ಲೇಖಕ: admin

ಮಡಿಕೇರಿ ಮಾ.13 NEWS DESK : ವಿರಾಜಪೇಟೆಯ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.

Read More

ಸುಂಟಿಕೊಪ್ಪ ಮಾ.13 NEWS DESK : ಕೂರ್ಗ್ ವಾಟರ್ ಪಾರ್ಕ್ ವತಿಯಿಂದ 3ನೇ ಹೊನಲು ಬೆಳಕಿನ ಲೆಜೆಂಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯು ಕುಶಾಲನಗರದ ಜಾತ್ರಾ ಮೈದಾನದಲ್ಲಿ ಐದು ದಿನಗಳ ಕಾಲ ನಡೆಯಿತು. ಇತ್ತೀಚೆಗೆ ನಡೆದ ಕುಶಾಲನಗರ ಜಾತ್ರಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಐದು ದಿನಗಳ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ರಾಯಲ್ ಗ್ಯಾಲಕ್ಸಿ ತಂಡ ಹಾಗೂ ಹರ್ಷಲ್ ಫ್ರೆಂಡ್ಸ್ ತಂಡಗಳ ನಡುವೆ ನಡೆದು ರಾಯಲ್ಸ್ ಗ್ಯಾಲಕ್ಸಿ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಹರ್ಷಲ್ ತಂಡವು ದ್ವಿತೀಯ ಸ್ಥಾನ ಪಡೆದರೆ, ಟೀಮ್ ಪೆಪ್ಸಿ ತೃತಿಯ ಸ್ಥಾನ ಹಾಗೂ ವೈಲ್ಡ್ ಕ್ಯಾಟ್ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ವಿಜೇತ ತಂಡಗಳಿಗೆ ಬಹುಮಾನ ವಿತರಣೆಯನ್ನು ಕ್ರೀಡಾಕೂಟ ಆಯೋಜಕರಾದ ಕೂರ್ಗ್ ವಾಟರ್ ಪಾರ್ಕ್ ಮಾಲೀಕರಾದ ಲಕ್ಷ್ಮಿ ನಾರಾಯಣ, ಕುಶಾಲನಗರ ಪುರಸಭಾ ಸದಸ್ಯ ಪ್ರಮೋದ್ ಮುತ್ತಪ್ಪ, ಅಭಿಯಂತರದ ಸೈಜನ್ ಪೀಟರ್, ಡಿಡಿ ಕಿರಣ್ ಹಾಗೂ ಎಲ್ಲಾ ತಂಡಗಳ ಮಾಲೀಕರು ನಾಯಕರು ಕ್ರೀಡಾಪಟುಗಳು ಇದ್ದರು.

Read More

ಮಡಿಕೇರಿ ಮಾ.12 NEWS DESK : ನಾಪೋಕ್ಲು ವ್ಯಾಪ್ತಿಯ ಬಲ್ಲಮಾವಟಿ ಗ್ರಾಮ ಪಂಚಾಯಿತಿಯಲ್ಲಿ 1.70 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು ಗ್ರಾಮಗಳ ಅಭಿವೃದ್ಧಿಗೆ ಪಣ ತೊಡಲಾಗಿದೆ ಎಂದು ತಿಳಿಸಿದರು. ಅಭಿವೃದ್ಧಿ ವಿಚಾರದಲ್ಲಿ ಎಲ್ಲರ ವಿಶ್ವಾಸ ಪಡೆದು ಕಾರ್ಯನಿರ್ವಹಿಸಲಾಗುವುದು. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದರು. ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಪ್ರಮುಖರಾದ ಇಸ್ಮಾಯಿಲ್, ತೆನ್ನಿರಾ ಮೈನಾ, ಬಾಚಮಂಡ ಲವಚಿನ್ನಪ್ಪ, ತಾಪಂಡ ಅಪ್ಪಣ್ಣ, ಚೋಕಿರ ಬಾಬಿ ಭೀಮಯ್ಯ, ಮಚ್ಚುರ ರವೀಂದ್ರ, ಕೊಣಿಯಂಡ ರಾಜೀವಿ, ಮುಕ್ಕಾಟ್ಟೀರ ಸುತ ಸುಬ್ಬಯ್ಯ, ಮಣವಟ್ಟಿರ ಹರೀಶ್, ಬಾಳೆಯಡ ದೀನಾ ಪೂವಮ್ಮ, ಪಿಡಿಒ ಪೂಣಚ್ಚ, ಚೆಂಗೆಟೀರ ಕುಶಾಲಪ್ಪ, ಮಿಥುನ್, ಮಣವಟ್ಟಿರ ದಯಾ ಸೇರಿದಂತೆ ಹಲವರು ಇದ್ದರು.

Read More

ಮಡಿಕೇರಿ ಮಾ.12 NEWS DESK : ಕೊಡಗಿನ ಜನರ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಎಂಆರ್‍ಐ ಸ್ಕ್ಯಾನಿಂಗ್ ಘಟಕವನ್ನು ಹಾಗೂ ತಂತ್ರಾಂಶವನ್ನು ಶಾಸಕ ಡಾ.ಮಂತರ್ ಗೌಡ ಅವರ ಪರಿಶ್ರಮದಿಂದ ಮಡಿಕೇರಿ ಜಿಲ್ಲಾಸ್ಪತ್ರೆಗೆ ಮಂಜೂರು ಮಾಡಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಅಧೀನ ಜಿಲ್ಲಾ ಆಸ್ಪತ್ರೆಗೆ ಸಾರ್ವಜನಿಕ – ಖಾಸಗಿ ಸಹಭಾಗಿತ್ವ ಎಂಆರ್‍ಐ ಸ್ಕ್ಯಾನಿಂಗ್ ಕೇಂದ್ರವನ್ನು ಹಾಗೂ ವೈದ್ಯಕೀಯ ಉಪಕರಣ ಮಂಜೂರು ಮಾಡುವ ಬಗ್ಗೆ ಶಾಸಕ ಡಾ.ಮಂತರ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದರು. ಕೊಡಗು ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಸರ್ಕಾರಿ ಅಥವಾ ಖಾಸಗಿ ಸಂಸ್ಥೆ ಆಸ್ಪತ್ರೆಗಳಲ್ಲಿ ಎಂಆರ್‍ಐ ಸ್ಕ್ಯಾನಿಂಗ್ ಇಲ್ಲದೆ ಇರುವುದರಿಂದ ರೋಗಿಗಳು ಸ್ಕ್ಯಾನಿಂಗ್ ಗಾಗಿ ಇತರೆ ದೂರದ ಜಿಲ್ಲೆಗಳಾದ ಮೈಸೂರು, ಮಂಗಳೂರು, ಹಾಸನ, ಬೆಂಗಳೂರು ನಗರಗಳನ್ನು ಅವಲಂಬಿಸಲಾಗುತ್ತಿದ್ದು, ಎಂ.ಆರ್.ಐ ಸ್ಕ್ಯಾನಿಂಗ್ ಸೌಲಭ್ಯವಿಲ್ಲದೆ ಇರುವುದರಿಂದ ಕೊಡಗು ಜಿಲ್ಲೆಯಲ್ಲಿ ತೀವ್ರವಾದ ತೊಂದರೆಯಾಗುತಿತ್ತು. ಇತ್ತೀಚೆಗೆ ಜರುಗಿದ 2023-24 ನೇ ಸಾಲಿನ ರಾಜ್ಯ ಆಯವ್ಯಯ ಎಲ್ಲಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಸಾರ್ವಜನಿಕ -…

Read More

ಮಡಿಕೇರಿ ಮಾ.12 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ”ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟರಾಜ್ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆನಂದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಚಂದ್ರಕಾಂತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್, ಮಹಿಳೋದಯ ಒಕ್ಕೂಟದ ಸಂಚಾಲಕಿ ಜಾಯ್ಸಿ ಮೆನೆಜಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.  

Read More

ಮಡಿಕೇರಿ ಮಾ.12 NEWS DESK : ಸುಸ್ಥಿರ ಅಭಿವೃದ್ಧಿಗೆ ಯುವ ಜನರ ಪಾತ್ರ ಪ್ರಮುಖವಾದುದು. ಆ ನಿಟ್ಟಿನಲ್ಲಿ ಯುವಜನರು ನಾಯಕತ್ವ ಗುಣ ಬೆಳೆಸಿಕೊಳ್ಳುವಂತಾಗಬೇಕು. ಇದರಿಂದ ಪರಿಣಾಮಕಾರಿ ವ್ಯಕ್ತಿತ್ವ ರೂಪಿಸಿಕೊಳ್ಳಬಹುದಾಗಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಪ್ರೊ.ಮೇ.ರಾಘವ ತಿಳಿಸಿದ್ದಾರೆ. ಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎನ್‍ಎಸ್‍ಎಸ್ ಘಟಕ, ಜಿಲ್ಲಾ ಹಾಗೂ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಸ್ಪೂರ್ತಿ ಯುವ ಸಂಘ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ `ಜಿಲ್ಲಾ ಮಟ್ಟದ ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವ ಜನರು ಭವಿಷ್ಯದ ಪ್ರಜೆಗಳು, ಜೊತೆಗೆ ಸೈನಿಕರಂತೆ ರಾಷ್ಟ್ರದ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು. ಸಾಮಾಜಿಕ ಪರಿವರ್ತನೆಯಲ್ಲಿ ಯುವಜನರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಸಮಾಜದ ಅಭಿವೃದ್ಧಿ ಮತ್ತು ಬದಲಾವಣೆಯಲ್ಲಿ ಯುವಜನರು ತಮ್ಮದೇ ಆದ ಪಾತ್ರ ವಹಿಸುತ್ತಾರೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.…

Read More

ಮಡಿಕೇರಿ ಮಾ.12 NEWS DESK : ಜಮ್ಮು ಮತ್ತು ಕಾಶ್ಮೀರದ 370 ನೇ ವಿಧಿಯ ರದ್ದತಿಯ ತೀರ್ಪಿನಲ್ಲಿ ಸಂವಿಧಾನ ಪೀಠವು ಭೂತಪೂರ್ವ ಕೊಡಗು ರಾಜ್ಯದ ಗತ ಇತಿಹಾಸವನ್ನು ದಾಖಲಿಸಿದೆ. ಈ ತೀರ್ಪು ಕೊಡವ ಲ್ಯಾಂಡ್ ಬೇಡಿಕೆಗೆ ಪುಷ್ಟಿ ನೀಡಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸುಪ್ರೀಂ ಕೋರ್ಟ್‍ನ ಸಾಂವಿಧಾನಿಕ ಪೀಠದಿಂದ 2023 ಡಿ.11 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಕುರಿತು ಮಹತ್ವದ ಸುಪ್ರೀಂ ಕೋರ್ಟ್ ತೀರ್ಪು ಹೊರ ಬಿದ್ದಿದ್ದು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸಲು ಶಿಫಾರಸ್ಸು ಮಾಡಿದೆ. ಕಾಶ್ಮೀರದ ಜೊತೆಗೆ ಕರ್ನಾಟಕ ಸರ್ಕಾರ ಕೂಡ ಇದೇ ರೀತಿ ಮಾಡಬೇಕೆನ್ನುವುದು ಖಾತರಿಯಾಗಿದೆ. ಆದ್ದರಿಂದ ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಲ್ಯೂ 6ನೇ ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಲಡಾಖ್ ಹಾಗೂ ಲೇಹ್ ಬೌದ್ಧ ಸ್ವಾಯತ್ತ ಮಂಡಳಿಗಳು ಮತ್ತು ಪ್ರದೇಶಗಳ ಸಾಲಿನಲ್ಲಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯನ್ನು ಸೃಷ್ಟಿಸಬೇಕು ಎಂದು…

Read More

ಮಡಿಕೇರಿ ಮಾ.12  NEWS DESK : ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ 90ಲಕ್ಷ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಕ್ಷೇತ್ರ ವ್ಯಾಪ್ತಿಯ ಜನರ ಸಮಸ್ಯೆಗಳ ಬಗ್ಗೆ ಪೂರ್ಣ ಅರಿವಿದ್ದು, ಅವುಗಳನ್ನು ಬಗೆಹರಿಸಲು ತಾವು ಬದ್ಧರಿದ್ದೇವೆ ಎಂದು ಹೇಳಿದರು. ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ ಗಣಪತಿ ಕೂರಿಸಲು ಭವನ ನಿರ್ಮಾಣಕ್ಕೆ ಅನುದಾನ ನೀಡುವ ಭರವಸೆಯನ್ನು ನೀಡಿದರು. ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಗ್ರಾ.ಪಂ ಸದಸ್ಯ ಜಾನ್ಸನ್ ಪಿಂಟೋ, ಕೆಪಿಸಿಸಿ ಪ್ರಮುಖರಾದ ಟಿ.ಪಿ.ರಮೇಶ್, ಡಿ.ಸಿ.ಸಿ ಉಪಾಧ್ಯಕ್ಷ ಕೊಕ್ಕಲೆರ ಸುಜು ತಿಮ್ಮಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಗ್ರಾ.ಪಂ ಸದಸ್ಯರಾದ ಪುಷ್ಪ ಪ್ರೇಮ್ ಕುಮಾರ್, ಅನಿತಾ, ಪ್ರತಾಪ್, ಇಂಜಿನಿಯರ್‍ಗಳಾದ ರಘು,…

Read More

ಮಡಿಕೇರಿ ಮಾ.12 NEWS DESK : ಮಾಧ್ಯಮ ಸ್ಪಂದನ ತಂಡದಿಂದ ಪಾಲಿಬೆಟ್ಟದ ಮಹಿಳೆಯೊಬ್ಬರಿಗೆ ಅಗತ್ಯವಾದ ವಾಕರ್ ಹಾಗೂ ಅಗತ್ಯ ವಸ್ತುಗಳ ಕಿಟ್ ಅನ್ನು ದಾನಿ ಮೂಲಕ ನೀಡಲಾಯಿತು. ಎಂ.ಆರ್. ಅನಿಲ್ ಅವರ ಸಹೋದರಿ ಮಣಿ ರಾಘವನ್ ಅವರಿಗೆ ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ ಎಂ.ಎ. ಮುಸ್ತಫಾ ಅವರು ವಾಕರ್ ಹಾಗೂ ಅಗತ್ಯ ವಸ್ತುಗಳ ಕಿಟ್ ವಿತರಿಸಿದರು. ಅಲ್ಲದೆ ಮಣಿ ರಾಘವನ್ ಅವರಿಗೆ ಪ್ರತಿ ತಿಂಗಳು ಅಗತ್ಯ ವಸ್ತುಗಳ ಕಿಟ್, ಔಷಧಿ ವೆಚ್ಚ ನೀಡುವುದಾಗಿ ಭರವಸೆ ನೀಡಿದರು. ಮಾಧ್ಯಮ ಸ್ಪಂದನ ತಂಡದ ಪುತ್ತಂ ಪ್ರದೀಪ್ ಬಾಲನ್ ಮನವಿ ಹಿನ್ನೆಲೆಯಲ್ಲಿ ಅಗತ್ಯ ನೆರವು ಒದಗಿಸಲಾಯಿತು. ಮಾಧ್ಯಮ ಸ್ಪಂದನ ತಂಡದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪುತ್ತಂ ಪ್ರದೀಪ್ ಬಾಲನ್, ಸಿಂಧೂ ಅನಿಲ್ ಇದ್ದರು.

Read More

ಮಡಿಕೇರಿ ಮಾ.12 NEWS DESK : ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ಕುಂಬಾರಕಟ್ಟೆ, ತಟ್ಟೆಕೆರೆ, ಪಾಲದಳ ಗಿರಿಜನ ಹಾಡಿಗಳಿಗೆ  ಪ್ರಧಾನ ಮಂತ್ರಿ ಜನ್-ಮನ್ ಯೋಜನೆಯಡಿಯಲ್ಲಿ 1 ಕೋಟಿ 40ಲಕ್ಷ ರೂ.ವೆಚ್ಚದಲ್ಲಿ ಕುಡಿಯುವ ನೀರು ಒದಗಿಸುವ ಸಲುವಾಗಿ  ನಿಟ್ಟೂರು ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಸಭೆ ನಡೆಯಿತು. ನಿಟ್ಟೂರು ಗ್ರಾ.ಪಂ  ಅಧ್ಯಕ್ಷ  ಅಮ್ಮಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಒಪ್ಪಿಗೆ ಪಡೆಯಲಾಯಿತು.  ಅಲ್ಲದೆ ಈ ಜನವಸತಿ ಪ್ರದೇಶದ ಸ್ವಲ್ಪ ಭಾಗಗಳು ಅರಣ್ಯ ಪ್ರದೇಶದಲ್ಲಿ ಇದ್ದು, ಕೇಂದ್ರ ಸರ್ಕಾರ ಮಾರ್ಗ ಸೂಚಿಯಂತೆ ಈ ಭಾಗಗಳಿಗೂ ನೀರು ಒದಗಿಸಲು  ಸಭೆಯ ಮೂಲಕ ಶಿಫಾರಸು ಮಾಡಲಾಯಿತು. ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಅಭಿವೃದ್ಧಿ ಅಧಿಕಾರಿ ಸುರೇಶ್, ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ , ಪಡಿಞರಂಡ ಕವಿತಾ ಪ್ರಭು, ಜೆ‌.ಕೆ.ಅಪ್ಪಣ್ಣ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Read More