ಲೇಖಕ: admin

ಕುಶಾಲನಗರ ಮಾ.7 NEWS DESK : ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 3.95 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.

Read More

ಪುತ್ತೂರು ಮಾ.7 NEWS DESK : ಪ್ರತಿಯೊಬ್ಬರೂ ಒಂದಲ್ಲ ಒಂದು ವಿಷಯಗಳಲ್ಲಿ ಪರಿಣತರೇ ಆಗಿರುತ್ತಾರೆ. ಸೂಕ್ತ ಅವಕಾಶಗಳು ಹಾಗೂ ಸರಿಯಾದ ವೇದಿಕೆಗಳು ಸಿಕ್ಕಿದಾಗ ಅವರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಚತುರಂ ಒಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಿದೆ ಎಂದು ಸ್ವಾಯತ್ತ ವಿವೇಕಾನಂದ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ಪ್ರಕಾಶ್ ಕುಮಾರ್.ಪಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಇಇಇ ವಿದ್ಯಾರ್ಥಿ ವಿಭಾಗ ಇದರ ಆಶ್ರಯದಲ್ಲಿ ನಡೆದ ತಾಂತ್ರಿಕ ಹಾಗೂ ಸಾಹಿತ್ಯಿಕ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ಚತುರಂ ಗೆ ಚಾಲನೆ ನೀಡಿ ಮಾತಾಡಿದರು. ಎಷ್ಟೋ ವಿದ್ಯಾರ್ಥಿಗಳು ತಮ್ಮಲ್ಲಿ ಪ್ರತಿಭೆಗಳಿದ್ದರೂ ಹಿಂಜರಿಕೆಯಿಂದ ಹಿಂದುಳಿಯುತ್ತಾರೆ ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸಗಳು ನಿರಂತರ ನಡೆಯಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಮಾತನಾಡಿ ಪ್ರತಿಯೊಬ್ಬನಿಗೂ ಜೀವನದಲ್ಲಿ ಒಂದು ಗುರಿಯಿರಬೇಕು, ನಮ್ಮ ಶಕ್ತಿ ವಿಶೇಷಗಳನ್ನು…

Read More

ಮಡಿಕೇರಿ ಮಾ.7 NEWS  DESK : ಕೊಡಗು ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಸಾರ್ವಜನಿಕ ಹಿತಾಸಕ್ತಿಯಿಂದ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ನದಿ ಹಾಗೂ ನದಿ ಮೂಲಗಳಿಂದ ಅಕ್ರಮ/ ಅನಧಿಕೃತವಾಗಿ ಖಾಸಗಿ ಚಟುವಟಿಕೆಗಳಿಗೆ ಪಂಪ್‍ಸೆಟ್ ಬಳಸಿ ಅಥವಾ ಕಾಲುವೆಗಳ ಮುಖಾಂತರ ನದಿ ನೀರನ್ನು ಇತರೆ ಉದ್ದೇಶಕ್ಕೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

Read More

ಮಡಿಕೇರಿ ಮಾ.7 NEWS DESK : ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ಮಡಿಕೇರಿ ನಗರದ ಚೈನ್ ಗೇಟ್ ಬಸ್ ತಂಗುದಾಣವನ್ನು ಇಂದು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು. ಮೈಸೂರು ರಸ್ತೆ ಮತ್ತು ಗೌಡ ಸಮಾಜ ರಸ್ತೆಯಿಂದ ಬರುತ್ತಿದ್ದ ವಾಹನಗಳ ನಡುವೆ ಅಪಘಾತವಾಗಿ ಸಾವು, ನೋವುಗಳು ಸಂಭವಿಸುತ್ತಿತ್ತು. ಅಪಘಾತಕ್ಕೆ ಈ ಬಸ್ ತಂಗುದಾಣವೇ ಕಾರಣ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಿಂದ ಕೇಳಿ ಬಂದಿತ್ತು. ಇತ್ತೀಚೆಗೆ ಯುವಕನೋರ್ವ ಅಪಘಾತದಿಂದ ಮೃತಪಟ್ಟಿದ್ದು, ಅಪಘಾತಕ್ಕೆ ನಾನೇ ಕಾರಣ ಎಂದು ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೂ ನಡೆದಿತ್ತು. ಈ ಹಿನ್ನೆಲೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ಸೂಚನೆ ಮೇರೆಗೆ ಬಸ್ ತಂಗುದಾಣವನ್ನು ತೆರವುಗೊಳಿಸಲಾಗಿದೆ. ಪರ್ಯಾಯವಾಗಿ ಬೇರೆಡೆ ಬಸ್ ತಂಗುದಾಣ ನಿರ್ಮಿಸಲು ನಗರಸಭೆ ನಿರ್ಧರಿಸಿದೆ.

Read More

ಮಡಿಕೇರಿ ಮಾ.7 NEWS DESK : ವಿರಾಜಪೇಟೆಯ ಪುರಸಭೆಯ ಸದಸ್ಯೆ ಮನೆಯಪಂಡ ದೇಚಮ್ಮ ಕಾಳಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಸಮ್ಮುಖದಲ್ಲಿ ಶಾಸಕರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿರಾಜಪೇಟೆ ಪುರಸಭೆಯ ಹಾಲಿ ಸದಸ್ಯರು ಮಾಜಿ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು, ಹಾಲಿ ಪಟ್ಟಣ ಸಹಕಾರ ಬ್ಯಾಂಕ್ ನಿರ್ದೇಶಕರಾದ ಮನೆಯಪಂಡ ದೇಚಮ್ಮ ಕಾಳಪ್ಪ  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭ ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಪುರಸಭಾ ಸದಸ್ಯ ರಾಜೇಶ್ ಪದ್ಮನಾಭ , ಎಸ್.ಹೆಚ್.ಮತಿನ್, ವಕೀಲ ನರೇಂದ್ರ ಕಾಮತ್, ಗಣೇಶ್ ಮೊದಲಿಯಾರ್ ಹಾಗೂ ಪಕ್ಷದ ಪ್ರಮುಖ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಮಾ.7 NEWS DESK :  ಕುಶಾಲನಗರದ  ನೂತನ ಕೆ ಎಸ್ ಆರ್ ಟಿ ಸಿ ಘಟಕ ನಿರ್ಮಾಣ ಕಾರ್ಯಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

Read More

ಮಡಿಕೇರಿ ಮಾ.7 NEWS DESK  : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ವಿಜಯ ವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣ ಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು ಹಾಗೂ ಪೋಷಕರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣ ದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಮಾ.7 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ:0821-2515944 ಸಂಪರ್ಕಿಸಬಹುದು.

Read More

ಮಡಿಕೇರಿ ಮಾ.7 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮಾರ್ಚ್, 08 ರಂದು ಬೆಳಗ್ಗೆ 9.30 ಗಂಟೆಯಿಂದ 12 ಗಂಟೆವರೆಗೆ ಸಾರ್ವಜನಿಕ ಭಕ್ತಾಧಿಗಳಿಗೆ ವಿಶೇಷ ಸೇವೆ ರುದ್ರಹೋಮ ಮತ್ತು ಏಕಾದಶ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ನಂತರ ವಿವಿಧ ಪೂಜೆ, ಅರ್ಚನೆಗಳು ನಡೆಯಲಿದೆ. ಈ ದಿನದಂದು ದೇವಾಲಯವು ರಾತ್ರಿಪೂರ್ತಿ ತೆರೆದಿರುತ್ತದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಬಾಜನರಾಗುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 9902290302, 9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.7 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023-24 ನೇ ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ  ತಿಳಿಸಿದ್ದಾರೆ. ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ.ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ಮಾ.31 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರಾಮುವಿ, ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಸ್ನಾತಕ/ಸ್ನಾತಕೋತ್ತರ ಕೋಸ್ರ್ಗಳಾದ ಬಿ.ಎ, ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಲಿಬ್ ಐಎಸ್ಸಿ, ಬಿ.ಎಸ್ಸಿ, ಬಿಎಸ್ ಡಬ್ಲ್ಯು, ಎಂ.ಎ, ಎಂ.ಸಿ.ಜೆ, ಎಂ.ಕಾಂ, ಎಂ.ಎಸ್ಸಿ, ಎಂಲಿಬ್‍ಐಎಸ್ಸಿ,{ಎಂಬಿಎ, ಎಂಸಿಎ, ಎಂಎಸ್‍ಡಬ್ಲ್ಯು ಮತ್ತು ಪಿಜಿ ಸರ್ಟಿಫಿಕೇಟ್ ಡಿಪ್ಲೊಮಾ ಸರ್ಟಿಫಿಕೇಟ್…

Read More

ಸೋಮವಾರಪೇಟೆ ಮಾ.7 NEWS DESK : ಗೌಡಳ್ಳಿ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯ ಮೂರು ದಿನಗಳ ಜಾತ್ರೋತ್ಸವಕ್ಕೆ ದೇವಿಗೆ ಜ್ಯೋತಿ ಬೆಳಗುವುದರ ಮೂಲಕ ದೇವಾಲಯ ಸಮಿತಿ ಅಧ್ಯಕ್ಷ ಬಿ.ಪಿ.ಮೊಗಪ್ಪ, ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜ್ಜಳ್ಳಿ ನವೀನ್ ಚಾಲನೆ ನೀಡಿದರು. ಪಶುವೈದ್ಯ ಇಲಾಖೆಯ ವತಿಯಿಂದ ಉಚಿತ ಪಶುಚಿಕಿತ್ಸಾ ಶಿಬಿರ, ಉತ್ತಮ ರಾಸುಗಳಿಗೆ ಬಹುಮಾನ ಹಾಗೂ ನಾಯಿಗಳಿಗೆ ರೇಬಿಸ್ ಚುಚ್ಚುಮದ್ದು ನೀಡಲಾಯಿತು. ಈ ಸಂದರ್ಭ ಗೌಡಳ್ಳಿ ಸಹಕಾರ ಸಂಘದ ಸಿಇಒ ಜಿ.ಕೆ.ಪೊನ್ನಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಇಂದೂದರ್, ಪಶುವೈದ್ಯಾಧಿಕಾರಿ ಸತೀಶ್ ಕುಮಾರ್, ದೇವಾಲಯ ಸಮಿತಿಯ ಉಪಾಧ್ಯಕ್ಷ ಎಚ್.ಎನ್.ಚಂದ್ರಶೇಖರ್, ಮಾಜಿ ಅಧ್ಯಕ್ಷ ಎಚ್.ಆರ್.ಮುತ್ತಣ್ಣ, ಪದಾಧಿಕಾರಿಗಳಾದ ಜಿ.ಎ.ಮಹೇಶ್, ಎಚ್.ಪಿ.ಸುರೇಶ್, ವೀರಭದ್ರಪ್ಪ, ನಾಗರತ್ನ, ರಾಮಚಂದ್ರ, ಪ್ರಧಾನ ಅರ್ಚಕ ವಿಶ್ವರೂಪಚಾರ್ ಮತ್ತಿತರರು ಇದ್ದರು.

Read More