ನಾಪೋಕ್ಲು ಮಾ.18 NEWS DESK : ಮಡಿಕೇರಿ-ಕರಿಕೆ ನಡುವೆ ಹೊಸ (ಕೆಎಸ್ಆರ್ ಟಿ ಸಿ) ಸರಕಾರಿ ಬಸ್ ಸಂಚಾರ ಆರಂಭಿಸಿದೆ. ಶಾಸಕ ಎ.ಎಸ್.ಪೊನ್ನಣ್ಣ ಕರಿಕೆಗೆ ಆಗಮಿಸಿದ್ದ ಸಂದರ್ಭ ಬಸ್ ಸೌಲಭ್ಯ ಬೇಕೆಂಬ ಕೋರಿಕೆಯನ್ನು ಪರಿಗಣಿಸಿ ತಕ್ಷಣವೇ ಬಸ್ ಸಂಚಾರ ಆರಂಭಿಸಲು ಆದೇಶಿಸಿದ್ದಾರೆ. ಪ್ರತಿದಿನ ಮಡಿಕೇರಿಯಿಂದ ಬೆಳಿಗ್ಗೆ 7.30ಕ್ಕೆ ಹೊರಡುವ ಬಸ್ 10.15 ಕ್ಕೆ ಕರಿಕೆ ತಲುಪಲಿದೆ.10.30 ಕ್ಕೆ ಕರಿಕೆಯಿಂದ ಹೊರಟು 1.15ಕ್ಕೆ ಮಡಿಕೇರಿ ತಲುಪಲಿದೆ. ಮಧ್ಯಾಹ್ನ 1 ಗಂಟೆಗೆ ಮಡಿಕೇರಿಯಿಂದ ಹೊರಟು 3.45 ಕ್ಕೆ ಕರಿಕೆ ತಲುಪಲಿದೆ. ಸಂಜೆ 4 ಗಂಟೆಗೆ ಕರಿಕೆಯಿಂದ ಹೊರಟು ಸಂಜೆ 6.45ಕ್ಕೆ ಮಡಿಕೇರಿ ತಲುಪಲಿದೆ. ಈಗಾಗಲೇ ಬಸ್ ಸಂಚಾರ ಪ್ರಾರಂಭಗೊಂಡಿದ್ದು, ಚಾಲಕ -ನಿರ್ವಾಹಕರನ್ನು ಎಳ್ಳುಕೊಚ್ಚಿಯಲ್ಲಿ ಗ್ರಾಮ ಪಂಚಾಯಿತಿ ಕಟ್ಟಡದ ಸಮೀಪ ಗ್ರಾಮಸ್ಥರು ಅಭಿನಂದಿಸಿ ಸ್ವಾಗತಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್, ಮಡಿಕೇರಿ ಡಿಪೋ ವ್ಯವಸ್ಥಾಪಕ ಶ್ರೀನಿವಾಸ ಮೂರ್ತಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ, ರಾಮಾನಾಥ ಬೇಕಲ್, ಹರಿಪ್ರಸಾದ್ ಬೇಕಲ್, ಸುಬ್ರಮಣಿ ಇತರರು ಹಾಜರಿದ್ದರು.…
ಲೇಖಕ: admin
ನಾಪೋಕ್ಲು ಮಾ.18 : ಜಿಲ್ಲೆಯ ಖಾಸಗಿ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖ ಕೊಳ್ಳುತ್ತಿದ್ದು ಮುಚ್ಚುವ ಹಂತಕ್ಕೆ ಬಂದಿವೆ. ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಸಾಕಷ್ಟಿದ್ದರೂ ಆಡಳಿತ ಮಂಡಳಿ ಶಾಲೆಯನ್ನು ಮುಚ್ಚುವ ಹುನ್ನಾರ ನಡೆಸುತ್ತಿದೆ. ಶಾಲೆಯನ್ನು ಮುನ್ನಡೆಸಲು ಸಾಧ್ಯವಾಗದಿದ್ದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು ತಕ್ಷಣ ರಾಜೀನಾಮೆ ಕೊಡಲಿ ಎಂದು ಸ್ಥಳೀಯರಾದ ನೆರವಂಡ ಉಮೇಶ್ ಒತ್ತಾಯಿಸಿದರು. ಗ್ರಾಮದ ನೇತಾಜಿ ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಳೆ ವಿದ್ಯಾರ್ಥಿಗಳ ಸಂಘದ ಸಭೆಯಲ್ಲಿ ಅವರು ಮಾತನಾಡಿದರು. ಬಲಮಾವಟಿ ಗ್ರಾಮದಲ್ಲಿರುವ ನೇತಾಜಿ ಕೇಂದ್ರ ವಿದ್ಯಾಸಂಸ್ಥೆಯ ಜಾಗವನ್ನು ಮತ್ತೊಂದು ಖಾಸಗಿ ಸಂಸ್ಥೆಗೆ ಪರಭಾರೆ ಮಾಡಲು ಗುಟ್ಟಾಗಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು ನೇತಾಜಿ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ಯಾರ ಗಮನಕ್ಕೂ ತಾರದೆ ಏಕಪಕ್ಷಿಯ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಶಾಲೆಯನ್ನು ಮುಚ್ಚಲು ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂದು ಪ್ರಶ್ನಿಸಿದರು. ಶಾಲೆಯ ಹಳೆ ಕಟ್ಟಡ ದುಸ್ಥಿತಿಯಲ್ಲಿದೆ. ಈ ಕಟ್ಟಡದಲ್ಲಿ 25 ಕಾರ್ಮಿಕರಿಗೆ ತoಗಲು ಶಾಲಾ ಆಡಳಿತ ಮಂಡಳಿ ಅವಕಾಶ ನೀಡಿದೆ.…
ಮಡಿಕೇರಿ ಮಾ.18 NEWS DESK : ಕರ್ನಾಟಕ ಅರೆ ಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕವಾದ ಸದಾನಂದ ಮಾವಜಿ ಮತ್ತು ಸುಳ್ಯ ನಗರ ಪಂಚಾಯತ್ ಸದಸ್ಯರಾಗಿ ನೇಮಕವಾದ ಸಿದ್ದೀಕ್ ಕೊಕೊ, ರಾಜು ಪಂಡಿತ್ ಭಾಸ್ಕರ್ ಪೂಜಾರಿ ಅವರನ್ನು ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ಕಾಸರಗೋಡಿನ ಬೇಕಲದಲ್ಲಿ ಅಭಿನಂದಿಸಿದರು. ಈ ಸಂದರ್ಭ ಕೆಪಿಸಿಸಿ ಮುಖ್ಯ ವಕ್ತಾರ ಟಿ.ಎಂ.ಶಾಹಿದ್ ತೆಕ್ಕಿಲ್, ಕೆ.ಟಿ.ವಿಶ್ವನಾಥ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಮಡಿಕೇರಿ ಮಾ.17 NEWS DESK : ಪ್ರಜಾಪ್ರಭುತ್ವ ಬಲಪಡಿಸಲು 18 ವರ್ಷ ಪೂರ್ಣಗೊಂಡ ಎಲ್ಲರೂ ಮತದಾನ ಮಾಡಬೇಕು. ಸಂವಿಧಾನ ಆಶಯಗಳಿಗೆ ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದ್ದಾರೆ. ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮತದಾನದ ಮಹತ್ವ ಜಾಗೃತಿ ಅಭಿಯಾನ ಹಾಗೂ ಸಮಾಜ ಕಲ್ಯಾಣ ಇಲಾಖಾ ನೌಕರರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶ. ನಿತ್ಯ ಒತ್ತಡದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಾರೆ. ಆದ್ದರಿಂದ ಕ್ರೀಡಾಕೂಟ ಸಂದರ್ಭದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುತ್ತಿರುವುದು ಮೆಚ್ಚುವಂತಹದ್ದು ಎಂದರು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಅರ್ಹರೆಲ್ಲರೂ ತಪ್ಪದೆ ಮತಹಕ್ಕು ಚಲಾಯಿಸಬೇಕು ಎಂದರು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಮಾತನಾಡಿ, ಸ್ವೀಪ್ ಕಾರ್ಯಕ್ರಮದಡಿ ಕ್ರೀಡಾಕೂಟ ಆಯೋಜಿಸಿ ಮತದಾನ ಜಾಗೃತಿ ಮೂಡಿಸುವುದರೊಂದಿಗೆ ಮತದಾನಕ್ಕೆ ಎಲ್ಲರನ್ನು…
ಮಡಿಕೇರಿ ಮಾ.17 NEWS DESK : ಇದೇ ಮಾ.25 ರಿಂದ ಆರಂಭವಾಗಲಿರುವ 10ನೇ ತರಗತಿ ವಾರ್ಷಿಕ ಪರೀಕ್ಷೆಯನ್ನು ಎದುರಿಸಲು ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಸಕಾರಾತ್ಮಕ ಭಾವನೆ ಬೆಳೆಸಿ ಆತ್ಮಸ್ಥೈರ್ಯ ತುಂಬಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಸಲಹೆ ನೀಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಸಿದ್ಧತೆ ಕುರಿತು ಕುಶಾಲನಗರದ ಫಾತಿಮ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ತಾಲ್ಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯ ಬಗ್ಗೆ ಭೀತಿ ಮೂಡಿಸದೆ ಆತ್ಮವಿಶ್ವಾಸ ಬೆಳೆಸಬೇಕು ಎಂದರು. ಜಿಲ್ಲೆಯಲ್ಲಿ 10ನೇ ತರಗತಿ ಪರೀಕ್ಷಾ ಪಲಿತಾಂಶದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಎಲ್ಲಾ ಪ್ರೌಢಶಾಲೆಗಳಲ್ಲಿ ಮಕ್ಕಳ ಉತ್ತಮ ಫಲಿತಾಂಶಕ್ಕೆ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ ಎಂದು ಭಾಗ್ಯಮ್ಮ ಹೇಳಿದರು. ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು…
ಸೋಮವಾರಪೇಟೆ ಮಾ.17 NEWS DESK : ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯವೆಂದು ಕೋಡಿಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದರು. ಮಠದ ಆವರಣದಲ್ಲಿ ನಡೆದ ಕೊಡಗು ಮತ್ತು ಹಾಸನ ಮಠಾಧೀಶರ ಪರಿಷತ್ತಿನ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಇವತ್ತಿನ ಸನ್ನಿವೇಶದಲ್ಲಿ ಒಗ್ಗಟ್ಟು, ಪರಸ್ಪರ ಪ್ರೀತಿ ವಿಶ್ವಾಸ ಎನ್ನುವುದು ಅನಿವಾರ್ಯವಾಗಿದೆ. ಜನಸಾಮಾನ್ಯರು ಹಾಗೂ ಮಠ ಮಾನ್ಯಗಳ ನಡುವೆ ಉತ್ತಮ ಸಂಬಂಧ, ಸಾಮರಸ್ಯವಿದ್ದರೆ ಸಮಾಜ ನೆಮ್ಮದಿಯಿಂದ ಉತ್ತಮವಾಗಿರುತ್ತದೆ ಎಂದರು. ಹಿಂದಿನ ಕಾಲದಿಂದಲೂ ಸಮಾಜಕ್ಕೆ ವೀರಶೈವ ಲಿಂಗಾಯತ ಮಠಗಳ ಕೊಡುಗೆ ಬಹಳಷ್ಟಿದೆ, ಇದು ಮುಂದುವರೆಯಬೇಕು. ಇಂದು ಹಲವು ಮಠಗಳು, ಸ್ವಾಮೀಜಿಗಳು ಸಂಕಷ್ಟದಲ್ಲಿದ್ದಾರೆ. ಅದಕ್ಕಾಗಿ ಎಲ್ಲಾ ಮಠಾಧೀಶರು ಸಂಘಟಿತರಾಗಬೇಕು, ಪರಸ್ಪರ ಸೌಹಾರ್ಧತೆಯಿಂದ ಇರಬೇಕು. ಆ ಮೂಲಕ ಮಠಗಳ ಆಸ್ತಿಗಳನ್ನು ರಕ್ಷಿಸಿಕೊಂಡು ಹೋಗಬೇಕು ಎಂದರು. ಸಭೆಯಲ್ಲಿ ಕೊಡಗು, ಹಾಸನ ಮಠದೀಶರ ಪರಿಷತ್ತು ರಚನೆ ಸಂಬಂಧ ಸುದೀರ್ಘ ಚರ್ಚೆ ನಡೆದು ಕೊಡಗು, ಹಾಸನ ವೀರಶೈವ ಲಿಂಗಾಯತ ಮಠಾದೀಶರ ನೂತನ ಆಡಳಿತ ಮಂಡಳಿ ರಚಿಸಲಾಯಿತು. ಗೌರವಾದ್ಯಕ್ಷರಾಗಿ ಕೋಡಿಮಠದ ಸ್ವಾಮೀಜಿ, ಅಧಕ್ಷರಾಗಿ ಅರಕಲಗೂಡು ದೊಡ್ಡ ಮಠದ ಶ್ರೀಮಲ್ಲಿಕಾರ್ಜುನ…
ಸೋಮವಾರಪೇಟೆ ಮಾ.17 NEWS DESK : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿಯಲ್ಲಿ 5 ಕೋಟಿ ರೂ. ಅನುದಾನದಲ್ಲಿ ಪ್ರಾರಂಭಿಸಿದ ಕಾಮಗಾರಿಗಳು ನೆನಗುದಿಗೆ ಬಿದ್ದಿದ್ದು, ತಕ್ಷಣ ಕಾಮಗಾರಿ ಆರಂಭಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ ರಾಜ್ಯ ಸರ್ಕಾರ ನಗರೋತ್ಥಾನ ಯೊಜನೆಯಡಿ ಅನುದಾನ ಒದಗಿಸಿದ್ದು, ಕಳೆದ ಒಂದೂವರೆ ವರ್ಷದ ಹಿಂದೆಯೇ ಅಂದಿನ ಶಾಸಕರು ಕಾಮಗಾರಿಗೆ ಚಾಲನೆ ನೀಡಿದ್ದರು. ಆದರೆ, ಇಂದಿಗೂ ಕೆಲವು ಕಾಮಗಾರಿ ಸಮರ್ಪಕವಾಗಿ ಪೂರ್ಣಗೊಂಡಿಲ್ಲ ಎಂದು ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಆರೋಪಿಸಿದ್ದಾರೆ. ಹಾಸನ ಜಿಲ್ಲೆಯ ಗುತ್ತಿಗೆದಾರರೊಬ್ಬರು ಈ ಕಾಮಗಾರಿಯ ಗುತ್ತಿಗೆ ಪಡೆದು ಸೋಮವಾರಪೇಟೆಯ ಗುತ್ತಿಗೆದಾರನಿಗೆ ತುಂಡು ಗುತ್ತಿಗೆ ನೀಡಿದ್ದಾರೆ. ಆದರೆ, ಇವರು ಕಾಮಗಾರಿಯನ್ನು ಮಾಡಿಲ್ಲ. ಕರ್ಕಳ್ಳಿ ಗ್ರಾಮದಲ್ಲಿ ಉದ್ಯಾನವನ ನಿರ್ಮಿಸುವ ನೆಪದಲ್ಲಿ ಕೆರೆಯೊಳಗೆ ತ್ಯಾಜ್ಯ ವಸ್ತುಗಳನ್ನು ತುಂಬಿ ದುರ್ವಾಸನೆ ಬರುವಂತೆ ಮಾಡಿದ್ದಾರೆ. ಕೆಲವೆಡೆ ಕಾಮಗಾರಿಗಾಗಿ ಭೂಮಿ ಅಗೆದು ಹಾಕಿ ವರ್ಷವಾಗುತ್ತಾ ಬಂದರೂ ಕೆಲಸ ಆರಂಭಿಸಿಲ್ಲ ಎಂದು ದೂರಿದ್ದಾರೆ. ಹಣ ವಿನಿಯೋಗವಾಗದೆ ಆರ್ಥಿಕ ವರ್ಷಾಂತ್ಯಕ್ಕೆ…
ಸುಂಟಿಕೊಪ್ಪ ಮಾ.17 NEWS DESK : ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. 7ನೇ ಹೊಸಕೋಟೆ ಕಲ್ಲೂರು ಗ್ರಾಮದ ನಿವಾಸಿ ಅಬ್ಬಾಸ್ ಎಂಬುವವರ 15 ವರ್ಷದ ಪುತ್ರ ಅಲ್ಟೋ ಕಾರನ್ನು ಚಲಾಯಿಸಿಕೊಂಡು ಬಸವನಹಳ್ಳಿ ಮಾರ್ಗವಾಗಿ ಅತೀ ವೇಗದಿಂದ ರೆಸಾರ್ಟ್ ಬಳಿ ಧಾವಿಸಿ ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯ ಇನ್ನೊಂದು ಬದಿಯಲ್ಲಿರುವ ರೆಸಾರ್ಟ್ ನ ವಾಹನ ಪಾರ್ಕಿಂಗ್ ಸ್ಥಳದಲ್ಲಿನ ಕಾಂಪೌಂಡ್ ಗೆ ಅಪ್ಪಳಿಸಿ ರಸ್ತೆಯಲ್ಲಿ ಮೂರು ಪಲ್ಟಿಯಾಗಿದೆ. ಈ ಸಂದರ್ಭ ಕಾಂಪೌಂಡ್ ಸಮೀಪ ಕರ್ತವ್ಯ ನಿರತರಾಗಿದ್ದ ಇಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕಾರು ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.
ಮಡಿಕೇರಿ ಮಾ.17 NEWS DESK : ಮಡಿಕೇರಿ ನಗರದ ಶರ್ಮ ಕಾಫಿ ವರ್ಕ್ಸ್ ನ ಮಾಲೀಕ, ಹೊಸ ಬಡಾವಣೆ ನಿವಾಸಿ ಶ್ರೀಧರ್ ಶರ್ಮ(60) ಅವರು ಇಂದು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ. ಶ್ರೀಧರ್ ಶರ್ಮ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ ಮಾ.17 NEWS DESK : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (DCC) ಆಡಳಿತ ಮಂಡಳಿಗೆ ಇಂದು ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ (ಬಾಂಡ್ ಗಣಪತಿ), ಕೆ.ಎಸ್ ಪೂವಯ್ಯ, ಹೊಸೂರು ಕೆ ಸತೀಶ್ ಕುಮಾರ್, ಸತೀಶ್ ಎನ್ ಕಾಂಗಿರ, ರಮೇಶ್ ಹೆಚ್.ಎಂ, ಪೂಳಂಡ ಪಿ.ಪೆಮ್ಮಯ್ಯ, ಕೆ.ಬಿ.ಅರುಣ, ಹೆಚ್.ಕೆ.ಮಾದಪ್ಪ, ಎನ್.ಸಿ.ಶರತ್ ಶೇಖರ್, ಎನ್.ಎಮ್.ಉತ್ತಪ್ಪ, ಗುಮ್ಮಟ್ಟೀರ ಎಸ್.ಕಿಲನ್ ಗಣಪತಿ, ಶರವಣ ಕುಮಾರ್ ಟಿ.ಆರ್, ಜಲಜಾಕ್ಷಿ ವೈ.ಪಿ, ಆಡಳಿತ ಮಂಡಳಿ ನಿರ್ದೇಶಕರಾಗಿ ಗೆಲುವು ಸಾಧಿಸಿದ್ದಾರೆ.






