ಮಡಿಕೇರಿ ಮಾ.8 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಸ್ಕೌಟ್ ಮತ್ತು ಗೈಡ್ಸ್ ಇವರ ಸಹಯೋಗದೊಂದಿಗೆ “ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ” 2023-24 ನೇ ಸಾಲಿನ ಮಿಶನ್ ಶಕ್ತಿ ಯೋಜನೆಯ “ಬೇಟಿ ಬಚಾವೋ- ಬೇಟಿ ಪಡಾವೋ” ಕಾರ್ಯಕ್ರಮದಡಿಯಲ್ಲಿ ಹೆಣ್ಣು ಮಕ್ಕಳಿಗೆ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ನಡೆಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ, ಸಿವಿಲ್ ನ್ಯಾಯಾಧೀಶ ಹೆಚ್.ಸಿ.ಶ್ಯಾಮ್ ಪ್ರಸಾದ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತg ಕೆ.ಟಿ.ಬೇಬಿ ಮ್ಯಾಥ್ಯೂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ್ ಮ್ಯಾರಥಾನ್ಗೆ ಹಸಿರು ಬಾವುಟವನ್ನು ಹಾರಿಸುವುದರ ಮುಖಾಂತರ ಚಾಲನೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ…
ಲೇಖಕ: admin
ಮಡಿಕೇರಿ ಮಾ.7 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾನೂನು ಸೇವಾ ಪ್ರಧಿಕಾರ, ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಶಾಲಾ/ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ಸ್ವಯಂ ರಕ್ಷಣಾ ತಂತ್ರಗಳ ಜಾಗೃತಿ ಕಾರ್ಯಕ್ರಮವು ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಿತು. ಮಡಿಕೇರಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ.ಜವರಪ್ಪ ಉದ್ಘಾಟಿಸಿ, ಮಾತನಾಡಿ ಹೆಣ್ಣು ಮಕ್ಕಳಿಗೆ ಸರ್ಕಾರ ಹಲವಾರು ಸುರಕ್ಷಿತ ಕಾನೂನುಗಳನ್ನು ಜಾರಿಗೊಳಿಸಿದ್ದು ಸದ್ಬಳಕೆ ಮಾಡಿಕೊಳ್ಳಿ, ಹೆಣ್ಣು ಮಕ್ಕಳು ತಿಳಿವಳಿಕೆ ಮತ್ತು ಎಚ್ಚರಿಕೆಯಿಂದಿರಬೇಕೆಂದು ತಿಳಿಸಿದರು. ಪೊಲೀಸ್ ಇಲಾಖೆಯ ಮಕ್ಕಳ ಸಹಾಯಕ ಕಲ್ಯಾಣಾಧಿಕಾರಿ ಸುಮತಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಮೇಲುಗೈ ಸಾಧಿಸಿದ್ದರು ತಾನಾಗಿಯೇ ತನ್ನ ಸಮಸ್ಯೆಗಳನ್ನು ತಾನೇ ತಂದೊಡ್ಡಿಕೊಳ್ಳುತ್ತಿರುವುದನ್ನು ನಾವು ಕಾಣಬಹುದು, ನಮ್ಮ ನೆರೆಹೊರೆಯವರಿಂದಲೇ, ಕುಟುಂಬಸ್ಥರಿಂದಲೇ ಸಮಸ್ಯೆ ಎದುರಿಸುತ್ತಿದ್ದು, ಜಾಗೃತಿವಹಿಸಿ ಸಮಸ್ಯೆಗಳೆದುರಾದಂತಹ ಪಕ್ಷದಲ್ಲಿ ಪೊಲೀಸ್ ಇಲಾಖೆಯ 112 ಸಹಾಯವಾಣಿಗೆ ಕರೆಮಾಡಿ…
ಮಡಿಕೇರಿ ಮಾ.8 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲ್ಲೂಕಿನ ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು, ಮೇಕೇರಿ, ಹಾಗೂ ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಸೇತುವೆ, ತಡೆಗೋಡೆ ಸೇರಿದಂತೆ ಸುಮಾರು 25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಪೆರಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಸೇತುವೆ ಕಾಮಗಾರಿ, ಹಾಗೆಯೇ ಚೆಂಬು ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ, ಆಟದ ಮೈದಾನ ನಿರ್ಮಾಣಕ್ಕಾಗಿ ಕ್ರೀಡಾಇಲಾಖೆಗೆ 4 ಎಕರೆ ಭೂಮಿ ಹಸ್ತಾಂತರ, ತಡೆಗೋಡೆ ಉದ್ಘಾಟನೆ, ಮದೆನಾಡು ಗ್ರಾ.ಪಂ.ವ್ಯಾಪ್ತಿಯ ಕಾಟಕೇರಿ ಬಳಿ 12.6 ಕೋಟಿ ರೂ ವೆಚ್ಚದಲ್ಲಿ 66/11 ಕೆವಿ ಸಾಮಥ್ರ್ಯದ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಭೂಮಿ ಪೂಜೆ, ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ 4 ಕೋಟಿ ರೂ ವೆಚ್ಚದ ರಸ್ತೆ ನಿರ್ಮಾಣ ಹೀಗೆ ವಿವಿಧ ಗ್ರಾ.ಪಂ.ಗಳಲ್ಲಿ ಹಲವು ಅಭಿವೃದ್ಧಿ…
ಮಡಿಕೇರಿ ಮಾ.8 NEWS DESK : ಕೊಡಗು ಜಿಲ್ಲೆಯಾದ್ಯಂತ ಮಹಾ ಶಿವರಾತ್ರಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಎಲ್ಲಾ ದೇವಾಲಯಗಳಲ್ಲಿ ಶಿವ ಆರಾಧನೆ ಶ್ರದ್ಧಾಭಕ್ತಿಯಿಂದ ನಡೆಯುತ್ತಿದೆ. ಮಡಿಕೇರಿ ನಗರದ ಶ್ರೀಓಂಕಾರೇಶ್ವರ ದೇವಾಲಯ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಹೋಮ ಹವನಾದಿ, ಅಭಿಷೇಕ, ಮಂತ್ರ ಪಠಣ, ಅಲಂಕಾರ ಪೂಜೆ, ಮಹಾಪೂಜೆ ಸೇರಿದಂತೆ ವಿಶೇಷ ಧಾರ್ಮಿಕ ಕೈಂಕರ್ಯಗಳೊAದಿಗೆ ಶಿವನನ್ನು ಪೂಜಿಸಲಾಗುತ್ತಿದೆ. ಭಕ್ತರು ಉಪವಾಸ ವ್ರತದೊಂದಿಗೆ ಶಿವ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ವಿವಿಧ ದೇವಾಲಯಗಳಲ್ಲಿ ಜಾಗರಣೆ ಪ್ರಯುಕ್ತ ಭಜನೆ ಮತ್ತು ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಮಡಿಕೇರಿ ಮಾ.8 NEWS DESK : ಹಳೆ ಕೂಡಿಗೆ ಸಮೀಪ ಕಾವೇರಿ ನದಿಗೆ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಸಿಲುಕಿ ಮೃತಪಟ್ಟ ಯುವಕರ ಮೃತದೇಹಗಳು ಪತ್ತೆಯಾಗಿದೆ. ಮೂವರು ಯುವಕರಲ್ಲಿ ಚಿಕ್ಕತ್ತೂರಿನ ಶ್ರೀನಿವಾಸ್ ಅಲಿಯಾಸ್ ಅಪ್ಪು(23) ಮೃತದೇಹ ಗುರುವಾರ ಸಂಜೆ ಪತ್ತೆಯಾಗಿತ್ತು. ಸತತ ಕಾರ್ಯಾಚರಣೆಯ ಬಳಿಕ ಇಂದು ಬೆಳಗ್ಗೆ ಕಣಿವೆಯ ಹಕ್ಕೆ ಗ್ರಾಮದ ಸಚಿನ್(22) ಹಾಗೂ ಮುಳ್ಳುಸೋಗೆ ಜನತಾಕಾಲನಿಯ ವಿನೋದ್(23) ಅವರುಗಳ ಮೃತದೇಹ ಪತ್ತೆಯಾಗಿದೆ. ಐವರು ಸ್ನೇಹಿತರು ಕಾವೇರಿ ನದಿ ಬಳಿ ಕಾರು ನಿಲ್ಲಿಸಿ ಸ್ನಾನಕ್ಕೆ ತೆರಳಿದ ಸಂದರ್ಭ ಮೂವರು ಕೂಡ ಮೃತಪಟ್ಟಿದ್ದರು.
ಓಂ ಶಿವಾಯ ನಮಃ, ಓಂ ಸರ್ವಾತ್ಮನೇ ನಮಃ, ಓಂ ತ್ರಿನೇತ್ರಾಯ ನಮಃ, ಓಂ ಹರಾಯ ನಮಃ, ಓಂ ಇಂದ್ರಮುಖಾಯ ನಮಃ, ಓಂ ಶ್ರೀಕಂಠಾಯ ನಮಃ, ಓಂ ವಾಮದೇವಾಯ ನಮಃ, ಓಂ ತತ್ಪುರುಷಾಯ ನಮಃ, ಓಂ ಪ್ರಧಾನಾಯ ನಮಃ…. ಮಹಾಶಕ್ತನಾದ ಮಹಾಶಿವನು ನಿಮಗೆಲ್ಲರಿಗೂ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ, ಸರ್ವರಿಗೂ ಮಹಾ ಶಿವರಾತ್ರಿಯ ಶುಭಾಶಯಗಳು (ಅಪ್ರು ರವೀಂದ್ರ, ಅಧ್ಯಕ್ಷರು, ಹಿಂದುಳಿದ ವರ್ಗಗಳ ಮೋರ್ಚಾ, ಕೊಡಗು ಜಿಲ್ಲಾ ಬಿಜೆಪಿ)
ಭಗವಾನ್ ಶಿವನು ಶಕ್ತಿಯ ಮೂಲವಾಗಿದ್ದಾನೆ. ಸೃಷ್ಟಿಸುವ, ರಕ್ಷಿಸುವ, ನಾಶಪಡಿಸುವ ಮತ್ತು ರೂಪಾಂತರಿಸುವ ಸರ್ವೋಚ್ಚ ವ್ಯಕ್ತಿ ಶಿವ. ಮಹಾಶಿವನನ್ನು ಮಹಾಶಿವರಾತ್ರಿಯಂದು ಭಕ್ತಿಯಿಂದ ಆರಾಧಿಸೋಣ, ದೇಶದ ಅಭ್ಯುದಯಕ್ಕಾಗಿ ಪ್ರಾರ್ಥಿಸೋಣ. ನಾಡಿನ ಸಮಸ್ತ ಜನತೆಗೆ ಶಿವರಾತ್ರಿ ಹಬ್ಬದ ಶುಭಾಶಯಗಳು. (ಉಮೇಶ್ ಸುಬ್ರಮಣಿ, ಅಧ್ಯಕ್ಷರು, ಬಿಜೆಪಿ ಮಡಿಕೇರಿ ನಗರ ಮಂಡಲ)
“ಎಲ್ಲಾ ಆಡಂಬರಗಳಿಂದ ಮುಕ್ತರಾಗಿ, ಸರಳ ಮನಸ್ಸಿನಿಂದ ಶಿವನನ್ನು ನೆನದು, ಭಜಿಸಿ ಶಿವರಾತ್ರಿಯನ್ನು ಆಚರಿಸೋಣ. ಸರಳತೆ, ಪ್ರಾಮಾಣಿಕತೆ, ಸತ್ಯ ಮತ್ತು ಶಕ್ತಿಯ ದೇವತೆ ಈಶ್ವರ ಲೋಕದಲ್ಲಿರುವ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡಲಿ” ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು. (ತೇಲಪಂಡ ಶಿವಕುಮಾರ್ ನಾಣಯ್ಯ, ಸಂಚಾಲಕರು, ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ)
“ಮಹಾ ಶಿವನು ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸಲಿ” ಕೊಡಗಿನ ಸರ್ವ ಜನತೆಗೆ ಮಹಾಶಿವರಾತ್ರಿಯ ಶುಭಾಶಯಗಳು (ಪಿ.ಯು.ಕವನ್ ಕಾವೇರಪ್ಪ, ಪ್ರಧಾನ ಕಾರ್ಯದರ್ಶಿ, ಬಿಜೆಪಿ ಮಡಿಕೇರಿ ನಗರ ಮಂಡಲ)
“ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ ಅಮೃತೇಶಾಯ ಸರ್ವಾಯ ಮಹಾದೇವಾಯ ತೇ ನಮ:” ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು (ಪ್ರತಾಪ್ ಸಿಂಹ, ಸಂಸದರು, ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ)






