ಲೇಖಕ: admin

ಮಡಿಕೇರಿ ಮಾ.7 NEWS DESK : ಬಿರುನಾಣಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ನಡೆಯಿತು. ಮಕ್ಕಳ ಸಂತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ನೇತ್ರಾವತಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,  ವಿದ್ಯಾರ್ಥಿಗಳಲ್ಲಿ  ವ್ಯಾಪಾರ, ವಹಿವಾಟು ಜ್ಞಾನ ಮೂಡಿಸಲು ಸಹಕಾರಿಯಾಗಿದೆ ಎಂದರು. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಕಾರಿಗಳು, ಹಣ್ಣು ಹಂಪಲುಗಳನ್ನು ಸಂಭ್ರಮದಿಂದ ಮಾರಾಟ ಮಾಡಿದರು. ಕಾರ್ಯಕ್ರಮದ ಮೂಲಕ ಗಣಿತದ ಮೂಲ ಕ್ರಿಯೆ ಹಾಗೂ ಲಾಭ ನಷ್ಟಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಮುಖ್ಯ ಶಿಕ್ಷಕ ರು ಸಹಶಿಕ್ಷಕರು ಭಾಗವಹಿಸಿದ್ದರು.

Read More

ಮಡಿಕೇರಿ ಮಾ.6 NEWS DESK: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಮಂಡಲ ಕೇಂದ್ರ ಸರ್ಕಾರದ ಪರ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕಳೆದ 10 ವರ್ಷಗಳ ಕಾಲ ದೇಶಕ್ಕಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಸಂಸದ ಪ್ರತಾಪ್ ಸಿಂಹ ಅವರ ಸಾಧನೆಯ ಕೈಪಿಡಿಯನ್ನು ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ವಿತರಿಸಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನಗರಸಭೆಯ ಬಿಜೆಪಿ ಸದಸ್ಯರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.6 NEWS DESK : ಪೊನ್ನಂಪೇಟೆ ತಾಲೂಕಿನ ದೇವರಪುರದಲ್ಲಿ 2023ರ ಡಿಸೆಂಬರ್ 9ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ರಾಜ್ಯ ತಲಚೇರಿ ಮೂಲದ ಶಾಲಿನ್(30), ಟಿ.ಶ್ರೀಜಿತ್(38) ಮತ್ತು ಕೆ.ವೈಷ್ಣವ್(27) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಹಿಂದೆ ಈ ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಒಟ್ಟು 8 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ 3 ಮಂದಿ ಆರೋಪಿಗಳನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದು, ಆ ಮೂಲಕ ಒಟ್ಟು 11 ಆರೋಪಿಗಳು ಸೆರೆ ಸಿಕ್ಕಿದಂತಾಗಿದೆ. ಈ ದರೋಡೆ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿರುವ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಎಲ್ಲಾ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ದರೋಡೆ ಕೃತ್ಯಕ್ಕೆ ಬಳಕೆ ಮಾಡಲಾದ 30 ಲಕ್ಷ ರೂ. ಮೌಲ್ಯದ ಒಟ್ಟು 5 ವಾಹನಗಳು ಹಾಗೂ 7ರಿಂದ 8 ಲಕ್ಷ ರೂ. ಹಣವನ್ನೂ ಜಪ್ತಿ ಮಾಡಲಾಗಿದೆ.

Read More

ಮಡಿಕೇರಿ ಮಾ.6 NEWS DESK  : ಭಯೋತ್ಪಾದಕ ಕೃತ್ಯಗಳು ಖಂಡಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯ ಕೊಡಗು ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಿತಿಯ ಪ್ರಮುಖರು ಹಾಗೂ ಕಾರ್ಯಕರ್ತರು ಮಾನವ ಸರಪಳಿ ರಚಿಸಿ, ಭಯೋತ್ಪಾದಕ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ರಾಜ್ಯದಲ್ಲಿ ಮತ್ತೆ ಭಯೋತ್ಪಾದನಾ ಚಟುವಟಿಕೆ ಚಿಗುರೊಡೆಯುತ್ತಿದೆ ಎಂದು ಆರೋಪಿಸಿದ ಪ್ರಮುಖರು ರಾಜ್ಯದ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆಯನ್ನು ಕೂಗಿರುವ ರಾಷ್ಟ್ರದ್ರೋಹಿಗಳನ್ನು ಬಂಧಿಸಬೇಕು, “ರಾಮೇಶ್ವರಂ ಕೆಫೆ” ಯಲ್ಲಿ ನಡೆದ ಬಾಂಬ್ ಸ್ಫೋಟದ ಆರೋಪಿಯನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಮಾ.6 NEWS DESK  : ರಾಜ್ಯ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ ತಿದ್ದುಪಡಿಗೆ ಮುಂದಾಗಿದೆ ಎಂದು ಆರೋಪಿಸಿ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ದೇವಸ್ಥಾನಗಳ ಮಹಾಸಂಘದ ಪ್ರಮುಖರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಹಾಸಂಘದ ಸಂಯೋಜಕ ವಿಜಯ್ ಕುಮಾರ್, ರಾಜ್ಯ ಸರ್ಕಾರ ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಆಧಿನಿಯಮ 1997 ಕ್ಕೆ ಮತ್ತಷ್ಟು ತಿದ್ದುಪಡಿಯನ್ನು ಮಾಡಿದೆ. ಈ ತಿದ್ದುಪಡಿಯಲ್ಲಿ ಹಲವಾರು ದೋಷಗಳಿದ್ದು, ಅವುಗಳು ದೇವಾಲಯಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಆದ್ದರಿಂದ ಈ ಕಲಂಗಳನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು. ಹೊಸೂರು ದೇವಾಲಯ ಸಮಿತಿಯ ಹೊಸೂರು ಧರ್ಮಜ, ಕುಶಾಲನಗರ ಮುತ್ತಪ್ಪ ದೇವಾಲಯದ ಪವನ್ ಬಿದ್ದಪ್ಪ, ಕುಶಾಲನಗರ ಸಾಯಿ ದೇವಾಲಯದ ಓಬಲ್ ರೆಡ್ಡಿ, ಮಡಿಕೇರಿಯ ಶ್ರೀಚೌಡೇಶ್ವರಿ ದೇವಾಲಯದ ಜಗದೀಶ್, ಗಜಾನನ, ಕನ್ನಿಕಾ ಪರಮೇಶ್ವರಿ…

Read More

ಮಡಿಕೇರಿ ಮಾ.6 NEWS DESK : ಅಪಘಾತದಿಂದ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಮಾ.8 ರಂದು ಮರುಸ್ಥಾಪನೆ ಮಾಡಲಾಗವುದೆಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರು ತಿಂಗಳ ಹಿಂದೆ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆಎಸ್‍ಆರ್‍ಟಿ ಬಸ್ ಡಿಕ್ಕಿಪಡಿಸಿ ಹಾನಿಯಾಗಿದ್ದ ಪ್ರತಿಮೆಯನ್ನು ದುರಸ್ತಿ ಪಡಿಸಲಾಗಿದ್ದು, ಮಾ.8 ರಂದು ಜಿಲ್ಲಾಡಳಿತ ಹಾಗೂ ನಗರಸಭೆಯ ಸಹಕಾರದೊಂದಿಗೆ ಪ್ರತಿಮೆಯನ್ನು ಮರು ಸ್ಥಾಪನೆ ಮಾಡಲಾಗುವುದೆಂದರು. ಬೆಳಿಗ್ಗೆ 6.30ಕ್ಕೆ ಮೈಸೂರಿನಿಂದ ಪ್ರತಿಮೆ ಹೊರಡಲಿದ್ದು, ಕುಶಾಲನಗರದಲ್ಲಿ ಭವ್ಯ ಸ್ವಾಗತ ಕೋರಲಾಗುವುದು. ಇದೇ ಸಂದರ್ಭ ತಿಮ್ಮಯ್ಯ ಅವರ ಮಾಹಿತಿ ಇರುವ ಸ್ತಬ್ಧಚಿತ್ರ ಹಾಗೂ ಬೈಕ್ ಮತ್ತು ಕಾರು ಜಾಥಾ ನಡೆಯಲಿದೆ ಎಂದರು. ನಂತರ ಮಡಿಕೇರಿಯ ಕಾರ್ಯಪ್ಪ ವೃತ್ತದಿಂದ ಗೌರವಯುತ ಮೆರವಣಿಗೆಯ ಮೂಲಕ ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡವ ಸಾಂಪ್ರದಾಯಿಕ ಉಡುಪು, ವಾಲಗದೊಂದಿಗೆ ಜನರಲ್ ತಿಮ್ಮಯ್ಯ ವೃತ್ತಕ್ಕೆ ತಂದು ಅಪರಾಹ್ನ 12 ಗಂಟೆಗೆ ಮಾಜಿ ಸಚಿವ ಎಂ.ಸಿ.ನಾಣಯ್ಯ ಮುಂದಾಳತ್ವದಲ್ಲಿ  ಏರ್…

Read More

ಮಡಿಕೇರಿ ಮಾ.6 NEWS DESK : ಲಯನ್ಸ್ ಇಂಟರ್ ನ್ಯಾಷನಲ್ ಸಂಸ್ಥೆ ವತಿಯಿಂದ ಮಾ.9ರಂದು ಕಗ್ಗೋಡ್ಲುವಿನಲ್ಲಿ ಪ್ರಾಂತೀಯ ಸಮ್ಮೇಳನ ನಡೆಯಲಿದೆ ಎಂದು ಲಯನ್ಸ್ ಮಡಿಕೇರಿ ಅಧ್ಯಕ್ಷ ಡಿ.ಮಧುಕರ್ ಶೇಟ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಗ್ಗೋಡ್ಲು ಸಮೀಪದ ಕೂರ್ಗ್ ಅಂಬರದಲ್ಲಿ ಸಂಜೆ 4 ಗಂಟೆಗೆ ಲಯನ್ಸ್ ಇಂಟರ್ ನ್ಯಾಷನಲ್ 8ರ ಅಧ್ಯಕ್ಷ ಅಂಬೆಕಲ್ ನವೀನ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ 14 ಪ್ರಾಂತ್ಯಗಳ ಲಯನ್ಸ್ ಸಂಸ್ಥೆಯ ಸದಸ್ಯರು, ಪ್ರಾಂತ್ಯ ಅಧ್ಯಕ್ಷರು, ಮಾಜಿ ಹಾಗೂ ಹಾಲಿ ಗವರ್ನರ್‍ಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಲಯನ್ಸ್ ಇಂಟರ್ ನ್ಯಾಷನಲ್ 8ರ ಅಧ್ಯಕ್ಷ ಅಂಬೆಕಲ್ ನವೀನ್ ಮಾತನಾಡಿ, ಜಿಲ್ಲೆಯಲ್ಲಿ 500ಕ್ಕೂ ಅಧಿಕ ಲಯನ್ಸ್ ಸದಸ್ಯರಿದ್ದಾರೆ. ಸಮ್ಮೇಳನದಲ್ಲಿ ಲಯನ್ಸ್‍ನ ವಾರ್ಷಿಕ ಕಾರ್ಯಕ್ರಮಗಳನ್ನು ಸದಸ್ಯರಿಗೆ ತಿಳಿಸಲಾಗುವುದು. ಪ್ರಮುಖರಾದ ಜಿ.ಎಸ್.ನಟೇಶ್, ಜಿ.ಶ್ರೀನಿವಾಸ್ ಪಾಲ್ಗೊಳ್ಳಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರಾದ ರಾಮಪ್ಪ, ಬಾಲಾಜಿ ಕಶ್ಯಪ್ ಹಾಗೂ ಡಾ.ಎಂ.ಜಿ.ಪಾಟ್ಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ…

Read More

ಮಡಿಕೇರಿ ಮಾ.6 NEWS DESK : ವಿಶ್ವವಿದ್ಯಾನಿಲಯದ 104ನೇ ಘಟಿಕೋತ್ಸವದಲ್ಲಿ ಸೋಮವಾರಪೇಟೆಯ ಹೆಚ್.ಡಿ.ರೋಜಾ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಭೂವಿಜ್ಞಾನ ವಿಭಾಗದಲ್ಲಿ ಪಿ.ಹೆಚ್.ಡಿ ಪದವಿ ನೀಡಿ ಗೌರವಿಸಿದೆ. ಡಾ. ಡಿ.ನಾಗರಾಜು ಅವರ ಮಾರ್ಗದರ್ಶನದಲ್ಲಿ “ಹೈಡ್ರೋಜಿಯಾಲಜಿಕಲ್ ಸ್ಟಡೀಸ್ ಆನ್ ಸೋಮವಾರಪೇಟೆ ವಾಟರ್ ಶೆಡ್ ಕೊಡಗು ಡಿಸ್ಟ್ರೀಕ್ಟ್ ಯು ಸಿಂಗ್ ರಿಮೋಟ್ ಸೆನ್ಸಿಂಗ್ ಆಂಡ್ ಜಿ.ಐ.ಎಸ್” ವಿಷಯದಲ್ಲಿ ಮಹಾ ಪ್ರಬಂಧವನ್ನು ಮಂಡಿಸಿದರು. ರೋಜಾ ಸೋಮವಾರಪೇಟೆ ತಾಲ್ಲೂಕಿನ ಹಿರಿಕರ ಗ್ರಾಮದ ನಿವೃತ್ತ ಶಿಕ್ಷಕರಾದ ಹೆಚ್.ಬಿ.ಧರ್ಮಪ್ಪ ಹಾಗೂ ಹೆಚ್.ಡಿ.ಲತಾ ದಂಪತಿಗಳ ಪುತ್ರಿ. ಇವರು ಪ್ರಸ್ತುತ ಕೊಡಗು ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಭೂವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More

ಮಡಿಕೇರಿ ಮಾ.6 NEWS DESK : ಮಾ.9 ರಂದು ನಡೆಯಬೇಕಿದ್ದ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಮಾ.16 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ತಿಳಿಸಿದ್ದಾರೆ. ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: www.kslsa.kar.nic.in ಸಹಾಯವಾಣಿ ಸಂಖ್ಯೆ 15100 ಮತ್ತು 1800-425-90900 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು…

Read More

ಮಡಿಕೇರಿ ಮಾ.6 NEWS DESK : ಕೊಡವ ಮಹಿಳೆಯರ ಸಾಂವಿಧಾನಿಕ ಸಬಲೀಕರಣಕ್ಕಾಗಿ ಒತ್ತಾಯಿಸಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ಮಾ.8 ರಂದು ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಧರಣಿ ಸತ್ಯಾಗ್ರಹ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರ್ಧರಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, “ಮಹಿಳೆಯರ ಸಬಲೀಕರಣಕ್ಕಾಗಿ ಸಂಪೂರ್ಣ ವೆಚ್ಚ ಭರಿಸಬೇಕು ಮತ್ತು ಅದರ ಪ್ರಗತಿಯನ್ನು ವೇಗಗೊಳಿಸಬೇಕು” ಎಂಬುವುದು 2024 ರ ಮಹಿಳಾ ದಿನಾಚರಣೆಯ ವಿಶ್ವಸಂಸ್ಥೆಯ ಘೋಷವಾಕ್ಯವಾಗಿದ್ದು, ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‍ಸಿ ಹಕ್ಕು ಮಂಡಿಸಲಿದೆ ಎಂದು ತಿಳಿಸಿದ್ದಾರೆ. ಆದಿಮಸಂಜಾತ ಅತ್ಯಂತ ಸೂಕ್ಷ್ಮ ಬುಡಕಟ್ಟು ಕೊಡವ ಜನಾಂಗದಲ್ಲಿರುವ ಮಹಿಳೆಯರ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಮಹಿಳಾ ದಿನಾಚರಣೆಯಂದು ಶಾಂತಿಯುತ ಧರಣಿ ನಡೆಸಲಾಗುವುದು. ಕೊಡವ ಭೂಮಿಯಲ್ಲಿ ಕೊಡವ ಮಹಿಳೆಯರ ಐತಿಹಾಸಿಕ ನಿರಂತರತೆ, ನೆಲ, ಭಾಷೆ, ಸಾಂಸ್ಕೃತಿಕ ಪರಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ “ಕೊಡವ ಲ್ಯಾಂಡ್” ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡವ…

Read More