“ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿ ವರ್ಧನಂ ಉರ್ವಾರುಕ ಮಿವ ಬಂಧನಾನ್ ಮೃತ್ಯೋರ್ಮುಕ್ಷೀಯಮಾಮೃತಾತ್” ಸರ್ವರಿಗೂ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು ಮಹೇಶ್ ತಿಮ್ಮಯ್ಯ, ಜಿಲ್ಲಾಧ್ಯಕ್ಷರು, ಬಿಜೆಪಿ ಯುವ ಮೋರ್ಚಾ, ಕೊಡಗು ಜಿಲ್ಲೆ)
ಲೇಖಕ: admin
“ಕರಚರಣಕೃತಂ ವಾ ಕಾಯಜಂ ಕರ್ಮಜಂ ವಾ ಶ್ರವಣನಯನಜಂ ವಾ ಮಾನಸಾಪರಾಧಂ ವಾ ವಿಹಿತಂ ವಿಹಿತಂ ವಾ ಸರ್ವಮೇತತ್ ಕ್ಷಮಸ್ವ ಜಯ ಜಯ ಕರುಣಾಬ್ಧೇ ಶ್ರೀ ಮಹಾದೇವ ಶಂಭೋ” ಸಮಸ್ತ ಜನತೆಗೆ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು (ಪಾಂಡಿರ ಪೂಣಚ್ಚ, ಅಧ್ಯಕ್ಷರು, ಮಡಿಕೇರಿ ನಗರ ಬಿಜೆಪಿ ಯುವ ಮೋರ್ಚಾ)
“ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ: ಪ್ರಚೋದಯಾತ್” ಸರ್ವರಿಗೂ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು* (ಪ್ರಶಾಂತ್ ಭೀಮಯ್ಯ, ಕಾರ್ಯದರ್ಶಿ, ಕೊಡಗು ಜಿಲ್ಲಾ ಬಿಜೆಪಿ)
“ಓಂ ನಮೋ ಭಗವತೇ ರುದ್ರಾಯ” “ಓಂ ನಮಃ ಶಿವಾಯ” ನಿಮಗೆಲ್ಲರಿಗೂ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು* (ಚೆಪ್ಪುಡಿರ ರಾಕೇಶ್ ದೇವಯ್ಯ, ಅಧ್ಯಕ್ಷರು, ಕಿರುಗೂರು ಗ್ರಾಮ ಪಂಚಾಯಿತಿ, ವಕ್ತಾರರು, ಬಿಜೆಪಿ ವಿರಾಜಪೇಟೆ ಮಂಡಲ)
ಮಡಿಕೇರಿ ಮಾ.7 NEWS DESK : ಕೆಲವು ತಿಂಗಳುಗಳ ಹಿಂದೆ ಬಸ್ ಅಪಘಾತದಿಂದ ಹಾನಿಗೊಳಗಾಗಿದ್ದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಈಗ ಹೊಸ ಮೆರುಗು ಬಂದಿದೆ. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಅವರು ಮೈಸೂರಿಗೆ ತೆರಳಿ ಪ್ರತಿಮೆಯನ್ನು ಪರಿಶೀಲಿಸಿದರು. ಮಾ.8 ರಂದು ಪ್ರತಿಮೆ ಮೈಸೂರಿನಿಂದ ಮಡಿಕೇರಿಗೆ ಬರಲಿದ್ದು, ಅದ್ದೂರಿ ಸ್ವಾಗತ ದೊರೆಯಲಿದೆ. ನಂತರ ಅಭಿವೃದ್ಧಿಗೊಂಡಿರುವ ನೂತನ ವೃತ್ತದಲ್ಲಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ಅನಾವರಣಗೊಳ್ಳಲಿದ್ದು, ಸಕಲ ಗೌರವ ಸಲ್ಲಿಸಲಾಗುವುದು ಎಂದು ಅನಿತಾ ಪೂವಯ್ಯ ತಿಳಿಸಿದ್ದಾರೆ.
ಮಡಿಕೇರಿ ಮಾ.7 NEWS DESK : ಕಾವೇರಿ ನದಿಗೆ ಸ್ನಾನಕ್ಕಿಳಿದ ಮೂವರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಳೆ ಕೂಡಿಗೆ ಬಳಿ ನಡೆದಿದೆ. ಚಿಕ್ಕತ್ತೂರಿನ ಶ್ರೀನಿವಾಸ್ ಅಲಿಯಾಸ್ ಅಪ್ಪು(24), ಕಣಿವೆಯ ಹಕ್ಕೆ ಸಚಿನ್(23) ಹಾಗೂ ಮುಳ್ಳುಸೋಗೆ ಜನತಾಕಾಲನಿ ವಿನೋದ್(24) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಐವರು ಸ್ನೇಹಿತರು ಕಾವೇರಿ ನದಿ ಬಳಿ ಕಾರು ನಿಲ್ಲಿಸಿ ಸ್ನಾನಕ್ಕೆ ತೆರಳಿದ ಸಂದರ್ಭ ಓರ್ವ ಆಳವಾದ ಪ್ರದೇಶದಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ತೆರಳಿದ ಮತ್ತೋರ್ವ ಮುಳುಗುವುದನ್ನು ನೋಡಿ ರಕ್ಷಿಸಲು ಇನ್ನೊಬ್ಬ ಸ್ನೇಹಿತ ಮುಂದಾದ ಸಂದರ್ಭ ಮೂವರೂ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಶೋಧ ಕಾರ್ಯ ನಡೆಸಿದರು. ಈ ವೇಳೆ ಶ್ರೀನಿವಾಸ್ ದೇಹ ಪತ್ತೆಯಾಗಿದ್ದು, ಕುಶಾಲನಗರ ಆಸ್ಪತ್ರೆಗೆ ಸಾಗಿಸಿದ ಸಂದರ್ಭ ಆತ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದ್ದಾರೆ. ಇನ್ನುಳಿದ ಇಬ್ಬರ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಈ ಘಟನೆ ಮಧ್ಯಾಹ್ನದ ವೇಳೆ ನಡೆದಿದ್ದು,…
ಮಡಿಕೇರಿ ಮಾ.7 NEWS DESK : ವಿರಾಜಪೇಟೆ ವಿಧಾಸಭಾ ಕೇತ್ರದ ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಪೆರಾಜೆ ಗ್ರಾ.ಪಂ ಕಚೇರಿಯಲ್ಲಿ ಪಂಚಾಯತ್ ವ್ಯಾಪ್ತಿಯ ಪುತ್ಯ ಪೆರಾಜೆ ಶಾಲೆಯ ಪಕ್ಕದಿಂದ ನಿಡ್ಯಮಲೆ ಲಿಂಕ್ ರಸ್ತೆಯ ಅಭಿವೃದ್ಧಿ, ಪೆರಂಗಾಜೆ ಕುಟುಂಬಸ್ಥರ ರಸ್ತೆ ಅಭಿವೃದ್ಧಿ, ಕುಂಡಾದು ರಸ್ತೆಯ ಪೀಚೆ ಕುಟುಂಬಸ್ಥರ ಮನೆಯ ಹತ್ತಿರ ರಸ್ತೆ ಅಭಿವೃದ್ಧಿ, ಪೇತಾಜೆ – ಪುಲ್ಲಾಜೆ ರಸ್ತೆ ಅಭಿವೃದ್ಧಿ, ಬಂಗಾರಕೋಡಿ – ಚಾಮಕಜೆ ಗಿರಿಜನ ಕಾಲೋನಿ ರಸ್ತೆ ಅಭಿವೃದ್ಧಿ, ಕನ್ನಡ ಪೆರಾಜೆ ರಸ್ತೆ ಅಭಿವೃದ್ಧಿ, ವ್ಯಯಾನಾಟು ಕುಲವಾನ್ ದೇವಸ್ಥಾನ ಅಭಿವೃದ್ಧಿ, ಪುತ್ಯ ಉಳ್ಳಾಕುಲು ದೇವಸ್ಥಾನದ ತಡೆ ಗೋಡೆ ನಿರ್ಮಾಣ, ಅಡ್ಕ ಕುಟುಂಬಸ್ಥರ ಐನ್ ಮನೆ ಪಕ್ಕ ತಡೆಗೋಡೆ, ಪೆರಂಗಾಜೆ ಕುಟುಂಬಸ್ಥರ ಐಎನ್ ಮನೆ ಅಭಿವೃದ್ಧಿ, ಪೆರಾಜೆ ಮಸೀದಿಯ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು. ಇದಕ್ಕು ಮೊದಲು ಚೆಂಬು…
ವಿರಾಜಪೇಟೆ ಮಾ.7 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಇತ್ತೀಚಿಗೆ ನಡೆದ ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣದಲ್ಲಿ ಕೊಡಗಿನ ಹಾಕತ್ತೂರಿನ ಸಿನಾನ್ ತಂಡಕ್ಕೆ ಬೆಸ್ಟ್ ಪೇಪರ್ ಪ್ರೆಸೆಂಟೇಷನ್ ಪ್ರಶಸ್ತಿ ಲಭಿಸಿದೆ. ಮೂಲತಃ ಕೊಡಗು ಜಿಲ್ಲೆಯ ಹಾಕತ್ತೂರಿನವರಾದ ಮೈಸೂರಿನ ಮಹಾರಾಜ ಇನ್ಸ್ಟಿಟ್ಯೂಟ್ ನ ಎಂ. ಬಿ.ಎ.ವಿದ್ಯಾರ್ಥಿ ಸಿನಾನ್ ಹಾಗೂ ಅದೇ ಕಾಲೇಜಿನ ಅಗಮ್ಯ ರುಬೆನ್ ಮಂಡಿಸಿದ ಎ ಸ್ಟಡಿ ಕಸ್ಟಮರ್ಸ್ ಟುವರ್ಡ್ಸ್ ಆನ್ಲೈನ್ ಶಾಪಿಂಗ್, ವಿಥ್ ಸ್ಪೆಷಲ್ ರೆಫರೆನ್ಸ್ ಟು ಅಮೆಜಾನ್ ಮೈಸೂರ್ ಸಿಟಿ ಎಂಬ ವಿಷಯಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಶರಣಪ್ಪ ವಿ.ಹಲಸೆ ಉತ್ತಮ ಸಂಶೋಧನೆ ಮಂಡನೆ ಪ್ರಶಸ್ತಿ ನೀಡಿ ಗೌರವಿಸಿದೆ. ಸಿನಾನ್ ಹಾಕತ್ತೂರುವಿನ ಎಂ.ಎಂ.ಅಬ್ಬಾಸ್ ಹಾಗೂ ಪಿ.ಹೆಚ್. ಹಜಾರ ದಂಪತಿಗಳ ಪುತ್ರ. ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಹಳೆ ವಿದ್ಯಾರ್ಥಿ.
ಮಡಿಕೇರಿ ಮಾ.7 NEWS DESK : ವೇತನ ಪಾವತಿಗಾಗಿ ಆಗ್ರಹಿಸಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಧರಣಿ ಏಳನೆಯ ದಿನವೂ ಮುಂದುವರೆಯಿತು. ನೂತನ ಕುಲಪತಿಗಳಾದ ಪ್ರೊ. ಪಿ.ಎಲ್.ಧರ್ಮ ಅವರು ಧರಣಿ ನಿರತ ಉಪನ್ಯಾಸಕರೊಂದಿಗೆ ದೂರವಾಣಿಯ ಮೂಲಕ ಮಾತನಾಡಿದರು. ಧರಣಿಯನ್ನು ಹಿಂತೆಗೆದುಕೊಳ್ಳಲು ಮನವಿ ಮಾಡಿದರು. ನಂತರ ಈ ಬಗ್ಗೆ ಚರ್ಚೆ ನಡೆಸಿದ ಉಪನ್ಯಾಸಕರು ವೇತನ ಪಾವತಿ ವ್ಯವಸ್ಥೆಯಲ್ಲಿ ಹಲವು ಗೊಂದಲಗಳು ಇರುವುದರಿಂದ, ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುವ ಅಧಿಕಾರಿಗಳೊಂದಿಗೆ ಮುಖತ: ಮಾತುಕತೆ ನಡೆಸಿ ನಿರ್ಧಾರಕ್ಕೆ ಬರಲು ಸಾಧ್ಯ ಎನ್ನುವ ಕಾರಣದಿಂದ ಧರಣಿಯನ್ನು ಮುಂದುವರೆಸಿದರು.
ಮಡಿಕೇರಿ ಮಾ.7 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶದಲ್ಲಿ ಸರ್ವರಿಗೂ ಸಮಾನ ಹಕ್ಕುಗಳನ್ನು ಸಂವಿಧಾನ ನೀಡಿದೆ. ಇದರ ಆಧಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಇದು ಹಕ್ಕುಗಳ ಪ್ರತಿಪಾದನೆಯೇ ಹೊರತು ಅಲ್ಪಸಂಖ್ಯಾತರ ಓಲೈಕೆಯಲ್ಲ ಎಂದು ತಿಳಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಅಭ್ಯುದಯ ಮತ್ತು ರಕ್ಷಣೆಗೆ ಆಡಳಿತ ವ್ಯವಸ್ಥೆ ಬದ್ಧವಾಗಿರಬೇಕೆನ್ನುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವಾಗಿದೆ. ಇದನ್ನು ಕಾಂಗ್ರೆಸ್ ಸರ್ಕಾರ ಪರಿಪಾಲನೆ ಮಾಡುತ್ತಿದೆಯೇ ಹೊರತು ಓಲೈಕೆ ರಾಜಕಾರಣ ಮಾಡುತ್ತಿಲ್ಲ. ವಿನಾಕಾರಣ ಸಂಸದರು ಧರ್ಮ ಆಧಾರಿತ ರಾಜಕಾರಣ ಮಾಡುತ್ತಿದ್ದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಲು ವಿಷಯಗಳಿಲ್ಲದೆ ಭಾವನಾತ್ಮಕವಾಗಿ ಮತದಾರರನ್ನು ಸೆಳೆಯುವ…






