ಮಡಿಕೇರಿ ಮಾ.5 NEWS DESK : ಕಡಗದಾಳು ಗ್ರಾಮದಲ್ಲಿರುವ ಶ್ರೀ ಬೊಟ್ಲಪ್ಪೇಶ್ವರ ದೇವಾಲಯದಲ್ಲಿ ಮಾ.8 ಮತ್ತು 9 ರಂದು ಮಹಾಶಿವರಾತ್ರಿಯ ವಾರ್ಷಿಕ ಪೂಜೆ ನಡೆಯಲಿದೆ. ಮಾ.8 ರಂದು ಬಿಲ್ವಪತ್ರೆ ಅರ್ಚನೆ, ಎಳೆನೀರು ಅಭಿಷೇಕ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ರಾತ್ರಿ ಜಾಗರಣೆ ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 10 ಗಂಟೆಯಿಂದ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊಂಡು ಮಧ್ಯಾಹ್ನ ಮಹಾಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನದಾನ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀ ಬೊಟ್ಲಪ್ಪ ಯುವ ಸಂಘದ ಪ್ರಮುಖರು ಮನವಿ ಮಾಡಿದ್ದಾರೆ.
ಲೇಖಕ: admin
ಮಡಿಕೇರಿ ಮಾ.5 NEWS DESK : ದೇಶದಲ್ಲಿ ಅಕ್ಕಿ ಬೆಲೆಯಲ್ಲಿ ಶೇ.15ರಷ್ಟು ಹೆಚ್ಚಳವಾಗಿರುವ ಹಿನ್ನೆಲೆ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ನೀಡುತ್ತಿರುವ ಭಾರತ್ ಅಕ್ಕಿಯನ್ನು ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಕುಶಾಲನಗರದಲ್ಲಿ ವಿತರಿಸಿದರು. ಅಕ್ಕಿಯ ಬೆಲೆ ಕೆ.ಜಿ ಗೆ 29 ರೂ. ಆಗಿದ್ದು, 5 ಕೆ.ಜಿ ಮತ್ತು 10 ಕೆ.ಜಿ ಬ್ಯಾಗ್ ಗಳಲ್ಲಿ ಲಭ್ಯವಿದೆ. ಸಾರ್ವಜನಿಕರಿಗೆ ಅಕ್ಕಿ ವಿತರಿಸಿ ಮಾತನಾಡಿದ ಸಂಸದರು ಜನಸಾಮಾನ್ಯರಿಗೆ ಸಹಕಾರಿ ಆಗಲಿ ಎಂದು ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಭಾರತ್ ಅಕ್ಕಿಯನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಜನರು ಇದರ ಲಾಭ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕುಶಾಲನಗರ ಬಿಜೆಪಿ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಸೋಮವಾರಪೇಟೆ ಮಾ.5 NEWS DESK : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಚನ್ನಬಸಪ್ಪ ಸಭಾಂಗಣದಲ್ಲಿ 3 ದಿನಗಳ ಕಾಲ ಆಯೋಜಿಸಿರುವ ‘ಮಕ್ಕಳ ಸಾಹಿತ್ಯ ಸಂಭ್ರಮ’ ಕಾರ್ಯಕ್ರಮಕ್ಕೆ ಚೌಡ್ಲು ಗ್ರಾ.ಪಂ ಅಧ್ಯಕ್ಷೆ ಗೀತಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಮಕ್ಕಳಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಇದೊಂದು ಕಲಿಕೆಗೆ ಪೂರಕ ಕಾರ್ಯಕ್ರಮವಾಗಿದೆ. ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಪೋಷಕರು ಪ್ರೋತ್ಸಾಹ ನೀಡಬೇಕಾಗಿದೆ. ಚಿಕ್ಕಂದಿನಿಂದಲೇ ಮಕ್ಕಳು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು. ಭಾರತ ಜ್ಞಾನ ವಿಜ್ಞಾನ ಸಮಿತಿ ಸದಸ್ಯರಾದ ಸೌಭಾಗ್ಯ ಬೇಲೂರು ಅವರು ಮಾತನಾಡಿ, ಸಾಹಿತ್ಯಾಭಿರುಚಿಯನ್ನು ಬೆಳೆಸಿ, ಗ್ರಂಥಾಲಯದ ಕಡೆಗೆ ಮಕ್ಕಳನ್ನು ಸೆಳೆಯುವುದೆ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ರಾಜ್ಯದ ಆರು ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಸ್ಥಾಪಿಸಲಾಗಿದೆ. ಆದರೆ ಓದುವ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದನ್ನು ಮನಗಂಡ ಇಲಾಖೆ ಮಕ್ಕಳ ಸಾಹಿತ್ಯ…
ಮಡಿಕೇರಿ ಮಾ.5 NEWS DESK : ಮಂಗಳೂರು ವಿಶ್ವವಿದ್ಯಾನಿಲಯ ತನ್ನ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕೆಂದು ಮಂಗಳೂರು ವಿವಿಯ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್.ಆರ್.ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ನೇಮಕಾತಿಗೊಂಡು ಕೊಡಗು ವಿಶ್ವ ವಿದ್ಯಾನಿಲಯ ಚಿಕ್ಕಅಳುವಾರ ಹಾಗೂ ಅದರ ಘಟಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳುಗಳಿಂದ ವೇತನವಾಗಿರುವುದಿಲ್ಲ. ಮಡಿಕೇರಿಯಲ್ಲಿ ಕಾಲೇಜು ಉಪನ್ಯಾಸಕರು ಕಳೆದ ಐದಾರು ದಿನಗಳಿಂದ ಪ್ರತಿಭಟನಾ ನಿರತರಾಗಿದ್ದು, ಸಾರ್ವಜನಿಕರೂ ವಿವಿಯ ಬಗ್ಗೆ ಹತಾಶರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ವಿಶ್ವವಿದ್ಯಾನಿಲಯವು ತಕ್ಷಣವೇ ವಿವಿಯ ಆರ್ಥಿಕ ಶ್ವೇತಪತ್ರವನ್ನು ಸಾರ್ವಜನಿಕವಾಗಿ ಹೊರಡಿಸಬೇಕು. ವಿವಿಯ ಆರ್ಥಿಕ ಪುನರ್ಶ್ಚೇತನದ ದೃಷ್ಟಿಯಿಂದ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕು ಎಂದು ಡಾ.ಎಸ್.ಆರ್.ಹರೀಶ್ ಆಚಾರ್ಯ ಒತ್ತಾಯಿಸಿದ್ದಾರೆ.
ಮಡಿಕೇರಿ ಮಾ.5 NEWS DESK : ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವರ ವಾರ್ಷಿಕ ಉತ್ಸವ ಪ್ರಯುಕ್ತ ನೆರ್ಪು ಪ್ರಯುಕ್ತ “ಎತ್ತು ಪೊರಾಟ” ಶ್ರದ್ಧಾಭಕ್ತಿಯಿಂದ ನಡೆಯಿತು. ಕುಂದಾ ಮುಗುಟಗೇರಿ ಸಮೀಪದಲ್ಲಿರುವ ನಾಡ್ ದೇವಾಲಯ ಎಂದು ಖ್ಯಾತಿ ಪಡೆದಿರುವ ಶ್ರೀ ಈಶ್ವರ ದೇವಸ್ಥಾನ ಸಮೀಪದ ಅಂಬಲದಲ್ಲಿ ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಅರ್ವತೋಕ್ಲು ಹಾಗೂ ಈಚೂರು ಈ ಆರು ಊರುಗಳ ತಕ್ಕಮುಖ್ಯಸ್ಥರು ಸೇರಿದಂತೆ ಶ್ರೀ ಈಶ್ವರ ದೇವಸ್ಥಾನದ ದೇವತಕ್ಕರು, ಭಂಡಾರ ತಕ್ಕರು ಆಯಾಯ ಊರುಗಳಿಂದ ತರಲಾಗಿದ್ದ ದವಸಧಾನ್ಯಗಳನ್ನು ಎತ್ತು ಪೊರಾಟದ ಮೂಲಕ ತರಲಾಯಿತು. ದೇವಸ್ಥಾನಕ್ಕೆ ಎತ್ತು ಪೊರಾಟ ಬರುತ್ತಿದ್ದಂತೆ ಚೆಂಡೆ ಮದ್ದಳೆಯೊಂದಿಗೆ ಬರಮಾಡಿಕೊಂಡ ದೇವಸ್ಥಾನದ ಮುಖ್ಯ ಅರ್ಚಕರು ಎತ್ತುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಆರು ಊರುಗಳಿಂದ ತರಲಾಗಿದ್ದ ದವಸಧಾನ್ಯಗಳನ್ನು ದೇವಸ್ಥಾನಕ್ಕೆ ಅರ್ಪಿಸಲಾಯಿತು. ನಂತರ ನೆರ್ಪು ಪ್ರಯುಕ್ತ ದೇವರ ಉತ್ಸವ ಮೂರ್ತಿಯನ್ನು ಹೊತ್ತು ವಿವಿಧ ಪೂಜಾವಿಧಿ ವಿಧಾನಗಳೊಂದಿಗೆ ಚೆಂಡೆ ವಾದ್ಯಕ್ಕೆ ಹೆಜ್ಜೆ ಹಾಕಲಾಯಿತು. ಅಲಂಕಾರ ಪೂಜೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು…
ವಿರಾಜಪೇಟೆ ಮಾ.5 NEWS DESK : ಕೋಟೆಕೊಪ್ಪ ಗ್ರಾಮದ ಶ್ರೀ ಬೈತೂರೇಶ್ವರ ದೇವಾಲಯದ ಬನದಲ್ಲಿ ವಾರ್ಷಿಕ ಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ಬನದ ಬೈತೂರೇಶ್ವರ ದೇವರಿಗೆ ಮಹಾಪೂಜೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಹಬ್ಬ ಸಂಪನ್ನಗೊಂಡಿತು. ಬಳಿಕ ನೆರೆದಿದ್ದ ಭಕ್ತರಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು, ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಮಾ.4 NEWS DESK : 2023-24ನೇ ಸಾಲಿನ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್ಚೇರ್ ಗಳನ್ನು ನೀಡುವ ಸಲುವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೈಹಿಕ ವಿಕಲಚೇತನರಾಗಿರುವ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಚಾಲನೆ ಮಾಡಲು ಸಾಮಥ್ರ್ಯ ಹೊಂದಿರದ ಶೇ.75 ಕ್ಕಿಂತ ಹೆಚ್ಚಿನ ದೈಹಿಕ ಅಂಗವೈಕಲ್ಯತೆಯನ್ನು ಹೊಂದಿರುವ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಚೇರ್ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.7 ಕೊನೆಯ ದಿನವಾಗಿದೆ. ಈ ಯೋಜನೆಯ ಸೌಲಭ್ಯವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ. 08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ ತಿಳಿಸಿದ್ದಾರೆ.
ಬೆಂಗಳೂರು ಮಾ.4 NEWS DESK : ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಧಾನಸೌಧ ಪೊಲೀಸ್ ಠಾಣೆಯ ಪೊಲೀಸರು ಇಂದು ಸಂಜೆ ಬಂಧಿಸಿದ್ದಾರೆ. ದೆಹಲಿ ಮೂಲದ ಇಲ್ತಿಯಾಜ್, ಆರ್.ಟಿ. ನಗರದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಬಂಧಿತ ಆರೋಪಿಗಳಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇತ್ತೀಚಿಗೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರು ಗೆಲುವು ಸಾಧಿಸಿದ ಸಂದರ್ಭ ಪಾಕಿಸ್ತಾನದ ಪರ ಘೋಷಣೆ ಕೇಳಿ ಬಂದಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.
ಮಡಿಕೇರಿ ಮಾ.4 NEWS DESK : ಬಿಜೆಪಿ ಮಡಿಕೇರಿ ನಗರ ಮಂಡಲದ ವತಿಯಿಂದ ಬೂತ್ ಸಂಖ್ಯೆ 203 (ಮುಳಿಯ ಲೇ ಔಟ್ )ಮತ್ತು 204 ರಲ್ಲಿ ಗ್ರಾಮ ಚಲೋ ಕಾರ್ಯಕ್ರಮ ನಡೆಯಿತು. ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಹಾಗೂ ಕೊಡಗು ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಸಾಧನೆಯ ಕೈಪಿಡಿಯನ್ನು ಮತದಾರರ ಮನೆ ಮನೆಗೆ ತಲುಪಿಸಲಾಹಿತು. ಮಡಿಕೇರಿ ನಗರ ಮಂಡಲದ ಅಧ್ಯಕ್ಷ ಉಮೇಶ್ ಸುಬ್ರಮಣಿ ಅವರ ನೇತೃತ್ವದಲ್ಲಿ ಪ್ರಚಾರ ಅಭಿಯಾನ ನಡೆಯಿತು. ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ನಗರಸಭೆಯ ಬಿಜೆಪಿ ಸದಸ್ಯರುಗಳು ಹಾಜರಿದ್ದರು.
ಮಡಿಕೇರಿ ಮಾ.4 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳನ್ನು ಸಮಾನ ರೀತಿಯಲ್ಲಿ ಪರಿಗಣಿಸುತ್ತಿದ್ದು, ಪಕ್ಷಕ್ಕಾಗಿ ದುಡಿದವರಿಗೆ ಸೂಕ್ತ ಸ್ಥಾನಮಾನ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಜೆ.ಎಲ್.ಜನಾರ್ಧನ್ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ, ಕೆಲವರು ವೈಯುಕ್ತಿಕ ಕಾರಣಗಳಿಗಾಗಿ ಅಸಮಾಧಾನಿತರ ಸಭೆ ಎಂದು ಪ್ರತಿಬಿಂಬಿಸಿಕೊಂಡು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊAಡಿದ್ದಾರೆ ಹೊರತು ಮಡಿಕೇರಿ ಶಾಸಕರ ಬಗ್ಗೆ ಯಾರಿಗೂ ಅವಿಶ್ವಾಸವಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಘಟಕದ ಪದಾಧಿಕಾರಿಗಳು ಸೇರಿದಂತೆ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡಲಾಗಿದೆ. ಒಬ್ಬೊಬ್ಬರು ಎರಡೆರಡು ಸ್ಥಾನ ಹೊಂದಿರುವ ಉದಾಹರಣೆಯೂ ಇದೆ. ಉತ್ಸಾಹಿ ಶಾಸಕರಾಗಿರುವ ಡಾ.ಮಂತರ್ ಗೌಡ ಅವರು ಒಂದು ಜಾತಿ, ಜನಾಂಗಕ್ಕೆ ಸೀಮಿತವಾಗದೆ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಅತ್ಯಂತ ವಿಶ್ವಾಸದಿಂದ ನಡೆಸಿಕೊಳ್ಳುತ್ತಿದ್ದಾರೆ. ಅಲ್ಲದೆ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅಭಿವೃದ್ಧಿಗೆ…






