ಲೇಖಕ: admin

ಮಡಿಕೇರಿ ಮಾ.22 NEWS DESK : ಪ್ರತಿಯೊಬ್ಬರಿಗೂ ನೀರಿನ ಮಹತ್ವ ತಿಳಿದಿದೆ ಮತ್ತು ನೀರಿಲ್ಲದಿದ್ದರೆ ಭೂಮಿಯ ಮೇಲೆ ಯಾವುದೇ ಜೀವಿಯು ಬದುಕಲಾರದು. ಭೂಮಿಯ ಮೇಲೆ ನೀರು ಅತ್ಯವಶ್ಯಕವಾಗಿದೆ.  ಹಾಗಾಗಿ ನೀರಿನ ಮಹತ್ವವನ್ನು ಅರಿಯಲು ಮತ್ತು ಅದರ ಸಂರಕ್ಷಣೆ ಮಾಡುವ ಕುರಿತು ಜನಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್ 22 ಅನ್ನು ವಿಶ್ವ ಜಲ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತದೆ. “ಶಾಂತಿಗಾಗಿ ನೀರು” ಎಂಬುದು 2024 ರ ವಿಶ್ವ ಜಲ ದಿನದ ಮುಖ್ಯ ಘೋಷಣೆ (ಥೀಮ್) ಯಾಗಿದೆ. ನೀರು ನಮ್ಮ ಶಾಂತಿಗೆ ಕಾರಣವಾಗಬೇಕೇ ಹೊರತು ಎಂದೂ ಕೂಡ ಸಂಘರ್ಷಕ್ಕೆ ಕಾರಣವಾಗಬಾರದು. ನಾವು ನೀರನ್ನು ಪರಸ್ಪರ ಸಹಕಾರ ತತ್ವದಡಿ ಕೊಟ್ಟು ತೆಗೆದುಕೊಳ್ಳುವ ಸಕಾರಾತ್ಮಕ ಮನೋಭಾವ ಹೊಂದಿ ಸಾಮರಸ್ಯ ಬೆಳೆಸಿಕೊಳ್ಳಬೇಕು ಎಂಬುದು ಈ ವರ್ಷದ ಉದ್ದೇಶವಾಗಿದೆ. 1993 ರಿಂದ ಪ್ರತಿವರ್ಷ ಈ ದಿನವನ್ನು ಆಚರಿಸುವ ಮೂಲಕ ಜನರಲ್ಲಿ ನೀರಿನ ಸಂರಕ್ಷಣೆ ಕುರಿತು ಜನ ಜಾಗೃತಿ ಮೂಡಿಸಲಾಗುತ್ತಿದೆ. ನಾವು ಅಂತರ್ಜಲವನ್ನು ವೃದ್ಧಿಸಲು ಕ್ರಮಕೈಗೊಳ್ಳಬೇಕು. ಜಲ ಮಾಲಿನ್ಯವನ್ನು ತಡೆಗಟ್ಟುವ ದಿಸೆಯಲ್ಲಿ ನಾವು…

Read More

ಮಡಿಕೇರಿ ಮಾ.22 NEWS DESK  : ಕೊಡವ ಕುಟುಂಬಗಳ ನಡುವಿನ ಪ್ರತಿಷ್ಠಿತ ಕುಂಡ್ಯೋಳಂಡ ಹಾಕಿ ಹಬ್ಬ ಮಾ.30 ರಿಂದ ಏ.28 ರವರೆಗೆ ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ದಾಖಲೆಯ 360 ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ಕೂರ್ಗ್ 11 ಮತ್ತು ಇಂಡಿಯನ್ ನೇವಿ ನಡುವೆ ಉದ್ಘಾಟನಾ ಪಂದ್ಯವನ್ನು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಕ್ರೀಡಾಕೂಟದ ಸಂಚಾಲಕ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ, ಅಧ್ಯಕ್ಷ ರಮೇಶ್ ಮುದ್ದಯ್ಯ ಹಾಗೂ ಪ್ರಮುಖರು ಕೊಡವ ಹಾಕಿ ಅಕಾಡೆಮಿಯು 26 ವರ್ಷಗಳ ಹಿಂದೆ ಕೊಡವ ಹಾಕಿ ಹಬ್ಬದ ಜನಕ ದಿವಂಗತ ಪಾಂಡಂಡ ಕುಟ್ಟಣಿ ಅವರ ನೇತೃತ್ವದಲ್ಲಿ 1997 ರಲ್ಲಿ ಸ್ಥಾಪಿತಗೊಂಡಿತು. ಅಂದಿನಿಂದ ಇಂದಿನವರೆಗೆ ಕೊಡವ ಕುಟುಂಬಗಳ ನಡುವಿನ ವಿಶ್ವದಾಖಲೆಯ ಹಾಕಿ ಹಬ್ಬವನ್ನು ಆಯೋಜಿಸುತ್ತಾ ಬರುತ್ತಿದೆ ಎಂದರು. ಈ ವರ್ಷ 24ನೇ ಹಾಕಿ ಹಬ್ಬವನ್ನು ಕುಂಡ್ಯೋಳಂಡ ಕುಟುಂಬದ ಸಾರಥ್ಯದಲ್ಲಿ ನಡೆಸಲಾಗುತ್ತಿದೆ. ಕೊಡವ ಹಾಕಿ ಅಕಾಡೆಮಿ, ಹಾಕಿ…

Read More

ಕುಶಾಲನಗರ, ಮಾ 22 NEWS DESK  :  ಕರ್ನಾಟಕದ ಕಾರವಾರ ನೌಕಾನೆಲೆಯ 13 ಅಧಿಕಾರಿಗಳ ತಂಡ ಕೊಡಗಿನ ಸೈನಿಕ ಶಾಲೆಗೆ ಭೇಟಿ ನೀಡಿತು. ಶಾಲೆಗೆ ಆಗಮಿಸಿದ ಅಧಿಕಾರಿಗಳು ಸೈನಿಕ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಭಾರತೀಯ ನೌಕಾ ಇಲಾಖೆಯಲ್ಲಿ ಅಧಿಕಾರಿಗಳಾಗಿ ವೃತ್ತಿಜೀವನವನ್ನು ಆಯ್ಕೆ ಮಾಡಿಕೊಳ್ಳುವಂತ ಸಲಹೆ ನೀಡಿದರು. ಕಾರವಾರದ ನೌಕಾನೆಲೆಯ ಉಪ ನೆಲೆ ವಿಕ್ಚುವಲಿಂಗ್ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಜೆ ಸುಬ್ಬಯ್ಯ  ಮಾತನಾಡಿ, ತಮ್ಮ ವಿದ್ಯಾಭ್ಯಾಸ ಮತ್ತು ಕರ್ತವ್ಯಕ್ಕೆ ಬದ್ಧರಾಗಿ ತಮ್ಮ ಭವಿಷ್ಯವನ್ನು ಭಾರತೀಯ ಸೇನೆಯಲ್ಲಿ ರೂಪಿಸಿಕೊಳ್ಳುವತ್ತ ಗಮನ ಹರಿಸಬೇಕೆಂದರು. ಹಾಗೆಯೇ ತಮ್ಮ ಈ ರ‍್ಯಾಲಿಯ  ಉದ್ದೇಶ ಹಾಗೂ ನೌಕಾ ಸೇನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವಲ್ಲಿ ಈ ರ‍್ಯಾಲಿಯ ಮಹತ್ವವನ್ನು ಕುರಿತು ಪರಿಚಯಿಸಿದರು. ಇದರೊಂದಿಗೆ ಭಾರತೀಯ ನೌಕಾ ಸೇನೆಯಲ್ಲಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಇರುವ ವಿವಿಧ ವೃತ್ತಿಪರ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಕಮಾಂಡರ್ ಸಜ್ವಾನ್ ಕೋಕಿಲಾ ಮಾತನಾಡಿ, ಭಾರತೀಯ ನೌಕಾಪಡೆಯಲ್ಲಿ ಅಧಿಕಾರಿಗಳಾಗಿ ಸೇರಲು ಮಹಿಳೆಯರಿಗೆ ಲಭ್ಯವಿರುವ ಹೆಚ್ಚಿನ ಅವಕಾಶಗಳ…

Read More

ನಾಪೋಕ್ಲು ಮಾ.22 NEWS DESK : ಬೆಟ್ಟಗೇರಿ ಭಗವತಿ ದೇವರ ವಾರ್ಷಿಕ ಉತ್ಸವವು ಮಾ.24 ಮತ್ತು 25 ರಂದು ನಡೆಯಲಿದೆ. ಮಾ.24 ರಂದು ಪಟ್ಟಣಿ, ಹಗಲು ವಿಶೇಷ ಪೂಜಾ ಕೈಂಕರ್ಯಗಳು, ಮಧ್ಯಾಹ್ನ 1 ಗಂಟೆಗೆ ಕಟ್ರತಂಡ ಕುಟುಂಬದ ಭಂಡಾರದ ಮನೆಯಿಂದ ಬಂಡಾರ ಹೊರಡುವುದು, 2 ಗಂಟೆಗೆ ಶಾಸ್ತಾವು ತೆರೆ , ಸಂಜೆ 5 ಗಂಟೆಗೆ ಆಂಬಲದಲ್ಲಿ ಭಗವತಿ ಅಯ್ಯಪ್ಪ ತೆರೆ, 6 ಗಂಟೆಗೆ ದೇವರು ಬನಕ್ಕೆ ಹೋಗುವುದು ರಾತ್ರಿ, 7.30 ಗಂಟೆಗೆ ಚೌಂಡಿ ತೋತ ಹಾಗೂ 9 ಗಂಟೆಗೆ ಮೇಲೇರಿ ಕುಂಟೆಗೆ ಅಗ್ನಿಸ್ಪರ್ಶ ನಡೆಯಲಿದೆ. ಮುಂಜಾನೆ ಮಂದಣ್ಣ ಮೂರ್ತಿ, ಅಂಜಿ ಕುಟ್ಟಿ ಮೂರ್ತಿ ಕರಿಬಾಳ ಹಾಗೂ ನುಚ್ಚಟ್ಟೆ ತೆರೆಗಳು ನಡೆಯಲಿವೆ. ಮಾ.25 ರಂದು ಬೆಳಗ್ಗೆ 11 ಗಂಟೆಗೆ ವಿಷ್ಣುಮೂರ್ತಿಯ ಕೆಂಡಸೇವೆ ಹಾಗೂ ಗುಳಿಗ ರಾಜನ ಕೋಲ, ಮಧ್ಯಾಹ್ನ 12.30 ಗಂಟೆಯಿಂದ ಸಾಮೂಹಿಕ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪೌಡಂಡ ಡಾಲಿ ಭೀಮಯ್ಯ ಉಪಾಧ್ಯಕ್ಷ…

Read More

ಸುಂಟಿಕೊಪ್ಪ,ಮಾ.22 NEWS DESK : ಬಿಜೆಪಿ ಪರಿಶಿಷ್ಟ ಮೋರ್ಚಾದ ಸಭೆಯು ಜಿಲ್ಲಾಧ್ಯಕ್ಷ ಪಿ.ಎಂ.ರವಿ ಅವರ ಅಧ್ಯಕ್ಷತೆಯಲ್ಲಿ ಸುಂಟಿಕೊಪ್ಪದಲ್ಲಿ ನಡೆಯಿತು. ದ್ವಾರಕಾ ಹೊಟೇಲ್‍ನ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಒಂದೂವರೆ ಲಕ್ಷಕ್ಕಿಂತಲ್ಲೂ ಅಧಿಕವಾಗಿದ್ದು, ಜಿಲ್ಲೆಯಲ್ಲಿ ಎಸ್ಸಿ ಮೋರ್ಚದ ಘಟಕವನ್ನು ಬಲಿಷ್ಟಗೊಳಿಸುವ ಮೂಲಕ ಪರಿಶಿಷ್ಟ ಜನಾಂಗದವರು ರಾಜಕೀಯವಾಗಿ ಬೆಳೆಯುವಂತಾಗಬೇಕೆಂದು ಕರೆ ನೀಡಿದರು. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದವರನ್ನು ಪಕ್ಷವು ಗುರುತಿಸಿ ಉನ್ನತ ಸ್ಥಾನಮಾನ ನೀಡುತ್ತ ಬಂದಿದೆ. ಪಕ್ಷದ ಸಂಘಟನೆಯೊಂದಿಗೆ ಎಲ್ಲರೂ ಕೈ ಜೋಡಿಸುವಂತಾಗಬೇಕೆಂದರು. ಭಾರತೀಯ ಜನತಾ ಪಕ್ಷವು ರಾಷ್ಟ್ರ ಭಕ್ತಿ, ರಾಷ್ಟ್ರೀಯತೆಯ ಬಗ್ಗೆ ಅಪಾರವಾದ ಗೌರವವನ್ನು ನೀಡುವ ಪಕ್ಷವಾಗಿದೆ ಎಂದರು. ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನೀಲ್‍ಕುಮಾರ್, ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಸೋಮವಾರಪೇಟೆ ಗ್ರಾಮಾಂತರ ಮಂಡಲ ಎಸ್ಸಿ ಮೋರ್ಚದ ಅಧ್ಯಕ್ಷ ಜಿ.ಜಗನಾಥ್, ಪಕ್ಷದ ಹಿರಿಯ ಸದಸ್ಯ ಬಿ.ಕೆ.ಮೋಹನ ಮಾತನಾಡಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಧನುಕಾವೇರಪ್ಪ, ಪ್ರಧಾನ ಕಾರ್ಯದರ್ಶಿ ವಿ.ರಾಜ, ಕಾರ್ಯದರ್ಶಿ ಪ್ರಶಾಂತ್(ಕೋಕಾ), ಪಂಚಾಯಿತಿ ಸದಸ್ಯರಾದಆನಂದ, ಪ್ರೇಮ ಕೃಷ್ಣ,…

Read More

ಮಡಿಕೇರಿ ಮಾ.22 NEWS DESK : ಪೊನ್ನಂಪೇಟೆ ವಿದ್ಯುತ್ 66/11 ಕೆವಿಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಮಾರ್ಚ್, 24 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 66/11 ಕೆವಿ ಶ್ರೀಮಂಗಲ, 33/11 ಕೆವಿ ಸಿದ್ದಾಪುರ 33/11 ಕೆವಿ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳೆಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಹಾಗೆಯೇ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, ಕುಶಾಲನಗರ, ಕೂಡಿಗೆ, ಇಂಡಸ್ಟ್ರಿಯಲ್ ಏರಿಯಾ, ಹಾರಂಗಿ, ಎಸ್‍ಎಲ್.ಎನ್, ಶಿರಂಗಾಲ, ಭುವನಗಿರಿ, ಹೆಬ್ಬಾಲೆ, ನಂಜರಾಯಪಟ್ಟಣ, ಶಾಂತಳ್ಳಿ,, ಸೋಮವಾರಪೇಟೆ, ಅಬ್ಬೂರುಕಟ್ಟೆ, ಬೇಳೂರು, ಐಗೂರು, ಬೆಟ್ಟದಳ್ಳಿ, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ…

Read More

ಮಡಿಕೇರಿ ಮಾ.22 NEWS DESK *ತಲಕಾವೇರಿ ಮತ್ತು ಭಾಗಮಂಡಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಯದುವೀರ್*

Read More

ನವದೆಹಲಿ ಮಾ.21 NEWS DESK : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದ್ದು ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳ ತಂಡ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿ ಮತ್ತೊಂದು ಸಮನ್ಸ್ ಜಾರಿ ಮಾಡಿ, ವಿಚಾರಣೆ ನಡೆಸಿ ಇದೀಗ ಬಂಧಿಸಿದೆ. ಅರವಿಂದ್ ಕೇಜ್ರಿವಾಲ್ ಮನೆ ಎದುರು ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ. ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Read More

ಮಡಿಕೇರಿ ಮಾ.21 NEWS DESK : ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಧರ್ಮ-ಧರ್ಮಗಳ ನಡುವೆ ಕೋಮು ಸೌಹಾರ್ದತೆಯನ್ನು ಕದಡುವ ದುರುದ್ದೇಶದಿಂದ ಪ್ರಚೋದನಾಕಾರಿ ಪದಗಳನ್ನು ಬಳಸಿ ಯಾವುದೇ ಜಾತಿ/ಪಕ್ಷ/ವ್ಯಕ್ತಿಗಳ ವಿರುದ್ಧ ಸುಳ್ಳ ಸುದ್ದಿಗಳನ್ನು ಹರಿಬಿಡದಂತೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸಂದೇಶ/ಭಾವಚಿತ್ರ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಸಂಪೂರ್ಣ ನಿಗಾವಹಿಸಿದ್ದು, ಸುಳ್ಳು ಸುದ್ದಿಯ ಪೋಸ್ಟ್‌ಗಳನ್ನು ಹರಿಬಿಟ್ಟ ವ್ಯಕ್ತಿಗಳ ವಿರುದ್ಧ RP Act & IPC ಅಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Read More

ಮಡಿಕೇರಿ ಮಾ.21 NEWS DESK : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ಬರೆದು ಒಂದು ವಿಡಿಯೋವನ್ನು ಹರಿಬಿಟ್ಟು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಮಾಡಿರುವ ಆರೋಪದಡಿ ಓರ್ವ ವ್ಯಕ್ತಿಯನ್ನು ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಯಾಗಿರುವ ಪ್ರಸ್ತುತ ಉತ್ತರಪ್ರದೇಶ ರಾಜ್ಯದ ಮುಜಾಫರ್ ನಗರ ಜಿಲ್ಲೆ ಖತೋಲಿಯಲ್ಲಿರುವ ಸುಧಾಕರ್ ರಾವ್ (55) ಬಂಧಿತ ಆರೋಪಿ. ಇದೇ ಮಾ.19 ರಂದು ಸುಳ್ಳು ಸಂದೇಶ ಹರಿಬಿಟ್ಟ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Read More