ಮಡಿಕೇರಿ ಫೆ.26 NEWS DESK: ಸತತ 4 ಸಾಮಾನ್ಯ ಸಭೆಗೆ ಗೈರು ಹಾಜರಾದ ಪೊನ್ನಂಪೇಟೆ ಗ್ರಾ.ಪಂ ಸದಸ್ಯೆ ಪಿ.ಆರ್.ಮಂಜುಳ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಪೊನ್ನಂಪೇಟೆ ಗ್ರಾ.ಪಂ ಯ 5ನೇ ವಾರ್ಡ್ ಕಾಟ್ರಕೊಲ್ಲಿಯ ಸದಸ್ಯರಾಗಿ ಇವರು ಆಯ್ಕೆಯಾಗಿದ್ದರು. ಪ್ರಕರಣ ಸಂಖ್ಯೆ 43ರ ಅಡಿಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರು ಮಂಜುಳಾ ಅವರನ್ನು ಅನರ್ಹಗೊಳಿಸಿ ಮುಂದಿನ 6 ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಆಯ್ಕೆಗೊಂಡಿದ್ದ ಪಿ.ಆರ್.ಮಂಜುಳ ಎರಡೂವರೆ ವರ್ಷಗಳ ಹಿಂದೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂದರ್ಭ ಬಿಜೆಪಿ ಬೆಂಬಲಿತರಿಗೆ ಅಡ್ಡ ಮತದಾನ ಮಾಡಿದ್ದರು ಎನ್ನುವ ಆರೋಪವೂ ಇದೆ. ಪೊನ್ನಂಪೇಟೆ ಗ್ರಾ.ಪಂ ಒಟ್ಟು 20 ಸದಸ್ಯ ಬಲವನ್ನು ಹೊಂದಿದ್ದು, ಮಂಜುಳ ಸೇರಿ ಬಿಜೆಪಿ ಬಲ 11 ಮತ್ತು ಕಾಂಗ್ರೆಸ್ ಬಲ 9 ಇದೆ.
ಲೇಖಕ: admin
ಮಡಿಕೇರಿ ಫೆ.26 NEWS DESK : ಹಾವು ಕಚ್ಚಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕುಶಾಲನಗರ ಸಮೀಪ ಕೊಪ್ಪದಲ್ಲಿ ನಡೆದಿದೆ. ಸೂರ್ಲಬ್ಬಿ ಗ್ರಾಮದ ಅಡ್ಡಂಡ ಪೊನ್ನಪ್ಪ ಹಾಗೂ ಪವಿತ್ರ ದಂಪತಿಯ ಪುತ್ರ ದೇವಯ್ಯ (9) ಮೃತ ದುರ್ದೈವಿ. ರಾತ್ರಿ ಮನೆಯಲ್ಲಿ ಮಲಗಿದ್ದಾಗ ಹಾವು ಕಚ್ಚಿದ್ದು, ತಕ್ಷಣ ಆಸ್ಪತ್ರೆಗೆ ಕರೆ ತರಲಾಯಿತ್ತಾದರೂ ಜೀವ ಉಳಿಯಲಿಲ್ಲ ಎಂದು ತಿಳಿದು ಬಂದಿದೆ. ದೇವಯ್ಯ ಕುಶಾಲನಗರದ ಖಾಸಗಿ ಶಾಲೆಯ 3ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.
ಮಡಿಕೇರಿ ಫೆ.26 NEWS DESK : ಟಿ.ಎಂ.ವಿಜಯಭಾಸ್ಕರ್ ಅವರು ಸಲ್ಲಿಸಿರುವ ಆಡಳಿತ ಸುಧಾರಣೆ ವರದಿಯನ್ನು ತಕ್ಷಣಕ್ಕೆ ಜಾರಿ ಮಾಡುವುದಿಲ್ಲ ಎಂದು ಅರಣ್ಯ ಸಚಿವರು ದೂರವಾಣಿ ಮೂಲಕ ನನಗೆ ತಿಳಿಸಿದ್ದಾರೆ. ಕಾನೂನು ಇಲಾಖೆಯ ಅಭಿಪ್ರಾಯ ಪಡೆದು ಸೂಕ್ತ ಕ್ರಮವನ್ನು ಜರುಗಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಆದ್ದರಿಂದ ಅರಣ್ಯ ಕಾಲೇಜು ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲವೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಪ್ರತಿಭಟನಾ ನಿರತರಿಗೆ ಅಭಯ ನೀಡಿದ್ದಾರೆ. ಕರ್ನಾಟಕ ಅರಣ್ಯ ವಿದ್ಯಾರ್ಥಿಗಳು ಮತ್ತು ಪದವೀದರರ ಅಸೋಸಿಯೇಷನ್ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಮನವಿ ಸ್ವೀಕರಿಸಿದರು. ಅರಣ್ಯ ಪದವೀದರ ವಿದ್ಯಾರ್ಥಿಗಳ ವೃತ್ತಿ ಜೀವನ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಅರಣ್ಯ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕಾನೂನಾತ್ಮಕವಾಗಿ ಸ್ವೀಕರಿಸಿ ಪುರಸ್ಕರಿಸಬೇಕೆಂದು ತಾವು ಮುಖ್ಯಮಂತ್ರಿಗಳು, ಅರಣ್ಯ ಮತ್ತು ಕೃಷಿ ಸಚಿವರಿಗೆ ಪತ್ರವನ್ನು ಬರೆದಿದ್ದೇನೆ ಎಂದು ತಿಳಿಸಿದರು. ನಾನು ಕೂಡ ಕಾನೂನಾತ್ಮಕವಾಗಿ ಸರ್ವೋಚ್ಚ ನ್ಯಾಯಾಲಯ ಮತ್ತು…
ಮಡಿಕೇರಿ ಫೆ.26 NEWS DESK : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾ.1 ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಬಸ್ ಕಲ್ಪಿಸಲು ಕೆಎಸ್ಆರ್ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಸ್ಗಳಲ್ಲಿ ಜನದಟ್ಟಣೆ ಹೆಚ್ಚು ಇದೆ ಎಂದು ಬಸ್ ನಿಲ್ದಾಣದಲ್ಲಿ ಬಸ್ಸು ನಿಲ್ಲಿಸದೆ ಹೋಗಬಾರದು, ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಬರಬೇಕು. ಈಗಾಗಲೇ ಸರ್ಕಾರ ಪರೀಕ್ಷೆಗೆ ತೆರಳುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ತೋರಿಸಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ಸ್ಪಷ್ಟ ನಿರ್ದೇಶನ ನೀಡಿದರು. ಪ್ರಶ್ನೆ ಪತ್ರಿಕೆಯನ್ನು ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಮಾರ್ಗದಲ್ಲಿ ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶ್ರುಶೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಕಲ್ಪಿಸುವುದು, ಮತ್ತಿತರ ಅಗತ್ಯ…
ಮಡಿಕೇರಿ ಫೆ.26 NEWS DESK : ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾದ ಘಟನೆ ಕುಶಾಲನಗರದ ಕಣಿವೆಯಲ್ಲಿ ನಡೆದಿದೆ. ಮೈಸೂರು ಮೂಲದ ವಿದ್ಯಾರ್ಥಿ ಹೃತ್ವಿಕ್ (16) ಮೃತ ದುರ್ದೈವಿ. ಪಿರಿಯಾಪಟ್ಟಣ ತಾಲ್ಲೂಕಿನ ಚೆನ್ನಕೇಶವಪುರದ ತನ್ನ ಸ್ನೇಹಿತನ ಮನೆಗೆ ಭಾನುವಾರ ಬಂದಿದ್ದ ಹೃತ್ವಿಕ್ ಬೆಟ್ಟದಪುರದ ಜಾತ್ರೆಯಲ್ಲಿ ಪಾಲ್ಗೊಂಡಿದ್ದ. ಬಳಿಕ ಸೋಮವಾರ ಸ್ನೇಹಿತರೊಂದಿಗೆ ಕೂಡಿಗೆ ಬಳಿಯ ಕಣಿವೆ ಗ್ರಾಮಕ್ಕೆ ಆಗಮಿಸಿದ್ದ ಎನ್ನಲಾಗಿದೆ. ಸ್ನೇಹಿತರ ಜೊತೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತದೇಹವನ್ನು ಮೇಲೆತ್ತುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಂಗ ಫೆ.26 NEWS DESK : ಜ್ಞಾನ, ವಿನಯ, ಸೇವೆ ಎಂಬ ವಾಕ್ಯದಡಿ ಕಾರ್ಯಚರಿಸುತ್ತಿರುವ ಸಮಸ್ತ ಕೇರಳ ಜಂಯ್ಯತುಲ್ ಉಲಮಾದ ಅಧೀನದಲ್ಲಿರುವ ಸಂಘಟನೆಯಾದ ಎಸ್ ಕೆ ಎಸ್ ಎಸ್ ಎಫ್ ಕೊಡಗು ಜಿಲ್ಲೆಯ ನೂತನ ಅಧ್ಯಕ್ಷರಾಗಿ ಯುವ ಭಾಷಣಗಾರರದ ಮುಹಮ್ಮದ್ ಸುಹೈಬ್ ಫೈಝಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಫೀಕ್ ಬಾಕವಿ ಕೊಡಗರಹಳ್ಳಿ, ಕೋಶಾಧಿಕಾರಿಯಾಗಿ ಬಾಸಿತ್ ಹಾಜಿ ಕೊಡ್ಲಿಪೇಟೆ, ಕಾರ್ಯಾಕಾರಿ ಮಂಡಳಿಯ ಕಾರ್ಯದರ್ಶಿಯಾಗಿ ಹುಸೈನ್ ಮಾಪಿಳ ತೋಡು ಅವರನ್ನು ಆಯ್ಕೆ ಮಾಡಲಾಯಿತು. ಸಿದ್ದಾಪುರದ ವರಕ್ಕಲ್ ಸ್ಮಾರಕ ಸೌಧದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ವರದಿ : ನೌಫಲ್ ಕಡಂಗ
ಮಡಿಕೇರಿ ಫೆ.26 NEWS DESK : ರಾಮಯಣ ಕಾಲಘಟ್ಟದಲ್ಲಿಯೇ ಆಭರಣಗಳಿಗೆ ಬಹಳ ಮಹತ್ವ ಇತ್ತು. ಇತಿಹಾಸದ ಧಾಮಿ೯ಕ ಘಟನಾವಳಿಗಳನ್ನು ಆಭರಣಗಳಲ್ಲಿ ಮೂಡಿಸುವ ಮೂಲಕ ಜನರ ಭಕ್ತಿಭಾವನೆಗೆ ಮತ್ತಷ್ಟು ಪ್ರೇರಣೆ ನೀಡಿದಂತಾಗುತ್ತದೆ ಎಂದು ಪತ್ರಕತ೯, ಅಯೋಧ್ಯೆ ಪುಸ್ತಕದ ಲೇಖಕ ಅನಿಲ್ ಹೆಚ್.ಟಿ. ಅಭಿಪ್ರಾಯಪಟ್ಟಿದ್ದಾರೆ. ಮಡಿಕೇರಿಯಲ್ಲಿ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಕೃಷ್ಣವೇಣಿ ಮುಳಿಯ ವಿನ್ಯಾಸದಲ್ಲಿ ತಯಾರಾದ ಅಯೋಧ್ಯೆ ಶ್ರೀರಾಮಲಲ್ಲನ ಪರಿವಾರ ಚಿತ್ರವಿರುವ ಕಂಠಹಾರವನ್ನು (ಚೋಕರ್ ) ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿಮಾ೯ಣ ಆಗಬೇಕೆಂಬ ಭಾವನೆ ಪ್ರತೀಯೋವ೯ ಭಾರತೀಯನ ಅನೇಕ ದಶಕಗಳ ಕನಸಾಗಿತ್ತು. ಎಲ್ಲರ ನಿರೀಕ್ಷೆಗೂ ಮೀರಿ ಬಾಲರಾಮನ ಮೂತಿ೯ಯು ಕನ್ನಡದ ಕಲ್ಲಿನಲ್ಲಿಯೇ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಂದ ಅಪೂವ೯ವಾಗಿ ರೂಪು ತಳೆದಿದೆ. ಎಲ್ಲರಿಗೂ ಅವರದ್ದೇ ಆದ ದೇವರು, ದೇವಮಂದಿರಗಳಿದ್ದರೂ ಎಲ್ಲರಿಗೂ ಸೇರಿದ ದೈವಮಂದಿರವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಕಂಗೊಳಿಸಿದೆ. ಈ ರಾಮಮಂದಿರ ಎಲ್ಲರ ಪಾಲಿಗೂ ಮನಸ್ಸಿನ ಮಂದಿರವಾಗಬೇಕು. ಪ್ರೀತಿಯ ಮಂದಿರವಾಗಬೇಕು. ಹಾಗೇ ಭಾರತದ ರಾಷ್ಟ್ರೀಯ ಮಂದಿರವಾಗಿ ಗಮನ ಸೆಳೆಯಬೇಕೆಂದು ಹಾರೈಸಿದರು. ರಾಮಾಯಣ…
ಬೆಂಗಳೂರು ಫೆ.26 NEWS DESK : ನಗರದ ಅರಮನೆ ಮೈದಾನದಲ್ಲಿ ನಡೆದ ‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು. ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ ಶೇ.8.40ಕ್ಕೆ ಏರಿಕೆಯಾಗಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದಿಂದ ಯುವ ನಿಧಿ ನೀಡಲಾಗುತ್ತಿದ್ದು, ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿ…
ನಿರ್ಜಲೀಕರಣ ಅಥವಾ ಡಿಹೈಡ್ರೇಶನ್ ಬಿಸಿಲ ಝಳ ಹೆಚ್ಚಿದಂತೆ ಕಾಣಿಸಿಕೊಳ್ಳುವ ಸಮಸ್ಯೆ. ಜ್ವರ, ವಾಂತಿ, ಅಜೀರ್ಣ, ಅತಿಯಾದ ಬಿಸಿಲು, ಹೆಚ್ಚಿನ ದೈಹಿಕ ಶ್ರಮ ಮುಂತಾದವು ದೇಹದಲ್ಲಿನ ನೀರಿನಂಶವನ್ನು ಕಡಿಮೆಗೊಳಿಸುತ್ತವೆ. ಈ ಸಂದರ್ಭದಲ್ಲಿ ವ್ಯಕ್ತಿ ಹೆಚ್ಚಿನ ನೀರನ್ನು ಸೇವಿಸಬೇಕಾಗುತ್ತದೆ. ನಿರ್ಜಲೀಕರಣ ಅತಿಯಾದರೆ ವ್ಯಕ್ತಿ ಪ್ರಾಣಾಪಾಯದಂಚಿಗೂ ಹೋಗಬೇಕಾಗಬಹುದು ಎನ್ನುತ್ತಾರೆ ವೈದ್ಯರು. ಆದ್ದರಿಂದ ಬೇಸಿಗೆಯಲ್ಲಿ ಹೆಚ್ಚು ನೀರು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. ನಿರ್ಜಲೀಕರಣದ ಲಕ್ಷಣಗಳನ್ನು ಪತ್ತೆ ಹಚ್ಚುವುದು ಸುಲಭ. ಅತಿಯಾಗಿ ಬಾಯಾರಿಕೆಯಾಗುವುದು, ಬಾಯಿ ಒಣಗಿದಂತಾಗುವುದು, ತಲೆಸುತ್ತುವುದು, ನಿರಾಸಕ್ತಿ, ನಿಶ್ಶಕ್ತಿ, ಆಲಸ್ಯ, ಉರಿಮೂತ್ರ ಮುಂತಾದ ಸಮಸ್ಯೆಗಳು ಆರಂಭವಾದರೆ ಅದು ನಿರ್ಜಲೀಕರಣದ ಲಕ್ಷಣವೇ. ನಿರ್ಜಲೀಕರಣ ಹೆಚ್ಚಿದಂತೆ ಜ್ವರ, ಅತಿಯಾದ ವಾಂತಿ ಬೇಧಿ, ನಿಶ್ಶಕ್ತಿ,ದೇಹದ ತೂಕದಲ್ಲಿ ಹಠಾತ್ ಕುಸಿತ ಕಾಣಿಸಿಕೊಳ್ಳುತ್ತದೆ. ಮೂತ್ರವಿಸರ್ಜನೆಯೂ ಆಗದಿರಬಹುದು. ಈ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಕಾಣುವುದು ಒಳಿತು. ನಿಮ್ಮ ದೇಹಕ್ಕೆ ಎಷ್ಟು ನೀರು ಅಗತ್ಯವಿದೆಯೋ ಅಷ್ಟನ್ನು ಸೇವಿಸಲೇಬೇಕು. ಅತಿಯಾಗಿ ದೈಹಿಕ ಶ್ರಮಪಡುವವರು ಹೆಚ್ಚು ಹೆಚ್ಚು ನೀರು ಸೇವಿಸಬೇಕು. ಬಿಸಿಲು ಹೆಚ್ಚಾದಂತೆ ದೇಹದಲ್ಲಿನ ನೀರಿನ ಪ್ರಮಾಣ…
ಮಡಿಕೇರಿ ಫೆ.26 NEWS DESK : ಪರಿಸರ ಪ್ರೇಮಿ, ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ (84) ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದರು. ನಾಗರಹೊಳೆ ನಿವಾಸಿಯಾಗಿರುವ ಚಿಣ್ಣಪ್ಪ ಅವರು ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದರು. ಅರಣ್ಯದ ರಕ್ಷಣೆಯೇ ತಮ್ಮ ಉಸಿರು ಎಂಬಂತೆ ಜೀವನವನ್ನು ಸಾಗಿಸಿದರು. ಇವರು ವನ್ಯಜೀವಿ ಮತ್ತು ಕಾಡಿನ ರಕ್ಷಣೆಗಾಗಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಾ ಜನರಲ್ಲಿ ಪರಿಸರ ಪ್ರೇಮ ಹುಟ್ಟಿಸಿದರು. ಮೃತರ ಅಂತ್ಯಕ್ರಿಯೆ ಮಂಗಳವಾರ (ಫೆ.27) ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಿಣ್ಣಪ್ಪ ಅವರ ನಿಧನಕ್ಕೆ ಪರಿಸರ ಪ್ರೇಮಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.






