ಮಡಿಕೇರಿ ಮಾ.19 NEWS DESK : ಮಡಿಕೇರಿ-ಹೆಬ್ಬಟ್ಟಗೇರಿಯ ಜಾಂಗೇರಿ ಪೈಸಾರಿಯಲ್ಲಿ ಮಾ.24 ರಂದು ಶ್ರೀ ಸ್ವಾಮಿ ಕೊರಗಜ್ಜನ ದೈವದ 7ನೇ ವರ್ಷದ ವಾರ್ಷಿಕ ಕೋಲ ಹಾಗೂ ಹರಕೆ ಕೋಲ ನಡೆಯಲಿದೆ. ಮಾ.22 ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 24 ರಂದು ಬೆಳಿಗ್ಗೆ 8.30ಕ್ಕೆ ಭಂಡಾರ ತೆಗೆಯುವುದು, 10.30 ಗಂಟೆಗೆ ಶ್ರೀ ಸ್ವಾಮಿ ಕೊರಗಜ್ಜನ ದೈವ ಕೋಲ ನಡೆಯಲಿದ್ದು, ಮದ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೈವಸ್ಥಾನದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8277132434, 9449933246, 8762603642 ಸಂಪರ್ಕಿಸ ಬಹುದಾಗಿದೆ.
ಲೇಖಕ: admin
ವಿರಾಜಪೇಟೆ ಮಾ.18 NEWS DESK : ವಿರಾಜಪೇಟೆಯ ಬಿಟ್ಟಂಗಾಲ ಗ್ರಾ.ಪಂ ವ್ಯಾಪ್ತಿಯ ಪೆಗ್ಗರಿಕಾಡುವಿನಲ್ಲಿ ಮಹಾಶಿವರಾತ್ರಿಯ ಅಂಗವಾಗಿ ನವೋದಯ ಯುವಕ ಸಂಘದ ವತಿಯಿಂದ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಬಿಟ್ಟಂಗಾಲ ಗ್ರಾ.ಪಂ ಅಧ್ಯಕ್ಷ ಮೂಕಚಂಡ ಪ್ರಸನ್ನ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ ಯುವ ಪೀಳಿಗೆಗೆ ಉತ್ತಮ ಸಂಸ್ಕೃತಿಯನ್ನು ಬೆಳೆಸುವಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದರು. ನವೋದಯ ಯುವಕ ಸಂಘದ ಅಧ್ಯಕ್ಷ ಬಿ.ಎಮ್.ದಿನೇಶ್ ಮಾತನಾಡಿ, ಶಿವರಾತ್ರಿ ಪ್ರಾಮುಖ್ಯತೆಯನ್ನು ತಿಳಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಪಿ.ಎನ್. ಶಾರದ ಮತ್ತು ನವೋದಯ ಯುವಕ ಸಂಘದ ಉಪಾಧ್ಯಕ್ಷ ಟಿ.ಪಿ ಸುಬ್ಬಯ್ಯ ಹಾಜರಿದ್ದರು. ಬಳಿಕ ವಿವಿಧ ಗ್ರಾಮೀಣ ಕ್ರೀಡಾಕೂಟಗಳು ನಡೆಯಿತು.
ಮಡಿಕೇರಿ ಮಾ.18 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ನ ಸಂಯುಕ್ತಾಶ್ರಯದಲ್ಲಿ ಮಾ.22 ರಂದು ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಉಪನ್ಯಾಸ ಮತ್ತು ಕಥಾ ಸ್ಪರ್ಧೆ ಹಾಗೂ ನಾಟಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ನ ಪ್ರಾಚಾರ್ಯರಾದ ಆರ್.ಎಸ್.ರೇಣುಕಾ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಕಸಾಪ ಮಾಜಿ ಅಧ್ಯಕ್ಷ ಕೆ.ಟಿ.ಬೇಬಿ ಮ್ಯಾಥ್ಯೂ ಪಾಲ್ಗೊಳ್ಳಲಿದ್ದು, ಜಿಲ್ಲಾ ಕ.ಸಾ.ಪ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕೋಶಾಧಿಕಾರಿ ಎಸ್.ಎಸ್.ಸಂಪತ್ ಕುಮಾರ್, ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಕಡ್ಲೆರ ತುಳಸಿ ಮೋಹನ್ ಉಪಸ್ಥಿತರಿರುವರು. 80ನೇ ಅಖಿಲ…
ಮಡಿಕೇರಿ ಮಾ.18 NEWS DESK : ಸೋಮವಾರಪೇಟೆ ತಾಲೂಕಿನ ವಾಲ್ನೂರು ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಸಿದ್ದೇಶ್ವರ ಸ್ವಾಮಿ ಹಾಗೂ ಶ್ರೀ ರಾಮ ದೇವರ ವಾರ್ಷಿಕ ಉತ್ಸವವು ಮಾ.24 ರಿಂದ ಮಾ.26ರ ವರೆಗೆ ನಡೆಯಲಿದೆ. ದೇವಾಲಯದಲ್ಲಿ ಮೂರು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿದೆ. ಮಾ.24 ರಂದು ರಾತ್ರಿ 8 ಗಂಟೆಗೆ ಕದಳಿ ಕಟ್ಟುವುದು, ಮಾ.25 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಮಾದೇಶ್ವರ ಸ್ವಾಮಿ ಪರ್ವ, ಮಧ್ಯಾಹ್ನ 3 ಗಂಟೆಗೆ ತೆಂಗಿನ ಕಾಯಿಗೆ ಗುಂಡು ಹಾರಿಸುವುದು, ಸಂಜೆ 5 ಗಂಟೆಗೆ ಮಹಾಪೂಜೆ, ಮಂಗಳಾರತಿ, ಸಂಜೆ 6 ಗಂಟೆಗೆ ಉತ್ಸವಮೂರ್ತಿ ಬಸವಣ್ಣ ದೇವರ ಮೆರವಣಿಗೆ ನಡೆಯಲಿದೆ. ಮಾ.26 ರಂದು ಮಧ್ಯಾಹ್ನ 12 ಗಂಟೆಗೆ ಸಾಮೂಹಿಕ ಭೋಜನದ ಪ್ರಸಾದ, ಸಂಜೆ 4.30 ಗಂಟೆಗೆ ಕೊಂಡ ಹಾಯುವುದು, ಸಂಜೆ 5 ಗಂಟೆಗೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ತಕ್ಕರು, ಅಧ್ಯಕ್ಷರು ಹಾಗೂ ಸಮಿತಿ…
ವಿರಾಜಪೇಟೆ ಮಾ.18 NEWS DESK : ಬೆಂಗಳೂರಿನ ಮತ್ತಿಕೆರೆಯ ಲಲಿತ ಆಡಿಟೋರಿಯಂನಲ್ಲಿ ನಡೆದ ಕರುನಾಡ ನಿಧಿ ಪತ್ರಿಕೆ ಉದ್ಘಾಟನಾ ಸಮಾರಂಭದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳಾದ ಲಾವಣ್ಯ ಮತ್ತು ಶ್ರೇಯಾಸೋಮಣ್ಣ ಭಾಗವಹಿಸಿ ನೃತ್ಯ ಪ್ರದರ್ಶನ ನೀಡಿದ್ದರು. ಇದೇ ಸಂದರ್ಭ ಇಬ್ಬರು ನೃತ್ಯಪಟುಗಳನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭಕಾರ್ಯಕ್ರಮದಲ್ಲಿ ಡಾ.ಕೆಂಚನೂರು ಶಂಕರ್, ಕಂಠೀರವ ಸ್ಟುಡಿಯೋದ ಅಧ್ಯಕ್ಷರಾದ ಮಹಬೂ ಪಾಷ, ಶಣ್ಮುಗಂ, ಆಯೋಜಕರಾದ ಸಲ್ಮಾನ್ ಹಾಗೂ ಅನೇಕ ಗಣ್ಯರು ಭಾಗವಹಿಸಿದ್ದರು.
ಮಡಿಕೇರಿ ಮಾ.18 NEWS DESK : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಆಯ್ಕೆ ಸಂದರ್ಭ ಈ ಬಾರಿ ಕೂಡ ಕೊಡಗಿನವರಿಗೆ ಅನ್ಯಾಯ ಮಾಡಲಾಗಿದೆ ಎಂದು ಚಿಂತಕ ಸೂದನ ಎಸ್.ಈರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರೆಭಾಷೆಯ ಸಾಹಿತ್ಯ-ಸಂಸ್ಕೃತಿ ಆಚಾರ-ವಿಚಾರಗಳನ್ನು ಪೂರ್ವಕಾಲದಿಂದಲೂ ಉಳಿಸಿ-ಬೆಳೆಸಿಕೊಂಡು ಬಂದಿರುವ ಕೊಡಗಿನ ಅರೆಭಾಷಿಕರನ್ನು ಕಡೆಗಣಿಸುವ ಸರಕಾರದ ಪ್ರಯತ್ನ ಖಂಡನೀಯವೆಂದು ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ತಲೆತಲಾಂತರಗಳಿಂದ ಎಲ್ಲಾ ಭಾಷಿಕರೊಂದಿಗೆ ಸೌಹಾರ್ದತೆಯಿಂದ ನಡೆದುಕೊಳ್ಳುತ್ತಾ ಅರೆಭಾಷೆ ಮತ್ತು ಸಾಹಿತ್ಯವನ್ನು ಬೆಳೆಸುತ್ತಿರುವ ಅರೆಭಾಷಿಕರಿಗೆ ಅನ್ಯಾಯವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಕಳೆದ ಅನೇಕ ವರ್ಷಗಳಿಂದ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತಿರುವ ಅರೆಭಾಷಿಕ ನಾಯಕರುಗಳು ಸರಕಾರದ ಈ ಮಲತಾಯಿ ಧೋರಣೆಯನ್ನು ಸಹಿಸಿಕೊಂಡಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ. ಸುಮಾರು 25 ವರ್ಷಗಳ ನಂತರ ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರುಗಳ ಆಯ್ಕೆಯಾಗಿದೆ. ಇದಕ್ಕೆ ಪ್ರತಿಯಾಗಿ ಮತ್ತು ಅರೆಭಾಷಿಕ ಕಾರ್ಯಕರ್ತರ ಶ್ರಮಕ್ಕೆ ಪ್ರತಿಫಲವಾಗಿ ಅಕಾಡೆಮಿಯ ಅಧ್ಯಕ್ಷ ಸ್ಥಾನವನ್ನು ಕೊಡಗು ಜಿಲ್ಲೆಗೆ ನೀಡಬೇಕಾಗಿತ್ತು. ಕಳೆದ ಅವಧಿಯಲ್ಲಿ ದಕ್ಷಿಣ ಕನ್ನಡದವರು ಅಧ್ಯಕ್ಷ…
ಮಡಿಕೇರಿ ಮಾ.18 NEWS DESK : ಕೊಡಗಿನ ಪುರಾತನ ದೇವಾಲಯಗಳಲ್ಲೊಂದಾದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ 14 ದೇವಾನು ದೇವತೆಗಳ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶ್ರೀ ಮುತ್ತಪ್ಪ ಜಾತ್ರೆಯು ಏ.3 ರಿಂದ ಏ.6ರ ವರೆಗೆ ನಡೆಯಲಿದೆ. ದೇವಾಲಯದ ತಂತ್ರಿಗಳಾದ ಕೇರಳದ ಪಯ್ಯನ್ನೂರಿನ ಬ್ರಹ್ಮಶ್ರೀ ಕುನ್ನತ್ತಿಲ್ಲತ್ತ್ ಮುರಳಿಕೃಷ್ಣನ್ ನಂಬೂದರಿ ಹಾಗೂ ಪರಿಶಿನಿಕಡವು ಶ್ರೀ ಮುತ್ತಪ್ಪ ಕ್ಷೇತ್ರದ ಆಚಾರಪಟ್ಟ ಮಡೆಯಚ್ಚನ್ ಬ್ಲಾತೂರ್ ಚಂದ್ರನ್ ಮಡೆಯಚ್ಚನ್ ನಾಲ್ಕುದಿನಗಳ ಕಾಲ ವಿವಿಧ ಪೂಜಾ ವಿಧಿವಿಧಾನಗಳು ಜರುಗಲಿದೆ. ಏ.3 ರಂದು ಸಂಜೆ 6.30 ರಿಂದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶ ಪೂಜೆ, ವಾಸ್ತು ಪೂಜೆ, ವಾಸ್ತು ಕಲಶಾಭಿಷೇಕ, ವಾಸ್ತು ಬಲಿ, ವಾಸ್ತು ಪುಣ್ಯಾಹ, ಮಹಾ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ. ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಏ.4 ರಂದು ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, 9 ಗಂಟೆಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಅಷ್ಟಾಭಿಷೇಕ,…
ಮಡಿಕೇರಿ ಮಾ.18 NEWS DESK : ಇದೇ ಮಾ.3 ರಂದು ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಸಂದರ್ಭ ರೋಟರಿ ಮಡಿಕೇರಿ ಸಂಸ್ಥೆಯು ಮಡಿಕೇರಿಯ 31 ಕೇಂದ್ರಗಳಲ್ಲಿ 160 ಪೋಲಿಯೋ ಸ್ವಯಂಸೇವಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವ ಮೂಲಕ ಸಾಮಾಜಿಕ ಕಳಕಳಿಯನ್ನು ಮೆರೆಯಿತು. ಜಿಲ್ಲಾ ಆರೋಗ್ಯ ಇಲಾಖೆ ಮಾಡಿದ ಮನವಿಗೆ ತಕ್ಷಣ ಸ್ಪಂದಿಸಿದ ರೋಟರಿ ಅಧ್ಯಕ್ಷ ರೋ.ಎನ್.ಡಿ.ಅಚ್ಚಯ್ಯ ಅವರು ಆರೋಗ್ಯ ಇಲಾಖೆಯ ಸಿಬ್ಬಂದಿ ದಿವ್ಯ ಅವರ ನೆರವಿನೊಂದಿಗೆ ಊಟವನ್ನು ವಿತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. 31 ಕೇಂದ್ರಗಳಿಗೆ ಆಹಾರ ಪೂರೈಸಲು ಸಾರಿಗೆ ವ್ಯವಸ್ಥೆ ಸಹಿತ ಸಹಕಾರ ನೀಡಿದ ಹೊಟೇಲ್ ಉಡುಪಿ ವೆಜ್ ನ ಮಾಲೀಕ ಶಂಕರ ಪೂಜಾರಿ ಅವರಿಗೆ ಅಚ್ಚಯ್ಯ ಅವರು ಧನ್ಯವಾದಗಳನ್ನು ಅರ್ಪಿಸಿದರು. ವಿಶ್ವ ವ್ಯಾಪಿ ಪೋಲಿಯೋ ನಿರ್ಮೂಲನೆಗೆ ರೋಟರಿ ಸಂಸ್ಥೆ ದೊಡ್ಡ ಮಟ್ಟದ ಶ್ರಮದಾನವನ್ನು ಮಾಡಿದ್ದು, ಸಂಸ್ಥೆಯ ಸಾಮಾಜಿಕ ಕಳಕಳಿ ಇನ್ನು ಮುಂದೆಯೂ ಮುಂದುವರಿಯಲಿದೆ ಎಂದು ಹೇಳಿದರು.
ಪುತ್ತೂರು ಮಾ.18 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಮಾರ್ಚ್ 21ರಿಂದ 24ರ ವರೆಗೆ ಚೆನ್ನೈನ ಅಣ್ಣಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಿಎಂಆರ್ಐಟಿ ಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉನ್ನತ ಸಾಧನೆಯನ್ನು ಪ್ರದರ್ಶಿಸಿ ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ತಿಳಿಸಿದ್ದಾರೆ.
ಮಡಿಕೇರಿ ಮಾ.18 NEWS DESK : ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಡಮಕಲ್ಲು ಬಳಿಯ ಕೂಜಿಮಲೆಯಲ್ಲಿ ನಾಲ್ವರಿಂದ ಐದು ಮಂದಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕೂಜಿಮಲೆ ಕಡಮಕಲ್ಲು ಭಾಗದ ಅಂಗಡಿಯೊಂದರಲ್ಲಿ ಅಪರಿಚಿತರು ದಿನಸಿ ಸಾಮಾಗ್ರಿ ಖರೀದಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಗುಂಪಿನಲ್ಲಿ ಇಬ್ಬರು ಮಹಿಳೆಯರೂ ಇದ್ದಾರೆ. ಶನಿವಾರ ಸಂಜೆ ನಡೆದ ಈ ಪ್ರಕರಣ ಹಲವು ಸಂಶಯಗಳನ್ನು ಹುಟ್ಟು ಹಾಕಿರುವ ಹಿನ್ನೆಲೆ ನಕ್ಸಲರ ಸಂಚಾರದ ಕುರಿತು ಶಂಕೆ ವ್ಯಕ್ತವಾಗಿದೆ. ಕೂಜಿಮಲೆ ಕಡಮಕಲ್ಲು ಬೆಟ್ಟ ಪ್ರದೇಶದಿಂದ ಕೂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಪ್ರದೇಶ ವ್ಯಾಪಿಸಿದೆ. ಕಾರ್ಕಳದಿಂದ ಬಂದಿರುವ ನಕ್ಸಲ್ ನಿಗ್ರಹ ದಳ ಕೂಂಬಿಂಗ್ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. 2012 ರಲ್ಲಿ ಮಡಿಕೇರಿ ತಾಲ್ಲೂಕಿನ ಕಾಲೂರು ಗ್ರಾಮದಲ್ಲಿ ಮತ್ತು 2018 ರಲ್ಲಿ ಸಂಪಾಜೆಯ ಗುಡ್ಡೆಗದ್ದೆಯಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಇದೀಗ ಕೂಜಿಮಲೆ ಕಡಮಕಲ್ಲು…






