ಲೇಖಕ: admin

ಮಡಿಕೇರಿ ಮಾ.16 NEWS DESK  : ಕಾವೇರಿ ಜಲ ಉದ್ಭವಿಸುವ ಕೊಡಗು ಜಿಲ್ಲೆ ಕಾವೇರಿ ನದಿ ನೀರು ಬಳಸಬಾರದು ಎಂದು ಜಿಲ್ಲಾಡಳಿತ ಇತ್ತೀಚೆಗೆ ಹೊರಡಿಸಿರುವ ಸುತ್ತೋಲೆ ಬಹುಸಂಖ್ಯಾತ ಆಡಳಿತಶಾಹಿಗಳು ಕೊಡವರ ಹಕ್ಕುಗಳನ್ನು ಕಸಿದುಕೊಳ್ಳುವ ಯತ್ನವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು 1956 ರಲ್ಲಿ ಕೂರ್ಗ್ ರಾಜ್ಯ ಕರ್ನಾಟಕದೊಂದಿಗೆ ವಿಲೀನವಾದ ನಂತರ ಹಲವು ಕರಾಳ ಕಾಯ್ದೆ ಮೂಲಕ ನಿರಂತರವಾಗಿ ವಂಚನೆ ಮಾಡಿ ಕೊಡವರನ್ನು ಶೋಷಿಸಲಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಕಾವೇರಿ ನದಿಯ ನೀರನ್ನು ಬಳಸಬಾರದೆಂದು ಜಿಲ್ಲಾಡಳಿತ ಇತ್ತೀಚೆಗೆ ಹೊರಡಿಸಿರುವ ಆದೇಶ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರಕಾರ ಕೊಡಗನ್ನು ಕರ್ನಾಟಕಕ್ಕೆ ಕಪ್ಪ ಒಪ್ಪಿಸುವ ಸಾಮಂತನೆಂದು, ಮೈಸೂರಿಗರು ಕೊಡಗನ್ನು ಯುದ್ಧದಲ್ಲಿ ಗೆದ್ದ ಆಕ್ರಮಿತ ವಸಹಾತು ಎಂದು, ಇಲ್ಲಿನ ಸರ್ವ ಉತ್ಪಾದನೆಯ ಹಕ್ಕುದಾರಿಕೆ ಕೊಡವರದಲ್ಲವೆಂದು, ಕೊಡವರು ಕೇವಲ ಅವರ ಅಧೀನ ಪ್ರಜೆಗಳೆಂಬ ಭಾವನೆ ಇದ್ದಂತಿದೆ. ಇದು ದೌರ್ಜನ್ಯಕಾರಿ, ಜನವಿರೋಧಿ, ಆಕ್ರಮಣಕಾರಿ, ಪ್ರಜಾತಂತ್ರ ವಿರೋಧಿ ನಿಲುವಾಗಿದೆ ಎಂದು ಆರೋಪಿಸಿದ್ದಾರೆ.…

Read More

ಮಡಿಕೇರಿ ಮಾ.16 NEWS DESK : ಮಡಿಕೇರಿ ನಗರಸಭೆಗೆ ನಾಮ ನಿರ್ದೇಶಿತ ಸದಸ್ಯರಾಗಿ ಕಾಂಗ್ರೆಸ್ ನ ಸದಾ ಮುದ್ದಪ್ಪ, ಬಿ.ಎನ್.ಮುದ್ದುರಾಜ್, ಮೊಹಮ್ಮದ್ ಯಾಕುಬ್, ಜಿ.ಸಿ.ಜಗದೀಶ್ ಹಾಗೂ ಜುಲೇಕಾಬಿ ಆಯ್ಕೆಯಾಗಿದ್ದಾರೆ. ಇವರುಗಳನ್ನು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ನಾಮ ನಿರ್ದೇಶಿತ ಸದಸ್ಯರುಗಳನ್ನಾಗಿ ಆಯ್ಕೆ ಮಾಡಿದ ಕಾರಣಕ್ಕಾಗಿ ನೂತನ ಸದಸ್ಯರುಗಳು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್ ಉಪಸ್ಥಿತರಿದ್ದರು.

Read More

ಗೋಣಿಕೊಪ್ಪ ಮಾ.16 NEWS DESK :  ಚೇನಿವಾಡ-ಬೇಗೂರು ಗ್ರಾಮದ 850 ವರ್ಷಗಳ ಪುರಾತನ ಶ್ರೀ ಮಹಾವಿಷ್ಣು ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ ಮಾ.19 ರಿಂದ 25 ರವರೆಗೆ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಲ್ಲಂಡ ಪ್ರಕಾಶ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಮಾ.19 ರಿಂದ 25 ರವರೆಗೆ ಏಳು ದಿನಗಳ ಕಾಲ ದೇವಾಲಯದ ನವೀಕರಣ ನೂತನ ಬಿಂಬಗಳ ಪುನರ್ ಪ್ರತಿಷ್ಠಾಪನೆ ಕಾರ್ಯ ನಡೆಯಲಿದ್ದು, ತಂತ್ರಿಗಳಾದ ಬ್ರಹ್ಮಶ್ರೀ ಗೋಪಾಲಕೃಷ್ಣ ಆಡಿಗ ಪೆರ್ಲ ನೇತೃತ್ವದಲ್ಲಿ ಶಿಲ್ಪಿ ಜಗನಿವಾಸ್ ರಾವ್ ಪುತ್ತೂರು ಸಮ್ಮುಖದಲ್ಲಿ ಪ್ರಧಾನ ಅರ್ಚಕ ನಾಗೇಶ್ ಸಹಕಾರದೊಂದಿಗೆ ಪೂಜಾ ವಿಧಿ ವಿಧಾನಗಳು ಮತ್ತು ವಿಗ್ರಹ ಪ್ರಪ್ರತಿಷ್ಠಾಪನೆಗಳು ನೆರವೇರಲಿದೆ ಎಂದು ತಿಳಿಸಿದರು. ಮಾ.19 ರಂದು ಸಂಜೆ 4 ಗಂಟೆಗೆ ತಂತ್ರಿಗಳನ್ನು ಹಾಗೂ ಶಿಲ್ಪಿಗಳನ್ನು ಪೂರ್ಣ ಕುಂಭ ಸ್ವಾಗತದಿಂದ ಬರಮಾಡಿಕೊಳ್ಳಲಾಗುವುದು. ಮಾ.20 ರಂದು ಬೆಳಗ್ಗೆ 6.30ಕ್ಕೆ ಗಣಪತಿ ಹವನ, ಸಪ್ತಶುದ್ದಿ, ಪ್ರಸಾದ ಶುದ್ದಿ, ರಾಕ್ಷೋಘ್ನ ಹವನ, ವಾಸ್ತು ಹವನ, ಬಲಿ, ದಿಶಾಬಲಿ, ಮಹಾಪೂಜೆಗಳು…

Read More

ಗೋಣಿಕೊಪ್ಪ ಮಾ.16 : ಉಚಿತ ಮಾನಸಿಕ ಆರೋಗ್ಯ ದುಷ್ಟಟ ಅವಲಂಬನೆ ಮತ್ತು ಮರುವಿನ ಕಾಯಿಲೆ ಬಗ್ಗೆ ತಿಳುವಳಿಕಾ ಮಾಪನ ತಪಾಸಣ ಬೃಹತ್ ಶಿಬಿರ ಪೊನ್ನಂಪೇಟೆ ರಾಮಕೃಷ್ಣ ಆಶ್ರಮದಲ್ಲಿ ನಡೆಯಿತು. ಮೈಸೂರಿನ ಶ್ರೀ ರಾಮಕೃಷ್ಣ ಸೇವಾಶ್ರಮ ಆಸ್ಪತ್ರೆ ಮತ್ತು ವಿವೇಕ ಆಸ್ಪತ್ರೆ, ಪೊನ್ನಂಪೇಟೆ ರಾಮಕೃಷ್ಣ ಸೇವಾ ಆಶ್ರಮ ಆಸ್ಪತ್ರೆ ಮತ್ತು ರಾಮಕೃಷ್ಣ ಶಾರದಾಶ್ರಮ ಸಹಯೋಗದೊಂದಿಗೆ ಶಿಬಿರವನ್ನು ಆಯೋಜಿಸಲಾಯಿತು. ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಪರಹಿತನಂದಾ ಜೀ ಶಿಬಿರಕ್ಕೆ ಚಾಲನೆ ನೀಡಿದರು. ಮುಂದಿನ ತಿಂಗಳ ನಾಲ್ಕನೇ ಶನಿವಾರದಂದು ಶಿಬಿರವನ್ನು ಆಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು. ಸುಮಾರು 30ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿ ತಪಾಸಣೆಗೆ ಒಳಪಟ್ಟರು. ರಾಮಕೃಷ್ಣ ಸೇವಾಶ್ರಮದ ವೈದ್ಯಕೀಯ ಮುಖ್ಯಸ್ಥ ಡಾ.ಕಾರ್ಯಪ್ಪ, ವಿವೇಕ ಆಸ್ಪತ್ರೆಯ ಮನೋವೈದ್ಯ ಡಾ. ಸುರೇಶ್ ಭಾರ್ಗವ್ ಮನೋ ತಜ್ಞರದ ಅರವಿಂದ್ ಕುಮಾರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Read More

ಮಡಿಕೇರಿ ಮಾ.16 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಪೂಮಾಲೆ ವಾರಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಮಾ.16 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಸುಳ್ಯದ ಸದಾಶಿವ ಮಾವಜಿ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ, ಮಾ.16 NEWS DESK :  ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ದಕ್ಷಿಣ ಕೊಡಗಿನ‌ ಇರ್ಪೂವಿನಲ್ಲಿ ಜಲಪಾತ ಪ್ರವಾಸ ಹಾಗೂ ಕವಿಗೋಷ್ಠಿ ಏರ್ಪಡಿಸಲಾಗಿದೆ. ಮಾ.24ರಂದು ಕವಿಗೋಷ್ಠಿ ನಡೆಯಲಿದ್ದು, ಮೊದಲು ನೋಂದಾಯಿಸಿಕೊಳ್ಳುವ 50 ಮಂದಿಗೆ ಅವಕಾಶ ನೀಡಲಾಗುವದು. ಭಾಗವಹಿಸಲು ಇಚ್ಛಿಸುವವರು ಬಳಗದ ಅಧ್ಯಕ್ಷ ಲೋಕೇಶ್ ಸಾಗರ್(9980988123), ಕುಡೆಕಲ್ ಸಂತೋಷ್(9972538584), ನ.ಲ. ವಿಜಯ(8762983849) ಇವರುಗಳನ್ನು ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳುವಂತೆ ಬಳಗದ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಮಾ 16 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿಯ ಮುಕ್ತ ಕಥಾ ಸ್ಪರ್ಧೆಯಲ್ಲಿ ಜಿಲ್ಲೆಯ 23 ಕತೆಗಾರರು ಭಾಗವಹಿಸಿದ್ದು, ತೀರ್ಪುಗಾರರು ಮೌಲ್ಯಮಾಪನ ಮಾಡಿ ನೀಡಿದ ಫಲಿತಾಂಶದಂತೆ ಪ್ರಥಮ ಸ್ಥಾನವನ್ನು ಕುಶಾಲನಗರದ ಕುಕ್ಕನೂರು ರೇಷ್ಮಾ ಮನೋಜ್, ದ್ವಿತೀಯ ಸ್ಥಾನವನ್ನು ನಾಪೋಕ್ಲುವಿನ ಮಧುಸೂದನ್, ಬಿಳಿಗುಲಿ ಮತ್ತು ತೃತಿಯ ಸ್ಥಾನವನ್ನು ಮೂರ್ನಾಡಿನ ಕಿಗ್ಗಾಲು ಗಿರೀಶ್  ಪಡೆದು ಕೊಂಡಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ  ಸಂಯುಕ್ತ ಆಶ್ರಯದಲ್ಲಿ ಶಕ್ತಿ ಪತ್ರಿಕೆಯ ಸಂಸ್ಥಾಪಕರಾದ ದಿ. ಜಿ ಗೋಪಾಲಕೃಷ್ಣ ದತ್ತಿನಿಧಿ ಕಾರ್ಯಕ್ರಮ ಹಾಗೂ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ  ಮಾ.19 ರಂದು 10.30ಕ್ಕೆ ನಡಯುವ ದತ್ತಿ ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಸಾ…

Read More

ವಿರಾಜಪೇಟೆ ಮಾ.16 NEWS DESK :  ವರ್ಷಂ ಪ್ರತಿ ನಡೆಸಿಕೊಂಡು ಬರುತ್ತಿರುವ ಶ್ರೀ ಮುತ್ತಪ್ಪನ್ ದೇವರ ವಾರ್ಷಿಕ ತೆರೆ ಮಹೋತ್ಸವ ವವು ಶ್ರದ್ಧಾಭಕ್ತಿಯಿಂದ ನೆರವೇರಿತು. ವಿರಾಜಪೇಟೆ ನಗರದ ಹೊರ ವಲಯದ ಮಡಿಕೇರಿ ರಸ್ತೆಗೆ ಹೊಂದಿಕೊಂಡಿರು ಕುಕ್ಲೂರು ಗ್ರಾಮದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಮಾ.10 ರಂದು ಆರಂಭಗೊಂಡ ತೆರೆ ಮಹೋತ್ಸವವು ಬಸುರೀಮಾಲ ತೆರೆಯ ಮೂಲಕ  ತೆರೆ ಕಂಡಿತು. ಮುತ್ತಪ್ಪನ್ ವೆಳ್ಳಾಟಂ, ನಂತರ ಶ್ರೀ ಶಾಸ್ತಪ್ಪ ವೆಳ್ಳಾಟಂ, ಗುಳಿಗ ವೆಳ್ಳಾಟಂ, ಪ್ರಮುಖ ಆಕರ್ಷಣೆ ಯಾದ ಬಸುರಿಮಾಲ ವೆಳ್ಳಾಟಂ, ಕರಿಂಗುಟ್ಟಿ ಶಾಸ್ತಪ್ಪನ್ ವೆಳ್ಳಾಟಂ, ನಡೆಯಿತು. ನಂತರ ಗುಳಿಗನ ತೆರೆ, ಮುತ್ತಪ್ಪನ್ ಮತ್ತು ತಿರುವಪ್ಪನ್ ತೆರೆ, ಶಾಸ್ತಪ್ಪನ್ ತೆರೆ, ಕರಿಂಗುಟ್ಟಿ ಶಾಸ್ತಪ್ಪನ್ ತೆರೆ, ವೆಳ್ಳಾಟಂ  ಬಸುರಿಮಾಲ ತೆರೆ ನಡೆಯಿತು. ಇದೇ ಸಂದರ್ಭ ಜರುಗಿದ  ದೈವನರ್ತ ವಿಶೇಷವಾಗಿತ್ತು. ಎರಡು ದಿನಗಳು ನಡೆದ ವಾರ್ಷಿಕ ತೆರೆ ಮಹೋತ್ಸವ ಕಾರ್ಯಕ್ರಮದಲ್ಲಿ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಭಕ್ತರಿಗೆ ಅನ್ನದಾನ ನಡೆಯಿತು. ಮಹೋತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಕುಕ್ಲೂರು ಗ್ರಾಮಸ್ಥರು, ನಗರ…

Read More

ಬೆಂಗಳೂರು, ಮಾ.16 NEWS DESK :  ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ…

Read More