ನಾಪೋಕ್ಲು ಮಾ.27 NEWS DESK : ಕೊಡವ ಕುಟುಂಬ ತಂಡಗಳ ನಡುವಿನ ಕೌಟುಂಬಿಕ ಹಾಕಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ನಾಪೋಕ್ಲುವಿನಲ್ಲಿ ಕುಂಡ್ಯೋಳಂಡ ಕಪ್ ಹಾಕಿ ನಮ್ಮೆ ಜರುಗಲಿದೆ. ಪ್ರತಿವರ್ಷ ಜರುಗುವ ಹಾಕಿ ಉತ್ಸವ ಹೆಚ್ಚೆಚ್ಚು ಜನಪ್ರಿಯತೆ ಗಳಿಸಿಕೊಳ್ಳುತ್ತಿದೆ. ಹಾಕಿ ನಮ್ಮೆಯ ಆಯೋಜಕರಾದ ಕುಂಡ್ಯೋಳಂಡ ಕುಟುಂಬಸ್ಥರು ಬಿರುಸಿನ ಸಿದ್ಧತೆ ನಡೆಸಿದ್ದು, ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಮೈದಾನಗಳ ನಿರ್ಮಾಣ, ಗ್ಯಾಲರಿ, ವೇದಿಕೆ, ಸ್ಟಾಲ್ಗಳ ನಿರ್ಮಾಣ ಸೇರಿದಂತೆ ವಿವಿಧ ಕಾರ್ಯಗಳು ಭರದಿಂದ ಸಾಗುತ್ತಿವೆ. ಮಾ.30 ರಿಂದ ಏ.28 ರವರೆಗೆ ಒಂದು ತಿಂಗಳ ಕಾಲ ಕೌಟುಂಬಿಕ ಹಾಕಿ ಉತ್ಸವ ನಡೆಯಲಿದ್ದು, ಮಾ.30ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಏ.28 ರಂದು ಅಂತಿಮ ಪಂದ್ಯ ನಡೆಯಲಿದೆ. ಸುಮಾರು 400 ಕೊಡವ ಕುಟುಂಬಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಕುಟುಂಬಸ್ಥರು ಕಾರ್ಯೋನ್ಮುಖರಾಗಿದ್ದು, 360 ಕುಟುಂಬ ತಂಡಗಳು ಈ ಬಾರಿಯ ಹಾಕಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿವೆ ಅಂತೆಯೇ ಕುಂಡ್ಯೋಳಂಡ ಹಾಕಿ ಉತ್ಸವ ವಿಶ್ವ ದಾಖಲೆ ಪುಟ…
ಲೇಖಕ: admin
ನಾಪೋಕ್ಲು ಮಾ.27 NEWS DESK : ವೆಸ್ಟ್ ಕೊಳಕೇರಿಯ ಶ್ರೀ ಭಗವತಿ ದೇವರ ವಾರ್ಷಿಕ ಉತ್ಸವ ನಾಲ್ಕು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು. ಉತ್ಸವದ ಅಂಗವಾಗಿ ಪಟ್ಟಣಿ ಹಬ್ಬ, ದೇವರ ಪ್ರದರ್ಶನ ಬಲಿ,ವಿಶೇಷ ಮಹಾಪೂಜೆ, ಆಟ್ ಪಾಟ್ ,ತೆಂಗಿನಕಾಯಿಗೆ ಗುಂಡು ಹೊಡೆಯುವುದು, ದೇವರ ಜಳಕ, ದೇವರ ಕಳಸ ಬೋಟೆಕಾರ ದೇವರ ಹಬ್ಬ ನಡೆಯಿತು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನೆರವೇರಿತು. ಈ ಸಂದರ್ಭ ದೇವಾಲಯದ ದೇವತಕ್ಕರಾದ ಕಾಂಡಂಡ ಕುಟುಂಬಸ್ಥರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಎಸ್. ಕುಟ್ಟಪ್ಪ, ಉಪಾಧ್ಯಕ್ಷ ಕಲಿಯಂಡ ಕಾಳಪ್ಪ, ಕಾರ್ಯದರ್ಶಿ ಕುಂಡ್ಯೋಳಂಡ ವಿಶು ಪೂವಯ್ಯ, ಖಜಾಂಚಿ ಜಯ ಕರುಂಬಯ್ಯ, ಆಡಳಿತ ಮಂಡಳಿ ಸದಸ್ಯರು ಹಾಗೂ ಊರ ಮತ್ತು ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು. ಉತ್ಸವದ ಪೂಜಾ ವಿಧಿ ವಿಧಾನವನ್ನು ಮುಖ್ಯ ಅರ್ಚಕ ಸೀತಾರಾಮ್ ಭಟ್ ಮತ್ತು ಬಳಗ ನೆರವೇರಿಸಿ ಕೊಟ್ಟರು. ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಮಾ.27 NEWS DESK : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬಳಿಕ ಗೋ ಮಾತೆಗೆ ನೀರುಣಿಸುವ ಮೂಲಕ ನಾಡಿನೆಲ್ಲೆಡೆ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸುವಂತೆ ಪ್ರಾರ್ಥಿಸಿ, ರೈತರಿಗೆ ಸಾಂಕೇತಿಕವಾಗಿ ನೇಗಿಲು ನೀಡಿ ಗೌರವಿಸಿದರು. ಈ ಸಂದರ್ಭ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ಆರ್.ರಘು ಕೌಟಿಲ್ಯ, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಸಚಿವ ಎಸ್.ಎ.ರಾಮದಾಸ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್, ಮೈಸೂರು ಜಿಲ್ಲಾ ಅಧ್ಯಕ್ಷ ಎಲ್.ನಾಗೇಂದ್ರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಮಾ.27 NEWS DESK : ವಿಶ್ವ ಹಿಂದೂ ಪರಿಷತ್ ಕೊಡಗು ಘಟಕ, ಬನಶಂಕರಿ ಘಟಕ ಮತ್ತು ರಾಜರಾಜೇಶ್ವರಿ ನಗರ ಶ್ರೀ ರಾಯರ ಮಠದ ಪ್ರಮುಖರು ಭಾಗಮಂಡಲ ಹಾಗೂ ತಲಕಾವೇರಿಗೆ ಭೇಟಿ ನೀಡಿದರು. ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಕಾವೇರಿ ಮಾತೆಗೆ ಬೆಳ್ಳಿಯ ಬಾಗಿನವನ್ನು ಅರ್ಪಿಸಿದರು. ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ್ಯ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮಾತನಾಡಿ, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಜನರು ಮಳೆಯ ಅಭಾವದಿಂದ ನೀರಿಲ್ಲದೆ ಬರಗಾಲದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ.ಈ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕರ್ತರು ಕಾವೇರಿನದಿಯ ಉಗಮ ಸ್ಥಾನ ತಲಕಾವೇರಿಗೆ ಆಗಮಿಸಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದರು. ಈ ಸಂದರ್ಭ ಭಜರಂಗದಳ ಪ್ರಾಂತ್ಯ ಸಂಯೋಜಕರಾದ ಪ್ರಪಂಚನ್, ವಿ.ಹಿಂ.ಪ. ಕೊಡಗು ಜಿಲ್ಲಾ ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಕಾರ್ಯಾಧ್ಯಕ್ಷರಾದ ಸುರೇಶ್ ಮುತ್ತಪ್ಪ, ಸಹಕಾರ್ಯದರ್ಶಿ ಕೇತೀರ ಯತೀಶ್, ಭಜರಂಗದಳ ಜಿಲ್ಲಾ ಸಂಯೋಜಕರಾದ ಪ್ರವೀಣ್ ಸಿದ್ದಾಪುರ, ಸಹ ಸಂಯೋಜಕರಾದ ನವೀನ್ ಪೂಜಾರಿ, ದುರ್ಗಾವಾಹಿನಿ ಜಿಲ್ಲಾ ಸಂಯೋಜಕಿ ರಿಶ್ತ ಚಂಗಪ್ಪ,…
ಮಡಿಕೇರಿ ಮಾ.27 NEWS DESK : ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧೀನದಲ್ಲಿ ಅಮ್ಮತ್ತಿಯ ಪ್ರೌಢ ಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಫುಟ್ಬಾಲ್ ಲೀಗ್ ಪಂದ್ಯಾವಳಿಗೆ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಪೋಷಕ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಚಾಲನೆ ನೀಡಿದರು. ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ,ರಾಜ್ಯ ಫುಟ್ಬಾಲ್ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಜಗದೀಶ್ ಕೊಡಗರಹಳ್ಳಿ, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಖಜಾಂಚಿ ದೀಪು ಮಾಚಯ್ಯ, ಸದಸ್ಯರಾದ ಲಿಜೇಶ್ ಅಮ್ಮತ್ತಿ ಹಾಜರಿದ್ದರು. ಮೊದಲ ದಿನ ಆರು ತಂಡಗಳಿಗೆ ಗೆಲುವು: ಕೊಡಗು ಜಿಲ್ಲಾ ಮಟ್ಟದ ಫುಟ್ಬಾಲ್ ಲೀಗ್ ಪಂದ್ಯಾವಳಿಯ ಮೊದಲ ದಿನ ಆರು ತಂಡಗಳು ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಚೌಡೇಶ್ವರಿ ಎಫ್.ಸಿ ಅಮ್ಮತ್ತಿ ತಂಡವು 4-0 ಗೋಲುಗಳ ಅಂತರದಿಂದ ಕ್ಯಾಪ್ಟನ್ಸ್ ಇಲೆವೆನ್ ಪಾಲಿಬೆಟ್ಟ ತಂಡವನ್ನು ಮಣಿಸಿತು. ಎರಡನೇ ಪಂದ್ಯದಲ್ಲಿ ಎನ್.ವೈ.ಸಿ ಕೊಡಗರಹಳ್ಳಿ ತಂಡವು 1-0 ಗೋಲುಗಳ ಅಂತರದಿಂದ ಎಂ.ಸಿಸಿ ಮಡಿಕೇರಿ ತಂಡವನ್ನು ಸೋಲಿಸಿತು. ಮೂರನೇ ಪಂದ್ಯದಲ್ಲಿ ಅಮಿಟಿ ಯುನೈಟೆಡ್ ಎಫ್.ಸಿ ಗದ್ದೆಹಳ್ಳ…
ಮಡಿಕೇರಿ ಮಾ.27 NEWS DESK : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಡಿಕೇರಿ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಗಾಳಿಬೀಡು ನವೋದಯ ವಿದ್ಯಾಲಯದ ಕನ್ನಡ ಶಿಕ್ಷಕ ಮಾರುತಿ ದಾಸಣ್ಣನವರ್ ಅವರನ್ನು ನೇಮಕ ಮಾಡಲಾಗಿದೆ. ಶರಣ ಸಾಹಿತ್ಯ ಚಟುವಟಿಕೆಗಳನ್ನು ತಾಲ್ಲೂಕಿನಾದ್ಯಂತ ಹೆಚ್ಚಾಗಿ ಪ್ರಚಾರ ಪಡಿಸುವ ಮೂಲಕ ಜನಸಾಮಾನ್ಯರಲ್ಲಿ ವಚನ ಸಾಹಿತ್ಯದ ಅರಿವು ಮೂಡಿಸಬೇಕಿದೆ ಎಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ತಿಳಿಸಿದ್ದಾರೆ.
ವಿರಾಜಪೇಟೆ ಮಾ.27 NEWS DESK : ಭಾರತದ ಪ್ರಜಾಪ್ರಭುತ್ವದ ಯಶಸ್ಸಿಗೆ ಯುವ ಜನತೆಯ ಪಾತ್ರ ಬಹು ಮುಖ್ಯವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಪವಿತ್ರ ರೈ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಐಕ್ಯೂಎಸಿ, ಎನ್. ಎಸ್. ಎಸ್ ಹಾಗೂ ಮತದಾರರ ಸಾಕ್ಷರತಾ ಘಟಕಗಳ ವತಿಯಿಂದ ಜರುಗಿದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತವು ವಿಶ್ವದಲ್ಲಿಯೇ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ನಮ್ಮ ಸರ್ಕಾರ ಹಾಗೂ ಮತದಾನದ ಪದ್ದತಿಗಳು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದರು. ರಾಜಪ್ರಭುತ್ವ ಮತ್ತು ಪ್ರಜಾಪ್ರಭುತ್ವ ದ ನಡುವಿನ ವ್ಯತ್ಯಾಸವನ್ನು ತಿಳಿಸಿದ ಅವರು ಸ್ವತಂತ್ರ, ಸಮಾನತೆ, ನ್ಯಾಯ, ಬ್ರಾತೃತ್ವ ಪ್ರಜಾಪ್ರಭುತ್ವದ ಮೂಲ ಆಧಾರ ಅಂಶಗಳಾಗಿವೆ ಎಂದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯವಾಗಿದ್ದು, ಪ್ರತಿಯೊಬ್ಬರು ಮತವನ್ನು ಚಲಾಯಿಸಬೇಕು ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ ಇಡೀ ವಿಶ್ವವೇ ಭಾರತದ…
ಸೋಮವಾರಪೇಟೆ NEWS DESK : ಶರಣ ಸಾಹಿತ್ಯ ಪರಿಷತ್ತಿನ ಸೋಮವಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಪಟ್ಟಣದ ಹಿರಿಯ ವಕೀಲ ಹಾಗೂ ಕಾಫಿ ಬೆಳೆಗಾರ ಎ.ಎಸ್.ಮಹೇಶ್ ಅವರನ್ನು ನೇಮಕ ಮಾಡಲಾಗಿದೆ. ತಾಲ್ಲೂಕಿನಾದ್ಯಂತ ಶರಣ ಸಾಹಿತ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸುವ ಜೊತೆಗೆ ಪರಿಷತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೊಂದಾಯಿಸುವ ಮೂಲಕ ಪರಿಷತ್ತನ್ನು ಕಟ್ಟಿ ಬೆಳೆಸುವ ಪಣ ತೊಡಬೇಕೆಂದು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಡಿಕೇರಿ ಮಾ.27 NEWS DESK : ಲೋಕಸಭಾ ಚುನಾವಣೆ ಸಂಬಂಧ ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನವು ಈಗಾಗಲೇ ಆರಂಭವಾಗಿದೆ. ಆ ನಿಟ್ಟಿನಲ್ಲಿ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ(ಸ್ವೀಪ್) ವತಿಯಿಂದ ಜಿಲ್ಲೆಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಂದಾಗಲಾಗಿದೆ. ಪ್ರಥಮ ಹಂತದಲ್ಲಿ ಜಿಲ್ಲೆಯ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ‘ಪೋಸ್ಟ್ ಕಾರ್ಡ್’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಶೇಕಡವಾರು ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜಾಥ ಕಾರ್ಯಕ್ರಮ, ಚಿತ್ರಕಲೆ, ಸೇರಿದಂತೆ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತದಾನದ ಮಹತ್ವವನ್ನು ಸಾರುವಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ವರ್ಣಿತ್ ನೇಗಿ ತಿಳಿಸಿದ್ದಾರೆ.
ಮಡಿಕೇರಿ ಮಾ.27 NEWS DESK : ಇದೇ ಏ.5 ರಂದು ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 117 ನೇ ಜನ್ಮ ದಿನಾಚರಣೆ ಹಾಗೂ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು. ಏಪ್ರಿಲ್, 05 ರಂದು ಡಾ.ಬಾಬು ಜಗಜೀವನ್ ರಾಂ ಅವರ 117 ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್, 14 ರಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಆಯಾಯ ದಿನಗಳಂದು ಬೆಳಗ್ಗೆ 10.30…






