ಲೇಖಕ: admin

ಮಡಿಕೇರಿ ಮಾ.9 NEWS DESK : ವಿರಾಜಪೇಟೆಯ ಗೌರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ  ಸುಜಾ ಕುಶಾಲಪ್ಪ,  ವಿಧಾನ ಪರಿಷತ್  ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟರಾಜಾ, ನಗರದ ಎಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ನಾಗರಿಕರು ಹಾಜರಿದ್ದರು.

Read More

ಮಡಿಕೇರಿ ಮಾ.9 NEWS DESK : ಸೋಮವಾರಪೇಟೆ ತಾಲ್ಲೂಕಿನ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಚಮ್ಮನ ಬಾಣೆಯಲ್ಲಿ 10 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್  ಹಾಗೂ ಕಾಂಗ್ರೆಸ್ ಮುಖಂಡರುಗಳು, ಕಾರ್ಯಕರ್ತರು, ಸ್ಥಳೀಯರು  ಹಾಜರಿದ್ದರು.

Read More

ಸುಂಟಿಕೊಪ್ಪ ಮಾ.9 NEWS DESK : ಕಂಬಿಬಾಣೆ ಶ್ರೀ ರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಾಲಯದ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಪ್ರಭಾಕರ್ ಕುದ್ದಣ್ಣಯ್ಯ ಅವರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ, ಅಲಂಕಾರ ಪೂಜೆ, ಹೂವಿನ ಪೂಜೆ, ನೈವೇದ್ಯ ಪೂಜೆ ನಡೆದು ನಂತರ ನೆರದಿದ್ದ ನೂರಾರು ಭಕ್ತರ ಸಮ್ಮುಖದಲ್ಲಿ ಸತ್ಯನಾರಾಯಣ ಪೂಜೆ ನಡೆಯಿತು. ಮಹಾಪೂಜೆ, ಮಹಾಮಂಗಳಾರತಿ ನಂತರ ನೆರೆದದ್ದ ಭಕ್ತಾಧಿಗಳಿಗೆ ತೀರ್ಥಪ್ರಸಾದ ಅನ್ನಸಂತರ್ಪಣೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಡಾ.ಶಶಿಕಾಂತ್ ರೈ, ಕಾರ್ಯದರ್ಶಿ ಗಣೇಶ್, ಖಜಾಂಚಿ ಅಜಿತ್ ಹಾಗೂ ಸಮಿತಿಯ ಪದಾಧಿಕಾರಿಗಳಾದ ಜಯಂತ್, ರವಿ, ಸುಬ್ರಯ, ಚಿದಾನಂದ, ಗಂಗಾಧರ, ಮಂಜುನಾಥ್ ರೈ ಸೇರಿದಂತೆ ಇತರರು ಹಾಜರಿದ್ದರು. ಸುಂಟಿಕೊಪ್ಪ, ಕೊಡಗರಹಳ್ಳಿ, ಪನ್ಯ, ಉಪ್ಪುತೋಡು, ಕಂಬಿಬಾಣೆ, ಕುಶಾಲನಗರದಿಂದ ಭಕ್ತರು ಆಗಮಿಸಿ ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾಗಿದ್ದರು. ಸಮೀಪದ ಕೊಡಗರಹಳ್ಳಿ, ಶ್ರೀ ಬೈತೂರಪ್ಪ ಪೂವ್ವದಿ, ಬಸವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಆರಾಧನೆ ನಡೆಯಿತು. ನಂತರ ಮಹಾಮಂಗಳಾರತಿ,…

Read More

ಸುಂಟಿಕೊಪ್ಪ ಮಾ.9 NEWS DESK : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಮತ್ತು ಸುಂಟಿಕೊಪ್ಪ ಕೊಡವ ಕೂಟದ ಲೋಪಮುದ್ರೆ ಪೊಮ್ಮಕ್ಕಡ ಸಂಘದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸುಂಟಿಕೊಪ್ಪ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಪದ್ಮಶ್ರೀ ಪುರಸ್ಕøತರಾದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಹಿರಿಯ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷ ಬಾಚರಣಿಯಂಡ ರಾಣು ಅಪ್ಪಣ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಂಟಿಕೊಪ್ಪ ಸಮಾಜದ ಅಧ್ಯಕ್ಷರಾದ ಕೇಂದ್ರಿಮಾಡ ಡಾಲಿ ಕರುಂಬಯ್ಯ ಮತ್ತು ಲೋಪಮುದ್ರ ಪೊಮ್ಮಕ್ಕಡ ಸಂಘದ ಮಾಜಿ ಅಧ್ಯಕ್ಷರಾದ ಬೊಳಂದಡ ಸರೋಜಿನಿ ದೇವಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಕುರಿತು ವಿಚಾರ ಮಂಡನೆ, ಉಮ್ಮತಾಟ್, ಹಾಸ್ಯಮಂಜರಿ, ವಾಲತ್ತಾಟ್ ಪೈಪೋಟಿ ಸೇರಿದಂತೆ ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹೊರತಂದ ಪುಸ್ತಕಗಳು ಮಾರಾಟ ನಡೆಯಿತು.…

Read More

ನಾಪೋಕ್ಲು ಮಾ.9 NEWS DESK : ನದಿ ಮತ್ತು ನದಿ ಮೂಲಗಳಿಂದ ಪಂಪ್ ಸೆಟ್ ಬಳಸಿ ನೀರು ತೆಗೆಯುವುದನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ್ದು. ಕಾಫಿ ಬೆಳೆಗಾರ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಕೃಷಿ ಮೋರ್ಚಾ ಮತ್ತು ಕಾಫಿ ಬೆಳೆಗಾರರು ನಾಪೋಕ್ಲು ಉಪತಾಹಸಿಲ್ದಾರ್ ಸುನಿಲ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಮನವಿ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಚಾಳಿಯಂಡ ಜಗದೀಶ್ ಮಾತನಾಡಿ , ಕೊಡಗಿನಲ್ಲಿ ಕಾಫಿ ಬೆಳೆಯನ್ನು ನಂಬಿಕೊಂಡು ಹೆಚ್ಚಿನ ಸಂಖ್ಯೆಯ ಬೆಳೆಗಾರರು ಹಾಗೂ ಕಾರ್ಮಿಕರು ಜೀವನ ಸಾಗಿಸುತ್ತಿದ್ದಾರೆ. ವರ್ಷಕ್ಕೆ ಒಂದು ಬಾರಿ ಕಾಫಿ ತೋಟಕ್ಕೆ ನೀರು ಹಾಯಿಸುವ ಸಮಯ ಇದಾಗಿದೆ. ಆದರೆ ಇದೀಗ ಜಿಲ್ಲಾಡಳಿತ ಏಕಾಏಕಿ ನದಿ ಮೂಲಗಳಿಂದ ನೀರು ತೆಗೆಯದಂತೆ ಆದೇಶ ಹೊರಡಿಸಿದ್ದು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ ಎಂದರು. ಕಾಫಿ ಬೆಳೆಗಾರರ ಒಕ್ಕೂಟದ ಹೋಬಳಿ ಅಧ್ಯಕ್ಷ ಕುಡ್ಯೋಳಂಡ ರಮೇಶ್ ಮುದ್ದಯ್ಯ ಮಾತನಾಡಿ, ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಿಂದ ಬೆಳೆಗಾರರು ಕಂಗಾಲಾಗಿದ್ದಾರೆ.…

Read More

ನಾಪೋಕ್ಲು ಮಾ.9 NEWS DESK : ಬೊಟ್ಟೊಳ೦ಡ ಕುಟುಂಬಸ್ಥರು ಆಯೋಜಿಸಿರುವ ಕೊಡವ ಕುಟುಂಬಗಳ ನಡುವಿನ ಹಗ್ಗ ಜಗ್ಗಾಟ ಸ್ಪರ್ಧೆಯು ಏ.18 ರಿಂದ 21ರವರೆಗೆ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿಯ ಅಧ್ಯಕ್ಷ ಬೊಟ್ಟೋಳಂಡ ಗಣೇಶ್ ಹೇಳಿದರು. ಶ್ರೀ ಭಗವತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಿದ ಕ್ರೀಡಾ ಸಮಿತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗಣೇಶ್, ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾದ ಸ್ಪರ್ಧೆಗಳಿದ್ದು, ಇದೀಗಾಗಲೇ ಹಲವು ಕುಟುಂಬಗಳು ನೊಂದಾವಣಿ ಮಾಡಿಕೊಂಡಿದೆ. ಬಾಕಿ ಉಳಿದ ಕುಟುಂಬಗಳು ಮಾ.15 ರ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭ ಸ್ಪರ್ಧಾ ಕಾರ್ಯಕ್ರಮದ ಬಗ್ಗೆ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಸಭೆಯಲ್ಲಿ ಸಂಚಾಲಕ ಮಿಟ್ಟು ಪೂಣಚ್ಚ, ಸದಸ್ಯರಾದ ರವಿ ಕರಂಬಯ್ಯ ,ಮದನ್, ಮೊಣ್ಣಪ್ಪ, ರಂಜಿ, ಆರ್ಯನ್, ಸುಜು ಹಾಗೂ ಕುಟುಂಬಸ್ಥರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಮಾ.9 NEWS DESK : ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಭಾರತದ ಸಂವಿಧಾನದಲ್ಲಿ ಮತದಾನ ಪ್ರಕ್ರಿಯೆ ಎಂಬುದು ಎಷ್ಟು ಮುಖ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಯಿತು. ಪ್ರತಿಯೊಬ್ಬರು ಮತದಾನವನ್ನು ಕಡ್ಡಾಯವಾಗಿ ಮಾಡಬೇಕು. ಜಾತಿ, ಪಕ್ಷ, ಭೇದವನ್ನು ಮರೆತು ಉತ್ತಮ ವ್ಯಕ್ತಿಗಳನ್ನು ಬೆಂಬಲಿಸಬೇಕು ಎಂದು ತಿಳಿಸಲಾಯಿತು. ಮತದಾನ ಜಾಗೃತಿ ಕುರಿತಾಗಿ ದ್ವಿತೀಯ ಬಿಕಾಂ ವಿದ್ಯಾರ್ಥಿಗಳಾದ ಕುಮಾರಿ ದೇಚಮ್ಮ ಹಾಗೂ ಅರ್ಜುನ್ ಮಾತನಾಡಿದರು. ಅಲ್ಲದೆ ಪ್ರಾಂಶುಪಾಲರಾದ ಡಾ. ರೇಖ ಚಿಣ್ಣಪ್ಪ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಹಾಗೂ ಎಲ್ಲಾ ವಿದ್ಯಾರ್ಥಿಗಳಿಂದ ಹಾಗೂ ಉಪನ್ಯಾಸಕರಿಂದ ” I ಗಿಔಖಿಇ” ಫಲಕಕ್ಕೆ ಸಹಿ ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಮಾ.8 NEWS DESK : ಕೂಡಿಗೆಯಲ್ಲಿ ನೀರುಪಾಲಾಗಿದ್ದ ಮೂವರು ಯುವಕರ ಕುಟುಂಬಕ್ಕೆ ಶಾಸಕ ಡಾ.ಮಂತರ್ ಗೌಡ ಸಾಂತ್ವನ ಹೇಳಿದರು. ಕುಶಾಲನಗರ ಆಸ್ಪತ್ರೆ ಮತ್ತು ಯುವಕರ ಮನೆಗೆ ಭೇಟಿ ನೀಡಿದ ಶಾಸಕ ಡಾ.ಮಂತರ್ ಗೌಡ,  ಮೃತರ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಸಾಂತ್ವನ ಹೇಳಿ, ಸಂಭಂದಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿದರು.

Read More

ಮಡಿಕೇರಿ ಮಾ.8 NEWS DESK : ಕೊಡಗು ಜಿಲ್ಲೆಯಾದ್ಯಂತ ಮಹಾ ಶಿವರಾತ್ರಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಎಲ್ಲಾ ದೇವಾಲಯಗಳಲ್ಲಿ ಶಿವ ಆರಾಧನೆ ಶ್ರದ್ಧಾಭಕ್ತಿಯಿಂದ ನಡೆಯಿತು. ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಶ್ರೀಓಂಕಾರೇಶ್ವರ ದೇವಾಲಯ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಹೋಮ ಹವನಾದಿ, ಅಭಿಷೇಕ, ಮಂತ್ರ ಪಠಣ, ಅಲಂಕಾರ ಪೂಜೆ, ಮಹಾಪೂಜೆ ಸೇರಿದಂತೆ ವಿಶೇಷ ಧಾರ್ಮಿಕ ಕೈಂಕರ್ಯಗಳೊಂದಿಗೆ ಶಿವನನ್ನು ಪೂಜಿಸಲಾಯಿತು. ಭಕ್ತರು ಉಪವಾಸ ವ್ರತದೊಂದಿಗೆ ಶಿವ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ದೇವಾಲಯಗಳಲ್ಲಿ ಜಾಗರಣೆ ಪ್ರಯುಕ್ತ ಭಜನೆ ಮತ್ತು ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಡಿಕೇರಿ ಸಮೀಪದ ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಮಹಾ ಶಿವರಾತ್ರಿ ಆಚರಣೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರುಗಿತು. ಶಿವರಾತ್ರಿ ಹಿನ್ನೆಲೆ ದೇವಾಲಯದಲ್ಲಿ ಬೆಳಗ್ಗಿನಿಂದಲೇ ವಿಶೇಷ ಪುಜಾ ಕೈಂಕರ್ಯಗಳು ನೆರವೇರಿತು. ಗ್ರಾಮದ 8 ದಿಕ್ಕುಗಳಿಂದ ಈಶ್ವರ ಆರಾಧನೆಯ ವಿಶೇಷ ಸೇವೆಯಾಗಿ ಹೊರೆ ಕಾಣಿಕೆ ಮೆರವಣಿಗೆ ಆಕರ್ಷಣಿಯವಾಗಿ ನಡೆಯಿತು. ಗ್ರಾಮದ 8 ದಿಕ್ಕುಗಳಿಂದ ಮಹಿಳೆಯರು…

Read More

ಮಡಿಕೇರಿ ಮಾ.8 NEWS DESK : ಕೊಡಗಿನ ವೀರ ಪುತ್ರ, ವೀರಸೇನಾನಿ ಪದ್ಮಭೂಷಣ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಅತ್ಯಾಕರ್ಷಕವಾದ ಮತ್ತು ಯುವ ಸಮೂಹಕ್ಕೆ ಪ್ರೇರಣಾ ದಾಯಕವಾದ ನೂತನ ಪ್ರತಿಮೆಯನ್ನು ಶುಕ್ರವಾರದಂದು ನಗರದಲ್ಲಿ ಸಕಲ ಗೌರವಗಳೊಂದಿಗೆ ಮರುಸ್ಥಾಪನೆ ಮಾಡಲಾಯಿತು. ಜಿಲ್ಲಾಡಳಿತ, ನಗರಸಭೆಯ ಉಸ್ತುವಾರಿಯಲ್ಲಿ ನಿರ್ಮಾಣಗೊಂಡ ನೂತನ ವೃತ್ತದಲ್ಲಿ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಪ್ರತಿಮೆಯನ್ನು, ಪುಷ್ಪನಮನದ ಮೂಲಕ ಏರ್ ಮಾರ್ಷಲ್ ನಂದಾ ಕಾರ್ಯಪ್ಪ ಅವರು ಅನಾವರಣಗೊಳಿಸಿದರು. ನೂತನ ಪ್ರತಿಮೆ ಅನಾವರಣದ ಸಂದರ್ಭ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭ ಐದು ದಶಕಗಳ ಹಿಂದೆ ಜ.ತಿಮ್ಮಯ್ಯ ಅವರ ಪ್ರತಿಮೆ ಸ್ಥಾಪನೆಗೆ ಕಾರಣರಾಗಿದ್ದ ಮಾಜಿ ಸಚಿವ ಎಂ.ಸಿ. ನಾಣಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಎಂಎಲ್‍ಸಿ ವೀಣಾ ಅಚ್ಚಯ್ಯ, ಮಡಿಕೇರಿ ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಫೀ.ಮಾ. ಕಾರ್ಯಪ್ಪ ಮತ್ತು…

Read More