ಮಡಿಕೇರಿ ಫೆ.27 NEWS DESK : ತೆಕ್ಕಿಲ್ ಪ್ರವಾಸಿ ಒಕ್ಕೂಟದ ವತಿಯಿಂದ ದುಬೈ ನಲ್ಲಿ ನಡೆದ “ಬಂದು ಸೇರಿ ಸಂತೋಷಪಡುವ” ತೆಕ್ಕಿಲ್ ಒಕ್ಕೂಟದ ಸಂಗಮ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ದುಬೈ ಇತ್ತಿಹಾದ್ ಗ್ರೌಂಡಿನಲ್ಲಿ ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಯು ಎ ಇ ವಾಸ್ತವ್ಯವಿರುವ ಮತ್ತು ಭಾರತದಿಂದ ಬಂದು ನೆಲೆಸಿರುವ ತೆಕ್ಕಿಲ್ ಒಕ್ಕೂಟದ ಸದಸ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರವನ್ನು ಭಾರತದ ಮತ್ತು ಯು ಎ ಇ ರಾಷ್ಟ್ರ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಗೈದ ಟಿ.ಎಂ.ಶಾಹಿದ್ ತೆಕ್ಕಿಲ್ ಅವರನ್ನು ಒಕ್ಕೂಟದ ಅಧ್ಯಕ್ಷ ಅಜೀಜ್ ಕೊವ್ವಲ್ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಿದರು. ನಂತರ ವಿವಿಧ ದೇಶದಲ್ಲಿ ವಾಸ್ತವ್ಯವಿರುವವರ ಸದಸ್ಯರ ಆಚಾರ ವಿಚಾರ ವಿನಿಮಯ, ವಿವಿಧ ರೀತಿಯ ತಿಂಡಿ ತಿನಿಸುಗಳ ರುಚಿ ಸವಿಯುವ , ಪುರುಷರಿಗೆ ಮತ್ತು ಮಹಿಳೆಯರಿಗೆ ವಿವಿಧ ಸಭಾ ಕಾರ್ಯಕ್ರಮ, ಸಾಧಕರಿಗೆ ಪ್ರಶಸ್ತಿ ಪ್ರಧಾನ, ಕ್ರೀಡಾಕೂಟಗಳು ನಡೆದವು. ಭಾರತದಿಂದ ಬಂದ ಮತ್ತು ಯು ಎ ಇ ಯಲ್ಲಿ ವಾಸ್ತವ್ಯವಿರುವ ತೆಕ್ಕಿಲ್ ಒಕ್ಕೂಟದ ಸದಸ್ಯರ…
ಲೇಖಕ: admin
ಮಡಿಕೇರಿ ಫೆ.27 NEWS DESK : ಮೈಸೂರು- ಕೊಡಗು ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ಈ ಕೆಲಸವನ್ನು ಕಳೆದ ನಾಲ್ಕು ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಯಾಕೆ ಮಾಡಲಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್ ಪ್ರಶ್ನಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಭೂಮಿ ಸ್ವಾಧೀನಪಡಿಸಿಕೊಂಡು ರೈಲ್ವೆ ಇಲಾಖೆಗೆ ಉಚಿತವಾಗಿ ಹಸ್ತಾಂತರಿಸಬೇಕಾಗಿತ್ತು. ಆ ಮೂಲಕ ತಾವು ಕೊಡಗು ಕ್ಷೇತ್ರಕ್ಕೂ ಸಂಸದರು ಎನ್ನುವುದನ್ನು ಸಾಬೀತು ಪಡಿಸಬೇಕಾಗಿತ್ತು ಎಂದು ತಿಳಿಸಿದ್ದಾರೆ. ಸುಮಾರು 9 ವರ್ಷಗಳ ಹಿಂದೆಯೇ ಕೊಡಗು ಜಿಲ್ಲೆಗೆ ರೈಲು ಮಾರ್ಗ ತರುವುದಾಗಿ ಭರವಸೆ ನೀಡಿದ್ದ ಸಂಸದರು ಇಲ್ಲಿಯವರೆಗೆ ಈ ಬಗ್ಗೆ ಇಚ್ಛಾಶಕ್ತಿಯನ್ನು ಪ್ರದರ್ಶಿಸಿಲ್ಲ. ಇದೀಗ ಲೋಕಸಭಾ ಚುನಾವಣಾ ಹಂತದಲ್ಲಿ ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವುದಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಕಡೆ ಬೊಟ್ಟು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.…
ಬೆಂಗಳೂರು, ಫೆ.27 NEWS DESK : ಪಂಚಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದ ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗಬೇಕು :: ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ…
ಮಡಿಕೇರಿ ಫೆ.27 NEWS DESK : ರಾಜಕೀಯ ಹತ್ಯೆಗಳು ಮತ್ತು ಅಮಾನವೀಯ ಮರಣದಂಡನೆಗಳಿಂದ ಮೃತಪಟ್ಟ ಹಿರಿಯ ಕೊಡವ ಬುಡಕಟ್ಟು ಜನರಿಗೆ ಅಂತರ ರಾಷ್ಟ್ರೀಯ ಮಾತೃಭಾಷಾ ದಿನದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಗೌರವ ಅರ್ಪಿಸಿತು. ಮಡಿಕೇರಿ ಕೋಟೆ ಆವರಣ ಮತ್ತು ದೇವಟ್ ಪರಂಬು ಕೊಡವ ನರಮೇಧ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್ಸಿ ಪ್ರಮುಖರು, ಕೊಡವ ಪರಂಪರೆ ಮತ್ತು ಕೊಡವರ ಸ್ಥಿತಿ ಸ್ಥಾಪಕತ್ವವನ್ನು ಗೌರವಿಸಿದರು. ಈ ಸಂದರ್ಭ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು, ಮನುಷ್ಯ ಯಾವುದೇ ಕಷ್ಟ ಅಥವಾ ಸು:ಖದಲ್ಲಿದ್ದಾಗ ತನ್ನ ಮಾತೃಭಾಷೆಯ ಮೂಲಕವೇ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ಹತ್ಯಾಕಾಂಡಕ್ಕೆ ಗುರಿಯಾದ ಹಿರಿಯ ಕೊಡವ ಜೀವಗಳು ಕೊಡವ ಮಾತೃಭಾಷೆಯ ಮೂಲಕವೇ ತಮ್ಮ ನೋವು ಮತ್ತು ರೋಧನವನ್ನು ಹೊರ ಹಾಕಿ ಪ್ರಾಣ ಬಿಟ್ಟಿದ್ದಾರೆ. ಈ ಜೀವಗಳಿಗೆ ಅಂತರ ರಾಷ್ಟ್ರೀಯ ಮಾತೃಭಾಷಾ ದಿನದಂದು ಗೌರವ ಅರ್ಪಿಸುವುದು ಪ್ರತಿಯೊಬ್ಬ ಕೊಡವರ ಕರ್ತವ್ಯವಾಗಿರುವುದರಿಂದ ಸಿಎನ್ಸಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು. ಪ್ರಮುಖರಾದ ಬೊಪ್ಪಂಡ…
ಮಡಿಕೇರಿ ಫೆ.27 NEWS DESK : ಮೂರ್ನಾಡುವಿನ ಟೀಂ ಹೈ-ಲೋನಾ ವತಿಯಿಂದ ನಡೆದ ಮೂರ್ನಾಡು ಚಾಂಪಿಯನ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಸೀಸನ್-2 ನಲ್ಲಿ ಶುಶಾಂತ್ ಫ್ರೆಂಡ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಎಫ್ರೋನ್ ತಂಡ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಮೂರ್ನಾಡುವಿನ ಶ್ರೀಲಾಲು ಮುದ್ದಯ್ಯ ಮೈದಾನದಲ್ಲಿ ಟೀಂ ಹೈ-ಲೋನಾ ಸಂಘಟನೆಯ ನಾಯಕರಾದ ಪಿ.ಎಸ್.ಇಸ್ಮಾಯಿಲ್ ಹಾಗೂ ರಂಜಿತ್ ಕುಮಾರ್ ನೇತೃತ್ವದಲ್ಲಿ ಮೂರು ದಿನಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಗ್ರಾಮದ ಹನ್ನೆರಡು ಯುವ ಕ್ರಿಕೆಟ್ ತಂಡಗಳು ಚಾಂಪಿಯನ್ ಟ್ರೋಫಿಗಾಗಿ ಸೆಣಸಾಡಿದವು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮೂರ್ನಾಡು ಶ್ರೀಅನ್ನಪೂರ್ಣೇಶ್ವರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ.ಮಹಾಬಲೇಶ್ವರ್ ಭಟ್, ಕ್ರೀಡೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಆದ್ದರಿಂದ ಪ್ರಸ್ತುತ ದಿನಗಳಲ್ಲಿ ಕ್ರೀಡಾಕೂಟಗಳನ್ನು ಹೆಚ್ಚು ಹೆಚ್ಚು ಆಯೋಜಿಸುವ ಅಗತ್ಯವಿದೆ ಎಂದರು. ಯುವಕ, ಯುವತಿಯರು ದುಶ್ಚಟಗಳಿಗೆ ಬಲಿಯಾಗಿ, ಕಾಲಹರಣ ಮಾಡುವುದನ್ನು ಬಿಟ್ಟು ಬಿಡುವಿನ ಸಮಯದಲ್ಲಿ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು…
ಚೆಯ್ಯಂಡಾಣೆ, ಫೆ.27 NEWS DESK : ಈ ನೆಲದಲ್ಲಿ ಹುಟ್ಟಿದ ಎಲ್ಲಾ ಧರ್ಮದವರು ಪರಸ್ಪರ ಸೌಹಾರ್ದತೆ ಸಾಮರಸ್ಯದಿಂದ ಬದುಕಬೇಕು ಎಂದು ಮಡಿಕೇರಿ ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್ ಹೇಳಿದರು. ಕುಂಜಿಲ ಪೈನರಿ ದರ್ಗಾದಲ್ಲಿ ನಡೆದ ವಾರ್ಷಿಕ ಉರೂಸ್ ಸೌಹಾರ್ದ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಪವಾಡ ಪುರುಷರು ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಸ್ಥಳ ಜಾತಿ, ಧರ್ಮ, ಭೇದವಿಲ್ಲದೆ ಎಲ್ಲರೂ ಕೂಡ ನೆಮ್ಮದಿ ಮನಶಾಂತಿ ಪಡೆದುಕೊಳ್ಳುವ ಸ್ಥಳವಾಗಿದೆ. ನಮ್ಮ ಪೂರ್ವಜರು, ಇತಿಹಾಸ ಪುರುಷರು ಕೂಡ ಇದೇ ಸಂದೇಶವನ್ನು ನೀಡಿದ್ದಾರೆ. ಅಲ್ಲದೇ ಮಸೀದಿ ನಿರ್ಮಾಣಕ್ಕೆ ಅಂಜಪ್ಪರವಂಡ ಕುಟುಂಬಸ್ಥರು ದೇಣಿಗೆ ನೀಡುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದ್ದಾರೆ ಎಂದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬೊಳಿಯಾಡಿರ ಸಂತು ಸುಬ್ರಮಣಿ ಮಾತನಾಡಿ, ಕಳೆದ 20 ವರ್ಷಗಳಿಂದ ಜಾತಿ, ಮತ, ಭೇದವಿಲ್ಲದೆ ಎಲ್ಲರಲ್ಲೂ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದೇವೆ. ಇಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮವು ವೈಶಿಷ್ಟ್ಯತೆಯನ್ನು ಹೊಂದಿದ್ದು, ಎಲ್ಲರೂ ಪರಸ್ಪರ ಪಕ್ಷ ಭೇದ, ಜಾತಿ, ಧರ್ಮ ಮರೆತು…
ಮಡಿಕೇರಿ ಫೆ.27 NEWS DESK : ಇದೇ ಮಾ.3 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಸಿದ್ಧತೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವಂತೆ ನಿರ್ದೇಶನ ನೀಡಿದರು. 5 ವರ್ಷದೊಳಗಿನ ಮಕ್ಕಳು ಯಾರೂ ಬಿಟ್ಟು ಹೋಗದಂತೆ ಗಮನಹರಿಸಬೇಕು. ಅಂಗನವಾಡಿ, ಶಾಲೆಗಳು, ಪ್ರವಾಸಿ ಸ್ಥಳಗಳು, ಗಡಿ ಪ್ರದೇಶಗಳು ಇತರೆ ಎಲ್ಲೆಡೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವಂತೆ ನಿರ್ದೇಶನ ನೀಡಿದರು. ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದು, 4,334 ನಗರ ಪ್ರದೇಶದ ಮಕ್ಕಳು ಹಾಗೂ 32,261 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ…
ಮಡಿಕೇರಿ ಫೆ.27 NEWS DESK : ಕಳೆದ ಒಂದು ತಿಂಗಳ ಕಾಲ ನಡೆದ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಅನುಷ್ಠಾನಕ್ಕಾಗಿ ಕೊಡಗು ಜಿಲ್ಲೆಗೆ ಪ್ರಶಸ್ತಿ ಲಭಿಸಿರುವುದು ಶ್ಲಾಘನಾರ್ಹ. ಜಾಥಾ ಯಶಸ್ಸಿಗಾಗಿ ಶ್ರಮಿಸಿದ ಅಧಿಕಾರಿಗಳು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೂ ಕಾಳಜಿ ತೋರಲಿ ಎಂದು ಮಾನವ ಬಂದುತ್ವ ವೇದಿಕೆಯ ಜಿಲ್ಲಾ ಸಂಚಾಲಕರು ಹಾಗೂ ಸಂವಿಧಾನ ಜಾಗೃತಿ ಜಾಥಾದ ಸದಸ್ಯರೂ ಆದ ಜೆ.ಎಲ್.ಜನಾರ್ಧನ್ ಮನವಿ ಮಾಡಿದ್ದಾರೆ. ಪ್ರಶಸ್ತಿ ಲಭಿಸಿದ ಬಗ್ಗೆ ಹರ್ಷ ಹಂಚಿಕೊAಡ ಅವರು, ಜನರಲ್ಲಿ ಸಂವಿಧಾನದ ಕುರಿತು ಅರಿವು ಮೂಡಿಸಲು ಜಾಥಾ ಆಯೋಜಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಅವರ ಕ್ರಮ ಸ್ವಾಗತಾರ್ಹ ಮತ್ತು ಕೃತಜ್ಞತೆಗೆ ಪಾತ್ರವಾಗಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವರು, ಎರಡು ಕ್ಷೇತ್ರಗಳ ಶಾಸಕದ್ವಯರು, ಜಿಲ್ಲಾಡಳಿತ, ಜಿ.ಪಂ, ಎಲ್ಲಾ ಸ್ಥಳೀಯ ಸಂಸ್ಥೆಗಳು, ದಲಿತ ಸಂಘಟನೆಗಳು ಸೇರಿದಂತೆ ಎಲ್ಲಾ ಸಂಘನೆಗಳು, ಅಧಿಕಾರಿಗಳು ಹಾಗೂ ಜನರ ಸಹಕಾರದಿಂದ ಜಾಥಾ…
ಬೆಂಗಳೂರು ಫೆ.27 NEWS DESK : ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ವಿರಾಜಪೇಟೆ ಫೆ.27 NEWS DESK : ನಮ್ಮನ್ನು ನಾವು ಪರಿವರ್ತನೆ ಮಾಡಿಕೊಂಡು ನಮ್ಮೊಳಗೆ ಬೆಳಕು ತರುವಂತದ್ದೇ ಧರ್ಮ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ಅಭಿಪ್ರಾಯಪಟ್ಟರು. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ವಿರಾಜಪೇಟೆ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಜ್ಞಾನ ಗಂಗಾ ಭವನದ ವತಿಯಿಂದ 88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವದ ಪ್ರಯುಕ್ತ ವಿರಾಜಪೇಟೆ ನಗರದ ತಾಲೂಕು ಮೈದಾನದಲ್ಲಿ ಭಾರತದ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ ಮತ್ತು ಆಧ್ಯಾತ್ಮಿಕ ಚಿತ್ರಗಳ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಅಂತರಂಗದಲ್ಲಿರುವ ಅಜ್ಞಾನ ತೊಲಗಿಸಿ ಜ್ಞಾನದ ಚಕ್ಷು ಬೀರಬೇಕು. ಜ್ಞಾನದ ಚಕ್ಷು ಇಲ್ಲದೆ ಸಿರಿಸಂಪತ್ತು, ಸಾಮ್ರಾಜ್ಯ, ತಂದಿಟ್ಟರೂ ಅದನ್ನು ಅನುಭವಿಸಲು ಹೊರಟಾಗ ನಮಗೆ ಶೂನ್ಯವೇ ಲಭಿಸುತ್ತದೆ. ಇಂದು ಎಲ್ಲ ಕಡೆ ಹಿಂಸೆ, ಕ್ರೋಧ, ಆಕ್ರೋಶ, ಅಸೂಯೆಗಳಲ್ಲಿ ತೊಡಗಿಸಿಕೊಂಡು ಜೀವನ ಎನೂ ಎಂಬುವುದನ್ನು ಮರೆತಿದ್ದಾರೆ. ತಾನು ಬದುಕುವುದರ ಜೊತೆಗೆ ಎಲ್ಲರನ್ನೂ ಪ್ರೀತಿಸುವಂತಾಗಬೇಕು. ದ್ವೇಷ ತೊಡೆದು ಹಾಕಬೇಕು. ಜಗತ್ತು ನನ್ನದು ಅಂತ ಪರಿಭಾವಿಸುವವನು ಜಗದ್ಗುರು…






