ಲೇಖಕ: admin

ಬಾಳೆಲೆ ಮಾ.2 NEWS DESK : ಗೋಣಿಕೊಪ್ಪಲು ಕಾಫಿ ಮಂಡಳಿ ಹಾಗೂ ಲಕ್ಷ್ಮಣತೀರ್ಥ ಸಂಘದ ಸಂಯುಕ್ತಾಶ್ರಯದಲ್ಲಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನ ನಡೆಯಿತು. ಕೊಟ್ಟಗೇರಿ ಸಮುದಾಯಭವನದಲ್ಲಿ ನಡೆದ ಅಭಿಯಾನದಲ್ಲಿ ಬೆಳೆಗಾರರಿಗೆ ಸ್ಥಳದಲ್ಲೇ ಸುಣ್ಣದ ಪ್ರಮಾಣದ ಶಿಫಾರಸಿನ ಫಲಿತಾಂಶ ನೀಡಲಾಯಿತು. ಮಣ್ಣು ಪರೀಕ್ಷಾ ವಿಜ್ಞಾನಿ ಪ್ರಪುಲಾ ಕುಮಾರಿ ಮಣ್ಣು ಪರೀಕ್ಷೆಯ ಮಹತ್ವ ಹಾಗೂ ಗೊಬ್ಬರದ ನಿರ್ವಹಣೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕಾಫಿ ಮಂಡಳಿಯ ಕಿರಿಯ ಸಂಪರ್ಕ ಅಧಿಕಾರಿ ಮುಖಾರಿಬ್ ಮಾತನಾಡಿ, ಕಾಫಿ ಬೆಳೆಗಾರರಿಗೆ ಕಾಫಿ ಕಾಪತು ಮಾಡುವ ಬಗ್ಗೆ, ಕಾಫಿ ಗಿಡಗಳಿಗೆ ಬೇಕಾದ ನೀರಿನ ಪ್ರಮಾಣದ ಬಗ್ಗೆ, ಸುಣ್ಣದ ಮತ್ತು ಗೊಬ್ಬರದ ಪ್ರಮಾಣದ ಬಗ್ಗೆ ಮಾಹಿತಿ ನೀಡಿದರು. ಲಕ್ಷ್ಮಣ ತೀರ್ಥ ಸಂಘದ ಅಧ್ಯಕ್ಷ ಮಚ್ಚಮಾಡ ಅಯ್ಯಪ್ಪ, ಕಾರ್ಯದರ್ಶಿ ಮಾಚಂಗಡ ಸುಬ್ರಮಣಿ, ಗ್ರಾ.ಪಂ ಮಾಜಿ ಅಧ್ಯಕ್ಷ ಅರಮಣಮಾಡ ಸತೀಶ್ ದೇವಯ್ಯ, ಸೇರಿದಂತೆ ಲಕ್ಷ್ಮಣತೀರ್ಥ ಸಂಘದ ಸದಸ್ಯರು ಮತ್ತು ಕಾಫಿಬೆಳೆಗಾರರು ಹಾಜರಿದ್ದರು.

Read More

 ಬೆಂಗಳೂರು ಮಾ.2 NEWS DESK : ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಇಂದು ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಯೋಜನೆಯಡಿ ನೀಡಲಾಗುವ ಮನೆಗಳ ಹಂಚಿಕೆ ಹಾಗೂ ಹಕ್ಕುಪತ್ರಗಳ ವಿತರಣಾ ಸಮಾರಂಭವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅನ್ನ, ಆರೋಗ್ಯ , ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ ಕಲ್ಯಾಣವೇ ನಮ್ಮ ಆದ್ಯತೆ. ಪ್ರಧಾನಮಂತ್ರಿ ಆವಾಸ್ ಯೋಜನೆ “ಸರ್ವರಿಗೂ ಸೂರು” ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 18,0253 ಮನೆಗಳ ಪೈಕಿ ಪೂರ್ಣಗೊಂಡಿರುವ 36,789 ಮನೆಗಳನ್ನು ಇಂದು ಲೋಕಾರ್ಪಣೆ ಮಾಡಿದ್ದೇವೆ. ಅಲ್ಲದೆ ಕೊಳಗೇರಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಒತ್ತು ನೀಡಲಾಗಿದೆ. ಬಡ ವರ್ಗದ ಜನರಿಗೆ ನಮ್ಮ ಗ್ಯಾರಂಟಿಗಳು ನೆರವಾಗಿದ್ದು, ಅವರ ಏಳಿಗೆಗಾಗಿ ಹಲವು ಕಾರ್ಯಕ್ರಮ ರೂಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಿಕೆಸಿ ಹೇಳಿದರು.

Read More

ಪುತ್ತೂರು ಮಾ.2 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಉಜಿರೆಯ ಎಸ್‌ಡಿಎಂಐಟಿ ಯಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ವಾಲಿಬಾಲ್ ಸ್ಪರ್ಧೆಯಲ್ಲಿ ಕಾಲೇಜು ಪ್ರಥಮ ಬಾರಿಗೆ ರಾಜ್ಯಮಟ್ಟದ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ವಿಶ್ವವಿದ್ಯಾನಿಲಯ ಮಟ್ಟದ 8 ವಿಭಾಗಗಳ ಒಟ್ಟು 16 ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು. ಈ ಮೊದಲು ಉಜಿರೆಯ ಎಸ್‌ಡಿಎಂಐಟಿ ಯಲ್ಲಿ ನಡೆದ ಮಂಗಳೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿಯೂ ಕಾಲೇಜಿನ ತಂಡವು ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿತ್ತು. ಇದರಲ್ಲಿ ಮಂಗಳೂರು ವಿಭಾಗದ ಒಟ್ಟು 18 ತಂಡಗಳು ಭಾಗವಹಿಸಿದ್ದವು. ಕಾಲೇಜಿನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ವಿಭಾಗ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳೆರಡರಲ್ಲೂ ಉತ್ತಮ ಆಲ್ರೌಂಡರ್ ಪ್ರಶಸ್ತಿಯನ್ನು ಮುಡಿಗೇರಿಕೊಂಡಿದ್ದಾರೆ. ಚಿಂತನ್, ಅಜಯ್‌ನಾತ್ ಶೆಟ್ಟಿ, ಭುವನ್, ಚೇತಕ್,…

Read More

ವಿರಾಜಪೇಟೆ ಮಾ.2 NEWS DESK : ವಿರಾಜಪೇಟೆ ಚಿಕ್ಕಪೇಟೆಯಲ್ಲಿರುವ ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ  30 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಬಿ.ಎಸ್.ಲಾಲ್ ಕುಮಾರ್  ಅವರಿಗೆ  ಶಾಲಾ ಆಡಳಿತ ಮಂಡಳಿ  ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲಾ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಪ್ರಮುಖರು ಹಾಗೂ ಶಿಕ್ಷಕರು ಫಲ, ತಂಬೂಲ ನೀಡಿ ಸನ್ಮಾನಿಸಿ ಬೀಳ್ಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ  ಜಯಪ್ರಕಾಶ್ ನಾರಾಯಣ ಪ್ರೌಢಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ತ್ರಿಶು ಗಣಪತಿ ಲಾಲ್ ಕುಮಾರ್ ಅವರು ಮುಖ್ಯ ಶಿಕ್ಷಕರಾಗಿ ವಿದ್ಯಾರ್ಥಿಗಳನ್ನು ಉತ್ತಮ ಪ್ರೀತಿ, ವಾತ್ಸಲ್ಯದಿಂದ ಕಾಣುತ್ತ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಭಾಗವಹಿಸುವಂತೆ ಮಕ್ಕಳನ್ನು ಪ್ರೋತ್ಸಾಹಿಸುತ್ತಿದ್ದರು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಮಾತನಾಡಿ, ಲಾಲ್ ಕುಮಾರ್ ಅವರ ಸೇವೆ ವಿದ್ಯಾರ್ಥಿಗಳಿಗೆ ಅವಶ್ಯವಾಗಿದ್ದು, ಈ ಅನುದಾನಿತ ಶಾಲೆಗೆ 2021-22 ರಲ್ಲಿ ಇವರ ಅವಧಿಯಲ್ಲಿ ಸ್ವಚ್ಚ ವಿದ್ಯಾಲಯ ಎಂಬ ಪುರಸ್ಕಾರ  ದೊರಕಿದ್ದು  ಶ್ಲಾಘಿಸಿಯ ಎಂದರು. ಸನ್ಮಾನ ಸ್ವಿಕರಿಸಿದ ಲಾಲ್‍ಕುಮಾರ್ ಮಾತನಾಡಿ ಶಿಕ್ಷಕ ವೃತ್ತಿಯಲ್ಲಿ ಸಾಗಿಬಂದ…

Read More

ವಿರಾಜಪೇಟೆ ಮಾ.2 NEWS DESK :  ವನದೇವರುಗಳ ಆರಾಧನೆ ಮತ್ತು ಕುಲ ಕುಟುಂಬಗಳ ಆರಾಧನಾ ಪದ್ಧತಿಗಳು ನೂರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ನಿಟ್ಟಿನಲ್ಲಿ ಮೂರೀರ ಕುಟುಂಬದ ವಾರ್ಷಿಕ ತೆರೆ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ಬಾಳುಗೋಡು ಗ್ರಾಮದಲ್ಲಿ ನೆಲೆಸಿರುವ ಮೂರೀರ ಕುಟುಂಬದ ಅಧೀನದಲ್ಲಿರುವ ಮಂದ್ರಮೂರ್ತಿ, ವಿಷ್ಣು ಮೂರ್ತಿ ಮತ್ತು ಕಾಳೇಘಾಟು ದೇವಿಯ ದೇಗುಲದಲ್ಲಿ  ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು. ದೇಗುಲ ಆವರಣದಲ್ಲಿ ನಡೆಯುವ ಉತ್ಸವವನ್ನು ಕೇರಳ ರಾಜ್ಯದ ಕಾಳೇಘಾಟ್ ಸ್ಥಳದ ಪ್ರಸಿದ್ಧ ತಂತ್ರಿಗಳಾದ ಸಂದೀಪ್ ತಂತ್ರಿಗಳಿಂದ ಗಣಪತಿ ಹೋಮ ಮತ್ತು ದೈವಿಕ ವಿಧಾನಗಳನ್ನು ನಡೆಸಲಾಯಿತು. ಬಳಿಕ ದೇವಿ ಮತ್ತು ಶಾಸ್ತವು, ಮಂದ್ ಅಜ್ಜಪ್ಪ ದೇವರಿಗೆ ವಿಶೇಷ ಅಲಂಕಾರ ಪೂಜೆ, ಮಹಾಪೂಜೆ ಸಲ್ಲಿಸಲಾಯಿತು. ಪ್ರಥಮ ದಿನದಂದು ಕಾರಣ ತೆರೆ, ಮಾ.ತೆರೆ, ನುಚ್ಚುಟ್ಟೆ ತೆರೆಗಳು ಮುಂಜಾನೆ ಯ ವರೆಗೂ ನಡೆದು ಮರು ದಿನ ಚೌಂಡಿ ತೆರೆ,ಕುಳಿಯ ತೆರೆ, ತೌಡು ತೆರೆ, ಶಾಸ್ತಾವು ತೆರೆ…

Read More

ಮಡಿಕೇರಿ ಮಾ.2 NEWS DESK : ಸಕಾಲದಲ್ಲಿ ವೇತನ ಪಾವತಿಸುವಂತೆ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರ ಪ್ರತಿಭಟನೆ ಮೂರನೇ ದಿನವೂ ಮುಂದುವರೆದಿದೆ. ಕಾಲೇಜಿನ ಅತಿಥಿ ಉಪನ್ಯಾಸಕರ ಬೇಡಿಕೆಗೆ ಯಾವುದೇ ಸಕಾರಾತ್ಮಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ  ಮೂರನೇ ದಿನಕ್ಕೆ ಮುಂದುವರಿದ್ದು, ವೇತನ ಪಾವತಿಸುವವರೆಗೆ ತರಗತಿಗೆ ತೆರಳುವುದಿಲ್ಲ  ಎಂದು ಹೇಳಿದರು.

Read More

ಮೈಸೂರು, ಮಾ.7 NEWS DESK : ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ , ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ನಾನೂ ಕೂಡ ಸ್ಥಳಕ್ಕೆ ತೆರಳಲಿದ್ದೇನೆ ಎಂದರು. ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ತನಿಖೆ ನಡೆಯುತ್ತಿದೆ ಎಂದರು. ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ರಾಜಕೀಯವಾದ ಹೇಳಿಕೆ ನೀಡಿದ್ದಾರೆ. ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ…

Read More

ಮಡಿಕೇರಿ ಮಾ.2 NEWS DESK : ನೂತನವಾಗಿ ನಿರ್ಮಾಣ ಗೊಂಡಿರುವ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕ  ಮೃತಪಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಮೃತ ದುರ್ದೈವಿ. ರಾಕಿಬ್‌ ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು ಮುಂದಾಗಿದ್ದ ಸಂದರ್ಭ ಹೊರ ಭಾಗದಲ್ಲಿ ಹಾಕಿದ್ದ ಸ್ಟೇಜ್‌‌ನಿಂದ ಬಿದ್ದಿದ್ದಾರೆ. 30 ಅಡಿ ಎತ್ತರದಿಂದ ಸಿಮೆಂಟ್ ನೆಲಕ್ಕೆ ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಶವಗಾರಕ್ಕೆ ರವಾನಿಸಿದ್ದಾರೆ. ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದೇ ಈ ಅನಾಹುತಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read More

ಮಡಿಕೇರಿ ಮಾ.2 NEWS DESK : ಟೀಮ್ ಬ್ರದರ್ಸ್ ವತಿಯಿಂದ ಮಾ.3 ರಂದು ಕ್ರೀಡಾಪಟು ದಿವಂಗತ ಧರ್ಮ ಅವರ ಮೂರನೇ ವರ್ಷದ  ಜ್ಞಾಪಕರ್ಥವಾಗಿ ಲೀಗ್ ಮಾದರಿಯ ವಾಲಿಬಾಲ್ ಪಂದ್ಯವಳಿ ನಡೆಯಲಿದೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ  ಪಂದ್ಯವಳಿ ನಡೆಯಲಿದ್ದು,ವಿಜೇತ ತಂಡಕ್ಕೆ 60 ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 40 ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ, ತೃತೀಯ ಬಹುಮಾನವಾಗಿ ಹತ್ತು ಸಾವಿರ ನಗದು ಹಾಗೂ ಆಕರ್ಷಕ ಟ್ರೊಫಿ, ನಾಲ್ಕನೇಯ ಬಹುಮಾನವಾಗಿ ಆಕರ್ಷಕ ಟ್ರೊಫಿ ಸಿಗಲಿದ್ದು ಹಾಗೆಯೆ ವೈಯಕ್ತಿಕ, ಟ್ರೊಫಿಗಳು ಕೂಡ ಕ್ರೀಡಾಪಟುಗಳಿಗೆ ನೀಡಲಾಗುವುದು. ಒಟ್ಟು 9 ತಂಡಗಳನ್ನು ಒಳಗೊಂಡ, ಟೀಮ್ ಭಗವತಿ, ಟೀಮ್ ಧರ್ಮ, ಡಿ ಎಸ್ ಆರ್ ಎಂ, ತುಷಾರ್ ಫ್ರೆಂಡ್ಸ್, ಮನ್ವಿತ್ ಫ್ರೆಂಡ್ಸ್, ಟೀಮ್ 14, ಟೀಮ್ ಡಿ. ಸಿ, ಟೀಮ್ ಫಾರ್ಮರ್ಸ್, ಹಿಲ್ ವ್ಯೂ ಬಾಯ್ಸ್ ತಂಡದ ನಡುವೆ ಲೀಗ್ ಮಾದರಿಯ ಪಂದ್ಯಗಳು ನಡೆಯಲಿವೆ ಎಂದು ಆಯೋಜಕರಗಿರುವ, ರವಿ, ನಂದೀಶ್, ರಾಜೇಶ್, ರಮೇಶ್ ಪ್ರಕಟಣೆಯಲ್ಲಿ…

Read More

ಸೋಮವಾರಪೇಟೆ ಮಾ.2 NEWS DESK : ಚಿಕ್ಕಮಗಳೂರು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಚಿಕ್ಕಮಗಳೂರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ಹಿರಿಯರ ರಾಜ್ಯಮಟ್ಟದ ಮ್ಯಾರಥಾನ್‍ನಲ್ಲಿ ಶಾಂತಳ್ಳಿಯ ಗಿರಿಜಾ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 50 ರಿಂದ 60 ವರ್ಷ ವಯೋಮಾನದ ರಾಜ್ಯಮಟ್ಟದ ಮ್ಯಾರಥಾನ್‍ನಲ್ಲಿ ಭಾಗವಹಿಸಿದ್ದ ಗಿರಿಜಾ ಅವರು ದ್ವಿತೀಯ ಸ್ಥಾನಗಳಿಸುವ ಮೂಲಕ ನಗದು ಬಹುಮಾನದೊಂದಿಗೆ ಪಾರಿತೋಷಕಕ್ಕೆ ಭಾಜನರಾಗಿದ್ದಾರೆ. ಅಸೋಸಿಯೇಷನ್‍ನ ಅಧ್ಯಕ್ಷ ಉದಯ್ ಪೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಎಚ್.ಸಿ. ಮಂಜುಳಾ, ಜಿಲ್ಲಾ ಆಯುಕ್ತೆ ಮೀನಾ ನಾಗರಾಜ್, ಉಪಸ್ಥಿತರಿದ್ದು ಬಹುಮಾನ ವಿತರಿಸಿದರು.

Read More