ಲೇಖಕ: admin

ಮಡಿಕೇರಿ ಮಾ.3 NEWS DESK : ಮೂರ್ನಾಡುವಿನ ಎಂ.ಬಾಡಗ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು. 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹನಿ ನೀಡಲಾಯಿತು. ಪೋಷಕರು ಲಸಿಕಾ ಕೇಂದ್ರಕ್ಕೆ ಮಕ್ಕಳನ್ನು ಉತ್ಸಾಹದಿಂದ  ಕರೆದುಕೊಂಡು ಬಂದರು. ಎಂ.ಬಾಡಗ 1 ರ ಅಂಗನವಾಡಿ ಕಾರ್ಯಕರ್ತೆ  ಜಯಂತಿ ಬಿ.ಬಿ, ಎಂ.ಬಾಡಗ 2 ರ ಅಂಗನವಾಡಿ ಕಾರ್ಯಕರ್ತೆ ಭವ್ಯ, ಅರೋಗ್ಯ ಕಾರ್ಯಕರ್ತೆ ಲಲಿತ ಹಾಗೂ ಆಶಾ ಕಾರ್ಯಕರ್ತೆ ಚಂದ್ರಿಕಾ ಉಪಸ್ಥಿತರಿದ್ದರು.

Read More

ಮಡಿಕೇರಿ ಮಾ.2 NEWS DESK : ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದೊಂದಿಗೆ ಸಮುದಾಯ ಶಿಕ್ಷಣ ಅತ್ಯಂತ ಅವಶ್ಯವಾಗಿದ್ದು, ಅದನ್ನು ಎನ್.ಎಸ್.ಎಸ್ ಕಲಿಸುತ್ತದೆ ಎಂದು ಕೊಡಗು ಜಿಲ್ಲಾ ಎನ್.ಎಸ್.ಎಸ್ ನೋಡಲ್ ಅಧಿಕಾರಿ ವನಿತ್ ಕುಮಾರ್ ಅಭಿಪ್ರಾಯ ಪಟ್ಟರು. ಪೊನ್ನಂಪೇಟೆ ಸಮೀಪದ ಹಳಿಗಟ್ಟು ಸಿ.ಐ.ಟಿ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಹಳಿಗಟ್ಟು ಸ.ಹಿ.ಪಾ.ಶಾಲೆಯಲ್ಲಿ ನಡೆಯುತ್ತಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಅಧುನಿಕ ಯುಗದಲ್ಲಿ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಸಮುದಾಯದ ಶಿಕ್ಷಣದಿಂದ ವಿದ್ಯಾರ್ಥಿಗಳು ದೂರವಾಗುತ್ತಿದ್ದಾರೆ. ಮೊಬೈಲ್, ಕಂಪ್ಯೂಟರ್ ಹಿಡಿದು ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ಸಮುದಾಯದ ಜನರೊಂದಿಗೆ ಹೇಗೆ ಮಾತನಾಡಬೇಕು, ಮಾನವಿಯತೆಯನ್ನು ಹೇಗೆ ರೂಪಿಸಿಕೊಳ್ಳಬೇಕು, ಕೃಷಿ ಚಟುವಟಿಕೆ ತೊಡಗಿಕೊಳ್ಳುವುದು ಹೇಗೆ?, ಜನರ ಕಷ್ಟಗಳನ್ನು ಅರಿತು ಹೇಗೆ ಸಮಸ್ಯೆ ಬಗ್ಗೆ ಹರಿಸಬೇಕು ಎಂಬುದನ್ನು ತಿಳಿಯಲು ಎನ್.ಎಸ್.ಎಸ್ ಶಿಬಿರ ಸಹಕಾರಿಯಾಗಿದೆ ಎಂದು ಹೇಳಿದರು. ಮಹಾತ್ಮ ಗಾಂಧಿ 100 ಜನ್ಮ ದಿನದಂದು ಪಾರಂಭವಾದ ಈ ಯೋಜನೆ 6 ಲಕ್ಷಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಹೊಂದಿ ಶಿಸ್ತು,…

Read More

ಮಡಿಕೇರಿ ಮಾ.2 NEWS DESK : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್.ಎಲ್.ಎಂ) ಸಂಜೀವಿನಿ ಯೋಜನೆ, ಕೊಡಗು ಜಿ.ಪಂ ವತಿಯಿಂದ ಮಾ.5 ರಿಂದ ಮಾ.7ರ ವರೆಗೆ ಜಿಲ್ಲಾ ಮಟ್ಟದಲ್ಲಿ ಗ್ರಾಮೀಣ ಸ್ವ ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ. ನಗರದ ಬಾಲಭವನದ ಆವರಣದಲ್ಲಿ ನಡೆಯಲಿರುವ ಮೇಳಕ್ಕೆ ಜಿಲ್ಲೆಯ ಎಲ್ಲಾ ಗ್ರಾ.ಪಂ ಮಟ್ಟದ ಒಕ್ಕೂಟಗಳಲ್ಲಿ ಇರುವ ಗ್ರಾಮೀಣ ಮಹಿಳೆಯರ ಸ್ವಾವಲಂಬನೆಗೆ ಪ್ರೋತ್ಸಾಹಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ.

Read More

ಮಡಿಕೇರಿ ಮಾ.2 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 20 ಗ್ರಾ.ಪಂ ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಕರಿಕೆ, ಅಯ್ಯಂಗೇರಿ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು, ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು, ನಾಲ್ಕೇರಿ, ಶ್ರೀಮಂಗಲ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ, ಹಾನಗಲ್ಲು, ವಿರಾಜಪೇಟೆ ತಾಲ್ಲೂಕಿನ ಬೆಟೋಳಿ, ಅಮ್ಮತ್ತಿ, ಮಾಲ್ದಾರೆ, ಹೊಸೂರು, ಆರ್ಜಿ ಮತ್ತು ಚೆನ್ನಯ್ಯನಕೋಟೆ ಗ್ರಾ.ಪಂ. ಆಸಕ್ತ ಪ್ರಾಂಚೈಸಿಗಳುhttps://kal-mys.gramaone.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9148712473 ಇ-ಮೇಲ್ ಐಡಿ care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ  ತಿಳಿಸಿದ್ದಾರೆ.

Read More

ಮಡಿಕೇರಿ ಮಾ.2 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮಡಿಕೇರಿ ಬಾಹ್ಯ ಸೇವಾ ಕೇಂದ್ರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮದಡಿಯಲ್ಲಿ ಮಾ.4 ರಂದು ಬೆಳಗ್ಗೆ 10.30 ಗಂಟೆಗೆ ವಿಶ್ವ ಶ್ರವಣ ದಿನಾಚರಣೆ/ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನದ ಸಭಾ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉಪನ್ಯಾಸ ಕೊಠಡಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್  ತಿಳಿಸಿದ್ದಾರೆ.

Read More

ಮಡಿಕೇರಿ ಮಾ.2 NEWS DESK  : ಪೊನ್ನಂಪೇಟೆ ತಾಲ್ಲೂಕಿನ ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವಾಲಯದ ವಾರ್ಷಿಕೋತ್ಸವವು ಮಾ.4 ಹಾಗೂ ಮಾ. 5ರಂದು ನಡೆಯಲಿದೆ ಎಂದು ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಕುಂದಾ ಮುಗಟಗೇರಿ ಗ್ರಾಮದಲ್ಲಿರುವ ಸಾವಿರಾರು ವರ್ಷಗಳ ಇತಿಹಾಸವಿರುವ ನಾಡ್ ದೇವಸ್ಥಾನ ಎಂದು ಕರೆಯಲ್ಪಡುವ ಶ್ರೀ ಈಶ್ವರ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವ ಫೆ.26ರಂದು ಕೊಡಿಮರ ನಿಲ್ಲಿಸುವ ಮೂಲಕ ಆರಂಭಗೊಂಡಿದ್ದು,  ಮಾ.4ರಂದು  ನೆರ್ಪು ಹಾಗೂ ಮಾ. 5ರಂದು ಸಂಜೆ ದೇವರ ಅವಭೃತ ಸ್ನಾನ (ದೇವ ಕುಳಿಪೊ) ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಕ್ಕಮುಖ್ಯಸ್ಥರು ಮನವಿ ಮಾಡಿದರು. ಬೊಟ್ಟಿಯತ್ ನಾಡಿಗೆ ಸೇರಿದ ಮುಗಟಗೇರಿ, ಕುಂದಾ, ಹುದೂರು, ಹಳ್ಳಿಗಟ್ಟು, ಈಚೂರು, ಆರ್ವತೋಕ್ಲು ಸುತ್ತಾಮುತ್ತಲ ಗ್ರಾಮಗಳು ಒಂದೆಡೆ ಸೇರಿ ನಡೆಸುವ ವಾರ್ಷಿಕ ಉತ್ಸವ ಇದಾಗಿದ್ದು, ನಿರಂತರವಾಗಿ ಒಂಬತ್ತು ದಿನಗಳ ಕಾಲ ಅನ್ನಸಂತರ್ಪಣೆ ಇರುತ್ತದೆ. ಭಕ್ತರು ಯಾರು ಬೇಕಾದರೂ ಅನ್ನಸಂತರ್ಪಣೆಗೆ ಬೇಕಾದ ಸಾಮಗ್ರಿಗಳನ್ನು…

Read More

ಮಡಿಕೇರಿ ಮಾ.2 NEWS DESK :  ಮಹಾಶಿವರಾತ್ರಿ ಪ್ರಯುಕ್ತ ಮಾ.8 ರಂದು ಶ್ರೀ ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ 7 ಗಂಟೆಗೆ ಶತರುದ್ರಾಭಿಷೇಕ, ಬೆಳಿಗ್ಗೆ 9.30 ಗಂಟೆಗೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಜರುಗಲಿದೆ. ಸಂಜೆ 6 ಗಂಟೆಗೆ ತಾಯಂಬಕ ಸೇವೆ, 6.30 ಗಂಟೆಗೆ ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ, ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ಸಂಜೆ 7.30 ಗಂಟೆಗೆ ಲಘು ಉಪಹಾರ ನಡೆಯಲಿದ್ದು, ರಾತ್ರಿ 11 ಗಂಟೆಗೆ ಯಕ್ಷಗಾನ ಬಯಲಾಟ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಿಗ್ಗೆ 9.30 ಗಂಟೆಗೆ ಶತರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 7 ಗಂಟೆಗೆ ಏಕಾದಶರುದ್ರಾಭಿಷೇಕ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರಿ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.

Read More

ಮಡಿಕೇರಿ ಮಾ.2 NEWS DESK : ವಿರಾಜಪೇಟೆ ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಬಿಟ್ಟಂಗಾಲ ಪಂಚಾಯಿತಿಯ ಪೋದಕೇರಿ ಮಹಾದೇವರ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಬೇಟೊಳಿ ಪಂಚಾಯಿತಿಯ ಗುಂಡಿಗೆರೆ ಮಸೀದಿಗೆ ತೆರಳುವ ನೂತನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಗೋಣಿಕೊಪ್ಪದ ಶ್ರೀ ಗಣೇಶ್ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿ ಶುಭ ಕೋರಿದರು. ಇದೇ ಸಂದರ್ಭ  ಬೇಟೊಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಚಿಣ್ಣರ ಜೊತೆ ಸಮಯ ಕಳೆದು ಶಾಲೆಯ ಅಡಳಿತ ವೈಖರಿಯನ್ನ ಶ್ಲಾಘೀಸಿದರು.

Read More

ಮಡಿಕೇರಿ ಮಾ.2 NEWS DESK : 2022-23ನೇ ಸಾಲಿನ 10ನೇ ತರಗತಿ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿನಿ ಹೆಚ್.ಆಶಿಫಾ ಗೆ ದಿವಂಗತ ಬಿ.ಎಸ್.ಬೀರಪ್ಪ ದತ್ತಿ ಪ್ರಶಸ್ತಿ ಪ್ರದಾನ, ಮಹಿಳೆ ಮತ್ತು ಶಿಕ್ಷಣ ಉಪನ್ಯಾಸ ಕಾರ್ಯಕ್ರಮ ಹಾಗೂ ದತ್ತಿ ದಾನಿ ಹೆಚ್.ಬಿ.ಜಯಮ್ಮರಿಗೆ ಸನ್ಮಾನ ಕಾರ್ಯಕ್ರಮ ಮಾ.5 ರಂದು ನಡೆಯಲಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕಸಾಪ, ಶನಿವಾರಸಂತೆ ಹೋಬಳಿ ಕಸಾಪ ಮತ್ತು ಶನಿವಾರಸಂತೆ ಶ್ರೀವಿಘ್ನೇಶ್ವರ ಬಾಲಕಿಯರ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಶನಿವಾರಸಂತೆಯ ಶ್ರೀವಿಘ್ನೇಶ್ವರ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಶನಿವಾರಸಂತೆ ವಿಘ್ನೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ಟಿ.ಪಿ.ಶಿವಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಉಪಾಧ್ಯಕ್ಷ ಕೆ.ಇ.ಕೃಷ್ಣರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಗೌರವ ಉಪಸ್ಥಿತರಿರಲಿದ್ದಾರೆ. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತವಿಕ ನುಡಿಗಳನ್ನಾಡಲಿದ್ದು, ಶನಿವಾರಸಂತೆ ವಿಘ್ನೇಶ್ವರ ಪ್ರೌಢಶಾಲೆಯ ಅಧ್ಯಾಪಕ ಕೆ.ಪಿ.ಜಯಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ…

Read More

ಮಡಿಕೇರಿ ಮಾ.2 : ಅಲ್ ಅಮೀನ್ ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಮಾ.3ರಂದು ಸುಂಟಿಕೊಪ್ಪದ ಎಸ್ ಎಸ್ ಇಂಟರ್ ನ್ಯಾಷನಲ್ ಕನ್ವೆನ್ಷನ್ ಹಾಲ್ ನಲ್ಲಿ 10 ಜೋಡಿ ಮುಸ್ಲಿಂ ಬಡ ಕನ್ಯೆಯರ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಸಂಸ್ಥೆಯ ಮಹಾಪೋಷಕ, ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ ಮಾಸ್ಟರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 11ಗಂಟೆಗೆ ನಡೆಯಲಿರುವ ಸಮಾರಂಭವನ್ನು ಸೈಯದ್ ಕೆ .ಎಸ್. ಮುಕ್ತಾರ್ ತಂಙಳ್ ಕುಂಬೋಲ್ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಉಪ ಖಾಝಿ ಎಂ.ಎಂ. ಅಬ್ದುಲ್ಲ ಫೈಝಿ, ಸುಂಟಿಕೊಪ್ಪದ ಸುನ್ನಿ ಮುಸ್ಲಿಂ ಜಮಾಅತ್ ನ ಮುದರ್ರಿಸ್ ಉಸ್ಮಾನ್ ಫೈಝಿ, ಪೆರುಂಬಾಡಿಯ ಸಂಸುಲ್ ಉಲಮಾ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಬಶೀರ್ ಹಾಜಿ, ಕುಶಾಲನಗರದ ದಾರುಲ್ ಉಲೂಂ ಮದರಸ ಸಂಸ್ಥೆಯ ಪ್ರಾಂಶುಪಾಲ ತಮ್ಲೀಕ್ ದಾರಿಮಿ, ಸುಂಟಿಕೊಪ್ಪದ ಎಸ್ ಎಸ್ ಹಾಲ್ ಮಾಲೀಕ ಎಂ.ಎಂ.ಸಾಹಿರ್, ಗದ್ದೆ ಹಳ್ಳ ಮಸೀದಿಯ ಧರ್ಮಗುರು ಉಸಾಮಾ ಸಖಾಫಿ, ಕೊಡಗರಹಳ್ಳಿಯ ಬಾಪು ಹಾಜಿ ಮುಂತಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅಲ್ ಅಮೀನ್…

Read More