ಲೇಖಕ: admin

ನಾಪೋಕ್ಲು ಮಾ.6 NEWS DESK  : ಪೇರೂರು ಗ್ರಾಮದ ಶ್ರೀ ಈಶ್ವರ ಇಗ್ಗುತ್ತಪ್ಪ ದೇವಾಲಯದಲ್ಲಿ ಮಾ.8ರಂದು ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದೆ. ಅಂದು ಮುಂಜಾನೆಯಿಂದಲೇ ದೇವಾಲಯದಲ್ಲಿ ತುಲಾಭಾರ, ಮಹಾಪೂಜೆ, ಅನ್ನದಾನ , ದೇವರ ನೃತ್ಯ ಬಲಿ ಪೂಜೆ ನಡೆಯಲಿದೆ. ¨ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಹಾಗೂ ತಕ್ಕ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ ಮಾ.6 NEWS DESK :  ಪ್ರಸಕ್ತ (2023-24) ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ ಯುವತಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯಡಿ ಆಪ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಧಿತ ಅರ್ಜಿ ನಮೂನೆಗಳನ್ನು ಕಚೇರಿ ಸಮಯದಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಮಾರ್ಚ್, 25 ರೊಳಗೆ ಸಲ್ಲಿಸಬೇಕು. ಸ್ವಯಂ ಉದ್ಯೋಗದಡಿ ಟೈಲರಿಂಗ್(60 ದಿನ), ಬೊಟಿಕ್(30 ದಿನ), ಸಹಾಯಕ ಕೂದಲು ಚಿಕಿತ್ಸಕರು(30 ದಿನ), ವಸ್ತ್ರ ವಿನ್ಯಾಸಕಾರ(30 ದಿನ), ಹಾರ್ಡ್‍ವೇರ್ ರಿಪೇರ್ ಟೆಕ್ನಿನಿಷಿಯನ್(ಯಂತ್ರಾಂಶ ದುರಸ್ತಿ ತಂತ್ರಜ್ಞ) (30 ದಿನ), ಹೇರ್ ಸ್ಟೈಲಿಸ್ಟ್(30 ದಿನ), ಸೌಂದರ್ಯ ಚಿಕಿತ್ಸಕ(30 ದಿನ), ದೇಶಿಯಾ ಡೇಟಾ ಎಂಟ್ರಿ ಆಪರೇಟರ್ (60 ದಿನಗಳು), ಸೌರ ಫಲಕ ಸ್ಥಾಪನೆ ಮತ್ತು ಸೇವೆ(30 ದಿನ) ಅರ್ಜಿಯೊಂದಿಗೆ ಪೋಟೋ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ಸಲ್ಲಿಸಬೇಕು. ಹೆಚ್ಚಿನ…

Read More

ಮಡಿಕೇರಿ ಮಾ.6 NEWS DESK : ಕರ್ನಾಟಕ ರಾಜ್ಯ ಅಬಕಾರಿ ಆಯುಕ್ತರು, ಬೆಂಗಳೂರು ಮತ್ತು ಮಂಗಳೂರು ಅಬಕಾರಿ ಜಂಟಿ ಆಯುಕ್ತರು ವಿಭಾಗದ ಅವರ ನಿರ್ದೇಶನದಂತೆ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಕೊಡಗು ಜಿಲ್ಲೆಯಲ್ಲಿ ಜಿಲ್ಲೆಯಾದ್ಯಂತ ಕಳ್ಳಭಟ್ಟಿ, ಸೇಂದಿ, ಬೆಲ್ಲದ ಕೊಳೆ ಸೇರಿದಂತೆ ಅಕ್ರಮ ಮದ್ಯ ಮಾರಾಟ ಸಂಬಂಧಿತ ಹಾಗೂ ಗಾಂಜ, ಡ್ರಗ್ಸ್, ಅಫೀಮ್ ಸೇರಿದಂತೆ ಮಾದಕ ವಸ್ತುಗಳ ಸೇವನೆ, ಮಾರಾಟ ನಿಯಂತ್ರಿಸುವ ಸಂಬಂಧ 24*7 ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಮಾಹಿತಿ ನೀಡಿ, ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟಲು ಸಹಕರಿಸುವಂತೆ ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ. ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ ಜಿಲ್ಲಾ ನಿಯಂತ್ರಣ ಕಂಟ್ರೋಲ್ ರೂಂ, ಕೊಡಗು ಜಿಲ್ಲೆ ಮಡಿಕೇರಿ ದೂ.ಸಂ.08272-229110, ಮಡಿಕೇರಿ ತಾಲ್ಲೂಕು ಕಂಟ್ರೋಲ್ ರೂಂ. 08272-223368(ವಲಯ ಕಚೇರಿ), 08272-224773 (ಉಪ ವಿಭಾಗ ಕಚೇರಿ), ಸೋಮವಾರಪೇಟೆ ತಾಲ್ಲೂಕು ಕಂಟ್ರೋಲ್ ರೂಂ ದೂ.ಸಂ. 08276-281729(ವಲಯ ಕಚೇರಿ), 08276-281730/200609(ಉಪವಿಭಾಗ ಕಚೇರಿ), ವಿರಾಜಪೇಟೆ ತಾಲ್ಲೂಕು…

Read More

ಸೋಮವಾರಪೇಟೆ ಮಾ.6 NEWS DESK : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಿರುವ ‘ಮಕ್ಕಳ ಸಾಹಿತ್ಯ ಸಂಭ್ರಮ’ 2ನೇ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ನಡೆಯಿತು. ಒಟ್ಟು ನೂರು ಮಕ್ಕಳು ನಾಲ್ಕು ವಿಭಾಗಗಳಲ್ಲಿ ತಮಗೆ ನೀಡಿದ ಟಾಸ್ಕ್‍ಗಳನ್ನು ಅಂಜಿಕೆ, ಭಯವಿಲ್ಲದೆ ನಿರ್ವಹಿಸಿದರು. ನಾಟಕದ ವಿಭಾಗದಲ್ಲಿ ಒಂದು ಕುರಿ ಹಳ್ಳಕ್ಕೆ ಬಿದ್ದರೆ ಎಲ್ಲಾ ಬಿದ್ದಂತೆ, ಬಾಲ್ಯ ವಿವಾಹ, ನಾಯಿಯರೋದನೆ ಎಂಬ ಶೀರ್ಷಿಕೆ ಕೊಟ್ಟು ತಾವೇ ರಚಿಸಿ ಅಭಿನಯಿಸಿದರು. ಕಥೆ ವಿಭಾಗದ ಮಕ್ಕಳು ಚಿತ್ರ ನೋಡಿ ಕಥೆ ಬರೆಯುವುದು, ಕಥೆಗೊಂದು ಸಾಲು, ಪದ ಆಧರಿಸಿ ಕತೆ ರಚಿಸುವ, ಮಕ್ಕಳ ಬದುಕಿನ ಘಟನೆ ಆಧಾರಿತ ಕಥಾ ರಚನೆ, ಕಡ್ಡಿಗೊಂಬೆ ಮೂಲಕ ಕಥೆ ಕಟ್ಟುವುದು ಹೀಗೆ ಹಲವು ಬಗೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕವಿತೆ ವಿಭಾಗದಲ್ಲಿ ಪ್ರಾಸ ಪದ ಬಳಸಿ ಕವಿತೆ, ಚಿತ್ರ ಬಳಸಿ ಕವಿತೆ, ಸಾಲಿಗೆ ಸಾಲು ಕವಿತೆ, ನಮ್ಮನೆ ಹಾಡು ಹೀಗೆ ಅನೇಕ ಮಾದರಿಯಲ್ಲಿ…

Read More

ಸೋಮವಾರಪೇಟೆ ಮಾ.6 NEWS DESK : ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಟ್ಟಣದಲ್ಲಿ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಸುವಂತೆ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಜಾಗೃತಿ ಆಂದೋಲನ ನಡೆಯಿತು. ಈ ಸಂದರ್ಭ ಕರವೆ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಮಾತನಾಡಿ, ಅನ್ಯ ರಾಜ್ಯಗಳಲ್ಲಿ ಅಲ್ಲಿಯ ಮಾತೃ ಭಾಷೆಯಲ್ಲಿಯೇ ನಾಮಫಲಕಗಳನ್ನು ಹಾಕಲು ಅವಕಾಶ ಇದೆ. ಆದರೆ, ಕರ್ನಾಟಕದದಲ್ಲಿ ಮಾತ್ರ ಇಂಗ್ಲೀಷ್ ಸೇರಿದಂತೆ ಅನ್ಯ ಭಾಷೆ ಹೆಚ್ಚಾಗಿ ಬಳಸುತ್ತಿದ್ದಾರೆ. ಭಾಷಾವಾರು ಪ್ರಾಂತ್ಯಗಳ ವಿಂಗಡಣೆ ಆಗಿದ್ದೇ ಆಯಾ ಭಾಗದ ನುಡಿ ಪರಂಪರೆಯನ್ನು ರಕ್ಷಿಸಲು, ಗೌರವಿಸಲು. ಕನ್ನಡದಲ್ಲಿ ನಾಮಫಲಕ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಇಡೀ ರಾಜ್ಯಾದ್ಯಂತ ಮಾಡುತ್ತಿದೆ. ಕನ್ನಡ ವಿಧೇಯಕದ ಕುರಿತು ಎಲ್ಲರಿಗೂ ಅರಿವು ಮೂಡಿಸುವ ಕೆಲಸ ಮಾಡಲಿದೆ ಎಂದು ತಿಳಿಸಿದರು. ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ ಶೇ.60 ಕನ್ನಡ ಭಾಷೆ ಬಳಸಬೇಕು. ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳಿಗೆ ಇದು ಕೊನೆಯ ಎಚ್ಚರಿಕೆಯಾಗಿದ್ದು, ಎಲ್ಲರೂ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು, ಕನ್ನಡ ನಾಮ ಫಲಕ…

Read More

ಮಡಿಕೇರಿ ಮಾ.5 NEWS DESK : ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಶಿಸ್ತಿನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಅತಿಥಿ ಉಪನ್ಯಾಸಕರು 5 ತಿಂಗಳ ವೇತನ ಪಾವತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಅವರು ಬೇಡಿಕೆಗಳನ್ನು ಆಲಿಸಿದರು. ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು ಮಂಗಳೂರು ವಿ.ವಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು ಮತ್ತು ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ರಾಘವ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಪ್ರಮುಖರಾದ ಬಿ.ಕೆ.ಅರುಣ್ ಕುಮಾರ್, ಬಿ.ಕೆ. ಜಗದೀಶ್, ಮಹೇಶ್ ಜೈನಿ, ಕವನ್ ಹಾಗೂ ಅತಿಥಿ ಉಪನ್ಯಾಸಕರು ಹಾಜರಿದ್ದರು.

Read More

ಮಡಿಕೇರಿ ಮಾ.5 NEWS DESK : ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಶಿಸ್ತಿನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಅತಿಥಿ ಉಪನ್ಯಾಸಕರು 5 ತಿಂಗಳ ವೇತನ ಪಾವತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಅವರು ಬೇಡಿಕೆಗಳನ್ನು ಆಲಿಸಿದರು. ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು ಮಂಗಳೂರು ವಿ.ವಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದು ಮತ್ತು ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ರಾಘವ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಪ್ರಮುಖರಾದ ಬಿ.ಕೆ.ಅರುಣ್ ಕುಮಾರ್, ಬಿ.ಕೆ. ಜಗದೀಶ್, ಮಹೇಶ್ ಜೈನಿ, ಕವನ್ ಹಾಗೂ ಅತಿಥಿ ಉಪನ್ಯಾಸಕರು ಹಾಜರಿದ್ದರು.

Read More

ಮಡಿಕೇರಿ ಮಾ.5 NEWS DESK : ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ನಿವೇಶನ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ದಲಿತ ರೈಟ್ಸ್ ಮೂವ್‌ಮೆಂಟ್ ವತಿಯಿಂದ ಪೊನ್ನಂಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪೊನ್ನಂಪೇಟೆ ಬಸ್ ನಿಲ್ದಾಣದಿಂದ ತಾಲೂಕು ಪಂಚಾಯಿತಿ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ನಿವೇಶನಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಸುಡು ಬಿಸಿಲಿನಲ್ಲಿ ಪುಟ್ಟ ಮಕ್ಕಳನ್ನು ಎತ್ತಿಕೊಂಡ ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡು ನಿವೇಶನ ನೀಡುವಂತೆ ಒತ್ತಾಯಿಸಿದರು. ಬಳಿಕ ತಾಲೂಕು ಪಂಚಾಯ್ತಿ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು, ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ 2 ತಿಂಗಳ ಒಳಗೆ ನಿವೇಶನ ನೀಡಬೇಕು. ಉಳ್ಳವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಭೂಮಿಯನ್ನು ಸರಕಾರ ವಶಕ್ಕೆ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭ ಆಲ್ ಇಂಡಿಯಾ ದಲಿತ ರೈಟ್ಸ್ ಮೂವ್‌ಮೆಂಟ್‌ನ ರಾಜ್ಯ ಸಂಚಾಲಕ ಹಾಗೂ ಕೊಡಗು ಜಿಲ್ಲಾಧ್ಯಕ್ಷ ರಮೇಶ್ ಮಾಯಮುಡಿ ಮಾತನಾಡಿ,…

Read More

ಮಡಿಕೇರಿ ಮಾ.5 NEWS DESK : ಇತ್ತೀಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟ ಗಾಳಿಬೀಡು ಗ್ರಾಮದ ಅಪ್ಪಚ್ಚು (60) ಅವರ ಮನೆಗೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಶಾಸಕರು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಗ್ರಾಮಸ್ಥರು ದಾಳಿ ಮಾಡಿದ ಕಾಡಾನೆಯನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದರು. ವನ್ಯಜೀವಿ ಹಾವಳಿಯಿಂದ ರಕ್ಷಣೆಯನ್ನು ನೀಡಬೇಕು, ರಸ್ತೆಯುದ್ದಕ್ಕೂ ಸೋಲಾರ್ ದೀಪವನ್ನು ಅಳವಡಿಸಬೇಕು, ಮೃತರ ಮನೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಬೇಕೆಂದು ಮನವಿ ಮಾಡಿದರು. ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕರು ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.

Read More

ಮಡಿಕೇರಿ ಮಾ.5 NEWS DESK  : ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ತು ಹಾಗೂ ಸುಂಟಿಕೊಪ್ಪ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಮಾ.8 ರಂದು ಬೆಳಗ್ಗೆ 10.30 ಕ್ಕೆ ಸುಂಟಿಕೊಪ್ಪ ಕೊಡವ ಸಮಾಜದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿದೆ. ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ತಿನ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತೆ ರಾಣಿ ಮಾಚಯ್ಯ, ಸುಂಟಿಕೊಪ್ಪ ಕೊಡವ ಸಮಾಜ ಹಾಗೂ ಪೊಮ್ಮಕ್ಕಡ ಕೂಟದ ಅಧ್ಯಕ್ಷರು, ಸದಸ್ಯರುಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ವಿವಿಧ ಆಟೋಟ ಸ್ಪರ್ಧೆಗಳು, ಕೊಡವರಿಗೆ ಸಂಬಂಧಪಟ್ಟ ರಸಪ್ರಶ್ನೆ ಕಾರ್ಯಕ್ರಮ ಹಾಗೂ ಆಶುಭಾಷಣ ಸ್ಪರ್ಧೆ ನಡೆಯಲಿದೆ ಎಂದು ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ತಿನ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

Read More