ಮಡಿಕೇರಿ ಮಾ.1 NEWS DESK : ಸುಂಟಿಕೊಪ್ಪದ ಎಸ್ಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಶರಫಿ ಪದವಿ ಪಡೆದು ಉನ್ನತ ವಿದ್ಯಾಭ್ಯಾಸಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಯ್ಯದ್ ಮುಹಮ್ಮದ್ ಅಲಿ ಶಿಹಾಬ್ ತಂಗಳ್ ಶಿಕ್ಷಣ ಸಂಸ್ಥೆಯಲ್ಲಿ 6 ವರ್ಷಗಳ ಕಾಲ ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣವನ್ನು ಪೂರ್ಣಗೊಳಿಸಿ ಶರಫಿ ಪದವಿಯನ್ನು ಪಡೆದು ಉನ್ನತ ಶಿಕ್ಷಣಕ್ಕಾಗಿ ದಕ್ಷಿಣ ಏಷ್ಯದ ಪ್ರಖ್ಯಾತ ಶಿಕ್ಷಣ ಸಂಸ್ಥೆಯಾದ ಜಾಮಿಯಾ ನುರಿಯ ಅರಬಿಕ್ ಕಾಲೇಜ್ ಗೆ ತೆರಳುತ್ತಿರುವ ವಿದ್ಯಾರ್ಥಿಗಳನ್ನು ಎಸ್ಎಂಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಪೋಷಕರು ಸಂಭ್ರಮದಿಂದ ಅದ್ದೂರಿಯಾಗಿ ಬೀಳ್ಕೊಟ್ಟರು. ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಕೊಡಗು ಜಿಲ್ಲೆಯ ಮುಸ್ಲಿಂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಸುಧಾರಣೆಯನ್ನು ಗುರಿಯಾಗಿಸಿ 2016ರಲ್ಲಿ ಈ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಯಿತು. ಆರ್ಥಿಕ ಸಮಸ್ಯೆಯಿಂದ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡ ಮಕ್ಕಳಿಗೆ ಉತ್ತಮ ಹಾಗೂ ಉನ್ನತ ಶಿಕ್ಷಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡುವ ಮೂಲಕ ಸಂಸ್ಥೆ ಶ್ರೇಷ್ಠವಾದ ಕೊಡುಗೆಯನ್ನು…
ಲೇಖಕ: admin
ಮಡಿಕೇರಿ ಮಾ.1 NEWS DESK : ಸಕಾಲದಲ್ಲಿ ವೇತನ ಪಾವತಿಸುವಂತೆ ಒತ್ತಾಯಿಸಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು. ತರಗತಿ ಬಹಿಷ್ಕರಿಸಿ ಕಾಲೇಜ್ ನ ಎದುರು ಮೌನ ಪ್ರತಿಭಟನೆ ನಡೆಸಿದ ಉಪನ್ಯಾಸಕರು, ವೇತನ ಪಾವತಿಸುವವರೆಗೆ ತರಗತಿಗೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು. ಅತಿಥಿ ಉಪನ್ಯಾಸಕ ಡಾ.ಸೋಮಣ್ಣ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 43 ಉಪನ್ಯಾಸಕರಿಗೆ ಕಳೆದ 5 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕೋವಿಡ್ ಸಂದರ್ಭದಲ್ಲಿ ಮೂರು ತಿಂಗಳ ವೇತನ ಖಡಿತಗೊಳಿಸಲಾಗಿದೆ. ಆ ವೇತನ ಸೇರಿ ಒಟ್ಟು ಎಂಟು ತಿಂಗಳ ವೇತನವನ್ನು ತಕ್ಷಣ ನೀಡಬೇಕೆಂದು ಆಗ್ರಹಿಸಿದ ಅವರು, ಅಲ್ಲಿಯವರೆಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮುಂದುವರೆಸುವುದಾಗಿ ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ನಡೆಸಿ ಮೌಲ್ಯಮಾಪನ ಕೂಡ ಮಾಡಲಾಗಿದೆ. ಪರೀಕ್ಷಾ ಮೇಲ್ವಿಚರಣಾ ಕಾರ್ಯವನ್ನು ಸುಸೂತ್ರವಾಗಿ ನಡೆಸಲಾಗಿದೆ. ಪ್ರತಿ ತಿಂಗಳು ಸರಿಯಾದ ಸಮಯದಲ್ಲಿ ವೇತನ ಪಾವತಿ ಮಾಡುವಂತೆ ಮಂಗಳೂರು…
ಮಡಿಕೇರಿ ಮಾ.1 NEWS DESK : ಭಾರತೀಯ ಜನತಾ ಪಾರ್ಟಿಯ ವಿರಾಜಪೇಟೆ ಮಂಡಲದ ವಕ್ತಾರರನ್ನಾಗಿ ಕಿರುಗೂರಿನ ಚೆಪ್ಪುಡಿರ ರಾಕೇಶ್ ದೇವಯ್ಯ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಡಲದ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ತಿಳಿಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ರಾಕೇಶ್ ದೇವಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ವಿರಾಜಪೇಟೆಯಲ್ಲಿ ಪಕ್ಷದ ಬಲವನ್ನು ಮತ್ತಷ್ಟು ಹೆಚ್ಚಿಸಲು ಸಂಘಟನಾತ್ಮಕ ಚಟುವಟಿಕೆಯನ್ನು ಮತ್ತಷ್ಟು ಚುರುಕುಗೊಳಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಮಾ.1 NEWS DESK : ಮಡಿಕೇರಿ ನಗರ ಬಿಜೆಪಿಯ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿ ಮನು ರೈ, ವಿಘ್ನೇಶ್ ಸಿ.ಯು, ಉಪಾಧ್ಯಕ್ಷರುಗಳಾಗಿ ಸುಜು ಅಚ್ಚಯ್ಯ, ಸಂದೀಪ್, ಅನುರಾಗ ಹಾಗೂ ಕಿರಣ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ಯುವ ಮೋರ್ಚಾದ ನಗರಾಧ್ಯಕ್ಷ ಪಾಂಡಿರ ಪೂಣಚ್ಚ ತಿಳಿಸಿದ್ದಾರೆ. ಬಿಜೆಪಿ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಹಾಗೂ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಅವರುಗಳ ಅನುಮೋದನೆಯೊಂದಿಗೆ ಪ್ರಧಾನ ಕಾರ್ಯದರ್ಶಿ ಮತ್ತು ಉಪಾಧ್ಯಕ್ಷರÀನ್ನು ನೇಮಕ ಮಾಡಲಾಗಿದೆ. ನಗರದಲ್ಲಿ ಯುವ ಮೋರ್ಚಾವನ್ನು ಮತ್ತಷ್ಟು ಬಲಗೊಳಿಸಲು ಪಕ್ಷ ಸಂಘಟನೆಯನ್ನು ಚುರುಕುಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಡಿಕೇರಿ ಮಾ.1 NEWS DESK : ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯ ಹಾಗೂ ಬಾಲ ಸಂಸ್ಕಾರ ಶಿಕ್ಷಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಬಾಲ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಿವೃತ್ತ ಅಧ್ಯಾಪಕ ಎಂ.ಎಸ್.ಶಿವರಾವ್ ಅವರ ನೇತೃತ್ವದಲ್ಲಿ ಕಳೆದ 12 ವಾರಗಳ ಕಾಲ ಪ್ರತಿ ಭಾನುವಾರ ಶಿಬಿರವನ್ನು ನಡೆಸಲಾಯಿತು. ದೇವರಕೊಲ್ಲಿ, ಮದೆ, 2ನೇ ಮೊಣ್ಣಂಗೇರಿ, ಜೋಡುಪಾಲ, ಕೊಯನಾಡು ಭಾಗದ 60 ಕ್ಕೂ ಹೆಚ್ಚು ಮಕ್ಕಳಿಗೆ ಹಿಂದೂ ಧರ್ಮದ ಸಂಸ್ಕಾರ, ಆಚಾರ ವಿಚಾರ, ಶ್ಲೋಕ, ಯೋಗ ಮತ್ತು ದೇಶಭಕ್ತಿ ಗೀತೆಯನ್ನು ಹೇಳಿ ಕೊಡಲಾಯಿತು. ಬುದ್ದಿಯನ್ನು ಚುರುಕುಗೊಳಿಸುವ ಆಟಗಳ ಬಗ್ಗೆ ಶಿಬಿರದ ಗುರುಗಳಾದ 2ನೇ ಮೊಣ್ಣಂಗೇರಿ ಗ್ರಾಮದ ಧನಂಜಯ ಅಗೋಳಿಕಜೆ, ಎ.ಎ.ವಿಠಲ ಹಾಗೂ ಕೆ.ವಿ.ಗೀತಾ ತರಬೇತಿ ನೀಡಿದರು. ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡಗು ಸೇವಾ ಭಾರತಿಯ ಪ್ರಮುಖ ಡಿ.ಹೆಚ್.ತಿಮ್ಮಪ್ಪ, ಶಾಲಾ ಶಿಕ್ಷಣದೊಂದಿಗೆ ಸಂಸ್ಕಾರ ಮೈಗೂಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲಾ ಗ್ರಾಮಗಳಲ್ಲಿಯೂ…
ಮಡಿಕೇರಿ ಮಾ.1 NEWS DESK : ಮರುನಿರ್ಮಾಣ ಗೊಂಡ ಕುಟ್ಟ, ಮಡಿಕೇರಿ ರಸ್ತೆಯನ್ನು ಪೊನ್ನಂಪೇಟೆಯ ಮುಗುಟಗೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂಧರ್ಭ ಮಾತನಾಡಿದ ಎ.ಎಸ್ .ಪೊನ್ನಣ್ಣ, 1 ಕೋಟಿ 75 ಲಕ್ಷ ರೂಗಳಲ್ಲಿ ಕಾಮಗಾರಿ ನಡೆದಿದ್ದು, ಉತ್ತಮ ಗುಣಮಟ್ಟದ ಕಾಮಗಾರಿ ನಡೆದಿದೆ.ಈ ನಿಟ್ಟಿನಲ್ಲಿ ಕಾಮಗಾರಿಯ ಬಗ್ಗೆ ನಿಗಾವಹಿಸಿದ ಗ್ರಾಮಸ್ಥರು ಅಭಿನಂದನಾರ್ಹರು ಎಂದು ತಿಳಿಸಿದರು. ಕ್ಷೇತ್ರದ ಸಂಪೂರ್ಣ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ತಾವು ಪಣತೊಟ್ಟಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಪ್ರಮುಖರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಅಂಕಿತ್ ಪೊನ್ನಪ್ಪ ಸೇರಿದಂತೆ ಪಕ್ಷದ ಪ್ರಮುಖರು,ಸ್ಥಳೀಯ ನಾಗರೀಕರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ನಾಪೋಕ್ಲು ಮಾ.1 NEWS DESK : ಭಾರತ ಸರ್ಕಾರದ ಕಾಫಿ ಮಂಡಳಿ ಮತ್ತು ಬೆಟ್ಟಗೇರಿಯ ವ್ಯವಸಾಯ ಸಹಕಾರಿ ಬ್ಯಾಂಕಿನ ಜಂಟಿ ಆಶ್ರಯದಲ್ಲಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನ ನಡೆಯಿತು. ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಕಾಫಿ ಮಂಡಳಿಯ ನಿರ್ದೇಶಕ ತಳೂರು ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಕೆವಿಕೆ ವಿಜ್ಞಾನಿಗಳು ಕಾಫಿ ತೋಟ, ಕಾಳುಮೆಣಸಿನ ಕೃಷಿಗಳಿಗೆ ಹಾಕುವ ರಸಗೊಬ್ಬರ, ಕೀಟನಾಶಕಗಳ ಬಗ್ಗೆ ರೈತರಿಗೆ ಸಮಗ್ರ ಮಾಹಿತಿಯನ್ನು ನೀಡಿ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಕಾಫಿ ಮಂಡಳಿ ಉಪನಿರ್ದೇಶಕ ಚಂದ್ರಶೇಖರ್, ಬೆಟ್ಟಗೇರಿ ವಿಎಸ್ಎಸ್ಎನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಶೀಲಾ ರೈ, ನಿವೃತ ಶಿಕ್ಷಕ ಕೆದಂಬಾಡಿ ಪುಟ್ಟಯ್ಯ, ಹಾಗೂ ಕಾಫಿ ಬೆಳೆಗಾರರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಸಿದ್ದಾಪುರ ಮಾ.1 NEWS DESK : ಕಾರ್ಮಿಕ ವಿರೋಧಿ ನೀತಿ, ಬೆಲೆ ಏರಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿದ್ದಾಪುರದಲ್ಲಿ ಸಿಐಟಿಯು ಸಂಘಟನೆ ಪ್ರತಿಭಟನೆ ನಡೆಸಿತು. ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಪ್ರತಿಭಟನೆ ನಡೆಸುವುದರೊಂದಿಗೆ ಪ್ರಧಾನಿಗೆ ಪತ್ರ ಬರೆದು ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, 2024 ರ ಲೋಕಸಭಾ ಚುನಾವಣೆಗಳು ಮತ್ತೆ ಪ್ರಾರಂಭವಾಗುತ್ತಿದೆ. ಎನ್.ಡಿ.ಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ 2 ಕೋಟಿ ಉದ್ಯೋಗದ ಸೃಷ್ಟಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಡಾ.ಸ್ವಾಮಿನಾಥನ್ ರವರ ಶಿಫಾರಸ್ಸಿನಂತೆ ಬೆಂಬಲ ಬೆಲೆಯ ಕಾನೂನು ರಚಿಸುವುದಾಗಿ ಹೇಳಿ ವರ್ಷಗಳೇ ಕಳೆದಿದೆ ಆದರೆ ‘ಸಬ್ಕಾ ಸಾಥ್’ ಎಂದು ಜನಸಾಮಾನ್ಯರು ಕೊಂಡುಕೊಳ್ಳುವ ಸಾಮಾರ್ಥ್ಯವನ್ನು ಕುಗ್ಗಿಸಿ, ಆಹಾರ, ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ಅನುದಾನಗಳನ್ನು ಹೆಚ್ಚಳ ಮಾಡುವ ಬದಲಿಗೆ ಅನುದಾನ ಕಡಿತ ಮಾಡಿ ಆರೋಗ್ಯ…
ಮೈಸೂರು ಫೆ.29 NEWS DESK : ಕೊಡಗು ಜಿಲ್ಲೆಯ ಜನರ ಬಹು ನಿರೀಕ್ಷಿತ ರೈಲ್ವೇ ಯೋಜನೆಯ ಫೈನಲ್ ಲೊಕೇಷನ್ ಸರ್ವೆ ಕಾರ್ಯವು ಮುಕ್ತಾಯಗೊಂಡಿದ್ದು ಅದನ್ನು ದೆಹಲಿಯ ರೈಲ್ವೇ ಮಂಡಳಿಗೆ ಸಲ್ಲಿಸಬೇಕಾಗಿದೆ. ಕಳೆದ ಒಂದು ದಶಕದಿಂದಲೂ ಕುಂಟುತ್ತಾ ಸಾಗಿದ್ದ ಈ ಯೋಜನೆಗೆ ಮೊದಲಿಗೆ 1682 ಕೋಟಿ ರೂಪಾಯಿಗಳ ಅಂದಾಜು ವೆಚ್ಚ ನಿಗದಿ ಪಡಿಸಲಾಗಿತ್ತು. ನಂತರ ಯೋಜನಾ ವೆಚ್ಚ 1839 ಕೋಟಿ ರೂಪಾಯಿಗಳಿಗೆ ಏರಿಕೆ ದಾಖಲಿಸಿತು. ಇದೀಗ ಕೇಂದ್ರ ಸರ್ಕಾರದ ನೂತನ ಮಾನದಂಡಕ್ಕೆ ಅನುಗುಣವಾಗಿ 89 ಕಿಲೋಮೀಟರ್ ಉದ್ದದ ಈ ಯೋಜನೆಯ ವೆಚ್ಚ 3168.77 ಕೋಟಿ ರೂಪಾಯಿಗಳಿಗೆ ಏರಿಕೆ ಆಗಿದೆ ಎಂದು ಮೈಸೂರು ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ಎರಡು ವರ್ಷಗಳ ಹಿಂದೆಯೇ ಫೈನಲ್ ಲೊಕೇಷನ್ ಸರ್ವೆ ನಡೆಸಲಾಗಿದ್ದರೂ ಅದನ್ನು ತಾಂತ್ರಿಕ ಕಾರಣಗಳಿಂದ ಹಿಂತಿರುಗಿಸಲಾಗಿತ್ತು. ಈ ನಡುವೆ ಕೇಂದ್ರ ಸರ್ಕಾರವು ನೂತನ ರೈಲ್ವೇ ಹಳಿ ನಿರ್ಮಾಣ ಮಾಡಬೇಕಾದರೆ ಗರಿಷ್ಠ ಘಂಟೆಗೆ 165 ಕಿಮೀ ವೇಗದಲ್ಲಿ ರೈಲು ಚಾಲನೆಗೆ ಅವಕಾಶವಿರುವಂತೆ ಯೋಜನೆ ರೂಪಿಸುವಂತೆ ನಿಯಮಾವಳಿ…
ಮಡಿಕೇರಿ ಫೆ.29 NEWS DESK : ಪ್ರವಾಸಿಗರಿಗೆ ದ್ವಿಚಕ್ರ ವಾಹನಗಳನ್ನು ಬಾಡಿಗೆಗೆ ನೀಡುವ ಕ್ರಮವನ್ನು ವಿರೋಧಿಸಿ ಮಡಿಕೇರಿ ಪ್ರವಾಸಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಕಾರು ಚಾಲಕರು ರೆಂಟಲ್ ಬೈಕ್ ಕೇಂದ್ರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಸಂಘದ ಉಪಾಧ್ಯಕ್ಷ ಸತೀಶ್ ಕುಮಾರ್ ಮಾತನಾಡಿ, ಸ್ಥಳೀಯರು ಕೆಲವರು ಹಾಗೂ ಖಾಸಗಿ ಸಂಸ್ಥೆಗಳು ಕೊಡಗು ಜಿಲ್ಲೆಯ ವಿವಿಧೆಡೆ ಕಚೇರಿ ತೆರೆದು ದ್ವಿಚಕ್ರ ವಾಹನವನ್ನು ಪ್ರವಾಸಿಗರಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ವಾಹನ ಮಾಲೀಕರು ಹಾಗೂ ಚಾಲಕರು ಆರ್ಥಿಕವಾಗಿ ತೊಂದರೆಯನ್ನು ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರಾಕೃತಿಕ ವಿಕೋಪ, ಕೋವಿಡ್ ಮತ್ತು ಬೆಲೆ ಏರಿಕೆ ಪರಿಣಾಮ ಬಾಡಿಗೆ ಇಲ್ಲದೆ ಟ್ಯಾಕ್ಸಿ ವಾಹನಗಳ ಮಾಲೀಕರು ಹಾಗೂ ಚಾಲಕರು ವಾಹನ ವಿಮೆ, ತೆರಿಗೆ, ಎಫ್.ಸಿ, ತಿಂಗಳ ಸಾಲದ ಕಂತು ಕಟ್ಟಲಾಗದೆ ತೊಂದರೆ ಅನುಭವಿಸುತ್ತಿದ್ದರು. ಇದೀಗ ಸ್ವಲ್ಪ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲೇ ಸ್ವಯಂಚಾಲಿತ ಬೈಕ್ಗಳನ್ನು…






