ಕುಶಾಲನಗರ ಮಾ.24 NEWS DESK : ಬಸ್ ನಲ್ಲಿ ಅಪಾಯಕಾರಿ ಪ್ರಯಾಣದಿಂದ ಆಗುತ್ತಿರುವ ಅನಾಹುತಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೋಡಿ ಅರಿವಿದ್ದರೂ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಬಸ್ ನ ಬಾಗಿಲು, ಮೆಟ್ಟಿಲುಗಳಲ್ಲಿ ನೇತಾಡಿಕೊಂಡು ಪ್ರಯಾಣ ಮಾಡುವ ದೃಶ್ಯಗಳು ಕಂಡು ಬರುತ್ತಿದೆ. ಕುಶಾಲನಗರ ಸಮೀಪದ ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕೆಲವು ವಿದ್ಯಾರ್ಥಿಗಳು ನೇತಾಡಿಕೊಂಡು ಪ್ರಯಾಣಿಸುವುದು ಸಾಮಾನ್ಯವಾಗಿದೆ. ಇದನ್ನು ಗಮನಿಸಿದ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಶಾ ಅವರು ವಿದ್ಯಾರ್ಥಿಗಳನ್ನು ಬಸ್ ನಿಂದ ಕೆಳಗಿಳಿಸಿ ಬುದ್ದಿ ಮಾತು ಹೇಳಿದರು. ದಾರಿಯಲ್ಲಿ ಹೋಗುತ್ತಿದ್ದ ಖಾಸಗಿ ವಾಹನಗಳಲ್ಲಿ ವಿದ್ಯಾರ್ಥಿಗಳನ್ನು ಕಾಲೇಜ್ ಗೆ ಕಳುಹಿಸಿಕೊಡುವ ಮೂಲಕ ಅಪಾಯದ ಬಗ್ಗೆ ಅರಿವು ಮೂಡಿಸಿ ಮಾದರಿಯಾದರು. (ಕೃಪೆ : CM)
ಲೇಖಕ: admin
ಮಡಿಕೇರಿ ಮಾ.24 NEWS DESK : ವಾರದ ಹಿಂದೆಯಷ್ಟೇ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಭೇಟಿ ನೀಡಿದ್ದ ಶಂಕಿತ ನಕ್ಸಲರು ಇದೀಗ ಕಡಬ ತಾಲ್ಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನಲ್ಲಿ ಸುಳಿದಾಡಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಸಮೀಪದ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದರು ಎಂದು ಹೇಳಲಾಗಿದೆ. ಮಾ.23 ರಂದು ಕಾರ್ಮಿಕರೊಬ್ಬರ ಮನೆಗೆ ಭೇಟಿ ನೀಡಿದಾಗ ಕಾರ್ಮಿಕ ಪ್ರವೇಶ ನಿರಾಕರಿಸಿ ಬಾಗಿಲು ಬಂದ್ ಮಾಡಿದಾಗ ಶಂಕಿತ ನಕ್ಸಲರು ತೋಟದ ಮಾಲೀಕರ ಮನೆಗೆ ಹೋಗಿದ್ದಾರೆ ಎಂದು ಮಾಹಿತ್ಯ ಲಭ್ಯವಾಗಿದೆ. ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿನ ಮೂಲಕ ಸೋಮವಾರಪೇಟೆ ಮತ್ತು ಗಾಳಿಬೀಡು, ಸಂಪಾಜೆ ಮೂಲಕ ಕೇರಳದ ಅರಣ್ಯದೊಳಗೆ ಸಂಪರ್ಕ ಸಾಧಿಸಬಹುದಾಗಿದ್ದು, ನಕ್ಸಲ್ ನಿಗ್ರಹ ದಳ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಳಿಸಿದೆ. ಕಳೆದ ವಾರವಷ್ಟೇ ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ವ್ಯಾಪ್ತಿಯಲ್ಲಿ ಕಾಣಿಸಿಕೊಂಡು ದಿನಸಿ ಸಾಮಾಗ್ರಿಗಳನ್ನು ಕೊಂಡೊಯ್ದಿದ್ದರು.
ಸೋಮವಾರಪೇಟೆ ಮಾ.23 NEWS DESK : ಸೋಮವಾರಪೇಟೆ ಪಟ್ಟಣದ ರೇಂಜರ್ಸ್ ಬ್ಲಾಕ್ ನಿವಾಸಿ, ದೇವಿ ಎಲೆಕ್ಟ್ರಿಕಲ್ ಮಾಲೀಕ ಪಿ.ಕೆ.ಶಶಿ (73) ಅವರು ಅನಾರೋಗ್ಯದಿಂದ ಇಂದು ರಾತ್ರಿ ನಿಧನರಾದರು. ಮೃತರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ ನಗರೂರಿನ ಕ್ಯಾಥೋಲಿಕ್ ಸ್ಮಶಾನದಲ್ಲಿ ನಡೆಯಲಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಗೋಣಿಕೊಪ್ಪ ಮಾ.23 NEWS DESK : ರಾಮ ರಾಜ್ಯದ ಕನಸು ನನಸಾಗುತ್ತಿದೆ, ದೇಶವನ್ನು ಮತ್ತಷ್ಟು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದು ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ತಿಳಿಸಿದ್ದಾರೆ. ತಿತಿಮತಿ ವಿ.ಎಸ್.ಎಸ್.ಎನ್ ಸಭಾಂಗಣದಲ್ಲಿ ನಡೆದ ತಿತಿಮತಿ, ಬಾಳೆಲೆ, ಪೊನ್ನಪ್ಪಸಂತೆ, ಮಾಯಮುಡಿ, ದೇವರಪುರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾವೇರಿ ತವರು ಕೊಡಗು ಮತ್ತು ಮೈಸೂರಿಗೂ ಅವಿನಾಭಾವ ಸಂಬ0ಧವಿದೆ. ಈ ಭಾಗದ ಜನರ ಸೇವೆ ಮಾಡುವ ಆಕಾಂಕ್ಷೆಯೊ0ದಿಗೆ ಚುನಾವಣೆ ಕಣಕ್ಕೆ ಇಳಿದಿದ್ದೇನೆ. ಪಕ್ಷದ ಆತ್ಮ ಬಲವಾಗಿರುವ ಕಾರ್ಯಕರ್ತರು ದೇಶ ಮುನ್ನಡೆಸುವ ಮತ್ತು ಅಭಿವೃದ್ಧಿಪಡಿಸುವ ಕರ್ತವ್ಯಕ್ಕಾಗಿ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಈಗಾಗಲೇ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಪ್ರಪಂಚವೇ ನಿಬ್ಬೆರಗಾಗಿ ನೋಡುವ ವಾತಾವರಣ ಸೃಷ್ಟಿಯಾಗಿದೆ. ಹಿಂದೆ ಅರಸು ಮನೆತನದವರು ಮೈಸೂರು ರಾಜ್ಯವನ್ನು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದರು. ಸ್ವದೇಶಿ ಉತ್ಪನ್ನಗಳಿಗೆ ಸಾಕಷ್ಟು ಒತ್ತು ನೀಡಿ ಮೈಸೂರು ಬ್ರಾಂಡ್ನಲ್ಲಿ…
ಮಡಿಕೇರಿ ಮಾ.23 NEWS DESK : ಅಂತರರಾಷ್ಟ್ರೀಯ ಜನಾಂಗೀಯ ತಾರತಮ್ಯ ದಿನದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನ ಕೊಡವ ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿತು. ಹಿರಿಯರಿಗಾಗಿ ಶ್ರದ್ಧಾಂಜಲಿ ಅರ್ಪಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಆಡಳಿತ ನಡೆಸುತ್ತಿರುವ ಬಹುಸಂಖ್ಯಾತರು ಅಲ್ಪಸಂಖ್ಯಾತ, ಅತ್ಯಂತ ಸೂಕ್ಷ್ಮ, ಆದಿಮ ಸಂಜಾತ ಕೊಡವ ಬುಡಕಟ್ಟು ಜನರನ್ನು ತಾರತಮ್ಯ ಮನೋಭಾವದಿಂದ ನೋಡುತ್ತಿರುವುದು ವಿಷಾದನೀಯವೆಂದು ಬೇಸರ ವ್ಯಕ್ತಪಡಿಸಿದರು. ನಾಚಪ್ಪ ಅವರು ಮಾತನಾಡಿ ದೇವಟ್ ಪರಂಬುವಿನಲ್ಲಿ ಷಡ್ಯಂತ್ರಕ್ಕೆ ಸಿಲುಕಿ ಕೊಡವ ಜನಾಂಗದ ಹಿರಿಯ ತಲೆಮಾರು ಬಲಿಯಾಯಿತು. ಈ ನೋವು ಅಚಲವಾಗಿ ಉಳಿದಿರುವಾಗಲೇ ಪ್ರಸ್ತುತ ಕೊಡವರ ಮೇಲಿನ ತಾರತಮ್ಯ ನೀತಿ ಮತ್ತಷ್ಟು ನೋವನ್ನುಂಟು ಮಾಡಿದೆ ಎಂದರು. ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣದ ಗುರಿ ಸಾಧನೆಗಾಗಿ ಹಿರಿಯರ ಆಶೀರ್ವಾದವನ್ನು ಪಡೆಯಲು ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿ ಸ್ಮರಣೆಯನ್ನು ಮಾಡಲಾಗಿದೆ. ಕೊಡವಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ ಮತ್ತು ಕೊಡವರ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ಅನುಷ್ಠಾನಗೊಳಿಸಬೇಕು.…
ಕಡಂಗ ಮಾ.23 NEWS DESK : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ 20ನೇ ವರ್ಷದ ಮುಸ್ಲಿಂ ಕ್ರಿಕೆಟ್ ಮತ್ತು ಹಗ್ಗ ಜಗ್ಗಾಟ ಕ್ರೀಡಾಕೂಟವನ್ನು ಮೇ 10 ರಿಂದ 19 ರವರೆಗೆ ಮೂರ್ನಾಡು ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಆದಂ ತಿಳಿಸಿದ್ದಾರೆ. ಏಪ್ರಿಲ್ ತಿಂಗಳು ನಡೆಸಲು ತೀರ್ಮಾನಿಸಲಾಗಿದ್ದ ಕ್ರೀಡಾಕೂಟವು ಲೋಕಸಭಾ ಚುನಾವಣೆ ಇರುವುದರಿಂದ ದಿನಾಂಕವನ್ನು ಮುಂದೂಡಲಾಗಿ ಎಂದು ತಿಳಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಚಿಸುವವರು ಏ.25ರ ಒಳಗೆ ಮೊ. ಸಂಖ್ಯೆ 9900900250, 9740481273 ನೊಂದಾವಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ವರದಿ : ನೌಫಲ್ ಕಡಂಗ
ವಿರಾಜಪೇಟೆ ಮಾ.23 NEWS DESK : ಇನ್ನರ್ ವೀಲ್ ಕ್ಲಬ್ ಆಫ್ ಮಡಿಕೇರಿ ವತಿಯಿಂದ ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಕಣ್ಣಿನ ದೋಷ ಇರುವಂತ ವಿದ್ಯಾರ್ಥಿಗಳಿಗೆ ಕನ್ನಡಕಗಳನ್ನು ವಿತರಿಸಲಾಯಿತು. ಶಾಲೆಯ ಡಾ. ಎಂ.ಎಂ.ಚಂಗಪ್ಪ ಮೆಮೋರಿಯಲ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಎಂ.ಸಿ.ಕಾರ್ಯಪ್ಪ, ವಿದ್ಯಾರ್ಥಿಗಳು ಕಣ್ಣಿನ ಹಿತದೃಷ್ಟಿಯಿಂದ ಮಿತಿಯಲ್ಲಿ ಮೊಬೈಲ್ ಬಳಕೆ ಮಾಡಬೇಕು. ಸಮತೋಲನ ಆಹಾರದ ಸೇವನೆ ಮಾಡಬೇಕು. ಪ್ರತಿದಿನ ಕಣ್ಣಿನ ಶುಚಿತ್ವದೊಂದಿಗೆ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹಿತನುಡಿಗಳನ್ನು ಹೇಳಿದರು. ಮುಖ್ಯ ಅತಿಥಿಗಳಾದ ಐಚ್ಚೆಟ್ಟಿರ ಚಿಣ್ಣಪ್ಪ ಮಾತನಾಡಿ ನಮ್ಮ ಕಣ್ಣನ್ನು ಹೇಗೆ ನಾವು ಸುರಕ್ಷಿತವಾಗಿಟ್ಟುಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ವನಜಾಕ್ಷಿ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು. ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್.ಲಾಲ್ ಕುಮಾರ್ ಇನ್ನರ್ ವೀಲ್ ಸಂಸ್ಥೆಯ ಬಗ್ಗೆ ಪರಿಚಯ ಮಾಡಿದರು. ಇನ್ನರ್ವೀಲ್ ಸಂಸ್ಥೆಯ ಅಧ್ಯಕ್ಷ ಕಣ್ಣು ದೇವರಾಜ್ ಉಪಸ್ಥಿತರಿದ್ದರು. ಇನ್ನರ್ವಿಲ್ ಸಂಸ್ಥೆಯ ಮಾಜಿ…
ವಿರಾಜಪೇಟೆ ಮಾ.23 NEWS DESK : ವಿರಾಜಪೇಟೆಯ ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ಪೆಗ್ಗರಿಕಾಡುವಿನ ನವೋದಯ ಯುವಕ ಸಂಘದ ವತಿಯಿಂದ ಶಿವರಾತ್ರಿ ಆಚರಣೆ ಅಂಗವಾಗಿ ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಗುಡ್ಡಗಾಡು ಓಟ, ಓಟದ ಸ್ಫರ್ಧೇ, ಚಿಕ್ಕ ಮಕ್ಕಳಿಗೆ ವಿವಿಧ ಸ್ಫರ್ಧೇಗಳು, ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಮೂರು ವರ್ಷದ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲ ವಯೋಮಾನದವರು ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಗೊಳಿಸಿದರು. ಬಳಿಕ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೆÇನ್ನಣ್ಣ ಈ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರಿಂದ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ದೊರೆತಂತಾಗುತ್ತದೆ. ಅಲ್ಲದೆ ಜಾತಿ ಭೇದ ಮರೆತು ನಾವು ಸೌಹಾರ್ದತೆಯಿಂದ ಎಲ್ಲಾ ಹಬ್ಬ ಹರಿದಿನಗಳನ್ನು ಆಚರಿಸಬೇಕೆಂದು ಯುವಕರಿಗೆ ಕಿವಿ ಮಾತನ್ನು ಹೇಳಿದರು. ಬಿಟ್ಟಂಗಾಲದ ಎವರ್ ಗ್ರೀನ್ ಕೌಂಟಿಯ ಮಾಲೀಕರಾದ ಭಜನ್ ಬೋಪಣ್ಣ…
ಮಡಿಕೇರಿ ಮಾ.23 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ‘ಶ್ವೇತ ಪತ್ರ’ವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಬಿಡುಗಡೆ ಮಾಡಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕಳೆದ 10 ತಿಂಗಳ ಅವಧಿಯಲ್ಲಿ ತನ್ನ ಕ್ಷೇತ್ರದ 58 ಗ್ರಾಮ ಪಂಚಾಯ್ತಿ, ಒಂದು ಪುರಸಭೆಗೆ ಭೇಟಿ ನೀಡಿ, ಅಲ್ಲಿನ ಜನರೊಂದಿಗೆ ಬೆರೆತು, ಅಭಿವೃದ್ಧಿ ಪರ ಚಿಂತನೆಯೊಂದಿಗೆ ಕಾರ್ಯನಿರ್ವಹಿಸಿದ್ದೇನೆ ಎಂದು ತಿಳಿಸಿದರು. ಚುನಾವಣಾ ಘೋಷಣೆಯ ಬಳಿಕ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಳ್ಳಬಾರದೆನ್ನುವ ಚಿಂತನೆಗಳಡಿ ಚುನಾವಣಾ ಘೋಷಣೆಗೂ ಮುನ್ನ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ಕಾಮಗಾರಿಗಳಿಗೆ ಭೂಮಿಪೂಜೆ ನಡೆಸಿ ಚಾಲನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ::: ರಾಜಕೀಯ ತೊರೆಯುತ್ತೇನೆ ::: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ತಾವು ಚಾಲನೆ ನೀಡಿದ ಕಾಮಗಾರಿ, ಅನುದಾನಗಳೆಲ್ಲವೂ ಹಿಂದಿನ ಬಿಜೆಪಿ ಸರ್ಕಾರದ್ದೆಂದು ಬಿಜೆಪಿ ಮಂದಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ, ತಾವು…
ಮಡಿಕೇರಿ ಮಾ.23 NEWS DESK : ಒಡೆದ ಮನೆಯಾಗಿರುವ ರಾಜ್ಯ ಬಿಜೆಪಿಯ ಲಗಾಮು ಕೇವಲ ಎರಡು ಮೂರು ಮಂದಿಯ ಕೈಯಲ್ಲಿರುವುದು ಜಗಜ್ಜಾಹೀರಾಗಿದ್ದು, ಲೋಕಸಭಾ ಚುನಾವಣೆಗೆ ಆ ಪಕ್ಷ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಬಗ್ಗೆ ಸ್ವತ: ಜನರೇ ನಿರಾಶರಾಗಿದ್ದಾರೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ದಶಕಗಳಿಂದ ಕೊಡಗು- ಮೈಸೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡದ ಬಿಜೆಪಿ, ಅದಕ್ಕೆ ಸೂಕ್ತ ಕಾರಣವನ್ನು ಜನರಿಗೆ ನೀಡುವ ಉತ್ತರದಾಯಿತ್ವವನ್ನು ಹೊಂದಿದೆ. ಟಿಕೆಟ್ ನೀಡದಿರಲು ಅವರು ನಿಷ್ಕ್ರೀಯರಾಗಿದ್ದರೆ ಅಥವಾ ಜನವಿರೋಧಿಯಾಗಿದ್ದರೆ ಎನ್ನುವುದನ್ನು ಸ್ಪಷ್ಟಪಡಿಸಬೇಕಾಗಿತ್ತು. ಆದರೆ ಅದ್ಯಾವುದನ್ನು ಮಾಡದೆ ಹೊಸ ಅಭ್ಯರ್ಥಿಗೆ ಅವಕಾಶ ನೀಡಿದೆ. ತನ್ನ ಯಾವುದೇ ನಡೆಗಳಿಗೆ ಕಾರಣಗಳನ್ನು ನೀಡವುದಿಲ್ಲ ಎನ್ನುವ ಬಿಜೆಪಿ ಧೋರಣೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡದಿರುವುದು, ಶೋಭಾ ಕರಂದ್ಲಾಜೆ ಅವರಿಗೆ ಅವರ…






