ವಿರಾಜಪೇಟೆ ಫೆ.29 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಉಪನ್ಯಾಸಕ ಟಿ.ಎಲ್.ತ್ಯಾಗರಾಜು, ನವೆಂಬರ್ ಹಾಗೂ ಡಿಸೆಂಬರ್ನಲ್ಲಿ 43 ನದಿನಗಳ ರಾಜ್ಯವ್ಯಾಪಿ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಸಕಾರಾತ್ಮಕವಾದ ಸ್ಪಂದನೆ ನೀಡಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಮ್ಮ ಬೇಡಿಕೆಗೆ ಮಾಹಿತಿ ನೀಡಿದಕ್ಕೆ ಅಭಿನಂದನೆ ಸಲ್ಲಿಸಿದರು. 2009 ಜುಲೈ 11 ರ ಒಳಗೆ ಎಂ.ಫೀಲ್ ಮುಗಿಸಿದವರು ಯುಜಿಸಿ ಮಾನದಂಡಕ್ಕೆ ಅರ್ಹತರಾಗಿದ್ದು, ಅವರನ್ನು ನೆಟ್ ಮತ್ತು ಸ್ಲೆಟ್ ಸಮಾನರು ಎಂದು ಆದೇಶ ಮಾಡಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪನ್ಯಾಸಕರ ಮನವಿಗೆ ಪ್ರತಿಕ್ರಿಯೆ ನೀಡಿದ ಶಾಸಕರು, ನಿಮ್ಮ ಎಲ್ಲಾ ಬೇಡಿಕೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಯಾವ ತೊಂದರೆ ಅಗದಂತೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಕಾಲೇಜಿನ ಅತಿಥಿ ಉಪನ್ಯಾಸಕರುಗಳಾದ ಡಾ.ಪ್ರಭು, ಎಂ.ಎನ್.ಮೋಹನ್ ಕುಮಾರ್, ಕೆ.ಎಸ್ ಕಾರ್ಯಪ್ಪ, ಸುಮಯ್ಯ…
ಲೇಖಕ: admin
ಸಿದ್ದಾಪುರ ಫೆ.29 NEWS DESK : ಅಮ್ಮತಿ ಸಮೀಪದ ಪುಲಿಯೇರಿ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಮಂಗುಯಿಯಿಲ್ ಶ್ರೀ ಭಗವತಿ ಕ್ಷೇತ್ರದ ವಾರ್ಷಿಕ ಮಹೋತ್ಸವವು ಮಾ.7 ರಿಂದ 11ರ ವರಗೆ ನಡೆಯಲಿದೆ. ಮಾ.7 ರಂದು ಸಂಜೆ 5ಘಂಟೆಯಿಂದ ಅಚಾರ್ಯವರಣಂ, ದೀಪಾರಾಧನೆ, ಅನ್ನ ಸಂತರ್ಪಣೆ ಪೂಜೆ ನಡೆಯಲಿದೆ. ಮಾ.8 ರಂದು ಬೆಳಿಗ್ಗೆಯಿಂದ ಗಣಪತಿ ಹೋಮ, ಉಷಾ ಪೂಜೆ, ಕಳಸ ಪೂಜೆ, ಮಹಾಪೂಜೆ ಸಂಜೆ ದೀಪಾರಾಧನೆ, ಸರ್ವ ಐಶ್ವರ್ಯ ಪೂಜೆ, ಅತ್ತಾಯ ಪೂಜೆ ರಾತ್ರಿ ಹತ್ತು ಗಂಟೆಯಿಂದ ಶಿವರಾತ್ರಿ ಅಂಗವಾಗಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಜನೆ ಕಾರ್ಯಕ್ರಮ ನಡೆಯಲಿದೆ ಮಾ.9 ಮತ್ತು 10ರಂದು ಬೆಳಿಗ್ಗೆಯಿಂದ ರಾತ್ರಿವರೆಗೆ ವಿವಿಧ ಪೂಜಾ ಕಾರ್ಯಗಳು ನಡೆಯಲಿದೆ. 11 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಉಷಾ ಪೂಜೆ, ಮಹಾ ಪೊಂಗಲ, ಮಹಾಪೂಜೆ, ಮಹಾ ಕುರದಿ, ಸಂಜೆ ಮೂರು ಗಂಟೆಗೆ ಚೆಂಡೆ ವಾದ್ಯಗಳೊಂದಿಗೆ ಅಲಂಕೃತ ಮಂಟಪದಲ್ಲಿ ದೇವಿಯ ವಿಗ್ರಹವನ್ನು ಇರಿಸಿ, ಮಂಗುಯಿಯಿಲ್ ಶ್ರೀ ಭಗವತಿ ಕ್ಷೇತ್ರದಿಂದ ಗುಹ್ಯ ಅಗಸ್ತೇಶ್ವರ ದೇವಾಲಯದ ಸಮೀಪದ…
ಸುಂಟಿಕೊಪ್ಪ ಫೆ.29 NEWS DESK : ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಹೊರಡಿಸಿರುವ ಹರಾಜು ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಅದರಂತೆ ಮುಂದುವರಿಯುತ್ತೇವೆ ಎಂದು ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಹೇಳಿದ್ದಾರೆ. ಸುಂಟಿಕೊಪ್ಪ ಗ್ರಾ.ಪಂ ಸರ್ವ ಸದಸ್ಯರ ಸಭೆಯು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹಾಗೂ ಕುಶಾಲನಗರ ವೃತ್ತನಿರೀಕ್ಷಕ ರಾಜೇಶ್ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಪಿ.ಆರ್.ಸುನಿಲ್ ಕುಮಾರ್ ಪಂಚಾಯಿತಿಯಲ್ಲಿನ ಕೆಲವು ಸದಸ್ಯರ ಗೊಂದಲ ಮತ್ತು ಅನಾವಶ್ಯಕವಾದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕುವ ಸಭೆ ಆಯೋಜಿಸಲಾಗಿದ್ದು, ಸಭೆಯಲ್ಲಿ ಹರಾಜು ಪ್ರಕ್ರಿಯೆಯನ್ನು ಕಾನೂನು ಬದ್ಧವಾಗಿ ಮುಂದುವರೆಸಲು ತೀರ್ಮಾನಿಸಲಾಯಿತು. ಹಳೆಬರು ಮತ್ತು ಹೊಸಬರು ಎಂಬುದು ಹರಾಜು ಪ್ರಕ್ರಿಯೆಯಲ್ಲಿ ಇಲ್ಲ ಬದಲಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳು ಇರುತ್ತವೆ ಎಂದು ಸುನಿಲ್ ಕುಮಾರ್ ಸ್ಪಷ್ಟವಾಗಿ ನುಡಿದರು. ಪಂಚಾಯಿತಿ ಸದಸ್ಯ ರಫೀಕ್ ಖಾನ್ ಮಾತನಾಡಿ, ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ…
ಸುಂಟಿಕೊಪ್ಪ ಫೆ.28 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೈಕ್ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಪಡಿಲು ಸಮೀಪದ ಬಜಲು ಎಂಬಲ್ಲಿನ ನಿವಾಸಿ ಹಿಜಾಜ್ ಆಹ್ಮದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಖಚಿತ ಸುಳಿವಿನ ಆಧಾರದಲ್ಲಿ ದಾಳಿ ನಡೆಸಿದ ಪೊಲೀಸರು ಕಳ್ಳತನವಾಗಿದ್ದ ಬೈಕ್ ಸಹಿತ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಮುಖ್ಯ ಸಿಬ್ಬಂದಿ ಸತೀಶ್, ಜಗದೀಶ್, ಉದಯ್, ಲೀಲಾವತಿ, ಪ್ರವೀಣ್, ಸತೀಶ್ ಬಿಳಿಕೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸೋಮವಾರಪೇಟೆ ಫೆ.28 NEWS DESK : ಇನ್ನರ್ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕಚೇರಿ ಎದುರು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಸ್ಟ್ಯಾಂಡ್ ಅನ್ನು ಬುಧವಾರ ಅಳವಡಿಸಲಾಯಿತು. ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಅಲ್ಲಲ್ಲಿ ಕಸವನ್ನು ಹಾಕುತ್ತಿರುವುದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಕೆಲ ಸ್ಥಳಗಳಲ್ಲಿ ಪರಿಸರಕ್ಕೂ ಹಾನಿಯಾಗುತ್ತಿದೆ. ಇದನ್ನು ಮನಗೊಂಡ ನಮ್ಮ ಸಂಸ್ಥೆ ಕೆಲವು ಕಡೆ ತ್ಯಾಜ್ಯ ಸಂಗ್ರಹ ಸ್ಟ್ಯಾಂಡ್ ಅಳವಡಿಸಲಾಗುತ್ತಿದೆ ಎಂದು ಕ್ಲಬ್ನ ಅಧ್ಯಕ್ಷೆ ಸಂದ್ಯಾರಾಣಿ ಹೇಳಿದರು. ಈ ಸಂದರ್ಭ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ, ಕ್ಲಬ್ನ ಕಾರ್ಯದರ್ಶಿ ತನ್ಮಯಿ ಪ್ರವೀಣ್, ಎಡಿಟರ್ ಸುವಿನ ಕೃಪಾಲ್, ಮಾಜಿ ಅಧ್ಯಕ್ಷೆ ಆಶಾ ಯೋಗೇಂದ್ರ, ಸದಸ್ಯರಾದ ಲತಾ ನಾಗೇಶ್, ಕಾವೇರಿ ಸುರೇಶ್, ಲತಾ ಮಂಜು, ವನಿತಾ ಜಯರಾಂ ಇದ್ದರು.
ಮಡಿಕೇರಿ ಫೆ.28 NEWS DESK : ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ, ರೋಟರಿ ಮಿಸ್ಟಿಹಿಲ್ಸ್, ಭಾರತೀಯ ರೆಡ್ಕ್ರಾಸ್ ಸೊಸೈಟಿ, ಜಿಲ್ಲಾ ವಿಕಲಚೇತನರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವೀಲ್ಚೇರ್ ವಿತರಣಾ ಕಾರ್ಯಕ್ರಮವು ಫೆಬ್ರವರಿ, 29 ರಂದು ಬೆಳಗ್ಗೆ 11 ಗಂಟೆಗೆ ನಗರದ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸುಂಟಿಕೊಪ್ಪ, ಫೆ.29 NEWS DESK : ಲೆಪ್ಟಿನೆಂಟ್ ಜನರಲ್ ಡಾ.ಬಿಎನ್ಬಿಎಂ ಪ್ರಸಾದ್ ಎಸ್ಎಂ, ವಿಎಸ್ಎಂ ಅವರಿಗೆ ಡಾ.ಕೊಯಿಲೋ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಖಿಲ ಭಾರತೀಯ ತಜ್ಞವೈಧ್ಯರ ಸಂಘವು ನವದೆಹಲಿಯ ಭಾರತ ಮಂಡಪಂ ಸಭಾಂಗಣದಲ್ಲಿ ನಡೆಸಿದ ತನ್ನ 79ನೇ ರಾಷ್ಟ್ರೀಯ ಅಧಿವೇಶನದಲ್ಲಿ ಡಾ.ಪ್ರಸಾದ್ ಅವರಿಗೆ ಈ ಗೌರವವನ್ನು ನೀಡಿ ಸನ್ಮಾನಿಸಿದೆ. ಇದೇ ಸಂದರ್ಭದಲ್ಲಿ ಡಾ. ಪ್ರಸಾದ್ ಅವರು ಸಮಾವೇಶದಲ್ಲಿ ಶ್ವಾಸಕೋಶದ ಕಾಯಿಲೆಗಳಿಗೆ ಅತ್ಯಾಧುನಿಕ ಚಿಕಿತ್ಸಾ ಪದ್ಧತಿಗಳ ಕುರಿತು ಉಪನ್ಯಾಸ ನೀಡಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಅವರು, ಅಖಿಲ ಭಾರತೀಯ ತಜ್ಞವೈಧ್ಯರ ಸಂಘದ ಮಾಜಿ ಅಧ್ಯಕ್ಷ ಮತ್ತು ರಾಯಲ್ ಕಾಲೇಜ್ ಆಫ್ ಪಿಜಿಶಿಯನ್ಸ್ ಗ್ಲಾಸ್ಗೋದ ಅಂತರಾಷ್ಟ್ರೀಯ ನಿರ್ದೇಶಕ ಡಾ.ಮುರುಗನಾಥನ್ ಅವರ ಕೃತಿ ‘ಹೈಪರ್ ಟೆನ್ಷನ್ ಮ್ಯಾನುವೆಲ್” ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಕೃತಿಕಾರ ಡಾ.ಮುರುಗನಾಥನ್, ರಾಯಲ್ ಕಾಲೇಜ್ ಆಫ್ ಪಿಜಿಶಿಯನ್ಸ್ ಗ್ಲಾಸ್ಗೋದ ಉಪಾಧ್ಯಕ್ಷ ಪ್ರೋಫೆಸರ್ ಹ್ಯಾನಿ ಎಟಿಬಾ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಲೆಪ್ಟಿನೆಂಟ್ ಜನರಲ್…
ಮಡಿಕೇರಿ ಫೆ.28 NEWS DESK : ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ಮತ್ತಷ್ಟು ಯಶಸ್ವಿಯಾಗಿ ಕಾರ್ಯನಿರ್ವಹಿಸುವಂತೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ತಾಂತ್ರಿಕ ವಿಭಾಗದ ಜಂಟಿ ನಿರ್ದೇಶಕ ವೇಣುಗೋಪಾಲ್ ತಿಳಿಸಿದ್ದಾರೆ. ನಗರದ ಜಿ.ಪಂ.ಕಚೇರಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯು ರಾಷ್ಟ್ರದಾದ್ಯಂತ ಅನುಷ್ಠಾನಗೊಳ್ಳುತ್ತಿರುವ ಮಹತ್ತರ ಯೋಜನೆಯಾಗಿದೆ. ತಾಂತ್ರಿಕವಾಗಿಯೂ ಹಲವಾರು ಬದಲಾವಣೆಗಳನ್ನು ಯೋಜನೆಯಲ್ಲಿ ತರಲಾಗಿದೆ. ಸೂಕ್ತ ಫಲಾನುಭವಿಗೆ ಯೋಜನೆಯ ಲಾಭ ತಲುಪಬೇಕು. ಯೋಜನೆಯ ಅನುಷ್ಠಾನ ಸಂದರ್ಭದಲ್ಲಿ ಹಲವು ತಾಂತ್ರಿಕ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಜಿ.ಎಸ್.ಟಿ. ಹಾಗೂ ರಾಜಧನ ಪಾವತಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದು ಅವರು ತಾಂತ್ರಿಕ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಮೋದಿತ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಮತ್ತಷ್ಟು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಸಾಮಾಗ್ರಿ ವೆಚ್ಚ ಪಾವತಿ ಮಾಡುವಾಗ ಎಲ್ಲಾ ಕಾಮಗಾರಿಗಳ ಎಫ್.ಟಿ.ಒ ಗಳನ್ನು ಸೂಕ್ತವಾಗಿ ಪರಿಶೀಲಿಸಬೇಕು ಎಂದು ಅವರು ತಿಳಿಸಿದರು. ಕಾಮಗಾರಿಗಳ ಸ್ಥಳ ಪರಿಶೀಲನೆ: ಸಭೆಯ ಬಳಿಕ ಜಂಟಿ ನಿರ್ದೇಶಕರು…
ಮಡಿಕೇರಿ ಫೆ.28 NEWS DESK : ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಇದ್ದು, ಇದನ್ನು ಶೇ.50 ರಷ್ಟು ಹೆಚ್ಚಿಸಬೇಕು ಎಂದು ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ‘ಮೈಸೂರು ವಿಭಾಗದ ಆಯ್ದ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ’ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ರಾಜಕೀಯ, ಆರ್ಥಿಕ, ಶೈಕ್ಷಣಿಕ, ಕ್ರೀಡೆ, ಸಿನಿಮಾ, ವಿಜ್ಞಾನ ಮತ್ತು ತಂತ್ರಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಇದ್ದು, ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಸಮಾಜದಲ್ಲಿ ಸ್ತ್ರೀ ಮತ್ತು ಪುರುಷರು ಸಮಾನವಾಗಿದ್ದಾಗ ಮಾತ್ರ ಉತ್ತಮ ಸಮಾಜ ಕಾಣಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕು. ಮಹಿಳೆಯರು…
ಮಡಿಕೇರಿ ಫೆ.28 NEWS DESK : ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ, ಇಡೀ ದೇಶದಲ್ಲಿ ಒಂದೇ ಬ್ರ್ಯಾಂಡಿನಡಿಯಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಉಪಕ್ರಮವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದ್ದು, ಅದರ ಅಂಗವಾಗಿ ಕೆಜಿಗೆ 29 ರೂ.ಗೆ ದೊರೆಯುವ ʼಭಾರತ್ ಅಕ್ಕಿʼ ವಿತರಣೆ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಪಿರಿಯಾಪಟ್ಟಣದಲ್ಲಿ ಚಾಲನೆ ನೀಡಿದರು.






