ಮಡಿಕೇರಿ ಏ.2 NEWS DESK : ಶಸ್ತ್ರಾಸ್ತ್ರಗಳ ಪರವಾನಗಿ ಹೊಂದಿರುವವರು ಲೋಕಸಭೆ ಚುನಾವಣೆ ಹಿನ್ನೆಲೆ ಬಂದೂಕುಗಳನ್ನು ಹತ್ತಿರದ ಪೊಲೀಸ್ ಠಾಣೆಗಳಿಗೆ ಒಪ್ಪಿಸುವಂತೆ ಪೊಲೀಸ್ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ಸಂಭವನೀಯ ಕ್ರಿಮಿನಲ್ ಕೃತ್ಯಗಳನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸಾರ್ವಜನಿಕರು ಬಂದೂಕುಗಳನ್ನು ಮತ್ತು ಇತರ ಆಯುಧಗಳನ್ನು ಸಮೀಪದ ಪೋಲೀಸ್ ಠಾಣೆಯಲ್ಲಿ ಠೇವಣಿ ಮಾಡಬೇಕು. ಆದರೆ ಕಾಡಂಚಿನ, ಗುಡ್ಡಗಾಡು ಪ್ರದೇಶಗಳು, ಒಂಟಿ ಮನೆಗಳು ಮತ್ತು ಕಾಡು ಪ್ರಾಣಿಗಳ ಉಪಟಳ ಇರುವ ನಿವಾಸಿಗಳು, ಬ್ಯಾಂಕ್ಗಳು ಹಾಗೂ ಚಿನ್ನಾಭರಣ ಅಂಗಡಿಗಳ ಮಾಲೀಕರು ಜಿಲ್ಲಾಧಿಕಾರಿಗಳ ನೇತೃತ್ವದ ಜಿಲ್ಲಾ ಪರಿಶೀಲನಾ ಸಮಿತಿಗೆ ಅರ್ಜಿ ಸಲ್ಲಿಸಿ ವಿನಾಯಿತಿ ಪಡೆಯಬಹುದಾಗಿದೆ ಎಂದು ಹೇಳಿದರು. ಬಂದೂಕಿನ ಅವಶ್ಯಕತೆ ಇರುವವರು ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದರೆ ಅಲ್ಲಿನ ಅಧಿಕಾರಿಗಳು ಪೋಲೀಸ್ ಇಲಾಖೆಯ ಅಭಿಪ್ರಾಯಕ್ಕೆ ಇಲಾಖೆಗೆ ರವಾನಿಸುತ್ತಾರೆ. ಅಂತಹ ಅರ್ಜಿಗಳಿಗೆ 24 ಗಂಟೆಗಳಲ್ಲಿಯೇ ಪೋಲೀಸ್…
ಲೇಖಕ: admin
ನಾಪೋಕ್ಲು ಏ.2 NEWS DESK : ಕುಂಡ್ಯೋಳಂಡ ಕಪ್ ಹಾಕಿ ಕ್ರೀಡಾ ಸಮಿತಿ ವತಿಯಿಂದ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 118ನೇ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಚೆರಿಯಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ ಕ್ರೀಡಾಂಗಣದಲ್ಲಿ ಕುಟುಂಬದ ಪಟ್ಟೆದಾರ ಕುಂಡ್ಯೋಳಂಡ ನಾಣಯ್ಯ ಪುಷ್ಪನಮನ ಸಲ್ಲಿಸಿ, ಗೌರವಿಸಿದರು. ಈ ಸಂದರ್ಭ ಕ್ರೀಡಾ ಉತ್ಸವದ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಕಾರ್ಯದರ್ಶಿ ವಿಶು ಪೂವಯ್ಯ, ಕ್ರೀಡಾ ಸಮಿತಿ ಹಾಗೂ ಕುಟುಂಬದ ಸದಸ್ಯರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಏ.2 NEWS DESK : ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಎರಡನೇ ಪರಶಿನಿ ಎಂದು ಪ್ರಖ್ಯಾತವಾಗಿರುವ ನಾಪೋಕ್ಲುವಿನ ಪೊನ್ನು ಮುತ್ತಪ್ಪ ದೇವಾಲಯದ ವಾರ್ಷಿಕ ಉತ್ಸವ ಏ.3 ರಿಂದ 5ರ ವರೆಗೆ ನಡೆಯಲಿದೆ. ಏ.3 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ ಹಾಗೂ ಶುದ್ಧ ಕಳಸದೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ರಾತ್ರಿ 8.30 ಕ್ಕೆ ಗುರು ಪೂಜೆ ಮತ್ತು ಶ್ರೀ ದೇವಿ ಪೂಜೆ ನಡೆಯಲಿದೆ. ಏ.4ರಂದು ಮಧ್ಯಾಹ್ನ 3 ಗಂಟೆಗೆ ಪೈ೦ಗುತ್ತಿ, 6 ಗಂಟೆಗೆ ಮುತ್ತಪ್ಪ ದೇವರ ಕಳಸ , ಕಾವೇರಿ ನದಿಯಲ್ಲಿ ಸ್ನಾನದ ಬಳಿಕ ಕೇರಳದ ಚಂಡೆ ವಾದ್ಯದೊಂದಿಗೆ ನಾಪೋಕ್ಲು ಪಟ್ಟಣದ ಮುಖ್ಯಬೀದಿಯಲ್ಲಿ ಮೆರವಣಿಗೆ ಸಾಗಲಿದೆ. ಸಂಜೆ 7.30ಕ್ಕೆ ಮುತ್ತಪ್ಪ ದೇವರ ವೆಳ್ಳಾಟಂ ಬಳಿಕ ಕುಟ್ಟಿಚಾತ ದೇವರ ಹಾಗೂ ಗುಳಿಗ ವೆಳ್ಳಾಟಂ, ಕುಟ್ಟಿಚಾತ ಕೋಲ ಹಾಗೂ ಶ್ರೀ ತಿರುವಪ್ಪ ಮತ್ತು ಮುತ್ತಪ್ಪ ತೆರೆಗಳು ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ. ವರದಿ :…
ಮಡಿಕೇರಿ ಏ.2 NEWS DESK : ಆಟಗಾರರು ಶಿಸ್ತು ರೂಢಿಸಿಕೊಂಡಲ್ಲಿ ಮಾತ್ರ ಉತ್ತಮ ಆಟಗಾರರಾಗಿ ಬೆಳೆಯಲು ಸಾಧ್ಯ ಎಂದು ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಮಹಾಪೋಷಕ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಅಮ್ಮತ್ತಿಯ ಪ್ರೌಢ ಶಾಲಾ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಫುಟ್ಬಾಲ್ ಲೀಗ್ ಪಂದ್ಯಾವಳಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ಫುಟ್ಬಾಲ್ ಕ್ರೀಡೆಯೂ ವೇಗವಾಗಿ ಬೆಳೆಯುತ್ತಿರುವುದು ಉತ್ತಮ ಬೆಳವಣಿಗೆ. ಕೊಡಗು ಜಿಲ್ಲೆಯಲ್ಲಿ ಯುವಕರು ಫುಟ್ಬಾಲ್ ಕ್ರೀಡೆಯತ್ತ ಮುಖಮಾಡಿದ್ದಾರೆ.ಆದರೆ ಯುವ ಫುಟ್ಬಾಲ್ ಆಟಗಾರರು ತಮ್ಮ ಆಟದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಫುಟ್ಬಾಲ್ ಪಟುವಾಗಿ ಬೆಳೆಯಲು ಸಾಧ್ಯ ಎಂದರು. ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅತ್ಯುತ್ತಮವಾಗಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯವಾಳಿಯನ್ನು ಆಯೋಜಿಸಿ, ಯುವ ಫುಟ್ಬಾಲ್ ಆಟಗಾರರಿಗೆ ಅವಕಾಶ ನೀಡುತ್ತಿರುವುದು ಶ್ಲಾಘನೀಯ ವಿಷಯ. ಮುಂದಿನ ವರ್ಷದಿಂದ ಕೊಡಗು ಜಿಲ್ಲಾ ಮಟ್ಟದ ಫುಟ್ಬಾಲ್ ಲೀಗ್ ಪಂದ್ಯಾವಳಿಯನ್ನು ನವೆಂಬರ್ ಅಥವಾ…
ಮಡಿಕೇರಿ ಏ.2 NEWS DESK : ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕುಶಾಲನಗರ ಪುರಸಭೆ ವತಿಯಿಂದ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮತದಾರರರಿಗೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ರಂಗೋಲಿ ಸ್ಪರ್ಧೆ ನಡೆಯಿತು. ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.
ಮಡಿಕೇರಿ ಏ.2 NEWS DESK : ಭಾಗಮಂಡಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಸುನಿಲ್ ಕುಮಾರ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ಲಭಿಸಿದೆ. ಇಂದು ಮಡಿಕೇರಿಯ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕೊಡಗು ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ ಮತ್ತು ಕಾರ್ಯಪ್ಪ ಟ್ರೋಫಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಟ್ರೋಫಿ ನೀಡಿ ಸುನಿಲ್ ಕುಮಾರ್ ಅವರ ಕಾರ್ಯದಕ್ಷತೆಯನ್ನು ಶ್ಲಾಘಿಸಿದರು. ಸುನಿಲ್ ಕುಮಾರ್ ಅವರು ಗಾಂಜಾ ದಂಧೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಮಡಿಕೇರಿ ಏ.2 NEWS DESK : ನಾಗರಹೊಳೆ ಗದ್ದೆ ಹಾಡಿಯಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. 18 ವರ್ಷದ ಮೇಲ್ಪಟ್ಟ ಎಲ್ಲರೂ ಯಾವುದೇ ಆಮಿಷಗಳಿಗೆ ಒಳಗಾಗದೇ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದರು.
ಸೋಮವಾರಪೇಟೆ ಏ.2 NEWS DESK : ಸೋಮವಾರಪೇಟೆಯ ಶ್ರೀ ಶಿವಕುಮಾರಸ್ವಾಮೀಜಿ ಜಯಂತ್ಯೋತ್ಸವ ಸಮಿತಿ ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಕಾಯಕ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿಗಳ117 ನೇಜನ್ಮ ದಿನಾಚರಣೆ ಅಂಗವಾಗಿ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಹಣ್ಣು ಹಂಪಲು ವಿತರಿಸಲಾಯಿತು. ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಎಸ್.ಮಹೇಶ್ ಮಾತನಾಡಿ, ನಡೆದಾಡುವ ದೇವರೆಂದೇ ಹೆಸರಾಗಿದ್ದ ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಗಳ ಮೂಲಕ ಸಮಾಜದಲ್ಲಿ ಪೂಜ್ಯ ಸ್ಥಾನ ಅಲಂಕರಿಸಿದವರು. ಅವರ ಆದರ್ಶಗಳ ಪಾಲನೆಯೊಂದಿಗೆ ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು. ಪ.ಪಂ. ಮುಖ್ಯಾಧಿಕಾರಿ ಲೋಕ್ಯಾ ನಾಯಕ್, ಆರೋಗ್ಯಾಧಿಕಾರಿ ಜಾಸಿಂ ಖಾನ್, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಉಷಾರಾಣಿ, ಇಂದಿರಾ ಗಾಂಧಿ ಅಭಿಮಾನಿ ಸಂಘದ ಅಧ್ಯಕ್ಷ ನಾಗರಾಜ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್,ಮೋಟಾರು ಕೆಲಸಗಾರರ ಸಂಘದ ಉಪಾಧ್ಯಕ್ಷ ರಂಗಸ್ವಾಮಿ,ಪ್ರಮುಖರುಗಳಾದ ಡ್ಯಾನಿಯಲ್,ಮಂಜುಳಾ ಬಸವರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುಂಟಿಕೊಪ ಏ.1 NEWS DESK : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಸ್ಥಳೀಯ ಶ್ರೀಚಾಮುಂಡೇಶ್ವರಿ ಮತ್ತು ಶ್ರೀಮುತ್ತಪ್ಪ ದೇವಾಲಯದ 56ನೇ ವರ್ಷದ ತೆರೆ ತೆರೆಮಹೋತ್ಸವದಲ್ಲಿ ಸುಂಟಿಕೊಪ್ಪ, ಕೊಡಗರಹಳ್ಳಿ, ಕಂಬಿಬಾಣೆ, ಹೊಸಕೋಟೆ, ಗರಗಂದೂರು, ಮಾದಾಪುರ, ಚೆಟ್ಟಳ್ಳಿ, ಭೂತನಕಾಡು, ಕೆದಕಲ್ ಹಾಗೂ ಬಾಳೆಕಾಡು ಭಾಗಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ಇಂದು ಮಧ್ಯಾಹ್ನ ಬಾವುಟ ಇಳಿಸುವುದರೊಂದಿಗೆ ತೆರೆ ಮಹೋತ್ಸವ ಸಂಪನ್ನಗೊಂಡಿತು. ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ದೇವಸ್ಥಾನ ಸಮಿತಿ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ಉಪಾಧ್ಯಕ್ಷ ಪಿ.ಸಿ.ಮೋಹನ್, ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋಹನ್, ಖಜಾಂಜಿ ರಮೇಶ್ ಪಿಳ್ಳೆ, ಸಹಕಾರ್ಯದರ್ಶಿ ಯಂಕನ ಕೌಶಿಕ್, ಜೀರ್ಣೋದ್ಧಾರ ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ವೈ.ಎಂ.ಕರುAಬಯ್ಯ, ಕಾರ್ಯದರ್ಶಿ ಶಶಿಕಾಂತರೈ, ಖಜಾಂಜಿ ಎಸ್.ಜಿ.ಶ್ರೀನಿವಾಸ್, ಕೆ.ಪಿ.ಜಗನ್ನಾಥ್, ದೇವಸ್ಥಾನ ಸಮಿತಿ ಮಾಜಿ ಕಾರ್ಯದರ್ಶಿ ಸುರೇಶ್ ಗೋಪಿ, ಎ.ಶ್ರೀಧರನ್, ಧನುಕಾವೇರಪ್ಪ, ಎಂ.ಎಸ್.ಸುನಿಲ್, ಬಿ.ಡಿರಾಜು ರೈ, ದಿನುದೇವಯ್ಯ, ವಿ.ಎ.ಸಂತೋಷ್ ಕುಮಾರ್, ಬಿ.ಕೆ.ಮೋಹನ್, ಕೆ.ಪಿ.ವಿನೋದ್, ದೇವಸ್ಥಾನ ಅರ್ಚಕರಾದ ಮಂಜುನಾಥ ಉಡುಪ, ಮುತ್ತಪ್ಪ ದೇವಸ್ಥಾನ ಪೂಜಾರಿ…
ಸೋಮವಾರಪೇಟೆ ಏ.1 NEWS DESK : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಚಿವ ಶಿವರಾಜ್ ತಂಗಡಿಗಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮಂಡಲದ ಯುವ ಮೋರ್ಚಾ ವತಿಯಿಂದ ಪಟ್ಟಣದ ಪುಟ್ಟಪ್ಪ ವೃತದ ಸೋಮವಾರ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಮೋದಿ ವಿರುದ್ಧದ ಸಚಿವ ಶಿವರಾಜ್ ತಂಗಡಿಗಿ ಹೇಳಿಕೆ ಖಂಡನೀಯವಾದುದು. ಪ್ರಧಾನಿ ಮೋದಿಯವರು ದೇಶದ ರಕ್ಷಣೆಗೆ ಹಗಲಿರುಳು ಶ್ರಮಿಸುತಿದ್ದು ಅಂಥವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ತಂಗಡಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು. ಮಂಡಲ ಯುವ ಮೋರ್ಚಾದ ಅಧ್ಯಕ್ಷ ಮೋಹಿತ್ ಮಾತನಾಡಿ, ಯುವಕರು ಎಲ್ಲೇ ಹೋದರು ಮೋದಿ ಮೋದಿ ಎನ್ನುತ್ತಾರೆ ಅಂತವರಿಗೆ ಕಪಾಳಕ್ಕೆ ಹೊಡಿಯ ಬೇಕು ಎಂದು ಹೇಳುತ್ತಾರೆ. ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸ್ಥಾನಕ್ಕೆ ಅವಮಾನ. ರಾಜ್ಯದ ಮುಖ್ಯಮಂತ್ರಿಗಳು ಅವರಿಗೆ ಒಳೆಯ ಸಂಸ್ಕೃತಿ ಹೇಳಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇವರು ಹೋದಲೆಲ್ಲಾ ಘೇರಾವ್ ಹಾಕಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಹೇಳಿದರು. ಕೊಡಗಿನಲ್ಲಿ…






