ನಾಪೋಕ್ಲು ಫೆ.27 NEWS DESK : ಹೊದ್ದೂರು ಗ್ರಾಮ ಪಂಚಾಯತಿ ಕಚೇರಿ ಹಾಗೂ ಗ್ರಂಥಾಲಯಕ್ಕೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರುದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಉಪಾಧ್ಯಕ್ಷರಾದ ಅನುರಾಧ, ಸದಸ್ಯರಾದ ಮೊಣ್ಣಪ್ಪ, ಹಮೀದ್, ಕುಸುಮಾವತಿ, ಕೆ.ಆರ್ ಅನಿತಾ, ವಾಂಚಿರ ಅಜಯ್ ಕುಮಾರ್, ಚೌರೀರ ಅನಿತಾ , ಲಕ್ಷ್ಮಿ, ಮೊಯ್ದು, ಪಿಡಿಒ ಅಬ್ದುಲ್ಲ, ತೆನ್ನಿರ ಮೈನಾ , ಕತ್ತನಿರ ಮೈಸಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ನಾಪೋಕ್ಲು ಫೆ.27 NEWS DESK : ಹೋದವಾಡ ಗ್ರಾಮದ ಕೊಟ್ಟಮುಡಿ ಮರ್ಕಜುಲ್ ಹಿದಾಯ ಎಜುಕೇಶನ್ (ಸೆಂಟರ್)ಸಂಸ್ಥೆಯ ವತಿಯಿಂದ ನೂತನವಾಗಿ ನಿರ್ಮಿಸಲಾದ ಹೆಣ್ಣು ಮಕ್ಕಳ ವಸತಿ ನಿಲಯದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಇದರ ಸದುಪಯೋಗವನ್ನು ಪಡೆದುಕೊಂಡು ಸಂಸ್ಥೆಯ ಮೂಲಕ ಉನ್ನತ ವಿದ್ಯಾಭ್ಯಾಸವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಉಪಾಧ್ಯಕ್ಷ ಸಿ.ಕೆ.ಅಹಮದ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಎ.ಎ.ಮಹಮ್ಮದ್ ಹಾಜಿ , ಸಂಸ್ಥೆಯ ವ್ಯವಸ್ಥಾಪಕ ಇಸ್ಮಾಯಿಲ್ ಸಖಾಫಿ , ಉದ್ಯಮಿ ಇಮ್ರಾನ್, ಜಿ.ಪಂ ಮಾಜಿ ಸದಸ್ಯ ಅಬ್ದುಲ್ ಲತೀಫ್, ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹೆಚ್. ಎ.ಹಂಸ , ಹೊದ್ದೂರು ಗ್ರಾ.ಪಂ ಸದಸ್ಯ ಮೊಯಿದು ಕೊಟ್ಟಮುಡಿ, ಹಮೀದ್ ಕಬಡಕೇರಿ ಹಾಗೂ ಸಂಸ್ಥೆಯ ನಿರ್ದೇಶಕರು, ಬೋಧಕರು, ಬೋಧಕೆತರ ಸಿಬ್ಬಂದಿಗಳು ,ಪೋಷಕರು, ವಿದ್ಯಾರ್ಥಿಗಳು , ಸಾರ್ವಜನಿಕರು ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಫೆ.27 NEWS DESK : ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಹಯೋಗದೊಂದಿಗೆ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ “ತಂಬಾಕು ಉತ್ಪನ್ನಗಳ ಸೇವೆಯಿಂದ ಆಗುವ ದುಷ್ಪರಿಣಾಮ”ಗಳ ಕುರಿತು ವಿದ್ಯಾರ್ಥಿಗಳಿಗೆ ನಡೆದ ಚಿತ್ರಕಲೆ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಶಾಲೆಯ ಪ್ರಾಥಮಿಕ ವಿಭಾಗದ 6ನೇ ತರಗತಿ ವಿದ್ಯಾರ್ಥಿ ವಿ.ಆರ್ನವ್ ಪ್ರಥಮ, 5ನೇ ತರಗತಿ ವಿದ್ಯಾರ್ಥಿಗಳಾದ ಎಂ.ಡಿ.ದೈವಿಕ್ ದ್ವಿತೀಯ, ಯಶ್ವಿನ್ ತೃತೀಯ ಸ್ಥಾನ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿಗಳಾದ ಜಿ.ಬಿ. ಸ್ಪೂರ್ತಿ ಪೊವಮ್ಮ ಪ್ರಥಮ, ಪಿ. ಬ್ರೀಷ್ ಗಣಪತಿ ದ್ವಿತೀಯ, ಎಸ್. ಎಂ. ಸೋಮಣ್ಣ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪಿ.ಎಸ್,ಸುದೇಶ್, ಕಾರ್ಯದರ್ಶಿ ಪಿ.ಎನ್,ವಿನೋದ್, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಸಂಯೋಜಕಿ ಎನ್. ಬಿ. ಚೈತ್ರ…
ಮಡಿಕೇರಿ ಫೆ.27 NEWS DESK : ಕೊಡಗಿನ ಪ್ರತಿಷ್ಠಿತ ಸಿಐಟಿ ಪೊನ್ನಂಪೇಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಟಿಯು ಅಂತರ ಕಾಲೇಜು ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಸಿಐಟಿ ಪೊನ್ನಂಪೇಟೆ ಪುರುಷರ ಹಾಕಿ ತಂಡಕ್ಕೆ ವಿಟಿಯು ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಪಂದ್ಯಾವಳಿಯಲ್ಲಿ ವಿಟಿಯು ವಿಶ್ವವಿದ್ಯಾನಿಲಯಕ್ಕೆ ಒಳಪಡುವ ರಾಜ್ಯದ ವಿವಿಧ ಜಿಲ್ಲೆಗಳ 11 ಕಾಲೇಜುಗಳ ಹಾಕಿ ತಂಡಗಳು ಭಾಗವಹಿಸಿದ್ದವು. ಹಾಜಿ ಪಂದ್ಯಾವಳಿಯ ಫೈನಲ್ ಪಂದ್ಯಾವಳಿಯಲ್ಲಿ ಸಿಐಟಿ ಪೊನ್ನಂಪೇಟೆ ತಂಡ ಮುಂಚೂಣಿ ಆಟಗಾರ ಸಾತ್ವಿಕ್ ಗಳಿಸಿದ ಏಕೈಕ ಗೋಲಿನಿಂದ ಆರ್ವಿಸಿಇ ಬೆಂಗಳೂರು ತಂಡವನ್ನು 1-0 ಗೋಲಿನಿಂದ ಮಣಿಸುವುದರ ಮೂಲಕ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. ಪೈನ್ ಪಂದ್ಯಾವಳಿಗೆ ಮುಖ್ಯಅತಿಥಿಗಳಾಗಿ ಕೊಡವ ಎಜುಕೇಶನ್ ಸೊಸೈಟಿಯ ನಿರ್ದೇಶಕ ಪಟ್ಟಡ ಪೂವಣ್ಣ ಭಾಗವಹಿಸಿದ್ದರು. ವೇದಿಕೆಯಲ್ಲಿ ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಕೇಶ್ ಪೂವಯ್ಯ, ಪ್ರಾಂಶುಪಾಲ ಡಾ.ಎಂ. ಬಸವರಾಜು, ಕಾಲೇಜು ಆಡಳಿತಧಿಕಾರಿ ಜೀವನ್ ಚಿಣ್ಣಪ್ಪ ಹಾಗೂ ದೈಹಿಕ ಶಿಕ್ಷಕರಾದ ಹರೀಶ್ ಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಸುಂಟಿಕೊಪ್ಪ, ಫೆ.27 NEWS DESK : ಕ್ರೀಡಾಕೂಟ ಕೇವಲ ಆಟೋಟಗಳಿಗೆ ಸೀಮಿತವಾಗದೆ ಮನೋರಂಜನೆಯೊಂದಿಗೆ ನಮ್ಮ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ನಾಕೂರು-ಶಿರಂಗಾಲ ಗ್ರಾ.ಪಂ ಅಧ್ಯಕ್ಷ ಮಂದೋಡಿ ಜಗನ್ನಾಥ್ ಹೇಳಿದರು. ಕಾನ್ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ನಾಕೂರು ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ನ 24ನೇ ವರ್ಷದ ಕ್ರೀಡೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 24 ವರ್ಷಗಳಿಂದ ಪ್ರೇಂಡ್ಸ್ ಯೂತ್ ಕ್ಲಬ್ನ ಕಠಿಣಪರಿಶ್ರಮದೊಂದಿಗೆ ದಾನಿಗಳಿಂದ ಹಿತಾಶೈಗಳಿಂದ ಮತ್ತು ಪ್ರಯೋಜಕರಿಂದ ಕ್ರೀಡಾಕೂಟವನ್ನು ಗ್ರಾಮದ ಹಬ್ಬದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಂದಿನ ಬೆಳ್ಳಿಮಹೋತ್ಸವ ಆಚರಣೆಯಲ್ಲಿರುವ ಈ ಸಂಘವು ಮುಂದೆ 50 ಮತ್ತು ಶತಮನೋತ್ಸವ ಪೂರೈಸುವಂತಾಗಲಿ ಎಂದು ಜಗನ್ನಾಥ್ ಹಾರೈಸಿದರು. ಕ್ರೀಡಾಕೂಟ ಕೇವಲ ಸೋಲು ಗೆಲುವಿಗೆ ಸೀಮಿತವಾಗದೆ. ಅದರಲ್ಲಿ ಜೀವನದ ಪಾಠಗಳನ್ನು ಕಲಿಯಬಹುದಾಗಿದೆ. ನಾವು ಮತ್ತು ನಮ್ಮ ಮಕ್ಕಳು ಮೋಬೈಲ್ ದಾಸರಾಗಿದ್ದು, ದಿನದ 24 ಗಂಟೆಯು ಮಕ್ಕಳನ್ನು ಓದು ಓದು ಎಂದು ಹೇಳುತ್ತೇವೆಯೇ ಹೊರತು. ಶರೀರ ಮತ್ತು…
ನಾಪೋಕ್ಲು ಫೆ.27 NEWS DESK : ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುದುವು ಬೇಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಹೇಳಿದರು. ಕೊಳಕೇರಿ ಗ್ರಾಮದಿಂದ ಕೋಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 30ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ವಿರಾಜಪೇಟೆ ಕ್ಷೇತ್ರದಾದ್ಯಂತ ಅನುದಾನಕ್ಕೆ ಅನುಗುಣವಾಗಿ ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಅಭಿವೃದ್ಧಿ ಕಾರ್ಯವನ್ನು ಗ್ಯಾರೆಂಟಿಗೆ ಹೋಲಿಕೆ ಮಾಡುವುದು ಬೇಡ. ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಯಾರಾದರೂ ಅಡ್ಡಿಪಡಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತೀಕ್ಷ್ಮವಾಗಿ ಪ್ರತಿಕ್ರಿಯಿಸಿದರು. ಗುಣಮಟ್ಟ ಕಾಪಾಡಿಕೊಂಡು ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆ ದಾರರಿಗೆ ಸೂಚಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟ ಪರಿಶೀಲನೆ ಮಾಡಿ ಕಾಮಗಾರಿ ಕಳಪೆ ಆಗದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು. ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ…
ಮಡಿಕೇರಿ ಫೆ.27 NEWS DESK : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಫೆ.28 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.
ಮಡಿಕೇರಿ ಫೆ.26 NEWS DESK : ಹಿರಿಯ ಪರಿಸರ ಪ್ರೇಮಿ, ವನ್ಯಜೀವಿ ತಜ್ಞ, ನಿವೃತ್ತ ಅರಣ್ಯಾಧಿಕಾರಿ ಕೊಟ್ರಂಗಡ ಎಂ.ಚಿಣ್ಣಪ್ಪ(84) ಅವರು ಸೋಮವಾರ ನಿಧನರಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕಾಕೂರು ಗ್ರಾಮದ ನಿವಾಸಿಯಾಗಿದ್ದ ಚಿಣ್ಣಪ್ಪ, 30 ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ರೇಂಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ತಮ್ಮ ಸೇವಾ ಅವಧಿಯಲ್ಲಿ ರಾಜ್ಯದ ಹಲವು ಅರಣ್ಯ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಕೆ.ಎಂ.ಚಿಣ್ಣಪ್ಪ ಅವರು ವನ್ಯ ಸಂಪತ್ತು ಲೂಟಿ, ವನ್ಯ ಜೀವಿಗಳ ಕಳ್ಳ ಬೇಟೆ, ಮರ ಕಳ್ಳತನ ಮತ್ತಿತ್ತರ ಅಕ್ರಮಗಳಿಗೆ ಶಾಶ್ವತ ಕಡಿವಾಣ ಹಾಕಿದ್ದರು. ಕೆ.ಎಂ.ಚಿಣ್ಣಪ್ಪ ಅವರ ಅಮೋಘ ಸೇವೆಯನ್ನು ಪರಿಗಣಿಸಿ ಸರಕಾರ 1985ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿತ್ತು. 1990ರ ದಶಕದಲ್ಲಿ ನಾಗರಹೊಳೆ ಅಭಯಾರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದಾಗ ತಮ್ಮ ಜೀವದ ಹಂಗನ್ನೇ ತೊರೆದು ಬೆಂಕಿ ನಂದಿಸಲು ಹರ ಸಾಹಸ ಪಟ್ಟಿದ್ದರು. ಚಿಣ್ಣಪ್ಪ ಅವರು ಅರಣ್ಯ ಅಧಿಕಾರಿಯಾಗಿ ಸಲ್ಲಿಸಿದ ಸೇವೆಯ ಕುರಿತು ಲೇಖಕ ಗೋಪಾಲ್ ಎಂಬುವವರು ‘ಕಾಡಿನೊಳಗೊಂದು ಜೀವ’ ಎಂಬ ಪುಸ್ತಕವನ್ನು…
ಮಡಿಕೇರಿ ಫೆ.26 NEWS DESK : ಕೊಡಗಿನಲ್ಲಿ ಅರಣ್ಯ, ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆಗಾಗಿ ತಮ್ಮ ಬದುಕಿನ ಉದ್ದಕ್ಕೂ ನಿರಂತರವಾಗಿ ಶ್ರಮಿಸಿದ ಪರಿಸರವಾದಿ ಕೆ.ಎಂ.ಚಿಣ್ಣಪ್ಪನವರು ಅರಣ್ಯ ದಂಧೆ ಮಾಡುವವರಿಗೆ ದುಃಸ್ವಪ್ನವಾಗಿದ್ದರು. ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುವಾಗ ಬಹಳ ಅಡೆತಡೆಗಳು ಮತ್ತು ಸಂಕಷ್ಟಗಳ ನಡುವೆ ಅರಣ್ಯ ಮತ್ತು ವನ್ಯಜೀವಿಗಳ ಉಳಿವಿಗೆ ಶ್ರಮಿಸಿದದ್ದಾರೆ. ತಮ್ಮ ಸೇವಾ ಕಾರ್ಯ ತತ್ಪರತೆ ಹಾಗೂ ನೇರ ನಡೆ ನುಡಿಗೆ ಹೆಸರಾಗಿದ್ದ ಚಿಣ್ಣಪ್ಪನವರು ನಿವೃತ್ತಿ ನಂತರ ಸ್ವಯಂ ಸೇವಾ ಸಂಸ್ಥೆಯ ಮೂಲಕ ನಾಡಿನಾದ್ಯಂತ ಸಂಚರಿಸಿ ಶಾಲಾ – ಕಾಲೇಜು ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಉಪನ್ಯಾಸ, ಸಂವಾದ ಹಾಗೂ ಸ್ಲೈಡ್ ಪ್ರದರ್ಶನಗಳ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಜನಜಾಗೃತಿ ಮೂಡಿಸುವ ಮೂಲಕ ಜನಮಾನಸದಲ್ಲಿ ಅವರ ಹೆಸರು ಅಜರಾಮವಾಗಿ ಉಳಿದಿದೆ. ಹುಲಿ ಸಂರಕ್ಷಣೆ, ಪಶ್ಚಿಮ ಘಟ್ಟಗಳು ಹಾಗೂ ನಾಗರಹೊಳೆ ಮತ್ತು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಸಂರಕ್ಷಣೆಗೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುವ ಮೂಲಕ ಮುಂದಿನ ಪೀಳಿಗೆಯು ತಮ್ಮನ್ನು ಪರಿಸರಕ್ಕಾಗಿ ಸಂಕಲ್ಪ ತೊಡಬೇಕೆಂಬ…
ಮಡಿಕೇರಿ ಫೆ.26 NEWS DESK : ಮಂಜಿನ ನಗರಿ ಮಡಿಕೇರಿಯಲ್ಲಿ ಬಿಸಿಲಿನ ಕಾವು ಏರುತ್ತಲೇ ಇದೆ. ಇದರ ಪರಿಣಾಮ ನಗರದ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳತೊಡಗಿದೆ. ಇಂದು ಮಡಿಕೇರಿ ನಗರದ ಈದ್ಗಾ ಮೈದಾನದಲ್ಲಿ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಅಗ್ನಿಯನ್ನು ನಿಯಂತ್ರಿಸಿದರು. ಇತ್ತೀಚೆಗೆ ಜಿಲ್ಲೆಯ ವಿವಿಧೆಡೆ ಅರಣ್ಯ ಮತ್ತು ಕಾಫಿ ತೋಟಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಆತಂಕ ಮೂಡಿದೆ. ಸಾರ್ವಜನಿಕರು ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ದಳದೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.






