ಲೇಖಕ: admin

ಮಡಿಕೇರಿ ಮಾ.22 NEWS DESK  : ಕೇರಳ ಮಾನಂದವಾಡಿಯಿಂದ ಕರ್ನಾಟಕದ ಕಡೆಗೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5ಲಕ್ಷ ರೂ.ಗಳನ್ನು ಕುಟ್ಟ ಚೆಕ್‍ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊಡಗು-ಮೈಸೂರು ಗಡಿ ಚೆಕ್‍ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಚುನಾವಣಾಧಿಕಾರಿಗಳು ಕೇರಳದ ಕಡೆಯಿಂದ ಬಂದ ಕಾರನ್ನು ಪರಿಶೀಲನೆ ನಡೆಸಿದ ಸಂದರ್ಭ ಕೇರಳ ವೈನಾಡು ಜಿಲ್ಲೆಯ ಮಾನಂದವಾಡಿ ನಿವಾಸಿ ನಾಸಿರ್(58) ಎಂಬುವವರು ಯಾವುದೇ ದಾಖಲೆಗಳಿಲ್ಲದೆ ಒಟ್ಟು 5 ಲಕ್ಷ ರೂ.ಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಾರಿನಲ್ಲಿದ್ದ ನಾಸಿರ್ ಅವರು ಹಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ನೀಡದಿರುವ ಹಿನ್ನೆಲೆ ಚುನಾವಣಾಧಿಕಾರಿಗಳು 5ಲಕ್ಷ ರೂ.ಗಳನ್ನು ವಶಕ್ಕೆ ಪಡೆದರು. ಬಳಿಕ ಮುಂದಿನ ಕ್ರಮಕ್ಕಾಗಿ ಹಣವನ್ನು ಸ್ಕ್ರೀನಿಂಗ್ ಕಮಿಟಿಗೆ ಹಸ್ತಾಂತರಿಸಿದರು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನವೀನ್, ಕುಟ್ಟ ಪೊಲೀಸ್ ಠಾಣೆಯ ಸಹಾಯಕ ನಿರೀಕ್ಷಕ ಫ್ರಾನ್ಸಿಸ್, ಸಿಬ್ಬಂದಿಗಳಾದ ಮೋಹನ್ ಕುಮಾರ್, ಮಂಜು, ಅಬಕಾರಿ ಇಲಾಖೆ ಉಪನಿರೀಕ್ಷಕ ವಿ.ಸುರೇಂದ್ರ, ಶಿಕ್ಷಕ ಧರ್ಮಲಿಂಗ ಅವರುಗಳ ತಂಡ ಕಾರ್ಯಾಚರಣೆ ನಡೆಸಿತು.

Read More

ವಿರಾಜಪೇಟೆ ಮಾ.22 NEWS DESK : ವಿರಾಜಪೇಟೆತ ನಂ.371 ನೇ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ಮಾ.23 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಹಿಳಾ ಸಮಾಜದ ಎಲ್ಲ ಸದಸ್ಯರು ಪಾಲ್ಗೊಳ್ಳುವಂತೆ ಮಹಿಳಾ ಸಮಾಜದ ಅಧ್ಯಕ್ಷೆ ಪಟ್ರಪಂಡ ಗೀತಾ ಬೆಳ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸೋಮವಾರಪೇಟೆ ಮಾ.22 NEWS DESK  : ಸೋಮವಾರಪೇಟೆಯಲ್ಲಿ ಬಹುದಿನಗಳ ಬೇಡಿಕೆಯಾದ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಪಟ್ಟಣದ ಸಿ.ಕೆ.ಸುಬ್ಬಯ್ಯ ರಸ್ತೆಯ ಬಳಿ ಇರುವ ಪಟ್ಟಣ ಪಂಚಾಯಿತಿಗೆ ಸೇರಿದ ಮಾರುಕಟ್ಟೆ ಜಾಗದಲ್ಲಿ ಕ್ಯಾಂಟಿನ್ ಪ್ರಾರಂಭಗೊಳ್ಳಲಿದೆ.

Read More

ಮಡಿಕೇರಿ ಮಾ.22 NEWS DESK  : ಯಾವುದೇ ದಾಖಲೆಗಳಿಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 4 ಲಕ್ಷ ರೂ.ಗಳನ್ನು ಕುಶಾಲನಗರದ ಕೊಪ್ಪದಲ್ಲಿರುವ ವಾಹನ ತಪಾಸಣಾ ಕೇಂದ್ರದಲ್ಲಿ ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಟಿಬೆಟಿಯನ್ ನಿರಾಶ್ರಿತ ವ್ಯಕ್ತಿ ತನ್ನ ದ್ವಿಚಕ್ರ ವಾಹನದಲ್ಲಿ ಬೈಲುಕೊಪ್ಪದಿಂದ ಕುಶಾಲನಗರ ಪಟ್ಟಣದ ಕಡೆಗೆ ಹಣ ಸಾಗಿಸುತ್ತಿದ್ದ ಸಂದರ್ಭ ಅಧಿಕಾರಿಗಳು ಪತ್ತೆಹಚ್ಚಿ ಕ್ರಮ ಕೈಗೊಂಡಿದ್ದಾರೆ. ಕೇಂದ್ರದ ಚುನಾವಣಾ ಅಧಿಕಾರಿ ಪೂವಯ್ಯ, ಮಹಾದೇವ್, ಅಭಿಷೇಕ್, ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿ ಬಿ.ಎಸ್.ಉಮಾ, ಸಿಬ್ಬಂದಿಗಳಾದ ಅರುಣ್ ಕುಮಾರ್, ಶಶಿಕುಮಾರ್ ಹಾಗೂ ಜಯಪ್ರಕಾಶ್ ಈ ಸಂದರ್ಭ ಇದ್ದರು.

Read More

ಮಡಿಕೇರಿ ಮಾ.22 NEWS DESK : ನದಿ ಜಲಮೂಲಗಳ ಅಸ್ತಿತ್ವವನ್ನು ಉಳಿಸಿ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ. ವಿಶ್ವಜಲ ದಿನಾಚರಣೆ ಅಂಗವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ಕುಶಾಲನಗರ ಪುರಸಭೆ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡ ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮತ್ತು ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ತಂಡಗಳ ಸಹಯೋಗದೊಂದಿಗೆ ನಡೆದ ತಾವರೆಕೆರೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸಕ್ತ ದಿನಗಳಲ್ಲಿ ಹಲವು ಕಾರಣಗಳಿಂದ ಕೆರೆಗಳ ನಾಶ ಉಂಟಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಮೂಲಕ ತಮ್ಮನ್ನು ಸಮಾಜದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಚುನಾವಣೆ ಪ್ರಕ್ರಿಯೆ ನಂತರ ಪಟ್ಟಣ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು. ಈ ಸಂದರ್ಭ ಮಾತನಾಡಿದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ…

Read More

ಸೋಮವಾರಪೇಟೆ ಮಾ.22 NEWS DESK : ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಸಕ್ತ ಸಾಲಿನ ಜಾತ್ರೋತ್ಸವದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್‍ಗೌಡ ಪಾಲ್ಗೊಂಡು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ರಾಜಗೋಪುರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಜಿ.ಪಂ ಮಾಜಿ ಅಧ್ಯಕ್ಷ ವಿ.ಎಂ.ವಿಜಯನ್, ಪ್ರಮುಖರಾದ ಬಿ.ಬಿ.ಸತೀಶ್, ಚೇತನ್, ವಿನಿ, ಹೆಚ್.ಎ.ನಾಗರಾಜು, ಮೀನಾಕುಮಾರಿ, ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ.ವಿನೋದ್‍ಕುಮಾರ್, ದೇವಾಲಯ ಸಮಿತಿ ಪದಾಧಿಕಾರಿಗಳಾದ ಪ್ರಸನ್ನ ನಾಯರ್, ರಾಧಾಕೃಷ್ಣ, ಪಿ.ಕೆ.ರಾಜನ್, ಎನ್.ಜಿ.ಮೋಹನ್, ಕೆ.ಸಿ.ದಿನೇಶ್ ಮತ್ತು ನಿರ್ದೇಶಕರುಗಳು ಕ್ಷೇತ್ರದ ಭಕ್ತಾದಿಗಳು ಇದ್ದರು.

Read More

ಮಡಿಕೇರಿ ಮಾ.22 NEWS DESK :  ಅನ್ನಭಾಗ್ಯ, ಬಸ್ ನಲ್ಲಿ ಉಚಿತ ಪ್ರಯಾಣ ಭಾಗ್ಯ, ಮಾಸಿಕ ರೂ.2 ಸಾವಿರ ಭಾಗ್ಯ ನೀಡುತ್ತಿರುವ ಸರಕಾರ ಬಡವರಿಗೆ ಭೂಮಿಭಾಗ್ಯ ಯಾಕೆ ನೀಡುತ್ತಿಲ್ಲವೆಂದು ಪ್ರಶ್ನಿಸಿರುವ ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ, ಉಳ್ಳವರಿಗೆ ಜಮೀನು ಗುತ್ತಿಗೆ ನೀಡುವ ಆದೇಶವನ್ನು ಹಿಂದಕ್ಕೆ ಪಡೆಯದಿದ್ದರೆ ಲೋಕಸಭಾ ಚುನಾವಣೆಯಲ್ಲಿ ನಿವೇಶನ ಮತ್ತು ವಸತಿ ರಹಿತರು ನಮ್ಮದೇ ಆದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಹೆಚ್.ಬಿ.ರಮೇಶ್ ನಿರ್ವಸತಿಗ ಕಾರ್ಮಿಕರಿಗೆ, ಬಡವರಿಗೆ ಅನ್ಯಾಯವೆಸಗುವ ರಾಜ್ಯ ಸರ್ಕಾರದ ‘ಪ್ಲಾಂಟೇಶನ್ ಬೆಳೆಗಳ ಜಮೀನು ಗುತ್ತಿಗೆ’ ಆದೇಶವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಕೊಡಗು ಜಿಲ್ಲೆಯಲ್ಲಿ ಸಹಸ್ರಾರು ಕಾರ್ಮಿಕರು ಸೂರಿಲ್ಲದೆ, ವಿವಿಧ ತೋಟಗಳ ಲೈನ್‍ಮನೆಗಳಲ್ಲಿ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಇತ್ತೀಚೆಗೆ ಚೆರಿಯಪರಂಬು ವಿಭಾಗದಲ್ಲಿ ಬಡವರ್ಗದ ಮಂದಿಯ ಗುಡಿಸಲುಗಳನ್ನು ತೆರವುಗೊಳಿಸಿರುವುದನ್ನು ವಿರೋಧಿಸಿ ಹೋರಾಟಗಳನ್ನು ನಡೆಸಲಾಗಿದೆ. ಇದರ ನಡುವೆ ಹಿಂದಿನ ಬಿಜೆಪಿ ಸರ್ಕಾರ ಪ್ರಸ್ತಾಪಿಸಿದ್ದ ಪ್ಲಾಂಟೇಶನ್ ಬೆಳೆಗಳ ಭೂಮಿಯನ್ನು ಗುತ್ತಿಗೆ ನೀಡುವ…

Read More

ಸೋಮವಾರಪೇಟೆ ಮಾ.22 NEWS DESK : ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ಮಾ.23 ಮತ್ತು 24ರಂದು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ 24ನೇ ವರ್ಷದ ಮುಕ್ತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಕ್ಲಬ್‍ನ ಅಧ್ಯಕ್ಷ ಸುರೇಶ್ ತಿಳಿಸಿದ್ದಾರೆ. ಮಾ.23ರಂದು ಬೆಳಿಗ್ಗೆ 9.30ಕ್ಕೆ ಕ್ರೀಡಾಕೂಟದ ಉದ್ಘಾಟನೆಯನ್ನು ಯಡೂರು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ಪಿ.ಭಾನುಪ್ರಕಾಶ್ ನೆರವೇರಿಸಲಿದ್ದು, ಕಾಲೇಜು ಪ್ರಾಂಶುಪಾಲರಾದ ಪ್ರೊ. ಧನಲಕ್ಷ್ಮೀ, ಗ್ರಾ.ಪಂ ಸದಸ್ಯೆ ಲಲಿತಾ ರಾಮಣ್ಣ, ಉಪಾಧ್ಯಕ್ಷೆ ರೇಣುಕಾ ವೆಂಕಟೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಮಾ.24 ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಗ್ರಾ.ಪಂ. ಸದಸ್ಯ ವೈ.ಎಸ್.ರಘು, ಚೌಡ್ಲು ವಿಎಸ್‍ಎಸ್‍ಎನ್ ಉಪಾಧ್ಯಕ್ಷ ವೈ.ಎಂ.ನಾಗರಾಜು, ನಿರ್ದೇಶಕ ದಳವಾಯಿ ರಾಜು, ಉದ್ಯಮಿಗಳಾದ ಹರಪಳ್ಳಿ ರವೀಂದ್ರ, ಅರುಣ್ ಕಾಳಪ್ಪ, ಗಿರೀಶ್ ಮಲ್ಲಪ್ಪ, ಕೆ.ಟಿ.ಸತೀಶ್, ಉದಯ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವಾಗಿ 22 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನವಾಗಿ 15…

Read More

ವಿರಾಜಪೇಟೆ ಮಾ.22 NEWS DESK : ವಿರಾಜಪೇಟೆಯ ಚಿನ್ನ, ಬೆಳ್ಳಿ ವರ್ತಕರು ಮತ್ತು ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆಯು ಮಾ.24 ರಂದು ನಡೆಯಲಿದೆ. ಬಿಟ್ಟಂಗಾಲದ ಹೆಗ್ಗಡೆ ಸಮಾಜ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೆ.ಪಿ.ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಚಿನ್ನ-ಬೆಳ್ಳಿ ವರ್ತಕರು ಮತ್ತು ಕೆಲಸಗಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಕೆ.ಶ್ರೀನಿವಾಸ, ವಿರಾಜಪೇಟೆ ತಾಲ್ಲೂಕು ಚಿನ್ನ-ಬೆಳ್ಳಿ ವರ್ತಕರ ಮತ್ತು ಕೆಲಸಗಾರರ ಸಂಘದ ಉಪಧ್ಯಕ್ಷ ಉಲ್ಲಾಸ್ ಶೇಟ್, ಪ್ರಧಾನ ಕಾರ್ಯದರ್ಶಿ ಎ.ಪಿ.ಲೋಕೇಶ್, ಸಹ ಕಾರ್ಯದರ್ಶಿ ವಿ.ವಿ.ಜಿತೇಂದ್ರ, ಖಜಾಂಚಿ ಎ.ಎನ್.ದಶರಥ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರ ಕುಟುಂಬ ವರ್ಗದವರಿಗೆ ಸಂಗೀತ ಕುರ್ಚಿ, ಮಹಿಳೆಯರಿಗೆ ಮಕ್ಕಳಿಗೆ, ಪುರುಷರಿಗೆ, ಬಣ್ಣದ ರಂಗೋಲಿ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ವರದಿ : ಕಿಶೋರ್ ಕುಮಾರ್ ಶೆಟ್ಟಿ

Read More

ಮಡಿಕೇರಿ ಮಾ.22 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪೂಮಾಲೆ ವಾರಪತ್ರಿಕೆಯ ಸಂಪಾದಕ  ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪೊದಕೋಟೆ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ತಾವು ಕಲಿತ ಪ್ರಾಥಮಿಕ ಶಿಕ್ಷಣವನ್ನು ಮೆಲುಕು ಹಾಕಿ ತಲೆಬಾಗಿ ಶಾಲೆಗೆ ನಮಿಸಿದರು. ವರದಿ : ಕರುಣ್ ಕಾಳಯ್ಯ

Read More