ಸುಂಟಿಕೊಪ್ಪ ಮಾ.4 NEWS DESK : ರಾಷ್ಟ್ರೀಯ ಪಲ್ಸ್ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬಸ್ ನಿಲ್ದಾಣದ ಕೇಂದ್ರಗಳಲ್ಲಿ ಮಕ್ಕಳಿಗೆ ಪಲ್ಸ್ಪೋಲಿಯೋ ಹನಿಯನ್ನು ನೀಡಲಾಯಿತು. ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಮಗುವಿಗೆ ನೀಡುವ ಮೂಲಕ ಚಾಲನೆ ನೀಡಿದರು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಹಾಗೂ ವೈದ್ಯಾಧಿಕಾರಿ ಶಮ್ನ, ಆರೋಗ್ಯ ಶೂಶ್ರಷಕಿಯರು, ಆರೋಗ್ಯ ಸಹಾಯಕಿಯರು, ದಾದಿಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ.ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ರಫೀಕ್ಖಾನ್, ಶಾಂತಿ ಹಾಗೂ ಮತ್ತಿತರರು ಇದ್ದರು.
ಲೇಖಕ: admin
ಸುಂಟಿಕೊಪ್ಪ ಮಾ.4 NEWS DESK : ಪನ್ಯ ಗ್ರಾಮದ ಉದ್ಧಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಧರ್ಮ ದೈವಗಳ ನೇಮೋತ್ಸವ ನಡೆಯಿತು. ಎರಡುದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಜರುಗಿತು. ಗಣ ಹೋಮ ಮತ್ತು ಸತ್ಯ ನಾರಾಯಣ ಪೂಜೆಯು ನಡೆದು ನೇಮ ಮತ್ತು ದೇವತಾ ಕಾರ್ಯಕ್ಕೆ ವಿಘ್ನ ಬಾರದಂತೆ ಪ್ರಾರ್ಥನೆ ಸಲ್ಲಿಸಲಾಯಿತು. ರಾತ್ರಿ ಬಂಡಾರ ತೆಗೆಯುವ ಮೂಲಕ ನೇಮೋತ್ಸವಕ್ಕೆ ಚಾಲನೆ ದೊರಕಿತು. ನಂತರ ಕಲ್ಲುರ್ಟಿ ದೈವದ ನೇಮೋತ್ಸವ ಜರುಗಿತು. ಮುಂಜಾನೆಯಿಂದ ಪಂಜುರ್ಲಿ ಮತ್ತು ಗುಳಿಗ ದೈವದ ನೇಮವು ನಡೆಯಿತು. ನಂತರ ಕಾರಣಿಕ ದೈವ ಎನಿಸಿದ ಕೊರಗಜ್ಹ ದೈವದ ನೇಮವು ನಡೆಯಿತು. ದೇವಾಲಯ ಸೇರಿದಂತೆ ಭಕ್ತರ ಹರಕೆಯ ಒಟ್ಟು 4 ಕೊರಗಜ್ಹ ದೈವದ ನೇಮವು ನಡೆಯಿತು. ಮಕ್ಕಳ ಜೋತೆ ಕುಣಿದು ಹಾಸ್ಯ ಮಾಡುತ್ತಾ ಎಲ್ಲರನ್ನು ಸಂತೃಪ್ತಿ ಪಡಿಸಿತು. ನೆರೆದಿದ್ದ ಭಕ್ತರಿಗೆ ಎರಡು ದಿನ ಅನ್ನ ಸಂತರ್ಪಣೆ ನೆರವೇರಿತು. ಸುಂಟಿಕೊಪ್ಪ, ಕುಶಾಲನಗರ, ಮಡಿಕೇರಿ, ಪನ್ಯ, ಗರಗಂದೂರು, ಮಾದಾಪುರ, ಸುಳ್ಯ, ಪುತ್ತೂರು, ಮಂಗಳೂರು, ಮೈಸೂರು ಸೇರಿದಂತೆ ಹಲವು…
ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿ ಜಾನ್ಸನ್ ಪಿಂಟೋ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುಂಟಿಕೊಪ್ಪದ ಚರ್ಚ್ ನಲ್ಲಿ ನಡೆದ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆಯಲ್ಲಿ ಪಾಲ್ಗೊಂಡಿದ್ದ ಸಮುದಾಯದ ಕೆ.ನಿಡುಗಣೆ ಗ್ರಾ.ಪಂ ಸದಸ್ಯರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಮುಖಂಡರು ಜಾನ್ಸನ್ ಪಿಂಟೋ ಅವರನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದರು.
ಮಡಿಕೇರಿ ಮಾ.3 NEWS DESK : ಕಾಂಗ್ರೆಸ್ ಪಕ್ಷ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಎಂದಿಗೂ ಕಡೆಗಣಿಸಿಲ್ಲ, ಆರಂಭದ ಹಂತದಲ್ಲಿ ಶಾಸಕರುಗಳಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ದೊರೆತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೂ ಸೂಕ್ತ ಸ್ಥಾನ ಸಿಗಲಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಬಜೆಗುಂಡಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರ ಸರ್ವ ಕಾರ್ಯಕರ್ತರಿಗೂ ಸಮಾನ ಗೌರವ ಮತ್ತು ಸ್ಥಾನಮಾನ ನೀಡಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ, ಯಾರೂ ಊಹಾಪೋಹಗಳಿಗೆ ಕಿವಿಗೊಡಬಾರದು. ಸಧ್ಯದಲ್ಲೇ ಲೋಕಸಭಾ ಚುನಾವಣೆ ಬರಲಿದ್ದು, ಪ್ರತಿಯೊಬ್ಬ ಕಾರ್ಯಕರ್ತ ಮೈಸೂರು- ಕೊಡಗು ಕ್ಷೇತ್ರವನ್ನು ಗೆಲ್ಲುವ ಪಣ ತೊಡಬೇಕು ಎಂದು ಕರೆ ನೀಡಿದ್ದಾರೆ. ನಿಗಮ ಮಂಡಳಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಎಲ್ಲಾ ಸ್ಥಾನಗಳಿಗೆ ಪದಾಧಿಕಾರಿಗಳ ನೇಮಕವಾಗಿಲ್ಲ. ಸುಮಾರು 70 ಸ್ಥಾನಗಳಿಗೆ ಮಾತ್ರ ಆಯ್ಕೆಯಾಗಿದ್ದು, ಇನ್ನೂ 40 ಸ್ಥಾನಗಳಿಗೆ ನೇಮಕವಾಗಬೇಕಾಗಿದೆ. ಮುಂದೆ ನಡೆಯುವ ಆಯ್ಕೆ ಪ್ರಕ್ರಿಯೆ ಸಂದರ್ಭ ಕೊಡಗಿಗೆ ಪ್ರಾತಿನಿಧ್ಯ ದೊರೆಯಲಿದೆ. ಅದರಲ್ಲೂ ಅಲ್ಪಸಂಖ್ಯಾತರಿಗೆ ಒಂದು ಸ್ಥಾನ ಸಿಗುವುದು ಖಚಿತವಾಗಿದೆ…
ಮಡಿಕೇರಿ ಮಾ.3 NEWS DESK : ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ಅರಣ್ಯ ಭಾಗದಲ್ಲಿ ಅತಿಕ್ರಮಣ ಪ್ರವೇಶವಾಗಿದೆ ಎಂದು ಆರೋಪಿಸಿ ಕುಡಿಯುವ ನೀರು ಸರಬರಾಜಿನ ಸಾಮಾಗ್ರಿಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡ ಪ್ರಕರಣವನ್ನು ಇತ್ಯರ್ಥ ಪಡಿಸಿ ಗ್ರಾಮಸ್ಥರಿಗೆ ನ್ಯಾಯ ಒದಗಿಸಿಕೊಟ್ಟ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕ್ರಮ ಸ್ವಾಗತಾರ್ಹವಾಗಿದ್ದು, ಗ್ರಾಮಸ್ಥರ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕಾಂಗ್ರೆಸ್ ಸೇವಾ ಕಚೇರಿಯ ಭಾಗಮಂಡಲ ಹೋಬಳಿ ಅಧ್ಯಕ್ಷ ಕೆ.ಸಿ.ವೆಂಕಟೇಶ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರೋಪಾಯಗಳನ್ನು ಸೂಚಿಸುವ ಶಾಸಕ ಪೊನ್ನಣ್ಣ ಅವರ ಕಾರ್ಯವೈಖರಿ ಬಗ್ಗೆ ಗ್ರಾಮಸ್ಥರಿಗೆ ತೃಪ್ತಿ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾಗಮಂಡಲ ಗ್ರಾ.ಪಂ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿದ್ದು, ದೇವರ ಕಾಡು ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನೀರಿನ ಪಂಪ್, ಮೋಟಾರ್ ಹಾಗೂ ಪೈಪ್’ಗಳನ್ನು ವಶಪಡಿಸಿಕೊಂಡಿತ್ತು. ಜೊತೆಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೆ…
ಮಡಿಕೇರಿ ಮಾ.3 NEWS DESK : ಶನಿವಾರ ಕೆಲಸಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಮನೆಗೆ ಮರಳದೆ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಮಡಿಕೇರಿ ಹೊರ ವಲಯದ ಗಾಳಿಬೀಡು ಗ್ರಾಮದ ನಿಶಾನಿ ಬೆಟ್ಟದಲ್ಲಿ ನಡೆದಿದೆ. ಗಾಳಿಬೀಡು ಗ್ರಾಮದ ನಿವಾಸಿ ಅಪ್ಪಚ್ಚ(60) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಪ್ರವಾಸಿಗರು ಟ್ರಕ್ಕಿಂಗ್ ಗಾಗಿ ನಿಶಾನಿ ಬೆಟ್ಟಕ್ಕೆ ಹೋಗುತ್ತಿದ್ದ ಸಂದರ್ಭ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ದಾಳಿಯಿಂದ ಅಪ್ಪಚ್ಚ ಅವರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಶವ ದೊರೆತ ಪ್ರದೇಶದಲ್ಲಿ ಆನೆ ಸಂಚರಿಸಿರುವ ಕುರುಹು ಪತ್ತೆಯಾಗಿದೆ. ಅಪ್ಪಚ್ಚ ಅವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಹೋಗಿದ್ದವರು ಮನೆಗೆ ಮರಳಿರಲಿಲ್ಲ. ಮನೆಯವರು ರಾತ್ರಿಯವರೆಗೂ ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಆದರೆ ಇಂದು ಮುಂಜಾನೆ ಅಪ್ಪಚ್ಚ ಅವರ ಮೃತದೇಹ ಪ್ರವಾಸಿಗರಿಗೆ ಗೋಚರಿಸಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಮಾ.3 NEWS DESK : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರಿಗೆ ಡಿಕ್ಕಿಯಾಗಿ ಮಗುಚಿಕೊಂಡ ಘಟನೆ ಪೊನ್ನಂಪೇಟೆಯ ಕಾನೂರಿಗೆ ತೆರಳುವ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅದೇ ರಸ್ತೆಯಲ್ಲಿ ತೆರಳುತ್ತಿದ್ದವರೊಬ್ಬರು ಚೆಸ್ಕಾಂ ಗೆ ಕರೆ ಮಾಡಿ ವಿದ್ಯುತ್ ಸ್ಥಗಿತಗೊಳಿಸಿ ಅವಘಡಕ್ಕೀಡಾದ ಕಾರಿನ ಚಾಲಕನನ್ನು ರಕ್ಷಿಸಿದರು. ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಮಡಿಕೇರಿ ಮಾ.3 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪೊನ್ನಂಪೇಟೆ ತಾಲ್ಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಿಟ್ಟೂರು ಕಾರ್ಮಾಡು ಅರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಅಭಿಯಾನ ನಡೆಯಿತು. ಕಾರ್ಯಕ್ರಮಕ್ಕೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮ್ಮಣಿ ದೀಪ ಚಾಲನೆ ನೀಡಿದರು. ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ ಮಾತನಾಡಿ ಪೋಲಿಯೋ ಹನಿ ಹಾಕುವ ಮೂಲಕ ಐದು ವರ್ಷದೊಳಗಿನ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳುವಂತೆ ಕರೆ ನೀಡಿದರು. ಗ್ರಾ.ಪಂ ಸದಸ್ಯ ಕಾಟಿಮಾಡ ಶರೀನ್ ಮುತ್ತಣ್ಣ ಮಾತನಾಡಿ ಭಾರತವು ಪೋಲಿಯೊ ಮುಕ್ತ ದೇಶವಾಗಿದೆ. ಕೆಲವು ದೇಶಗಳಲ್ಲಿ ಇನ್ನೂ ಪೋಲಿಯೋ ರೋಗದ ಭೀತಿ ಇದ್ದು, ಪೋಲಿಯೊ ಹನಿ ಹಾಕುವ ಅಭಿಯಾನದಲ್ಲಿ ಕೈ ಜೋಡಿಸಿ ರಾಷ್ಟ್ರದ ಅರೋಗ್ಯ ಸುರಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ತಿಳಿಸಿದರು. ಪಂಚಾಯಿತಿ ಸದಸ್ಯರಾದ ಪಡಿಞರಂಡ ಕವಿತಾ ಪ್ರಭು ಹಾಗೂ ಬಾಳೆಲೆ ಸಮುದಾಯ ಆರೋಗ್ಯ ಅಧಿಕಾರಿ ನಿಯಾಜ್ ಮಗುವಿಗೆ ಪೋಲಿಯೋ…
ಮಡಿಕೇರಿ ಮಾ.3 NEWS DESK :‘ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು ಭಾನುವಾರ ಚಾಲನೆ ನೀಡಿದರು. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ (ಜಿಲ್ಲಾಸ್ಪತ್ರೆ) ಶಿಶುವಿಗೆ ಪೋಲಿಯೊ ಹನಿ ನೀಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಮಕ್ಕಳಿಗೆ ವಿಕಲತೆ ತಪ್ಪಿಸುವಲ್ಲಿ 1995 ರಿಂದ ಪೋಲಿಯೊ ಹನಿ ನೀಡುತ್ತಾ ಬರಲಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸಕರಿಸುವಂತೆ ಮನವಿ ಮಾಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್ ಅವರು ಮಾತನಾಡಿ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಹನಿ ಕೊಡಿಸಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಬೇಡ ಎಂದು ಕೋರಿದರು. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಮಾತನಾಡಿ ಭಾತರವು ಈಗಾಗಲೇ ಪೋಲಿಯೊ ಮುಕ್ತವಾಗಿದೆ. ಆದರೂ ಹತ್ತಿರದ ರಾಷ್ಟ್ರಗಳಲ್ಲಿ ಪೋಲಿಯೊ ಕಾಣಿಕೊಂಡಿರುವುದರಿಂದ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಐದು…
ಮಡಿಕೇರಿ ಮಾ.3 NEWS DESK : ಪಲ್ಸ್ ಪೊಲಿಯೋ ಅಭಿಯಾನದ ಅಂಗವಾಗಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 5 ವಷ೯ದೊಳಗಿನ ಪುಟಾಣಿಗಳಿಗೆ ಪೋಲಿಯೋ ಹನಿ ಹಾಕಲಾಯಿತು. ಮಡಿಕೇರಿ ನಗರದ ಅಶೋಕಪುರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ನಡೆದ ಕಾಯ೯ಕ್ರಮದಲ್ಲಿ 5 ವಷ೯ದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು. ಈ ಸಂದಭ೯ ಮಾತನಾಡಿದ ರೋಟರಿ ವಲಯ 6 ರ ಸಹಾಯಕ ಗವನ೯ರ್ ದೇವಣಿರ ತಿಲಕ್, ಅಂತರರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೋ ನಿವಾರಣೆಗಾಗಿ ರೋಟರಿ ಸಂಸ್ಥೆಯು ಬೃಹತ್ ಆಂದೋಲನ ಕೈಗೊಂಡಿದೆ. ಇದರ ಪರಿಣಾಮವಾಗಿಯೇ ಇಂದು ಬಹುತೇಕ ದೇಶಗಳಲ್ಲಿ ಪೊಲಿಯೋ ಕಣ್ಮರೆಯಾಗಿದೆ ಎಂದು ತಿಳಿಸಿದರು. ರೋಟರಿ ಮಿಸ್ಟಿ ಹಿಲ್ಸ್ ನ ಪಲ್ಸ್ ಪೊಲಿಯೋ ಯೋಜನೆಯ ನಿದೇ೯ಶಕ ಡಾ.ಚೇತನ್ ಶೆಟ್ಟಿ ಮಾತನಾಡಿ, ಪೊಲಿಯೋ ನಿರೋಧಕ ಲಸಿಕೆಯಲ್ಲಿ ಬಹಳಷ್ಟು ಆರೋಗ್ಯಕಾರಿ ಅಂಶಗಳಿದೆ. ಪೋಲಿಯೋ ಹನಿ ಹಾಕುವ ಮಗುವಿನಲ್ಲಿ ರೋಗ ನಿರೋಧಕ ಶಕ್ತಿಯು ಪ್ರಬಲವಾಗಿ ರೂಪುಗೊಳ್ಳುತ್ತದೆ. ಹೀಗಾಗಿ 5 ವಷ೯ದೊಳಗಿನ ಪ್ರತೀ ಮಗುವೂ ಪೊಲಿಯೋ ಹನಿ ಹಾಕಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಮಿಸ್ಟಿ ಹಿಲ್ಸ್…






