ಮಡಿಕೇರಿ ಮಾ.9 NEWS DESK : ಈಜಲು ಹೋಗಿದ್ದ ಯುವಕನೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಗುಡ್ಡೆಹೊಸೂರು ಸಮೀಪದ ನಂಜರಾಯಪಟ್ಟಣದಲ್ಲಿ ನಡೆದಿದೆ. ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಕರೆ ಗ್ರಾಮದ ನಿವಾಸಿ ಶಂಭು ಹಾಗೂ ಮೀನಾ ದಂಪತಿ ಪುತ್ರ ಶರತ್(24) ಮೃತ ದುರ್ದೈವಿ. ಶರತ್ ಶನಿವಾರ ತನ್ನ ನಾಲ್ವರು ಸ್ನೇಹಿತರ ಜೊತೆ ನಂಜರಾಯಪಟ್ಟಣದ ದಾಸವಾಳ ಎಂಬಲ್ಲಿ ಈಜಲು ಕಾವೇರಿ ನದಿಗೆ ಇಳಿದಿದ್ದಾನೆ. ಈ ವೇಳೆ ಆಳ ಪ್ರದೇಶದಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೇಖಕ: admin
ಮಡಿಕೇರಿ ಮಾ.9 NEWS DESK : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನ ದ ಕನ್ನಡ ಚಲನಚಿತ್ರ “ಕಂದೀಲು” (The Ray of hope) ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ನಡೆದ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗದಲ್ಲಿ ಆಯ್ಕೆಗೊಂಡು 12 ಸಿನಿಮಾಗಳಲ್ಲಿ ಸ್ಥಾನ ಪಡೆದುಕೊಂಡು ಅಂತಿಮ ಘಟ್ಟದಲ್ಲಿ “2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬೆಂಗಳೂರಿನ ವಿಧಾನಸೌಧ ದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಅದ್ದೂರಿ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡದ ಖ್ಯಾತ ನಟ, ಚಲನಚಿತ್ರೋತ್ಸವದ ರಾಯಭಾರಿ ಡಾಲಿ ಧನಂಜಯ ಹಾಗೂ ಕನ್ನಡ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ ಖ್ಯಾತ ಸಂಗೀತ ನಿರ್ದೇಶಕ ಸಾಧು ಕೋಕಿಲ ಮತ್ತು ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಂದ “ಕಂದೀಲು” ಚಿತ್ರದ ನಿರ್ದೇಶಕಿ ಹಾಗೂ ನಿರ್ಮಾಪಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ಪತಿ ಪ್ರಕಾಶ್ ಕಾರ್ಯಪ್ಪ…
ಕುಶಾಲನಗರ ಮಾ.9 NEWS DESK : ಗ್ರಾಮೀಣರ ಕೃಷಿ ಬದುಕು ಗ್ರಾಮ ಜೀವನ, ಆಹಾರ ಪದ್ಧತಿಗಳೆಲ್ಲವೂ ಜಾನಪದ ಸಂಸ್ಕೃತಿಯ ಭಾಗ ಎಂದು ನಿವೃತ್ತ ಜಂಟಿ ಕೃಷಿ ನಿರ್ದೇಶಕ ಟಿ.ಡಿ.ಗಣೇಶ್ ಹೇಳಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹೆಬ್ಬಾಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಹೆಬ್ಬಾಲೆ, ತೊರೆನೂರು ಮತ್ತು ಶಿರಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ಸುವರ್ಣ ಕರ್ನಾಟಕ -50 ರ ಸಂಭ್ರಮ ಆಚರಣೆ ಅಂಗವಾಗಿ ಹೆಬ್ಬಾಲೆ ಗ್ರಾಮಸಿರಿ ಆಚರಣಾ ಸಮಿತಿ ಸಹಯೋಗದೊಂದಿಗೆ ಹೆಬ್ಬಾಲೆ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಜಾನಪದ ಗ್ರಾಮಸಿರಿ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಜಿಲ್ಲೆಯಲ್ಲಿಯೇ ಹೆಚ್ಚು ಕೃಷಿ ಕುಟುಂಬಗಳು ನೆಲೆಸಿರುವ ಹೆಬ್ಬಾಲೆಯಲ್ಲಿ ಇಂತಹ ಗ್ರಾಮೀಣ ಗ್ರಾಮಸಿರಿ ಉತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಸ್ಥಳೀಯವಾಗಿ ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವುದನ್ನು ಗಣೇಶ್ ಶ್ಲಾಘಿಸಿದರು. ಇದೇ…
ಮಡಿಕೇರಿ ಮಾ.9 NEWS DESK : ಮಡಿಕೇರಿ ಕುಮಾರೀಸ್ ಲೈಟ್ಹೌಸ್ ನಲ್ಲಿ ಮಹಾ ಶಿವರಾತ್ರಿಯ ಪ್ರಯುಕ್ತ ಶಿವ ದ್ವಜರೋಹಣ ಹಾಗೂ 88 ನೇ ತ್ರಿಮೂರ್ತಿ ಶಿವ ಜಯಂತಿ ಪ್ರಯುಕ್ತ 88 ಜ್ಯೋತಿ ಬೆಳಗಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳೆಗಿಸುವ ಮೂಲಕ ಉದ್ಘಾಟಿಸಲಾಯಿತು. ಸಂಜೆ ಶಿವ ಭಕ್ತಿ ಗೀತೆಗಳ ಭಜನಾ ಕಾರ್ಯಕ್ರಮ ನಡೆಯಿತು. ನೆರೆದಿದ್ದ ಎಲ್ಲರು ವಿಶೇಷ ಜ್ಯೋತಿರ್ಲಿಂಗ ದರ್ಶನ ಪಡೆದರು. ಶಿವರಾತ್ರಿಯ ಪ್ರಯುಕ್ತ ಮಾ.11ರಿಂದ 20ರ ವರೆಗೆಬೆಳಿಗ್ಗೆ ಮತ್ತು ಸಂಜೆ 6.30 ರಿಂದ 7.30ರ ವರೆಗೆ ರಾಜಯೋಗ ಧ್ಯಾನದ ಉಚಿತ ತರಬೇತಿ ನಡೆಯಲಿದ್ದು, ಆಸಕ್ತರು ಶಿಬಿರವನ್ನು ಸದುಪಯೋಗಿಸಿಕೊಳ್ಳಬಹುದು.
ಕುಶಾಲನಗರ ಮಾ.9 NEWS DESK : ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಕುಶಾಲನಗರದ ಜಂಪ್ ಸ್ಮಾಶ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆಯುಧಿ ಶಿವರಾತ್ರಿ ಕಪ್ ಅನ್ನು ತನ್ನದಾಗಿಸಿಕೊಂಡಿತು. ರಾತ್ರಿ ನಡೆದ ಪಂದ್ಯಾವಳಿಯಲ್ಲಿ ಆರು ತಂಡಗಳ ಮೂಲಕ ಸುಮಾರು 70 ಆಟಗಾರರು ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಟೀಮ್ ರಾಕರ್ಸ್, ಎಇ, ಆಯುಧಿ ಹಾಗೂ ಜಂಪ್ ಸ್ಮಾಶ್ ನಾಲ್ಕು ತಂಡಗಳು ಸೆಮಿ ಪೈನಲ್ ತಲುಪಿದರೆ, ನೈಟ್ ರೈಡರ್ಸ್ ಹಾಗೂ ಗೋಲ್ಡನ್ ರಾಕರ್ಸ್ ತಂಡಗಳು ನೀರಸ ಪ್ರದರ್ಶನದೊಂದಿಗೆ ಹೊರಗುಳಿದವು. ಬಳಿಕ ನಾಲ್ಕು ತಂಡಗಳ ನಡುವೆ ಹಣಾಹಣಿ ಏರ್ಪಟ್ಟು ಜಂಪ್ ಸ್ಮಾಶ್ ಹಾಗೂ ಆಯುಧಿ ತಂಡಗಳು ಫೈನಲ್ ತಲುಪಿದವು. ಅಂತಿಮವಾಗಿ ಆಯುಧಿ ಉತ್ತಮ ಪ್ರದರ್ಶನ ತೋರುವ ಮೂಲಕ ಮೊದಲ ಬಹುಮಾನ 30 ಸಾವಿರ ರೂ ಹಾಗೂ ಆಕರ್ಷಕ ಟ್ರೋಫಿ ತನ್ನದಾಗಿಸಿಕೊಂಡಿತು. ಜಂಪ್ ಸ್ಮಾಶ್ ತಂಡ ದ್ವಿತೀಯ ಬಹುಮಾನ ರೂ.20 ಸಾವಿರ ಹಾಗೂ ಆಕರ್ಷಕ ಟ್ರೋಫಿ ಪಡೆದರೆ, ಟೀಮ್ ಎಇ ಮೂರನೇ ಬಹುಮಾನ ರೂ 10 ಸಾವಿರ…
ಮಡಿಕೇರಿ ಮಾ.9 NEWS DESK : ಸೋಮವಾರಪೇಟೆ ತಾಲ್ಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವಾರೆಯಿಂದ ಯಡವನಾಡು ರಸ್ತೆ ಕಾಮಗಾರಿ, ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸತೋಟ ಶಾಲಾ ಮುಂಬಾಗದ ರಸ್ತೆ, ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಶಾಸಕರು, ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಹಲವಾರು ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳೀಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಸಾರ್ವಜನಿಕರು ಹಾಜರಿದ್ದರು.
ನಾಪೋಕ್ಲು ಮಾ.9 NEWS DESK : ಮಹಾಶಿವರಾತ್ರಿ ಪ್ರಯುಕ್ತ ನಾಪೋಕ್ಲುವಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಸಮೀಪದ ಪೇರೂರು ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶಿವರಾತ್ರಿ ದಿನ ವಾರ್ಷಿಕೋತ್ಸವ ನಡೆಯಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆ, ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆಗಳನ್ನು ನಡೆಸಲಾಯಿತು. ಪೂಜೆಯ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಉತ್ಸವದ ಅಂಗವಾಗಿ ವಿಶೇಷವಾಗಿ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ನಡೆಯಿತು. ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ತಂತ್ರಿಗಳಾಗಿ ಗೋಪಾಲಕೃಷ್ಣ ಕೆದಿಲಾಯ ರುದ್ರಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಮಚ್ಚುರ ರವೀಂದ್ರ ಮಾತನಾಡಿ, ದೇವಸ್ಥಾನದಲ್ಲಿ ಪ್ರತಿವರ್ಷ ಶಿವರಾತ್ರಿಯಂದು ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ. ಬೆಳಿಗ್ಗೆ ಆರು ಗಂಟೆಯಿಂದ ಆರಂಭಗೊಂಡು ದಿನಪೂರ್ತಿ ಕಾರ್ಯಕ್ರಮ…
ಮಡಿಕೇರಿ ಮಾ.9 NEWS DESK : ಮಹಾಶಿವರಾತ್ರಿ ಅಂಗವಾಗಿ ಚೆಟ್ಟಳ್ಳಿಯ ಈರಳೆ ವಳಮುಡಿ ಗ್ರಾಮದಲ್ಲಿರುವ ಪಂಚಮುಖಿ ವಾಯುಪುತ್ರ ಮೂರ್ತಿ, ಚೆಟ್ಟಳ್ಳಿ ಸಹಕಾರ ಸಂಘದ ಮುಖ್ಯ ಕಚೇರಿ ಮುಂದಿರುವ ಪಶುಪತಿನಾಥ, ಕಾವೇರಿ ಮಾತೆ, ಶ್ರೀ ಕೃಷ್ಣ, ಗೋಮಾತೆ ಹಾಗೂ ಶ್ರೀ ನರೇಂದ್ರ ಮೋದಿ ಸಹಕಾರ ಭವನದಲ್ಲಿರುವ ಶ್ರೀ ವಿನಾಯಕ, ವೀರಾಂಜನೇಯ ಹಾಗೂ ಮಹಾವಿಷ್ಣುವಿನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಹಾಗೂ ಜನಪರ ಹೋರಾಟ ಸಮಿತಿಯ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಅವರ ನೇತೃತ್ವದಲ್ಲಿ ಚೆಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಶ್ರೀ ವೀರಾಂಜನೇಯ ಯುವಕ ಸಂಘ, ಶ್ರೀ ಗೌರಿಗಣೇಶೋತ್ಸವ ಸಮಿತಿ, ಕೂಡ್ಲೂರು ಶ್ರೀ ವಿನಾಯಕ ದೇವಾಲಯ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ನಾಲ್ಕನೇ ವರ್ಷದ ಮಹಾಶಿವರಾತ್ರಿಯನ್ನು ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಅಲಂಕಾರದೊಂದಿಗೆ ದೀಪಾರಾಧನೆ ಹಾಗೂ ವಿಶೇಷಪೂಜೆ ಸಲ್ಲಿಸಲಾಯಿತು. ನಂತರ ಮಹಾ ಮಂಗಳಾರತಿ ಪ್ರಸಾದ ವಿತರಣೆ ನೆರವೇರಿತು. ಮಕ್ಕಳು ಅಣತೆ ಬೆಳಗಿದರು. ನಂತರ ಸಹಕಾರ…
ಮಡಿಕೇರಿ ಮಾ.9 NEWS DESK : ವಿರಾಜಪೇಟೆಯ ಬಾಳುಗೊಡು ಗ್ರಾಮದ ಕೊಡಗು ಹೆಗ್ಗಡೆ ಸಮಾಜದ ನಿವೇಶನದಲ್ಲಿನ ಸಭಾಂಗಣದ ಮುಂಭಾಗದಲ್ಲಿ ಸಾಂಪ್ರದಾಯಿಕ ಶೈಲಿಯ ನೂತನ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ಕೊಡಗು ಹೆಗ್ಗಡೆ ಸಮಾಜದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸಮಾಜದ ಅಧ್ಯಕ್ಷ ಪಡಿಞರಂಡ ಅಯ್ಯಪ್ಪ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಸಮಾಜದ ಉಪಾಧ್ಯಕ್ಷ ಕೊರಕುಟ್ಟೀರ ಸರಾ ಚಂಗಪ್ಪ ಮಾತನಾಡಿ, ಸಾಂಸ್ಕೃತಿಕ ಭವನ ನಿರ್ಮಾಣ ಮಾಡುವುದರಿಂದ ವರ್ಷದ ಎಲ್ಲಾ ರುತುಗಳಲ್ಲಿ ಜಾನಪದ ಕಲೆಗಳನ್ನು ಅಭ್ಯಾಸ ಮಾಡಲು ಮತ್ತು ಸಮಾರಂಭಗಳು ನಡೆದಾಗ ಕಲಾ ತಂಡಗಳಿಂದ ಜಾನಪದ ಕಲೆಗಳ ಪ್ರದರ್ಶನಕ್ಕೂ ಮತ್ತು ವಸ್ತು ಪ್ರದರ್ಶನಕ್ಕೂ ಸಾಕಷ್ಟು ಸ್ಥಳಾವಕಾಶ ಲಭ್ಯವಾಗಲಿದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮುದಾಯ ಭವನ ನಿರ್ಮಾಣಕ್ಕೆ ಅಂದಾಜು 28 ಲಕ್ಷ ರುಪಾಯಿಗಳ ನೀಲಿ ನಕಾಶೆ ತಯಾರಿಸಲಾಗಿದ್ದು, ಆರ್ಥಿಕ ನೆರವಿಗಾಗಿ ಶಾಸಕರ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವ ಪ್ರಯತ್ನ ಮಾಡುವುದರೊಂದಿಗೆ ಸಮಾಜದ ನಿಧಿಯಲ್ಲಿ ಇರುವ ಹಣವನ್ನು ಬಳಸಿಕೊಂಡು ಅಗತ್ಯ ಬಿದ್ದಲ್ಲಿ ದಾನಿಗಳ ನೆರವನ್ನು ಸಹ…
ಮಡಿಕೇರಿ ಮಾ.9 NEWS DESK : ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನೆರವೇರಿತು. ಮುಂಜಾನೆಯಿಂದಲೇ ಗಣಪತಿ ಹೋಮ, ಈಶ್ವರನಿಗೆ ರುದ್ರಾಭಿಷೇಕ, ಮಹಾ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಗ್ರಾಮದ 8 ದಿಕ್ಕುಗಳಿಂದ ಈಶ್ವರ ಆರಾಧನೆಯ ವಿಶೇಷ ಸೇವೆಯಾಗಿ ಹೊರೆ ಕಾಣಿಕೆ ಮೆರವಣಿಗೆ ಆಕರ್ಷಣಿಯವಾಗಿ ನಡೆಯಿತು. ದೇವಾಲಯದ ಅರ್ಚಕರಾದ ಕೃಷ್ಣ ಭಟ್ ಮತ್ತು ಮಡಿಕೇರಿಯ ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿತು. ಮಹಿಳೆಯರು ಬರಿಗಾಲಿನಲ್ಲಿ ಹೊರೆಕಾಣಿಕೆಯ ಬುಟ್ಟಿಯನ್ನು ತಲೆಯ ಮೇಲೆ ಹೊತ್ತು ಅಕ್ಕಿ, ದೀಪದ ಎಣ್ಣೆ, ಅಡುಣೆ ಎಣ್ಣೆ, ವಿವಿಧ ಬಗೆಯ ತರಕಾರಿ, ಹೂವು, ಹಣ್ಣುಗಳು ಸೇರಿದಂತೆ ವಿವಿಧ ಸಾಮಾಗ್ರಿಗಳನ್ನು ಈಶ್ವರನಿಗೆ ಅರ್ಪಿಸಿದರು. ಚಂಡೆಮೇಳದೊಂದಿಗೆ ನಡೆದ ಮೆರವಣಿಗೆಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮಹಾಪೂಜೆಯ ನಂತರ ನೆರೆದಿದ್ದ ಭಕ್ತರಿಗೆ ಅನ್ನದಾನ ನಡೆಯಿತು. ಶಿವರಾತ್ರಿ ಜಾಗರಣೆಯ ಅಂಗವಾಗಿ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಪೌರಾಣಿಕ ಯಕ್ಷಗಾನ…






