ಮಡಿಕೇರಿ ಮಾ.29 : ಪ್ರತಿ ಸೋಮವಾರದ ಸಂತೆ ದಿನ ಸುಮಾರು 5 ಸಾವಿರ ಮಂದಿ ಸೇರುವ ನಾಪೋಕ್ಲು ಮಾರುಕಟ್ಟೆ ಶಿಥಿಲಾವಸ್ಥೆಯಲ್ಲಿದೆ. ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ಗ್ರಾ.ಪಂ ನಿರ್ಲಕ್ಷ್ಯ ವಹಿಸಿದರೆ ಮುಂದೆ ಅಪಾಯ ಕಾದಿದೆ ಎಂದು ಗ್ರಾಹಕರು ಹಾಗೂ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಸುಮಾರು 20 ವರ್ಷಗಳ ಹಿಂದೆ ಮಡಿಕೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆರ್.ಐ.ಡಿ.ಎಫ್ ಸಹಾಯ ಧನದಡಿಯಲ್ಲಿ ನಾಪೋಕ್ಲು ಗ್ರಾಮೀಣ ಸಂತೆ ನಿರ್ಮಾಣಗೊಂಡಿತು. ಒಟ್ಟು 16 ಬೃಹತ್ ಕಬ್ಬಿಣದ ಕಂಬಗಳ ಮೂಲಕ ಮೇಲ್ಚಾವಣಿ ಅಳವಡಿಸಿ ಕಟ್ಟೆಗಳನ್ನು ನಿರ್ಮಿಸಿ ಸುಸಜ್ಜಿತವಾಗಿಯೇ ಅಂದು ಮಾರುಕಟ್ಟೆಯನ್ನು ಗ್ರಾಹಕರು ಹಾಗೂ ವ್ಯಾಪಾರಿಗಳ ಅನುಕೂಲಕ್ಕಾಗಿ ಅರ್ಪಿಸಲಾಯಿತು. ಆದರೆ ಇಂದು ಮಾರುಕಟ್ಟೆಯ ಕಬ್ಬಿಣದ ಕಂಬಗಳು ಶಿಥಿಲಾವಸ್ಥೆಗೊಂಡಿದ್ದು, ಬೀಳುವ ಹಂತಕ್ಕೆ ತಲುಪಿದೆ. ತಳಭಾಗದಲ್ಲಿ ಕಂಬಗಳು ಶೇ.80 ರಷ್ಟು ತುಕ್ಕು ಹಿಡಿದಿವೆ. ಜೋರಾಗಿ ಗಾಳಿ ಬಂದರೂ ಕಂಬಗಳು ಮುರಿದು ಮೇಲ್ಚಾವಣಿ ನೆಲಕಚ್ಚುವ ಸಾಧ್ಯತೆಗಳಿದೆ. ವಾರದ ಸಂತೆ ದಿನವಾದ ಪ್ರತಿ ಸೋಮವಾರ ಸುಮಾರು 5 ಸಾವಿರ ಮಂದಿ ಮಾರುಕಟ್ಟೆಗೆ ಬಂದು ಹೋಗುತ್ತಾರೆ. ಮಾರುಕಟ್ಟೆ…
ಲೇಖಕ: admin
ಮಡಿಕೇರಿ ಮಾ.29 NEWS DESK : ವಿಶ್ವ ಕನ್ನಡ ಸಾಂಸ್ಕೃತಿಕ ಹಾಗೂ ಕಲಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಹಿಳಾ ಸಮಾವೇಶದಲ್ಲಿ ಮಡಿಕೇರಿಯ ಭರತ ನಾಟ್ಯ ಕಲಾವಿದೆ ಕಾವ್ಯಶ್ರೀ ಕಪಿಲ್ ಅವರಿಗೆ ಶಿವ ಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಪ್ರಸ್ತುತ ಬಾಲಭವನದಲ್ಲಿ ಭರತನಾಟ್ಯ ತರಗತಿ ನಡೆಸುತ್ತಿದ್ದಾರೆ.
ಸೋಮವಾರಪೇಟೆ ಮಾ.29 NEWS DESK : ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯ ಗೋಪಾಲಪುರ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶದ್ಧಾಭಕ್ತಿಯಿಂದ ಆಚರಿಸಲಾಯಿತು. ಸಂತ ಅಂತೋಣಿ ಚರ್ಚ್ ನ ಫಾದರ್ ಜಾಕಪ್ ಕೊಳನೂರು ಅವರು ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಯೇಸು ಕ್ರಿಸ್ತನು ವಿಶ್ವದ ಒಳಿತಿಗಾಗಿ ಶಿಲುಬೆಯಲ್ಲಿ ಮರಣ ಹೊಂದಿದ ಕುರಿತು ವಿವರಿಸಿದರು. ಹೆಚ್ಚಿನ ಸಂಖ್ಯೆಯ ಕ್ರೈಸ್ತ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ಸೋಮವಾರಪೇಟೆ ಮಾ.29 NEWS DESK : ಸೋಮವಾರಪೇಟೆಯ ಜಯವೀರಮಾತೆ ಚರ್ಚ್ ವತಿಯಿಂದ GOOD FRIDAY ಪ್ರಯುಕ್ತ ಪಟ್ಟಣದಲ್ಲಿ ಶಾಂತಿ ಮೆರವಣಿಗೆ ಶುಕ್ರವಾರ ನಡೆಯಿತು. ಜೇಸಿ ವೇದಿಕೆಯಲ್ಲಿ ಚರ್ಚ್ನ ಸಹಾಯಕ ಧರ್ಮಗುರು ಜಾನ್ ಫರ್ನಾಂಡಿಸ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಜೇಸಿ ವೇದಿಕೆಯಲ್ಲಿ ಯೇಸು ಕ್ರಿಸ್ತನನ್ನು ಶಿಲುಬೆಗೇರಿಸುವ ರೂಪಕ ನೋಡುಗರನ್ನು ಅರ್ಕಷಿಸಿತು. ಏಸು ಕ್ರಿಸ್ತನನ್ನು ರೋಮನ್ ಸೈನಿಕರು ಥಳಿಸುವ ದೃಶ್ಯಗಳು ಮೆರವಣಿಗೆಯಲ್ಲಿ ಸಾಗಿತು. ಮೆರವಣಿಗೆಯಲ್ಲಿ ಪ್ರಮುಖರಾದ ಶೀಲಾ ಡಿಸೋಜ, ಮಾರ್ಷಲ್ ಲೋಬೋ, ಸುನಿಲ್, ಪ್ರಿನ್ಸ್, ಮರ್ವಿನ್, ಲಾರೆನ್ಸ್ ಮತ್ತಿತರರು ಇದ್ದರು.
ಸೋಮವಾರಪೇಟೆ ಮಾ.29 NEWS DESK : ಕಾಫಿ ಮಂಡಳಿ ಮತ್ತು ಭುವನ ಮಂದಾರ ರೈತ ಉತ್ಪಾದಕ ಸಂಸ್ಥೆ ಸಹಯೋಗದೊಂದಿಗೆ ಈ ಕಾಮ್ ಕಮಾಡಿಟೀಸ್ ವತಿಯಿಂದ ಮಣ್ಣು ಪರೀಕ್ಷೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ಸಮಾಜ ಸಭಾಂಗಣದಲ್ಲಿ ಈಚೆಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಈ ಕಾಮ್ ಕಂಪನಿಯ ಮುಖ್ಯಸ್ಥರಾದ ಡಾ. ಚಂಗಲ ರಾಯಪ್ಪ ಅವರು ಸುಸ್ಥಿರ ಕಾಫಿ ಕೃಷಿಯಲ್ಲಿ ಮಣ್ಣಿನ ಮಹತ್ವದ ಬಗ್ಗೆ ಹಾಗೂ ಅಂತರರಾಷ್ಟ್ರಿಯ ಮಾರುಕಟ್ಟೆ ಯಲ್ಲಿ ಭಾರತೀಯ ಕಾಫಿಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಕಾಫಿ ಮಂಡಳಿಯ ಉಪನಿರ್ದೇಶಕರಾದ ಡಾ. ಚಂದ್ರಶೇಖರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಫಿ ಬೆಳೆಗಾರರಿಗೆ ಕಾಫಿ ಮಂಡಳಿಯಿAದ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಭುವನ ಮಂದಾರ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಮಾತನಾಡಿ, ಮಣ್ಣು ಪರೀಕ್ಷೆ ಮಾಡಿ, ವರದಿಯ ಆಧಾರದ ಮೇಲೆ ನಿಗದಿತ ಪ್ರಮಾಣದಲ್ಲಿ ರಾಸಯನಿಕ ಗೊಬ್ಬರ ಹಾಕಿದರೆ ಉತ್ತಮ ಇಳುವರಿ ಸಾಧ್ಯ. ಈ ಕ್ರಮದಿಂದ ಉತ್ಪಾದನಾ ವೆಚ್ಚವೂ ಕಡಿಮೆಯಾಗಲಿದೆ ಎಂದು…
ಮಡಿಕೇರಿ ಮಾ.29 NEWS DESK : ದಂಪತಿ ಸಾವಿನಲ್ಲೂ ಒಂದಾದ ಘಟನೆ ಕುಶಾಲನಗರದ ವೆಂಕಟೇಶ್ವರ ಬಡಾವಣೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ವರ್ತಕ ಮಂಜುನಾಥ್ ಶೆಟ್ಟಿ ಅವರು ಮಾ.28 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪತಿಯ ಸಾವಿನಿಂದ ಬಹಳಷ್ಟು ನೊಂದಿದ್ದ ಮಂಜುನಾಥ್ ಅವರ ಪತ್ನಿ ಲೀಲಾವತಿ ಅವರು ಸಂಜೆ ವೇಳೆ ಮನೆಯಲ್ಲಿ ಅಸ್ವಸ್ಥರಾದರು. ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಬೆಳಿಗ್ಗೆ ಹೃದಯಾಘಾತಕ್ಕೊಳಗಾದ ಮಂಜುನಾಥ್ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟರು. ಮೃತ ದಂಪತಿ ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಂಪತಿ ಸಾವಿನ ಬಗ್ಗೆ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಮಾ.29 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲವು ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಿತು. ರಾತ್ರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಿಂದ ಭಂಡಾರ ಹೊರಟಿತು. ನಂತರ ಮೇಲೇರಿಗೆ ಅಗ್ನಿ ಸ್ಪರ್ಷ ನಡೆದು ಕುಲ್ಚಾಟ ಹೊರಡುವ ಧಾರ್ಮಿಕ ವಿಧಾನವೂ ನಡೆಯಿತು. ಇಂದು ಮುಂಜಾನೆ ಅಗ್ನಿ ಪ್ರವೇಶ, ಪ್ರಸಾದ ವಿತರಣೆ, ಮಾರಿಕಳ ಪ್ರವೇಶ ಹಾಗೂ ಮಾರಿಕಳದಿಂದ ಬಂದ ನಂತರ ಹರಕೆಯ ಸುರಿಗೆಗಳನ್ನು ಒಪ್ಪಿಸಲಾಯಿತು. ನಂತರ ಪ್ರಸಾದ ವಿತರಣೆ ನೆರವೇತು. ಸುತ್ತಮುತ್ತಲಿನ ಗ್ರಾಮಸ್ಥರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವರದಿ : ಕೀಲಾರು ಶರತ್, ಸಂಪಾಜೆ
ಮಡಿಕೇರಿ ಮಾ.29 NEWS DESK : ಲೋಕಸಭಾ ಚುನಾವಣೆ ಹಿನ್ನೆಲೆ ಗಡಿ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆಗಳನ್ನು ಕಾಪಾಡುವ ಸಲುವಾಗಿ ಅಂತರ ರಾಜ್ಯ ಮತ್ತು ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ನಡೆಯಿತು. ಚುನಾವಣಾ ಹಿನ್ನೆಲೆ ಕೊಡಗು, ಹಾಸನ, ಮೈಸೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ಗಡಿಭಾಗದ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವುದು ಮತ್ತು ಅಕ್ರಮ ಚಟುವಟಿಕೆಗಳು, ನಕ್ಸಲ್ ಚಟುವಟಿಕೆಗಳು, ಸಾಮಾಜಿಕ ವಿರೋಧಿ ಚಟುವಟಿಕೆ, ಕೋಮಗಲಭೆ, ಚೆಕ್ಪೋಸ್ಟ್ಗಳಲ್ಲಿ ತಪಾಸಣೆ, ರೌಡಿ ಆಸಾಮಿಗಳ ಮೇಲೆ ನಿಗಾವಣೆ ಹಾಗೂ ಇನ್ನಿತರೆ ವಿಷಯಗಳ ಕುರಿತು ವಿಸ್ತೃತ ಚರ್ಚೆಗಳು ನಡೆದವು. ಹಿರಿಯ ಅಧಿಕಾರಿಗಳ ಸೂಚನೆಯಂತೆ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ನಡೆದ ಸಭೆಯಲ್ಲಿ ನರೆಯ ಕೇರಳ ರಾಜ್ಯದ ಪೊಲೀಸ್ ಅಧಿಕಾರಿಗಳು, ಜಿಲ್ಲೆ ಮತ್ತು ಹೊರ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು. ವಿರಾಜಪೇಟೆಯಲ್ಲಿ ನಡೆದ ಸಭೆಯಲ್ಲಿ ಕೇರಳ ರಾಜ್ಯ ಇರಿಟ್ಟಿ ಎಎಸ್ಪಿ ಯೋಗೇಶ್ ಮಂಡಯ್ಯ, ಮನಂತವಾಡಿ ಡಿಎಸ್ಪಿ ಪಿ.ಬ್ರಿಜೇಶ್, ವಿರಾಜಪೇಟೆ ಉಪವಿಭಾಗದ…
ಮಡಿಕೇರಿ ಮಾ.29 NEWS DESK : ಪ್ರತಿಷ್ಠೆಯ ಕಣವಾಗಿರುವ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಮಾ.31 ರಂದು ವಿರಾಜಪೇಟೆ, ನಾಪೋಕ್ಲು ಮತ್ತು ಕುಶಾಲನಗರದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮ್ಮ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಿಗ್ಗೆ 10.30 ಗಂಟೆಗೆ, ನಾಪೋಕ್ಲು ಕೊಡವ ಸಮಾಜದಲ್ಲಿ ಮಧ್ಯಾಹ್ನ 1.30 ಕ್ಕೆ ಮತ್ತು ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಹೇಳಿದ್ದಾರೆ. ಸಮಾವೇಶದಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಭೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು ಹಾಗೂ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ತನ್ವೀರ್ ಸೇಠ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ ಹಾಗೂ, ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ…
ಮಡಿಕೇರಿ ಮಾ.29 NEWS DESK : ಸುಂಟಿಕೊಪ್ಪ ಸಮೀಪದ ಹರದೂರಿನಲ್ಲಿ ವರ್ಷಂಪ್ರತೀ ನಡೆಸಿಕೊಂಡು ಬರುತ್ತಿರುವ ಶ್ರೀ ಆದಿ ನಾಗ ಬ್ರಹ್ಮ ಮೊಗೇರ ದೈವಗಳ ಮತ್ತು ಕೊರಗ ತನಿಯ ದೈವದ ಹಾಗೂ ಮಂತ್ರವಾದಿ ಗುಳಿಗನ ನೇಮೋತ್ಸವವು ಏ.6 ಮತ್ತು ಏ.7 ರಂದು ನಡೆಯಲಿದೆ. ಏ.3 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ, ಏ.6 ರಂದು ಮಧ್ಯಾಹ್ನ 12 ಗಂಟೆಗೆ ಆಯುಧಾ ಪೂಜೆ, ಸಂಜೆ 5 ಗಂಟೆಗೆ ನಿತ್ಯ ಪೂಜೆ ಮತ್ತು ಭಂಡಾರ ಹೊರಡುವುದು, ಸಂಜೆ 6 ಗಂಟೆಗೆ ಮಂತ್ರವಾದಿ ಗುಳಿಗನ ನೇಮ, ರಾತ್ರಿ 9.30 ಗಂಟೆಗೆ ಶ್ರೀ ಆದಿ ನಾಗ ಬ್ರಹ್ಮ ಮೊಗೇರ ದೈವಗಳ ಗರಡಿ ಇಳಿಯುವುದು, ರಾತ್ರಿ 9 ಗಂಟೆಗೆ ಸಾರ್ವಜನಿಕ ಅನ್ನದಾನ ನೆರವೇರಲಿದೆ. ರಾತ್ರಿ 12.30 ಗಂಟೆಗೆ ಆದಿ ಮಾಯೆ ತನ್ನಿ ಮಾನಿಗ ಗರಡಿ ಇಳಿಸಲಾಗುವುದು. ಏ.7 ರಂದು ಬೆಳಗ್ಗೆ 4.30 ಗಂಟೆಗೆ ಹರಕೆ ಮತ್ತು ಕಾಣಿಕೆ, ಬೆಳಗ್ಗೆ 8 ಗಂಟೆಗೆ ಶ್ರೀ ಕೊರಗ ತನಿಯ ದೈವದ ನೇಮ…






