ಲೇಖಕ: admin

ಉತ್ತರಾಖಂಡ ಮಾ.28 NEWS DESK : ಉತ್ತರಾಖಂಡದ ನಾನಕ್ ಮಟ್ಟಾ ಸಾಹಿಬ್ ಗುರುದ್ವಾರದ ಸಿಬ್ಬಂದಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಗುರುವಾರ ಮುಂಜಾನೆ ಬೈಕ್‌ನಲ್ಲಿ ಬಂದ ಇಬ್ಬರು ಮುಸುಕುಧಾರಿ ದುಷ್ಕರ್ಮಿಗಳು ದೇಗುಲದ ಆವರಣದಲ್ಲಿದ್ದ ಸಿಬ್ಬಂದಿ ಬಾಬಾ ತಾರ್ಸೆಮ್ ಸಿಂಗ್ ಎಂಬುವವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಬೆಳಿಗ್ಗೆ ಏಳು ಗಂಟೆಯ ಸುಮಾರಿಗೆ ಕೊಲೆ ನಡೆದಿದ್ದು ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇಬ್ಬರು ಮುಸುಕುಧಾರಿಗಳು ಬೈಕ್ ನಲ್ಲಿ ಬಂದು ಬಾಬಾ ತಾರ್ಸೆಮ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

Read More

ಮಡಿಕೇರಿ ಮಾ.28 NEWS DESK : ಕೊಡಗು- ದಕ್ಷಿಣ ಕನ್ನಡ ಗಡಿಯ ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕಾಣಿಸಿಕೊಂಡಿದ್ದು, ಮತ್ತೆ ಶಂಕಿತ ನಕ್ಸಲರು ಬಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಾ.16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ನ ಅಂಗಡಿಗೆ ಭೇಟಿ ನೀಡಿ ದಿನಸಿ ಸಾಮಾಗ್ರಿ ಖರೀದಿಸಿ ಅರಣ್ಯ ಪ್ರದೇಶದಲ್ಲಿ ನುಸುಳಿದ್ದರು. ಇದೇ ನಾಲ್ವರ ತಂಡ ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಮಾ.23ರಂದು ಕಾಣಿಸಿಕೊಂಡಿದ್ದರು. ಅಲ್ಲದೆ ಮನೆಯೊಂದಕ್ಕೆ ಭೇಟಿ ಕೂಡ ನೀಡಿದ್ದರು. ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ಕೂಂಬಿAಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿತ್ತು. ಆದರೆ ಇದೀಗ ಮತ್ತೆ ಮಾ.27 ರಂದು ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ತೆರಳಿರುವುದನ್ನು ಸ್ಥಳೀಯರು ನೋಡಿದ್ದಾರೆ ಎಂದು ಹೇಳಲಾಗಿದೆ. ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆ ನಕ್ಸಲ್ ನಿಗ್ರಹ ದಳ ಇದೇ ಪ್ರದೇಶದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಇಲ್ಲಿಯವರೆಗೆ ಶಂಕಿತ ನಕ್ಸಲರು ಪತ್ತೆಯಾಗಿಲ್ಲ.

Read More

ವಿರಾಜಪೇಟೆ ಮಾ.28 NEWS DESK : ಇತಿಹಾಸ ಪ್ರಸಿದ್ಧ ಬಾಳೂಗೋಡು ಶ್ರೀ ತ್ರಿಮೂರ್ತಿ ದೇವರ ವಾರ್ಷಿಕ ತೆರೆ ಮಹೋತ್ಸವವು ಮಾ.30 ರಿಂದ ಏ.1 ರ ವರೆಗೆ ನಡೆಯಲಿದೆ. ವಾರ್ಷಿಕ ತೆರೆ ಮಹೋತ್ಸವ ದ ಅಂಗವಾಗಿ ಮೂರು ದಿನಗಳು ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದ್ದು, ಮಾ.31 ರಂದು ತ್ರಿಮೂರ್ತಿ ದೇವರ ವಾರ್ಷಿಕ ತೆರೆ ಮಹೋತ್ಸವ  ನಡೆಯಲಿದೆ. ವಾರ್ಷಿಕ ತೆರೆ ಮಹೋತ್ಸವದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ  ದೇವಾಲಯದ  ತಕ್ಕ ಮುಖ್ಯಸ್ಥ ರು, ಆಡಳಿತ ಮಂಡಳಿ ಯ ಸದಸ್ಯರು ಮನವಿ ಮಾಡಿದ್ದಾರೆ.

Read More

ಕುಶಾಲನಗರ ಮಾ.28 NEWS DESK : ಕುಶಾಲನಗರ ತಾಲ್ಲೂಕು ಯೋಗಿನಾರೇಯಣ ಬಲಿಜ ಸಂಘದ ವತಿಯಿಂದ ಕುಲ ಗುರು ಕೈವಾರ ತಾತಯ್ಯ ಜಯಂತಿ ಕಾರ್ಯಕ್ರಮವನ್ನು ಕುಶಾಲನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಆರ್.ಬಾಬಣ್ಣ ಕುಶಾಲನಗರ ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 900 ಕ್ಕೂ ಹೆಚ್ಚು ಬಲಿಜ ಸಂಘದ ಕುಟುಂಬಗಳಿದ್ದು, ಪ್ರತೀ ವರ್ಷವೂ ಕುಲಗುರುಗಳ ಜಯಂತಿಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸಂಘದ ಸದಸ್ಯರ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡುವುದರೊಂದಿಗೆ, ಸಮಾಜದ ಕಡುಬಡ ಕುಟುಂಬಗಳಿಗೆ ನೆರವು ನೀಡುವ ಕೆಲಸ ಸಮಾಜದಿಂದ ಆಗಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಂಘದ ಸದಸ್ಯರಾಗಬೇಕಿದೆ. ಹಾಗೆಯೇ ಸಮಾಜದ ಮಾಹಾನ್ ಪುರುಷರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ಕರೆಕೊಟ್ಟ ಸಂಘದ ಅಧ್ಯಕ್ಷ ಆರ್.ಬಾಬಣ್ಣ ಸಮಾಜ ಬಾಂಧವರು ರಾಜಕೀಯವಾಗಿಯೂ ಅಭಿವೃದ್ದಿ ಹೊಂದಬೇಕೆಂದು ಕರೆಕೊಟ್ಟರು. ಈ ಸಂದರ್ಭ ಸಂಘದ ಸದಸ್ಯರಾದ ಕವಿತಾ ದಯಾನಂದ್ ಮಾತನಾಡಿದರು. ಜಯಂತಿ ಅಂಗವಾಗಿ ಕೈವಾರ ತಾತಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಭಾವ ಚಿತ್ರಗಳನ್ನು ಸಂಘದ ಸದಸ್ಯ…

Read More

ಸುಂಟಿಕೊಪ್ಪ ಮಾ.28 NEWS DESK  : ಸುಂಟಿಕೊಪ್ಪದ ಸ್ವಸ್ಥ ವಿಶೇಷ ಶಿಕ್ಷಣ ಮತ್ತು ಪುನರ್ವಸತಿ ಕೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಯೋಗದಲ್ಲಿ ಸುಂಟಿಕೊಪ್ಪದಲ್ಲಿ ವಿಶೇಷಚೇತನರು ಮತ್ತು ಅವರ ಪಾಲಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಸುಂಟಿಕೊಪ್ಪದ ಮಾದಾಪುರ ರಸ್ತೆಯಲ್ಲಿರುವ ಸ್ವಸ್ಥ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ವಿಶಾಲ್ ಕುಮಾರ್ ಮಾತನಾಡಿ, ವಿಶೇಷಚೇತನರು ಆಯುಷ್‌ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ ಹೊಂದಿಕೊಂಡಲ್ಲಿ ಆಸ್ಪತ್ರೆಗಳಲ್ಲಿ ರೂ.5 ಲಕ್ಷಗಳವರೆಗಿನ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದೆಂದರು. ವಿಶೇಷಚೇತನರಿಗಾಗಿ ಇರುವ ವಿಶೇಷ ಗುರುತಿನ ಚೇಟಿಯ ಮಹತ್ವದದ ಬಗ್ಗೆ ತಿಳಿಸಿ, ವಿಶೇಷ ಗುರುತಿನ ಚೇಟಿಯನ್ನು ಮಾಡಿಸದೇ ಇದ್ದವರು, ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲುಯುಗಳ ಮುಖಾಂತರ ನೋಂದಾಯಿಸಿ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತಪಾಸಣೆಗೊಳಗಾಗಿ ಪಡೆದುಕೊಳ್ಳಬೇಕೆಂದು ತಿಳಿಸಿದರು. ವಿರಾಜಪೇಟೆಯ ಆಶೀರ್ವಾದ್ ವೈದ್ಯಕೀಯ ಸಂಸ್ಥೆಯ ಮುಖ್ಯಸ್ಥ ಶಿಶುತಜ್ಞ ಡಾ. ಗೌರವ್ ಅಯ್ಯಪ್ಪ ಮಾತನಾಡಿ, ನವಜಾತ ಶಿಶುವಿನ ಜನನದ ಮೊದಲ ನಿಮಿಷದ…

Read More

ಬೆಂಗಳೂರು ಮಾ.28 NEWS DESK : ಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫೀ ದರವನ್ನೂ ಹಿಂದಿಕ್ಕಿ ಸರ್ವಕಾಲಿಕ ಗರಿಷ್ಟ ದರ ದಾಖಲಿಸಿದೆ. ಸೋಮವಾರ ವಯನಾಡ್‌ ಮಾರುಕಟ್ಟೆಯಲ್ಲಿ ರೋಬಸ್ಟಾ ಹಸಿ ಕಾಫಿ ಹಣ್ಣುಗಳ ಫಾರ್ಮ್‌ಗೇಟ್ ಬೆಲೆ ಪ್ರತಿ ಕಿಲೋಗ್ರಾಂಗೆ ದಾಖಲೆಯ ರೂ.172 ಅನ್ನು ಮುಟ್ಟಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ ಕೆಜಿಗೆ ರೂ.115 ಇತ್ತು. ಇದೇ ಸಮಯದಲ್ಲಿ ರೋಬಸ್ಟಾ ಪಾರ್ಚ್‌ಮೆಂಟ್‌ ಕಾಫಿ ಬೀಜಗಳ ಸ್ಪಾಟ್ ಬೆಲೆಯು ಕೆಜಿಗೆ ರೂ.315 ಕ್ಕೆ ಸರ್ವಕಾಲಿಕ ಏರಿಕೆ ದಾಖಲಿಸಿದೆ. 2023 ರ ಇದೇ ಅವಧಿಯಲ್ಲಿ ದರ ಕಿಲೋಗೆ 220 ರೂಪಾಯಿಗಳಷ್ಟಿತ್ತು. ಮಾರ್ಚ್ 2022 ರಲ್ಲಿ ಕಚ್ಚಾ ಹಣ್ಣುಗಳು ಮತ್ತು ಪಾರ್ಚ್‌ ಮೆಂಟ್‌ ಗೆ ದರ ಕ್ರಮವಾಗಿ ರೂ. 80 ಮತ್ತು ರೂ. 145 ರಷ್ಟಿತ್ತು. ಕೊಡಗಿನ ಮಾರುಕಟ್ಟೆಯಲ್ಲಿ ಬುಧವಾರ ರೊಬಸ್ಟಾ ಪಾರ್ಚ್‌ಮೆಂಟ್‌ ದರ 50 ಕೆಜಿ ಚೀಲಕ್ಕೆ 14,400 ರಿಂದ 14,700 ರೂಪಾಯಿಗಳಿಗೆ ಏರಿ ಸರ್ವಕಾಲಿಕ ದಾಖಲೆ ನಿರ್ಮಿಸಿದೆ.…

Read More

ಮಡಿಕೇರಿ ಮಾ.27 NEWS DESK : ಲೋಕಸಭಾ ಚುನಾವಣೆಯಲ್ಲಿ ಕೊಡಗು- ಮೈಸೂರು ಕ್ಷೇತ್ರದ ಭಾಗವಾದ ಮೈಸೂರಿಗೆ ಪ್ರಧಾನಿ ನರೇಂದ್ರಮೋದಿ ಅವರು ಮತ್ತು ಕೊಡಗು ಜಿಲ್ಲೆಗೆ ಉತ್ತರ ಪ್ರದೇಶದ ಮಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಅವರು ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಡಿಕೇರಿಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಕಾವೇರಿಯ ನಾಡಿನಲ್ಲಿ ಸ್ಪರ್ಧಿಸುವ ಅಪೂರ್ವ ಅವಕಾಶ ತನಗೆ ದೊರೆತಿದೆ. ಇಲ್ಲಿನ ಕಾರ್ಯಕರ್ತರೊಂದಿಗೆ ತಾನಿರುವುದಾಗಿ ಸ್ಪಷ್ಟಪಡಿಸಿ, ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮಡಿಕೇರಿ ಮತ್ತು ಮೈಸೂರಿನ ತನ್ನ ಕಚೇರಿಗಳಲ್ಲಿ ಕಾರ್ಯಕರ್ತರು ತನ್ನನ್ನು ಯಾವತ್ತೂ ಭೇಟಿಯಾಗಬಹುದೆಂದು ತಿಳಿಸಿ, ಮುಂದಿನ ಏ.3 ಕ್ಕೆ ಈ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸುತ್ತಿರುವುದಾಗಿ ಹೇಳಿದರು.

Read More

ಮಡಿಕೇರಿ ಮಾ.27 NEWS DESK : ಮಹಿಳೆಯ ಅಶ್ಲೀಲ ಭಾವಚಿತ್ರಗಳನ್ನು ಫೇಸ್‌ಬುಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪದಡಿ ತನಿಖೆ ಎದುರಿಸುತ್ತಿದ್ದ ಪೊನ್ನಂಪೇಟೆ ಕೃಷ್ಣ ಕಾಲೋನಿ ನಿವಾಸಿ ಸುರೇಶ (50) ಎಂಬಾತನಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 2020 ನೇ ಸಾಲಿನಲ್ಲಿ  ಸುರೇಶ ಎಂಬಾತನ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ದೂರು  ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಐಟಿ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಕೈಗೊಂಡು ದಿನಾಂಕ: 08-09-2021 ರಂದು ಆರೋಪಿ ಸುರೇಶನನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸದರಿ ಪ್ರಕರಣದ ತನಿಖಾಧಿಕಾರಿಯಾದ ಗಜೇಂದ್ರ ಪ್ರಸಾದ್, ಡಿಎಸ್‌ಪಿ, ಮಡಿಕೇರಿ ಉಪವಿಭಾಗ ಅವರು ಪ್ರಕರಣದ ಸಂಪೂರ್ಣ ತನಿಖೆಯನ್ನು ಕೈಗೊಂಡು ಆರೋಪಿ ಸುರೇಶನ ಮೇಲೆ ದೋಷಾರೋಪಣ ಪತ್ರವನ್ನು ದಿ: 30-10-2021 ರಂದು ಜಿಲ್ಲಾ ಸತ್ರ ನ್ಯಾಯಾಲಯ, ಮಡಿಕೇರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಘನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯನ್ನು ನಡೆಸಿ ದಿನಾಂಕ: 27/03/2024 ರಂದು ಸದರಿ ಪ್ರಕರಣದ ಆರೋಪಿ…

Read More

ಮಡಿಕೇರಿ ಮಾ.27 NEWS DESK : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ದಿಸೆಯಲ್ಲಿ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ವಿಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಯಿತು. ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಿ ಮತದಾನ ಹೆಚ್ಚಳಕ್ಕೆ ಮುಂದಾಗಬೇಕು. ಆ ನಿಟ್ಟಿನಲ್ಲಿ ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿ.ಪಂ.ಸಿಇಒ ಅವರು ನಿರ್ದೇಶನ ನೀಡಿದರು. ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದರೆ ಕೂಡಲೇ ಸಿ-ವಿಜಿಲ್ ಆಪ್ ಮೂಲಕ ದೂರು ದಾಖಲಿಸಿ ಪ್ರಕರಣ ಇತ್ಯರ್ಥಪಡಿಸಬೇಕು ಎಂದು ಜಿ.ಪಂ.ಸಿಇಒ ಅವರು ಸೂಚಿಸಿದರು. ಅಧಿಕಾರಿಗಳು ತಂಡೋಪಾದಿಯಾಗಿ…

Read More