹಿನ್ನಲೆಯಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿಂದ ಬೃಹತ್ ಮೆರವಣಿಗೆ ನಡೆಯಿತು. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಸಂಸದ ಪ್ರತಾಪ್ ಸಿಂಹ, ಅಶ್ವಥ್ ನಾರಾಯಣ್, ಶಾಸಕರುಗಳು, ಮಾಜಿ ಶಾಸಕರು, ಬಿಜೆಪಿ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಲೇಖಕ: admin
ಮಡಿಕೇರಿ ಏ.3 NEWS DESK : ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಪ್ರತಾಪ ಸಿಂಹ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಜರಿದ್ದರು.
ಸೋಮವಾರಪೇಟೆ ಏ.3 NEWS DESK : ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಜಂಕ್ಷನ್ ಬಳಿ ಬೆಳ್ಳಂಬೆಳಗ್ಗೆ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ. ಕೆಲವು ಕಡೆ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳ್ಳದ ಜಾಗದಲ್ಲಿ ಕಾಡಾನೆಗಳು ದಾಟಿ ಗ್ರಾಮಗಳಿಗೆ ಸೇರುತ್ತಿವೆ. ಮೀಸಲು ಅರಣ್ಯ ಸಂಪೂರ್ಣ ಒಣಗಿದ್ದು, ಅರಣ್ಯದೊಳಗೆ ನೀರಿನ ಕೊರತೆಯಿಂದ ಕಾಡಾನೆನೆಗಳು ಕಾಡು ಬಿಟ್ಟು ಗ್ರಾಮದೊಗೆ ನುಗ್ಗತ್ತುವೆ. ಇದರಿಂದ ಗ್ರಾಮಸ್ಥರು ಭಯಬೀತರಾಗಿದ್ದು, ಕಾಡಾನೆಗಳ ಕಾಟಕ್ಕೆ ರೈತರು ಹೈರಾಣಾಗಿದ್ದಾರೆ.
ಸಿದ್ದಾಪುರ ಏ.3 NEWS DESK : ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ 9ನೇ ವಾರ್ಷಿಕೋತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಸ್ವರ್ಧೆಯನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕಾವೇರಿ ತಮಿಳು ಸಂಘದ ಅಧ್ಯಕ್ಷ ಮೈಕಲ್ ತಿಳಿಸಿದ್ದಾರೆ. ಏ.7 ರಂದು ಬೆಳಗಿನಿಂದ ಸಂಜೆವರೆಗೆ ಸಿದ್ದಾಪುರ ಸ್ವರ್ಣಮಾಲಾ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಸಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ತಮಿಳು ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪುರುಷರು, ಮಹಿಳೆಯರು, ಮಕ್ಕಳಿಗೆ ಸಂಸ್ಕೃತಿಕ ಕಾರ್ಯಕ್ರಮ ವಿವಿಧ ಕ್ರೀಡಾ ಸ್ಪರ್ಧೆ, ನೃತ್ಯ, ಸಂಗೀತಾ, ಮ್ಯಾಜಿಕ್ ಶೋ, ಸೇರಿದಂತೆ ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ. ಉದ್ಘಾಟನೆ ಹಾಗೂ ಸಮಾರಂಭ ಸಮಾರಂಭದಲ್ಲಿ ಜನಪ್ರತಿನಿಧಿಗಳು,ಸಮಾಜ ಸೇವಕರು, ದಾನಿಗಳು, ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಗಣ್ಯರಿಗೆ ವಿಶೇಷ ಸನ್ಮಾನ ಗೌರವ ಸಮರ್ಪಣೆ ಕಾರ್ಯಕ್ರಮವು ನಡೆಯಲಿದೆ ಎಂದರು. ಈ ಸಂದರ್ಭ ಕಾವೇರಿ ತಮಿಳು ಸಂಘದ ಉಪಾಧ್ಯಕ್ಷರುಗಳಾದ ನಾಗರಾಜ್, ಕಣ್ಣನ್, ಕಾರ್ಯದರ್ಶಿ ಕುಮಾರ್,…
ನಾಪೋಕ್ಲು ಏ.3 NEWS DESK : ಚೆರಿಯ ಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯಲ್ಲಿ ಕಡೇಮಾಡ ತಂಡವು ಪೊನ್ನಿಮಾಡ ವಿರುದ್ಧ 6 ಗೋಲು ಗಳಿಸುವುದರೊಂದಿಗೆ ಭರ್ಜರಿ ಜಯ ಸಾಧಿಸಿತು. ಕಡೇಮಾಡ ತಂಡದ ಆಟಗಾರರಾದ ಅನುಷ್ ಕರುಂಬಯ್ಯ ಮೂರು ಗೋಲು ಹೊಡೆದರೆ, ಕಡೇಮಾಡ ರಚನ್ ಚರ್ಮಣ, ಕಡೇಮಾಡ ಕಾವೇರಪ್ಪ, ಕಡೆಮಾಡ ಮಂದಣ್ಣ ತಲಾ ಒಂದು ಗೋಲು ಹೊಡೆದರು. ಆ ಮೂಲಕ ಪೊನ್ನಿಮಾಡ ತಂಡದ ವಿರುದ್ಧ 6-0 ಅಂತರದ ಜಯ ಸಾಧಿಸಿದರು. ಪೇರಿಯಂಡ ತಂಡವು ಮಲ್ಲಚಿರ ತಂಡದ ವಿರುದ್ಧ 5-0 ಅಂತರದಿಂದ ಹಾಗೂ ಪಾಲಂದಿರ ತಂಡವು ಚಪ್ಪಂಡ ವಿರುದ್ಧ 5-0 ಅಂತರದಿಂದ ಗೆಲುವು ಸಾಧಿಸಿ ಮುಂದಿನ ಸುತ್ತು ಪ್ರವೇಶಿಸಿದವು. ನೆರ್ಪಂಡ ಮತ್ತು ಬಲ್ಟಿಕಾರಂಡ ತಂಡಗಳ ನಡುವಿನ ಪಂದ್ಯದಲ್ಲಿ ನೆರ್ಪಂಡ ತಂಡ 3-0 ಅಂತರದಿಂದ ಜಯ ಸಾಧಿಸಿದರೆ, ಮಾರ್ಚಂಡ ಮತ್ತು ಚೋಳಂಡ ತಂಡಗಳ ನಡುವಿನ ಪಂದ್ಯದಲ್ಲಿ ಚೋಳಂಡ ತಂಡ 2-1 ಅಂತರದ ಗೆಲವು ಸಾಧಿಸಿತು. ಅಪ್ಪಾರಂಡ…
ವಿರಾಜಪೇಟೆ ಏ.3 NEWS DESK : ಕಲ್ಲುಬಾಯ್ಸ್ ಒಕ್ಕೂಟದ ವತಿಯಿಂದ ಮುಸ್ಲಿಮರ ಪವಿತ್ರ ರಂಜಾನ್ ಮಾಸದ ಪ್ರಯುಕ್ತ ಕಲ್ಲುಬಾಣೆಯ ಆರ್ಜಿ ಗ್ರಾಮದ ಬದ್ರಿಯಾ ಜುಮಾ ಮಸೀದಿ ಶಾಲಾ ಮೈದಾನದಲ್ಲಿ ಸೌಹಾರ್ದ ಇಪ್ತಾರ್ ಕೂಟ ನಡೆಯಿತು. ಕೂಟದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಭಾಗವಹಿಸಿ ಸೌಹಾರ್ದ ಕ್ಷಣಕ್ಕೆ ಸಾಕ್ಷಿಯಾದರು. ಪ್ರಮುಖರಾದ ಸುಹೈಬ್ ಫೈಝಿ ಕೊಳಕೇರಿ ಮುಖ್ಯ ಭಾಷಣ ಮಾಡಿದರು. ಈ ಸಂದರ್ಭ ಕಲ್ಲುಬಾಯ್ಸ್ ಒಕ್ಕೂಟದ ಅಧ್ಯಕ್ಷ ರಹಿಂ, ಒಕ್ಕೂಟದ ಸದಸ್ಯರುಗಳು, ಆರ್ಜಿ ಗ್ರಾ.ಪಂ ಸದಸ್ಯ ಶಹದೀರ್ ಅಲಿ ಸೇರಿದಂತೆ ಕಲ್ಲುಬಾಣೆಯ ಸಮಸ್ತ ನಾಗರೀಕರು, ಬದ್ರಿಯಾ ಜುಮಾ ಮಸೀದಿಯ ಉಸ್ತಾದರು ಹಾಗೂ ಎಲ್ಲಾ ಜನಾಂಗ ಬಾಂದವರು ಇದ್ದರು. ಇಪ್ತಾರ್ ಕೂಟದಲ್ಲಿ ಹಲವು ಬಗೆಯ ಹಣ್ಣುಹಂಪಲು, ತಿಂಡಿ ಗಳು, ತಂಪು ಪಾನೀಯ ಹಾಗೂ ಭೋಜನ ಏರ್ಪಡಿಸಲಾಗಿತ್ತು.
ಮಡಿಕೇರಿ ಏ.3 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ವತಿಯಿಂದ 10 ರಿಂದ 17 ವರ್ಷ ವಯೋಮಿತಿಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಹಸ ಕ್ರೀಡೆಗಳ ಬೇಸಿಗೆ ಶಿಬಿರವು ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ನಡೆಯಲಿದೆ. ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ವತಿಯಿಂದ ನಡೆಯುವ ಸಾಹಸ ಕ್ರೀಡೆ ಬೇಸಿಗೆ ಶಿಬಿರದಲ್ಲಿ ಭಾಗವಹಿಸುವ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ವೆಬ್ಸೈಟ್: www.gethnaa.org ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಏ.2 NEWS DESK : 2023-24 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ “ಬೇಟಿ ಬಚವೊ-ಬೇಟಿ ಪಡಾವೊ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994ರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾಕಾರ್ಯಕರ್ತೆಯರಿಗೆ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ಜಾಗೃತಿ ಕಾರ್ಯಾಗಾರ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಪ್ರಸಾದ್, ಮಗು ಹುಟ್ಟುವಾಗಲೇ ಬದುಕುವ ಹಕ್ಕನ್ನು ಸಂವಿದಾನಿಕವಾಗಿ ಪಡೆದುಕೊಂಡು ಬಂದಿದೆ. ಮಗು ಜನಿಸುವ ಮುನ್ನ ಹಾಗೂ ಜನಿಸಿದ ನಂತರವು ಮಗುವಿನ ರಕ್ಷಣೆಗೆ ಹಲವು ಕಾನೂನುಗಳಿದ್ದು, ಮಗು…
ಮಡಿಕೇರಿ ಏ.2 NEWS DESK : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಂತರ್ಜಾಲದ https://cbseit.in/cbse/2024/NVS_RST/Result.aspx ಕೊಂಡಿಯನ್ನು ಬಳಸಿ ಪರಿಶೀಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ನವೋದಯ ವಿದ್ಯಾಲಯದ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಏ.2 NEWS DESK : ಕೊಡಗು ಜಿಲ್ಲೆಯಲ್ಲಿ ಮೇ 8 ರವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 5ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ನಡೆಯಲಿದೆ. ದನ, ಎಮ್ಮೆ, ಆಡು/ ಕುರಿ ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ಇದು ರೈತರಿಗೆ ಅಪಾರವಾದ ಅರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿರುತ್ತದೆ. ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿರುತ್ತದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/ ಹೋರಿಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯ ಕ್ಷೀಣಿಸಿ ತೀವ್ರ ಆರ್ಥಿಕ ನಷ್ಟವನ್ನುಂಟು ಮಾಡುತ್ತದೆ. ಲಸಿಕೆ ಹಾಕಿಸುವುದೊಂದೇ ಕಾಲುಬಾಯಿ ರೋಗ ನಿಯಂತ್ರಿಸಲು ಇರುವ ಏಕೈಕ ಮಾರ್ಗವಾಗಿರುತ್ತದೆ. ಈ ರೋಗದ ವಿರುದ್ಧ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬರದಂತೆ ತಡೆಗಟ್ಟಬಹುದಾಗಿದೆ. 20ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ…






