ಲೇಖಕ: admin

ಮಡಿಕೇರಿ ಮಾ.11 NEWS DESK  : ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಇತ್ತೀಚೆಗೆ ಹೊರಡಿಸಿರುವ ಸರ್ಕಾರದ ಅಧಿಸೂಚನೆ ಹಿನ್ನೆಲೆ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25 ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ…

Read More

ಮಡಿಕೇರಿ ಮಾ.11 NEWS DESK  : ಕೊಡಗಿನ ಜನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡುವ ಮೂಲಕ ಬದಲಾವಣೆಯನ್ನು ತಂದಿದ್ದಾರೆ. ರಾಜ್ಯದ ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡ ಕಾಂಗ್ರೆಸ್ ಸರ್ಕಾರದಿಂದ ಜಿಲ್ಲೆಯಲ್ಲಿ ಅಭಿವೃದ್ಧಿಯ ಮಹಾಪೂರವೇ ಆಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ರಮಾನಾಥ್ ಬೇಕಲ್ ಬಣ್ಣಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಿಲ್ಲ. ಜಿಲ್ಲೆಯ ಸುಮಾರು 1ಲಕ್ಷ ಮಂದಿ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದು, ಪ್ರತಿ ತಿಂಗಳು 20 ಕೋಟಿ ರೂ. ಬರುತ್ತಿದೆ. ಶಕ್ತಿ ಯೋಜನೆಯ ಮೂಲಕ ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಮಹಿಳೆಯರಿಂದ ಆರ್ಥಿಕ ಚಲಾವಣೆ ಚುರುಕುಗೊಂಡಿದ್ದು, ವ್ಯಾಪಾರ ವಹಿವಾಟು ಚೇತರಿಕೆ ಕಂಡಿದೆ, ಹಳ್ಳಿ ಹಳ್ಳಿಗಳಲ್ಲಿ ಮಂದಹಾಸವಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳೊಂದಿಗೆ ಜನರಿಗೆ ಬೇಕಾದ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಜಿಲ್ಲೆಯ ಇಬ್ಬರು ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಭಾಗಮಂಡಲ ಕ್ಷೇತ್ರ ಈ…

Read More

ಮಡಿಕೇರಿ ಮಾ.11 NEWS DESK : ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳನ್ನು ಬಲಪಡಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲುಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಪಟ್ಟಕ್ಕೆ ಏರಿಸುವ ದೃಷ್ಟಿಯಿಂದ ಮಾ.15 ರಂದು ಮಡಿಕೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಆಯೋಜಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ 10 ಗಂಟೆಗೆ ಕಾವೇರಿ ಹಾಲ್ ನಲ್ಲಿ ಸಮಾವೇಶ ನಡೆಯಲಿದ್ದು, ಇದಕ್ಕೂ ಮೊದಲು ಖಾಸಗಿ ಬಸ್ ನಿಲ್ದಾಣದಿಂದ ಬೃಹತ್ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ,…

Read More

ಮಡಿಕೇರಿ ಮಾ.11 NEWS DESK : ಭಾಗಮಂಡಲದ ಜನರ ಹಲವು ವರ್ಷಗಳ ಬೇಡಿಕೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸ್ಪಂದನೆ ನೀಡಿದ್ದು, ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾಗಮಂಡಲದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಸಂದರ್ಭ ವಿದ್ಯುತ್ ಉಪಕೇಂದ್ರಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಪರಿಶೀಲಿಸಿದರು. ಪದಕಲ್ಲು ಗ್ರಾಮದಲ್ಲಿ 3 ಎಕರೆ ಪ್ರದೇಶದಲ್ಲಿ 66/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆಯಾಗಲಿದ್ದು, ಸ್ಥಳ ಪರಿಶೀಲಿಸಿದ ಶಾಸಕರು, ಟೆಂಡರ್ ಪ್ರಕ್ರಿಯೆಗೆ ಸೂಚನೆ ನೀಡಿದರು. ಈ ಸಂದರ್ಭ ಶಾಸಕರ ಆಪ್ತ ಸಹಾಯಕರಾದ ನಿವೃತ್ತ ಅಧಿಕಾರಿ ಮುತ್ತಣ್ಣ ಹಾಗೂ ಕುಂದಚೇರಿ ಗ್ರಾ.ಪಂ ಸದಸ್ಯ ಕೆ.ಯು.ಹಾರಿಸ್ ಪದಕಲ್ಲು ಅವರು ಯೋಜನೆ ಕುರಿತು ಮಾಹಿತಿ ನೀಡಿದರು. ಸ್ವಿಚಿಂಗ್ ಸ್ಟೇಷನ್ ಸ್ಥಾಪನೆ ಮತ್ತು ಮುಖ್ಯ ವಿದ್ಯುತ್ ಮಾರ್ಗ ಕಾಮಗಾರಿ ಆಗುವಲ್ಲಿಯವರೆಗೆ ಸೋಲಾರ್ ಘಟಕ ನಿರ್ಮಾಣಗೊಳ್ಳಲಿದೆ. ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸುತ್ತಿರುವ ಬಗ್ಗೆ ಗ್ರಾಮಸ್ಥರು ಶಾಸಕ ಪೊನ್ನಣ್ಣ ಅವರಿಗೆ…

Read More

ಕಡಂಗ ಮಾ.11 NEWS DESK : ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಸೌಜನ್ಯ ಬಳಗದಿಂದ ಶಿಕ್ಷಣಕ್ಕೆ ಪೂರವಾದ ಕೊಡುಗೆ ನೀಡಲಾಯಿತು. ಸೌಜನ್ಯ ಟ್ರಸ್ಟ್ ನ ಅಧ್ಯಕ್ಷ  ರಂಗರಾಜ್ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಸಿಗುತ್ತಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ನರಿಯಂದಡ ಗ್ರಾ.ಪಂ ಸದಸ್ಯ ಸುಬೀರ್ ಮಾತನಾಡಿ, ಶಾಲಾ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸುತ್ತಿರುವ ಸೌಜನ್ಯ ಟ್ರಸ್ಟ್ ನ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಸ್ಥಳೀಯ ದಾನಿಗಳಾದ ಉಡಿಯಂಡ ಡಿ.ಚೆಂಗಪ್ಪ  ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿರುವ ಉತ್ತಮ ಸೌಲಭ್ಯವನ್ನು ಪಡೆದುಕೊಳ್ಳಿ ಎಂದರು. ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ಫಾತಿಮಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು, ಎಸ್ ಡಿ ಎಂ ಸಿ ಸದಸ್ಯರು ಹಾಜರಿದ್ದರು. ಕಾರ್ಯಕ್ರಮವನ್ನು ಕೆ.ಎಂ.ವಿಮಲಾ ನಿರೂಪಿಸಿದರು. ಶಾಲಾ ಮುಖ್ಯಶಿಕ್ಷಕರು ಪಿ.ಎಂ.ಶಾಂತಿಕುಮಾರಿ ಸ್ವಾಗತಿಸಿದರು. ಶಾಲೆಗೆ ನೀಡಿದ ಕೊಡುಗೆಗಳಬಗ್ಗೆ ಬಬಿತವಿವರಿಸಿದರು. ವತ್ಸಲಾ ವಂದಿಸಿದರು.  ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಮಾ.11 NEWS DESK  : ಮಂಗಳೂರಿನಲ್ಲಿ ನಡೆದ ವಿಶ್ವ ಹಿಂದೂ ಪರಿಷದ್ ಪ್ರಾಂತ ಬೈಠಕ್‍ನಲ್ಲಿ ವಿಶ್ವ ಹಿಂದೂ ಪರಿಷದ್, ಭಜರಂಗ ದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿಯ ಕೊಡಗು ಜಿಲ್ಲಾ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಕಾರ್ಯಾಧ್ಯಕ್ಷರಾಗಿ ಎಸ್.ಸುರೇಶ್, ಜಿಲ್ಲಾ ಕಾರ್ಯದರ್ಶಿಯಾಗಿ ರಮೇಶ್ ಪುದಿಯೊಕ್ಕಡ, ಕೋಶಾಧ್ಯಕ್ಷರಾಗಿ ಸಂಪತ್ ಕುಮಾರ್, ಉಪಾಧ್ಯಕ್ಷರಾಗಿ ಪರಮೇಶ್ ಕೂತಿ, ಡಿ.ನರಸಿಂಹ ಸುಂಟಿಕೊಪ್ಪ, ಸಹ ಕಾರ್ಯದರ್ಶಿಗಳಾಗಿ ಡಿ.ಸಂತೋಷ್ ಕುಶಾಲನಗರ, ಯತೀಶ್ ವಿರಾಜಪೇಟೆ, ವಕೀಲರಾದ ಹೇಮಚಂದ್ರ ಸೋಮವಾರಪೇಟೆ ಆಯ್ಕೆಯಾಗಿದ್ದಾರೆ. ಮಾತೃಶಕ್ತಿ ಜಿಲ್ಲಾ ಪ್ರಮುಖ್ ಆಗಿ ಉಮಾವತಿ, ಸಹ ಪ್ರಮುಖ್ ಆಗಿ ಪೂರ್ಣಿಮಾ ಸುರೇಶ್, ಭಜರಂಗದಳದ ಜಿಲ್ಲಾ ಸಂಯೋಜಕರಾಗಿ ಪ್ರವೀಣ್ ಸಿದ್ದಾಪುರ, ಸಹ ಸಂಯೋಜಕರಾಗಿ ಕವನ್ ಕಾರ್ಯಪ್ಪ ಗೋಣಿಕೊಪ್ಪ, ನವೀನ್ ಪೂಜಾರಿ ಮಡಿಕೇರಿ ಹಾಗೂ ಸಜಿ ಭರತ್ ಸೋಮವಾರಪೇಟೆ ನೇಮಕಗೊಂಡಿದ್ದಾರೆ. ಜಿಲ್ಲಾ ದುರ್ಗಾ ವಾಹಿನಿಯ ಸಂಯೋಜಕರಾಗಿ ಪಾರುವಂಗಡ ರಿಷ್ತ ಚಂಗಪ್ಪ ಗೋಣಿಕೊಪ್ಪ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳಿಗೆ ಬೈಠಕ್‍ನಲ್ಲಿ ಜವಾಬ್ದಾರಿ ನೀಡಲಾಯಿತು.

Read More

ಮಡಿಕೇರಿ ಮಾ.11 NEWS DESK: ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಎಂ.ಖಲೀಲ್ ಹಾಗೂ ಬಿ.ಹೆಚ್.ಮುಸ್ತಫ ತಿತಿಮತಿ ಆಯ್ಕೆಯಾಗಿದ್ದಾರೆ. ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆ ಮೇರೆಗೆ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಿರುವುದಾಗಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಆರ್.ಜೋಸ್ ಮಟ್ಟಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.11 NEWS DESK : ಅಭಿವೃದ್ಧಿ ಕಾರ್ಯಗಳ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಮುಂದಿನ 4 ವರ್ಷಗಳಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಮಾದರಿ ಕ್ಷೇತ್ರವನ್ನಾಗಿಸಲು ಸಂಕಲ್ಪ ತೊಟ್ಟಿದ್ದೇನೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕ್ಷೇತ್ರದ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ಪಾರಾಣೆ, ಬೆಟ್ಟಗೇರಿ, ಬೇಂಗೂರು ಚೇರಂಬಾಣೆ, ಚೆಟ್ಟಿಮಾನಿ ಕುಂದಚೇರಿ, ಭಾಗಮಂಡಲ, ಅಯ್ಯಂಗೇರಿ, ಎಮ್ಮೆಮಾಡ್ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಒಟ್ಟು 9 ಕೋಟಿ 26 ಲಕ್ಷ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೊಡ್ಡ ದೊಡ್ಡ ಫ್ಲೈ ಓವರ್ ಅಥವಾ ದೊಡ್ಡ ಸೇತುವೆ ನಿರ್ಮಿಸಿದರೆ ಅದು ಮಾತ್ರ ಅಭಿವೃದ್ದಿ ಎಂದೆನಿಸುವುದಿಲ್ಲ. ಗ್ರಾಮೀಣ ಭಾಗದ ಜನರ ಮೂಲಭೂತ ಸೌಕರ್ಯಗಳನ್ನು ಸರಿಪಡಿಸಿದರೆ ಅದು ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್…

Read More

ವಿರಾಜಪೇಟೆ ಮಾ.11 NEWS DESK : ಶಿವರಾತ್ರಿ ಹಬ್ಬದ ಪ್ರಯುಕ್ತ ಕನ್ನಡ ಸಿರಿ ಸ್ನೇಹ ಬಳಗ ಹಾಗೂ ಕುಶಾಲನಗರದ ತೊರೆನೂರು ಶನೀಶ್ವರ ದೇವಾಲಯದ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

Read More

ನಾಪೋಕ್ಲು ಮಾ.11 NEWS DESK : 2022-23ನೇ ಸಾಲಿನಲ್ಲಿ ಕೈಗೊಂಡ ಸಾಕ್ಷರತಾ ಕಾರ್ಯಕ್ರಮದಡಿಯಲ್ಲಿ ಪರೀಕ್ಷೆ ಬರೆದ ಸಾಕ್ಷರರು ಎಂದು ಗುರುತಿಸಲಾದ ಮಡಿಕೇರಿ ತಾಲ್ಲೂಕು ಮಟ್ಟದ ನವ ಸಾಕ್ಷರರಿಗೆ ಸಾಕ್ಷರತಾ ಪ್ರಮಾಣ ಪತ್ರ ವಿತರಿಸಲಾಯಿತು. ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ನವಸಾಕ್ಷರರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು. ಕಾರ್ಯಕ್ರಮದ ನೋಡಲ್ ಅಧಿಕಾರಿ ಬಿಆರ್ ಪಿ ಮಂಜುಳಾ ಚಿತ್ರಾಪುರ, ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಮೇಕೇರಿ ಕ್ಲಸ್ಟರ್ ನ ಸಿಆರ್ ಪಿ ಕಲ್ಪನಾ, ಆಶಾಕಾರ್ಯಕರ್ತೆಯರು, ಭೋಧಕರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.

Read More