ಲೇಖಕ: admin

ಮಡಿಕೇರಿ ಮಾ.27 NEWS DESK  : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏ.10 ರಿಂದ ಮೇ 4 ರವರೆಗೆ 21 ದಿನಗಳ ಕಾಲ ನುರಿತ ತರಬೇತುದಾರರಿಂದ ದಿನಕ್ಕೆ ಎರಡು ಗಂಟೆಯಂತೆ ಈಜು ತರಬೇತಿ ಬೇಸಿಗೆ ಶಿಬಿರ ನಡೆಯಲಿದೆ. ಕ್ರೀಡೆ ವಿವರ: ಈಜು ವಯೋಮಿತಿ 8 ರಿಂದ 18 ವರ್ಷ, ಬೆಳಗ್ಗೆ 9.30 ರಿಂದ 12 ಗಂಟೆಯವರೆಗೆ ಹಾಗೂ ಸಂಜೆ 5 ಗಂಟೆಯಿಂದ 7 ಗಂಟೆವರೆಗೆ, ಶುಲ್ಕ ರೂ. 3,500 ಆಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಹಾಗೂ ಮಣಿಕಂಠ 9880989987 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ  ತಿಳಿಸಿದ್ದಾರೆ.

Read More

ಮಡಿಕೇರಿ ಮಾ.27 NEWS DESK  : 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸ್ವೀಪ್ ಕಾರ್ಯಕ್ರಮದಡಿ ಪುರಸಭಾ ವ್ಯಾಪ್ತಿಯಲ್ಲಿ ಮತದಾನ ಮಾಡುವ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಕುಶಾಲನಗರ ಪುರಸಭೆ ವತಿಯಿಂದ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಕಾರ್ಯಕ್ರಮ ನಡೆಯಿತು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.27 NEWS DESK  : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆಗಮನದ ಸಂದರ್ಭ ಕುಶಾಲನಗರ ಮತ್ತು ಮಡಿಕೇರಿಯಲ್ಲಿ ಚೋರರು ಕೈಚಳಕ ತೋರಿದ್ದಾರೆ. ಶಾಸಕರಾದಿಯಾಗಿ ಹಲವರ ಜೇಬು ಖಾಲಿಯಾದ ಪ್ರಕರಣ ಬೆಳಕಿಗೆ ಬಂದಿದೆ. ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಸೇರಿದಂತೆ ಅನೇಕರ ಜೇಬಿನಲ್ಲಿದ್ದ ಸಾವಿರಾರು ರೂಪಾಯಿ ಕಳ್ಳತನ ಮಾಡಲಾಗಿದೆ. ಅಲ್ಲದೆ ಪರ್ಸ್‍ಗಳನ್ನು ಕೂಡ ಕದ್ದೊಯ್ಯಲಾಗಿದ್ದು, ಅಮೂಲ್ಯ ದಾಖಲೆಗಳನ್ನು ಕಳೆದುಕೊಂಡವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ನಾಯಕರುಗಳೊಂದಿಗೆ ಕಾರ್ಯಕರ್ತರು ಸೆಲ್ಫಿ ತೆಗೆಸಿಕೊಳ್ಳುವ ಸಂದರ್ಭ ನೂಕುನುಗ್ಗಲು ಉಂಟು ಮಾಡಿ ಈ ಕೃತ್ಯ ಎಸಗಲಾಗಿದೆ ಎಂದು ಅಂದಾಜಿಸಲಾಗಿದೆ. ವಾಹನಗಳಲ್ಲಿ ಬಂದ ಅಪರಿಚಿತರು ಜೇಬುಗಳ್ಳತನ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ತಕ್ಷಣ ಕಳ್ಳರ ಬಂಧನಕ್ಕೆ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕರುಗಳು ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಮಾ.27 NEWS DESK : ಇತರ ರಾಜಕೀಯ ಪಕ್ಷಗಳು ಹಾಗೂ ರಾಜಕಾರಣಿಗಳು ಯಾವತ್ತೂ ಮುಂದಿನ ‘ಚುನಾವಣೆ’ಯ ಬಗ್ಗೆಯಷ್ಟೆ ಯೋಚಿಸುತ್ತಾರೆ. ಆದರೆ, ದೂರದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿರುವ ಮೋದಿ ಅವರು ಚುನಾವಣೆಯ ಬದಲಾಗಿ 2047 ಕ್ಕೆ ರಾಷ್ಟ್ರವನ್ನು ‘ವಿಕಸಿತ ಭಾರತ’ವನ್ನಾಗಿ ರೂಪಿಸುವ ಅಭಿವೃದ್ಧಿಯ ವಿಶಾಲ ಚಿಂತನೆಯನ್ನು ಹೊಂದಿದವರಾಗಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಡೆದ ‘ಬಿಜೆಪಿ ಕಾರ್ಯಕರ್ತರ ಸಮಾವೇಶ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಮತ್ತು ನರೇಂದ್ರಮೋದಿ ಅವರು ಮತ್ತೆ ಪ್ರಧಾನಮಂತ್ರಿಯಾಗುವುದು ಸೂರ್ಯ-ಚಂದ್ರರಷ್ಟೆ ಸತ್ಯವೆಂದು ಹೇಳಿದರು. ರಾಷ್ಟ್ರಕ್ಕೆ ಭವಿಷ್ಯವೇ ಇಲ್ಲವೇನೋ ಎನ್ನುವಂತಹ 2014 ರ ಸಂದರ್ಭ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ, ಕಳೆದ ಒಂದು ದಶಕಗಳ ಅವಧಿಯಲ್ಲಿನ ಪ್ರಧಾನಮಂತ್ರಿ ಮೋದಿ ಅವರ ಆಡಳಿತ ಭಾರತಕ್ಕೆ ಉಜ್ವಲ ಭವಿಷ್ಯದ ಭರವಸೆಗಳನ್ನು ವಿಶ್ವಾಸವನ್ನು ತುಂಬಿರುವುದರ ಜೊತೆಯಲ್ಲೆ, ಭಾರತ ವಿಶ್ವರ…

Read More

ಸುಂಟಿಕೊಪ್ಪ,ಮಾ.27  NEWS DESK : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸುಂಟಿಕೊಪ್ಪ ಬಿಜೆಪಿ ಕಾರ್ಯಕರ್ತರಿಂದ ಭವ್ಯ ಸ್ವಾಗತ ಕೋರಿದರು. ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಕನ್ನಡ ವೃತ್ತದ ಬಳಿಯಲ್ಲಿ ಸುಂಟಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಧನುಕಾವೇರಪ್ಪ ಮತ್ತು ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಹಾಗೂ ಸೋಮವಾರಪೇಟೆ ಮಂಡಳ ಒಬಿಸಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಇದೇ ಸಂದರ್ಭ ಪಟಾಕಿ ಸಿಡಿಸಿ, ಪ್ರಧಾನಿ ನರೇಂದ್ರಮೋದಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾರ್ಯಕರ್ತರು ಜೈಕಾರ ಕೂಗಿದರು. ನಾಕೂರು ಶಿರಂಗಾಲ ಗ್ರಾ.ಪಂ.ಅಧ್ಯಕ್ಷ ಮಂದೋಡಿ ಜಗನ್ನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಡಾ.ಶಶಿಕಾಂತರೈ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಂಕರನಾರಾಯಣ, ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಬಿ.ಕೆ.ಪ್ರಶಾಂತ್, ವಾಸು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ಗ್ರಾ.ಪಂ.ಸದಸ್ಯ ಬಿ.ಎಂ.ಸುರೇಶ್, ಗ್ರಾ.ಪಂ ಮಾಜಿ ಅಧ್ಯಕ್ಷರುಗಳಾದ ಬಿ.ಐ.ಭವಾನಿ, ತಾ.ಪಂ.ಸದಸ್ಯೆ…

Read More

ವಿರಾಜಪೇಟೆ ಮಾ.27 NEWS DESK : ವಿರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮದ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಉತ್ಸವದ ಅಂಗವಾಗಿ ಕಳಶ ಪೂಜೆ, ಪಟ್ಟಣಿ ಹಬ್ಬ ಜರುಗಿ ಮಧ್ಯಾಹ್ನ ದೇವರ ಪ್ರದರ್ಶನ ಬಲಿ, ವಿಶೇಷ ಮಹಾಪೂಜೆ ನಡೆಯಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ಹಾಗೂ ಅನ್ನದಾನ ನೆರವೇರಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ವಿವಿಧ ಗ್ರಾಮಗಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಉತ್ಸವದ ಪೂಜಾ ವಿಧಿ ವಿಧಾನವನ್ನು ಮುಖ್ಯ ಅರ್ಚಕ ರಾಧಕೃಷ್ಣ ಮತ್ತು ಬಳಗ ನೆರವೇರಿಸಿ ಕೊಟ್ಟರು.

Read More

NEWS DESK : ದಿನಾಂಕ 28.3.2024 ಗುರುವಾರದಂದು ಶೋಭ ಕೃತ್ಸಂವತ್ಸರಃ ಕೊನೆಯ ಸಂಕಷ್ಟಹರ ಚತುರ್ಥಿಯಾಗಿರುತ್ತದೆ. ಈ ಪಾಲ್ಗುಣ ಮಾಸದ ಸಂಕಷ್ಟಹರ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ ಯಾರು ಆಚರಣೆಯನ್ನು ಮಾಡುತ್ತಾರೋ, ಅವರಿಗೆ ಈ ಹಿಂದೆ ಈ ಸಂವತ್ಸರಃದಲ್ಲಿ ಬಂದ ಸಂಕಷ್ಟಹರ ವೃತಗಳನ್ನು ಮಾಡಿದ ಎಲ್ಲಾ ಫಲ ದೊರಕುತ್ತದೆ ಎಂದು ಧಾರ್ಮಿಕ ಶಾಸ್ತ್ರಕಾರರ ಸಿದ್ಧಾಂತವಾಗಿದೆ. ಸಂಕಷ್ಟಹರ ಚತುರ್ಥಿಯನ್ನು ಗುರುಬಲ ಇಲ್ಲದವರು ಆಚರಿಸಿದರೆ ಗುರುವಿನ ಕೃಪೆಗೆ ಪಾತ್ರರಾಗುತ್ತಾರೆ. ಚೌತಿಯ ಚಂದ್ರನ ನೋಡಿದವರಿಗೆ ನೋಡಿದ ದೋಷವು ಪರಿಹಾರವಾಗುತ್ತದೆ. ಯಾರಿಗೆ ಸಾಡೆಸಾಥ್ ಶನಿ ಹಾಗೂ ಶನಿದೆಸೆ ಇರುತ್ತದೆಯೋ ಅವರು ಆಚರಿಸಿದಲ್ಲಿ ಶನಿದೋಷ ಪರಿಹಾರವಾಗುತ್ತದೆ. ಕುಜ ದೋಷದಿಂದ ವಿವಾಹ ಪ್ರತಿಬಂಧಕ ದೋಷವಿದ್ದರೆ ಸಂಕಷ್ಟಹರ ವೃತಾಚರಣೆಯಿಂದ ಶೀಘ್ರ ವಿವಾಹಯೋಗ ಕೂಡಿ ಬರುತ್ತದೆ. ಸಂತಾನ ಇಲ್ಲದವರಿಗೆ ಈ ವೃತವನ್ನು ಆಚರಿಸಿದರೆ ಶೀಘ್ರವಾಗಿ ಸಂತಾನ ಪ್ರಾಪ್ತಿಯಾಗುತ್ತದೆ. ಮಕ್ಕಳಿಗೆ ವಿದ್ಯಾ ಪ್ರಗತಿ ಇಲ್ಲದೆ ಇದ್ದಲ್ಲಿ ವೃತಾಚರಣೆಯಿಂದ ವಿದ್ಯೆ ಪ್ರಗತಿಯಾಗುತ್ತದೆ. ಉದ್ಯೋಗ ಇಲ್ಲದವರಿಗೆ ವಿಘ್ನನಾಶಕ ಶೀಘ್ರವಾಗಿ ಸಮಸ್ಯೆ ಪರಿಹಾರ ಮಾಡಿ ಉದ್ಯೋಗ ನೀಡುತ್ತಾರೆ. ಈ ಎಲ್ಲಾ ಫಲವನ್ನು ಕೊಡುವ…

Read More

ಕುಶಾಲನಗರ ಮಾ.27 NEWS DESK : ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆ (ಎನ್ ಸಿ ಇ ಆರ್ ಟಿ )ಯಲ್ಲಿ 2019 ರಿಂದ 2023 ರ ಸಾಲಿನ ಬಿಎಸ್ಸಿ ಬಿಎಡ್ ಇಂಟಿಗ್ರೇಟೆಡ್ ( ಪಿಸಿಎಂ ) ಶಿಕ್ಷಣದಲ್ಲಿ ಮಾಡಿದ ಅಪೂರ್ವ ಸಾಧನೆಗಾಗಿ ಕೊಡಗಿನ ಬಾನಂಡ ಡಿ.ವಿದ್ಯಾಶ್ರೀ ಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಅಕಾಡೆಮಿಕ್ ಎಕ್ಸೆಲೆನ್ಸ್ ಅವಾರ್ಡ್ ಪ್ರಶಸ್ತಿ ಲಭಿಸಿದೆ. ಮೂಲತಃ ಮಡಿಕೇರಿ ನಿವಾಸಿಯಾಗಿರುವ ಪ್ರಸ್ತುತ ಕುಶಾಲನಗರದ ಕೊಪ್ಪಾದಲ್ಲಿ ವಾಸವಿರುವ ಇವರು ಹತ್ತನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದರು. ನಂತರ ಮಡಿಕೇರಿ ಸಂತ ಜೋಸೆಫರ ಪಿಯು ಕಾಲೇಜಿನ ದ್ವಿತೀಯ ಪಿಯುಸಿಯಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ. ಹುಣಸೂರು ವನ್ಯಜೀವಿ ವಿಭಾಗದ ದೊಡ್ಡಹರವೆ ಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ದಲ್ಲಿರುವ ಬಾನಂಡ ದೇವಿಪ್ರಸಾದ್ ಹಾಗೂ ಪಿ.ಎಂ.ನೈನಾ ದಂಪತಿಗಳ ಪುತ್ರಿಯಾಗಿರುವ ವಿದ್ಯಾಶ್ರೀ ಇದೀಗ ಮೈಸೂರಿನಲ್ಲಿರುವ ಕರ್ನಾಟಕ ವಿಶ್ವ ವಿದ್ಯಾನಿಲಯದಲ್ಲಿ ಎಂಎಸ್ಸಿ ಎಂ.ಎಡ್ ಸ್ನಾತ ಕೋತ್ತರ ಪದವಿಗೆ ಸೇರ್ಪಡೆಯಾಗಿದ್ದಾರೆ.

Read More

ಸೋಮವಾರಪೇಟೆ ಮಾ.27 NEWS DESK  : ಲೋಕಸಭಾ ಚುನಾವಣೆಯ ಕಾವು ಏರತೊಡಗಿದ್ದು, 28 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಸುಲಲಿತ ಹಾಗೂ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಲ್ಲಲ್ಲಿ ಚೆಕ್ ಪೋಸ್ಟ್ ಗಳ  ಮೂಲಕ ಹಣ ಮತ್ತಿತರೆ ಆಮಿಷದ ವಸ್ತುಗಳ ಸಾಗಾಟಕ್ಕೆ ಹದ್ದಿನ ಕಣ್ಣಿರಿಸಿದೆ. ಆದರೆ ಇಂಥ ಚೆಕ್ ಪೋಸ್ಟ್ ಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕನಿಷ್ಠ ಮೂಲಬೂತ ಸೌಕರ್ಯ ಒದಗಿಸದೆ ಇರುವುದು ವಿಪರ್ಯಾಸ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸೋಮವಾರಪೇಟೆಗೆ ಸಮೀಪದ ಹಾಸನ ಕೊಡಗು ಗಡಿಭಾಗದ ಬಾಣಾವಾರಗೇಟ್ ನಲ್ಲಿರುವ ಚೆಕ್ ಪೋಸ್ಟ್ ನಲ್ಲಿ ಶಾಮಿಯಾನ ಅಥವಾ ತಾತ್ಕಾಲಿಕ ಶೇಡ್ ಕೂಡ ನಿರ್ಮಿಸದೆ ಅಧಿಕಾರಿಗಳು ಸುಡುಬಿಸಿಲಿನಲ್ಲಿಯೆ ಕುಳಿತು ಕಾರ್ಯ ನಿರ್ವಹಿಸಿದರೆ ಆನೆಯ ಹಾವಳಿ ಇರುವ ಇಲ್ಲಿ ರಾತ್ರಿಯವೇಳೆ ಯಾವುದೇ ರಕ್ಷಣೆ ಇಲ್ಲದೆ ಜೀವ ಕೈಯಲ್ಲಿ ಹಿಡಿದು ಕರ್ತವ್ಯ ನಿರ್ವಹಿಸುವಂತಾಗಿದೆ. ಸರಕಾರ ಚುನಾವಣೆಗಾಗಿ ಕೋಟ್ಯಂತರ ರೂಪಾಯಿ ವೆಚ್ಚಮಾಡುವಾಗ ಚುನಾವಣಾ…

Read More

ವಿರಾಜಪೇಟೆ ಮಾ.27  NEWS DESK :  ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಐ.ಕ್ಯೂ.ಎ.ಸಿ, ರಾಜ್ಯಶಾಸ್ತ್ರ ವಿಭಾಗ ಮತ್ತು ಚುನಾವಣಾ ಸಾಕ್ಷರತಾ ಸಮಿತಿಯ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಮತದಾನ ಜಾಗೃತಿ ಕುರಿತು  ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಹೆಚ್.ಪಿ.ನಿರ್ಮಲ ಮಾತನಾಡಿ,  ಇಂದಿನ ಯುವ ಸಮುದಾಯವು ಮತದಾನವನ್ನು ಕೇವಲ ಹಕ್ಕು ಎಂದು ಪರಿಗಣಿಸದೆ ದೇಶದ ಜವಾಬ್ದಾರಿಯುತ ನಾಗರಿಕನಾಗಿ ಮತದಾನ ನನ್ನ ಕರ್ತವ್ಯವೆಂದು ಭಾವಿಸಿಸಿ ಸದೃಢ ಭಾರತವನ್ನು ನಿರ್ಮಿಸುವಲ್ಲಿ ವಿವೇಚನೆಯಿಂದ ನಮ್ಮ ರಾಜಕೀಯ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ, ವಿದ್ಯಾವಂತ ಯುವಜನತೆಯು ಮತದಾನದಂತಹ ರಾಜಕೀಯ ಚಟುವಟಿಕೆಗಳನ್ನು ಅಸಡ್ಡೆಯಿಂದ ಕಾಣುತ್ತಿದ್ದು, ಇದು ನಮ್ಮ ದೇಶದ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಆದ್ದರಿಂದ ಯುವಜನತೆಯು ಹೆಚ್ಚು ಪರಿಣಾಮಕಾರಿಯಾಗಿ  ಆಲೋಚಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಮತದಾನ…

Read More