ಕುಶಾಲನಗರ ಮಾ.28 NEWS DESK : ಕಾವೇರಿ ಕಾಲಿಂಗ್ ಸಂಸ್ಥೆಯ ಆಶ್ರಯದಲ್ಲಿ ಶಿವಮೊಗ್ಗದ ಯುವಕನೊಬ್ಬ ತಲಕಾವೇರಿಯಿಂದ ಪೂಂಪ್ ಹಾರ್ ತನಕ ಪಾದಯಾತ್ರೆ ಹಮ್ಮಿಕೊಂಡಿದ್ದು ಕುಶಾಲನಗರದಲ್ಲಿ ಕಾವೇರಿ ನದಿ ಸ್ವಚ್ಛತಾ ಅಭಿಯಾನ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ನದಿ ಜಲಮೂಲಗಳ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಅರಿವು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿವಮೊಗ್ಗ ಮೂಲದ ಯುವಕ ಶ್ರೇಯಸ್ ಕಳೆದ ಎರಡು ದಿನಗಳ ಹಿಂದೆ ಶ್ರೀ ಕ್ಷೇತ್ರ ತಲಕಾವೇರಿಯಿಂದ ಪಾದಯಾತ್ರೆ ಪ್ರಾರಂಭಿಸಿದ್ದು, ಎರಡು ತಿಂಗಳುಗಳ ಕಾಲ ಯಾತ್ರೆ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರಾದ ಎಂ ಎನ್ ಚಂದ್ರಮೋಹನ್, ಡಿ ಆರ್ ಸೋಮಶೇಖರ್ ಪ್ರದೀಪ್ ಕುಮಾರ್, ಸ್ಥಳೀಯ ಪತ್ರಕರ್ತರಾದ ವಿನೋದ್ ಜಯಪ್ರಕಾಶ್ ,ಶಂಶುದ್ದೀನ್ ಅವರುಗಳು ಗಣಪತಿ ದೇವಾಲಯದ ಬಳಿ ಬರಮಾಡಿಕೊಂಡರು.
ಲೇಖಕ: admin
ಮಡಿಕೇರಿ ಮಾ.28 NEWS DESK : ಕೊಡಗು ವಿಶ್ವವಿದ್ಯಾನಿಲಯದಲ್ಲಿ ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ ಎಂದು ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರ್ ತಿಳಿಸಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರ ನಡೆದ ಕೊಡಗು ವಿಶ್ವವಿದ್ಯಾನಿಲಯದ ಪ್ರಥಮ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯದಲ್ಲಿ ಹಲವು ಇತಿಮಿತಿಗಳ ನಡುವೆ ಧನಾತ್ಮಕ ಚಿಂತನೆ ಒಳಗೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಯುವಜನರಿಗೆ ಉದ್ಯೋಗ ಸೃಷ್ಟಿಯತ್ತ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಅಶೋಕ್ ಸಂಗಪ್ಪ ಆಲೂರ್ ಹೇಳಿದರು. ಕೊಡಗು ವಿಶ್ವವಿದ್ಯಾನಿಲಯದಲ್ಲಿ ಬಿಸಿಎ, ಎಂಸಿಎ, ಎಂಬಿಎ, ಪದವಿ, ಸ್ನಾತಕೋತ್ತರ ಪದವಿ ಆರಂಭಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ರವಿಮಾತನಾಡಿ ಕೊಡಗು ವಿಶ್ವವಿದ್ಯಾನಿಲಯವು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು. ಆ ನಿಟ್ಟಿನಲ್ಲಿ ಕಲೆ, ಸಾಹಿತ್ಯ, ವಿಜ್ಞಾನ, ತಂತ್ರಜ್ಞಾನ ಹಾಗೂ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಏಳು ವಿಶ್ವವಿದ್ಯಾನಿಲಯಗಳು ಸ್ಥಾಪನೆಯಾಗಿದ್ದು,…
ಮಡಿಕೇರಿ ಮಾ.28 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ 2024ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಧ್ಯಕ್ಷರಾಗಿ ಜಾನ್ಸನ್ ಪಿಂಟೋ ಆಯ್ಕೆಯಾಗಿದ್ದಾರೆ. ಗೌರವಧ್ಯಕ್ಷರಾಗಿ ಜೋಕಿಂ ವಾಸ್, ಕಾರ್ಯಾಧ್ಯಕ್ಷರಾಗಿ ವಿ.ಎ.ಲಾರೆನ್ಸ್, ಉಪಾಧ್ಯಕ್ಷರುಗಳಾಗಿ ವಿನ್ಸಿ ಡಿಸೋಜ, ಎ.ಜೆ.ಯೇಸುದಾಸ್, ಮೈಕಲ್, ಜೋಕಿಂ ರಾಡ್ರಿಗಸ್ ನೇಮಕಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಬೆನ್ನಿ ಅಗಸ್ಟಿನ್, ಮಹಿಳಾ ಉಪಾಧ್ಯಕ್ಷರಾಗಿ ಫಿಲೋಮಿನಾ, ಖಜಾಂಚಿಯಾಗಿ ಜೇಮ್ಸ್ ಕೆದಕಲ್, ಸಂಘಟನಾ ಕಾರ್ಯದರ್ಶಿಯಾಗಿ ಜೂಡಿವಾಸ್, ಸಹ ಕಾರ್ಯದರ್ಶಿಗಳಾಗಿ ಪ್ರವೀಣ್ ಡಿಸೋಜ, ವಿನ್ಸಿ ಪಿಂಟೊ, ರಾಬಿನ್ ಪೌಲ್, ಮ್ಯಾಥ್ಯು ಆನ್ಸಿ ನೇಮಕಗೊಂಡಿದ್ದಾರೆ. ಜಿಲ್ಲಾ ಸಂಚಾಲಕರುಗಳಾಗಿ ಜಾನ್ಸ್ನ್, ಅಂತೋಣಿ ಡಿಸೋಜ, ರೊಸ್ ಮೇರಿ ರಾಡ್ರಿಗಸ್, ಕ್ರೀಡಾ ಕಾರ್ಯದರ್ಶಿಯಾಗಿ ಅಂತೋಣಿ ಪ್ರಭುರಾಜ್, ಗೌರವ ಸಲಹೆಗಾರರಾಗಿ ಎಸ್.ಎಂ ಡಿಸಿಲ್ವಾ, ಜೋಸೆಫ್ ಸ್ಯಾಂ, ಅಗಸ್ಟಿನ್ ಜಯರಾಜ್, ಸಾರ್ವಜನಿಕ ಸಂಪರ್ಕಧಿಕಾರಿಯಾಗಿ ಮಾರ್ವಿನ್ಲೋಬೊ, ಮಾಧ್ಯಮಾ ಎಂ.ಬಿ.ವಿನ್ಸಂಟ್ ವಿನೋದ್, ಯೂತ್ ವಿಂಗ್ ಅಧ್ಯಕ್ಷರಾಗಿ ಪ್ರಶಾಂತ್ ಲೋಬೊ, ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಸಾರ್ಜೆಂಟ್ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪದ ಸಂತ ಅಂತೋಣಿ ಚರ್ಚ್ನಲ್ಲಿ ಸಮುದಾಯದ ಮುಖಂಡರ…
ಮಡಿಕೇರಿ ಮಾ.28 NEWS DESK : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸುಂಟಿಕೊಪ್ಪದ ಎಂ.ಎ.ಉಸ್ಮಾನ್ ಅವರು ಆಯ್ಕೆಯಾಗಿದ್ದಾರೆ. ಎಐಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಅವರ ಅನುಮೋದನೆ ಮೇರೆಗೆ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಅವರು ಎಂ.ಎ.ಉಸ್ಮಾನ್ ಅವರನ್ನು ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ.
ಮಡಿಕೇರಿ ಮಾ.28 NEWS DESK : ಕೂಜಿಮಲೆಯಲ್ಲಿ ಮಾ.27 ರಂದು ಕಾಣಿಸಿಕೊಂಡ ಅಪರಿಚಿತ ಮಹಿಳೆ ರಾಜಸ್ಥಾನದವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸ್ಪಷ್ಟಪಡಿಸಿದ್ದಾರೆ. ಕೊಡಗು ಮತ್ತು ದಕ್ಷಿಣ ಕನ್ನಡ ಗಡಿ ಭಾಗದಲ್ಲಿ ಕೆಲವು ದಿನಗಳ ಹಿಂದೆ ನಕ್ಸಲರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಈ ಹಂತದಲ್ಲೆ, ಕೂಜಿಮಲೆಯಲ್ಲಿ ಮಾ.27 ರಂದು ಅಪರಿಚಿತ ಮಹಿಳೆಯೊಬ್ಬರು ಕಾಣಿಸಿಕೊಂಡಿದ್ದರು. ಸ್ಥಳೀಯರು ಶಂಕಿತ ನಕ್ಸಲರು ಮತ್ತೆ ಬಂದಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ನಕ್ಸಲ್ ನಿಗ್ರಹ ದಳ, ಕೊಡಗು ಜಿಲ್ಲಾ ಸಶಸ್ತ್ರ ಪಡೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಜಿಮಲೆ ಎಸ್ಟೇಟ್ಗೆ ಭೇಟಿ ನೀಡಿ ಬುಧವಾರ ರಾತ್ರಿ ಪರಿಶೀಲನೆ ನಡೆಸಿದರು. ತಾನು ಕೂಡ ಸ್ಥಳಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿರುವ ಎಸ್ಪಿ ರಾಮರಾಜನ್ ಪತ್ತೆಯಾದ ಅಪರಿಚಿತ ಮಹಿಳೆ ಹಿಂದಿ ಭಾಷೆ ಬಳಸುತ್ತಿದ್ದು, ರಾಜಸ್ಥಾನದವಳೆಂದು ಹೇಳಿಕೊಂಡಿದ್ದಾರೆ. ಅಸ್ವಸ್ಥ ವ್ಯಕ್ತಿಯಂತೆ ಕಂಡು ಬರುತ್ತಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ವಶದಲ್ಲಿರುವ ಈಕೆಯನ್ನು ಆಸ್ಪತ್ರೆಗೆ ದಾಖಲಿಸಿ ನಂತರ ಆಶ್ರಮಕ್ಕೆ ಕಳುಹಿಸಲಾಗುವುದು…
ಮಡಿಕೇರಿ ಮಾ.28 NEWS DESK : ವಿಧಾನಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪರ ಕೆಲಸ ಮಾಡಿರುವುದು ನಿಜ, ಆದರೆ, ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ, ಇಂದಿಗೂ ಜೆಡಿಎಸ್ ಕಾರ್ಯಕರ್ತನಾಗಿದ್ದು, ನನ್ನ ಧೋರಣೆ ತಟಸ್ಥವಾಗಿದೆ ಎಂದು ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಅಭಿವೃದ್ಧಿ ಕಾರ್ಯಗಳು ಸಾಗದ ಕಾರಣ ಅಂದು ಕಾಂಗ್ರೆಸ್ನೊಂದಿಗೆ ಕೈಜೋಡಿಸುವ ಪರಿಸ್ಥಿತಿ ನಿರ್ಮಾಣವಾಯಿತು. ಇದರ ಭಾಗವಾಗಿ ಅಂದು ಡಿ.ಕೆ.ಶಿವಕುಮಾರ್ ಅವರು ಕಚೇರಿಗೆ ಕರೆಸಿ, ಶಾಲು ಹೊದಿಸಿ, ನೀವು ಏಕಾಏಕಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೀರಿ ಎಂದು ಹೇಳಿದರು. ನಾವು ಏನೂ ಉತ್ತರ ನೀಡಲಾಗಲಿಲ್ಲ. ನಂತರ ವಿಧಾನಸಭಾ ಚುನಾವಣೆ ಸಂದರ್ಭ ಕಾಂಗ್ರೆಸ್ ಪರ ಕೆಲಸ ಮಾಡಿದ್ದೇವೆ. ಇದರಿಂದ ಜೆಡಿಎಸ್ನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದೇನೆ. ಆದರೆ, ಇಂದಿಗೂ ನಾನು ಜೆಡಿಎಸ್ ನ ಕಾರ್ಯಕರ್ತನಾಗಿ ಮುಂದುವರೆದಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿಲ್ಲ ಎಂದರು. ಇತ್ತೀಚೆಗೆ ನಾನು ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳಿಕೊಳ್ಳುತ್ತಿದ್ದಾರೆ.…
ಮಡಿಕೇರಿ ಮಾ.28 NEWS DESK : ವೀರ ಅಮರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸಾಹಸಗಾಥೆಯನ್ನು ವಿದ್ಯಾರ್ಥಿಗಳಿಗೆ ನಿರಂತರ ಪರಿಚಯಿಸುವ ಕಾರ್ಯವಾಗಬೇಕು ಎಂದು ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತರಾದ ಮೇಜರ್ ಬಿದ್ದಂಡ ಎ.ನಂಜಪ್ಪ ತಿಳಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶ ವಿದೇಶಿಗರು ಜನರಲ್ ತಿಮ್ಮಯ್ಯ ಅವರ ಬಗ್ಗೆ ಅಪಾರ ಅಭಿಮಾನ ಮತ್ತು ಗೌರವ ಹೊಂದಿದ್ದಾರೆ. ಕೊಡಗಿನ ವಿದ್ಯಾರ್ಥಿಗಳಲ್ಲಿ ಕೂಡ ತಿಮ್ಮಯ್ಯ ಅವರ ಬಗ್ಗೆ ಅಭಿಮಾನ ಮೂಡಿಸಬೇಕು, ಅವರ ಆದರ್ಶಗಳನ್ನು ತಿಳಿಹೇಳಬೇಕು ಎಂದರು. ಜನರಲ್ ತಿಮ್ಮಯ್ಯ ಅವರು ಹುಟ್ಟಿದ ಮನೆ ಸನ್ನಿಸೈಡ್ ಸ್ಮಾರಕ ಈಗ ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಭವನವಾಗಿದೆ. ಅಲ್ಲಿ ಅವರ ಇತಿಹಾಸ ಮಾತ್ರವಲ್ಲ, ಭಾರತೀಯ ಸೇನೆಯ ಇತಿಹಾಸವನ್ನು ತಿಮ್ಮಯ್ಯ ಅವರ ಮೂಲಕ ತೆರೆದಿಡಲಾಗಿದೆ. ಅಲ್ಲಿನ ಪ್ರತಿ ಕೋಣೆಯು ಸೈನಿಕನ ಕಥೆಯನ್ನು ಹೇಳುತ್ತಿದೆ. ಬೆಂಗಳೂರಿನ ಬ್ರಿಟಿಷ್ ಕಾಟನ್ ಶಾಲೆಯಲ್ಲಿ ಶಿಕ್ಷಣ ಪಡೆದ ತಿಮ್ಮಯ್ಯ ಅವರು ಕ್ರೀಡಾಕೂಟದಲ್ಲಿ ಕ್ರಿಯಾಶೀಲರಾಗಿದ್ದರು. ಸೈನಿಕರ ನಾಡು ಎಂಬ ಕೀರ್ತಿ…
ಕುಶಾಲನಗರ ಮಾ.28 NEWS DESK : ಶರಣ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಕುಶಾಲನಗರದ ವೀರಶೈವ ಸಮಾಜದ ಅಧ್ಯಕ್ಷರಾದ ಎಂ.ಎಸ್.ಶಿವಾನಂದ ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ಶರಣ ಸಾಹಿತ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸುವ ಜೊತೆಗೆ ಪರಿಷತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸುವ ಮೂಲಕ ಪರಿಷತ್ತನ್ನು ಕಟ್ಟಿ ಬೆಳೆಸುವ ಪಣ ತೊಡಬೇಕೆಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಡಿಕೇರಿ ಮಾ.28 NEWS DESK : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ಬೆಂಬಲ ಸೂಚಿಸಿ ಕೊಡಗು ಜೆಡಿಎಸ್ ಸಾಮೂಹಿಕ ನಾಯಕತ್ವದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ನಾಯಕರ ನಿರ್ಧಾರದಂತೆ ಕೊಡಗು ಜೆಡಿಎಸ್ ಪ್ರಮುಖರು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಿದ್ದಾರೆ. ಮಾ.30 ರಂದು ಮಡಿಕೇರಿಯ ಹೊಟೇಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ಜಿಲ್ಲಾ ಜೆಡಿಎಸ್ ಮುಂಚೂಣಿ ನಾಯಕರುಗಳ ಸಭೆ ನಡೆಯಲಿದ್ದು, ಮಾಜಿ ಸಚಿವ ಸಾ.ರಾ.ಮಹೇಶ್ ಹಾಗೂ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಕೊಡಗು ಉಸ್ತುವಾರಿ ಮಂಜೇಗೌಡ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಕೋರ್ ಕಮಿಟಿ ರಚಿಸಿ ತಾಲ್ಲೂಕು ಅಧ್ಯಕ್ಷರುಗಳಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗುವುದು. ಜಿಲ್ಲಾಧ್ಯಕ್ಷರು ಇಲ್ಲದ ಕಾರಣ ಸಾಮೂಹಿಕ ನಾಯಕತ್ವದಲ್ಲಿ ಚುನಾವಣಾ ಕಾರ್ಯ ನಿರ್ವಹಿಸಲಿದ್ದೇವೆ ಎಂದರು. ಜೆಡಿಎಸ್ ನಲ್ಲಿ ಇನ್ನೂ ಕೂಡ ಪಕ್ಷ ನಿಷ್ಠ ಹಿರಿಯರು…
ವಿರಾಜಪೇಟೆ ಮಾ.28 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಪೊನ್ನಂಪೇಟೆ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಧನುಗಾಲ ಗ್ರಾಮದ ಕಾಫಿ ಬೆಳೆಗಾರ ಜೆ.ಎಸ್.ಲೋಕೇಶ್ ಅವರನ್ನು ನೇಮಕ ಮಾಡಲಾಗಿದೆ. ಶರಣ ಸಾಹಿತ್ಯ ಚಟುವಟಿಕೆಗಳನ್ನು ತಾಲ್ಲೂಕಿನಾದ್ಯಂತ ಹೆಚ್ಚಾಗಿ ಪ್ರಚಾರ ಪಡಿಸುವ ಮೂಲಕ ಜನಸಾಮಾನ್ಯರಲ್ಲಿ ವಚನ ಸಾಹಿತ್ಯದ ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದ್ದಾರೆ.






