ಲೇಖಕ: admin

ಮಡಿಕೇರಿ ಮಾ.15 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 5ನೇ ಸುತ್ತಿನಲ್ಲಿ ಏ.1 ರಿಂದ 30 ರವರೆಗೆ ಜಾನುವಾರುಗಳಿಗೆ ಕಾಲುಬಾಯಿ ರೋಗ ನಿಯಂತ್ರಣ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದು ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು. ದನ, ಎಮ್ಮೆ, ಆಡು, ಕುರಿ, ಹಂದಿ, ಸೇರಿದಂತೆ ಎಲ್ಲಾ ಸೀಳು ಗೊರಸಿನ ಪ್ರಾಣಿಗಳಲ್ಲಿ ಈ ರೋಗವು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ರೋಗವು ರೈತರಿಗೆ ಅಪಾರವಾದ ಆರ್ಥಿಕ ನಷ್ಟವನ್ನುಂಟು ಮಾಡುವ ರೋಗವಾಗಿದೆ ಎಂದರು. ಕಾಲುಬಾಯಿ ಜ್ವರವು ಒಂದು ವೈರಾಣು ರೋಗವಾಗಿದ್ದು ನಿರ್ದಿಷ್ಟ ಚಿಕಿತ್ಸೆ ಅಸಾಧ್ಯವಾಗಿದೆ. ಕಾಲುಬಾಯಿ ರೋಗದಿಂದ ಗುಣಮುಖವಾದರೂ ಸಹ ಜಾನುವಾರುಗಳು ಬಿಸಿಲಿಗೆ ಏದುಸಿರು ಬಿಡುತ್ತವೆ. ಹೈನು ರಾಸುಗಳಲ್ಲಿ ಹಾಲಿನ ಇಳುವರಿ ಇಳಿಮುಖವಾಗಲಿದ್ದು, ಗರ್ಭಪಾತ, ಗರ್ಭಕಟ್ಟುವಲ್ಲಿ ವಿಳಂಬ, ಎತ್ತು/…

Read More

ಮಡಿಕೇರಿ ಮಾ.15 NEWS DESK  : ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಬರ ನಿರ್ವಹಣೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಬೇಸಿಗೆ ಜೊತೆಗೆ ಲೋಕಸಭಾ ಚುನಾವಣೆ ಶೀಘ್ರ ಪ್ರಕಟವಾಗಲಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಜೊತೆಗೆ ಚುನಾವಣಾ ಕರ್ತವ್ಯವನ್ನು ಅಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಚುನಾವಣೆ ಪ್ರಕಟ ದಿನದಿಂದ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆ ದಿನಾಂಕ ಪ್ರಕಟವಾದ ದಿನದಂದೇ ಹೆದ್ದಾರಿ ಫಲಕದಲ್ಲಿನ ಪೋಸ್ಟರ್‍ಗಳನ್ನು ತೆರವುಗೊಳಿಸಬೇಕು, ಈ ಕಾರ್ಯವನ್ನು ಚುನಾವಣೆ ಪ್ರಕಟವಾದ ತಕ್ಷಣವೇ ನಿರ್ವಹಿಸುವಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ, ಕುಡಿಯುವ ನೀರು ಪೂರೈಕೆ ಜೊತೆಗೆ…

Read More

ಮಡಿಕೇರಿ ಮಾ.15 NEWS DESK  : ಲೋಕಸಭಾ ಚುನಾವಣೆಯ ಫಲಿತಾಂಶ ನಮ್ಮ ಪರವಾಗಿರಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮೈಸೂರು ರಾಜವಂಶಸ್ಥ ಯದುವೀರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ಪ್ರಮುಖರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾರ್ಯ ನಡೆದಿದೆ. ಎಲ್ಲರ ಮನೆಗಳಿಗೆ ಭೇಟಿ ನೀಡಿ ಬೆಂಬಲ ಕೋರಲಾಗುತ್ತಿದೆ. ರಾಜಕೀಯ ಅಧಿಕಾರದ ಮೂಲಕ ಸಾರ್ವಜನಿಕ ಸೇವೆ ಮಾಡಬೇಕೆಂಬ ಇಚ್ಛೆಯನ್ನೂ ಹೊಂದಿದ್ದೇನೆ. ಫಲಿತಾಂಶ ನಮ್ಮ ಕಡೆಗೆ ಬರುವ ವಿಶ್ವಾಸವಿದೆ ಎಂದರು. ಬಾಲ್ಯದಿಂದಲೂ ಕೊಡಗಿನೊಂದಿಗೆ ಭಾವನಾತ್ಮಕ ಸಂಬಂಧವಿದೆ. ಕೊಡಗಿನ ನಾಗರಹೊಳೆ, ಬ್ರಹ್ಮಗಿರಿ ಸೇರಿದಂತೆ ವಿವಿಧೆಡೆಗಳಿಗೆ ಭೇಟಿ ನೀಡಿದ್ದೇನೆ. ಇಲ್ಲಿನ ಪ್ರಕೃತಿಯ ಸೊಬಗನ್ನು ಅನುಭವಿಸಿದ್ದೇನೆ ಮತ್ತು ಕಾವೇರಿ ನಾಡಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿರುವುದಾಗಿ ತಿಳಿಸಿದರು. ಕೊಡಗಿನಲ್ಲಿ ಕಂಡು ಬರುತ್ತಿರುವ ವನ್ಯಜೀವಿ ಮತ್ತು ಮಾನವ ಸಂಘರ್ಷಕ್ಕೆ ಪರಿಹಾರವನ್ನು ಕಂಡುಕೊಳ್ಳುವುದು, ಕಾಫಿ ಬೆಳೆಗೆ ಪೂರಕ ಅಭಿವೃದ್ದಿ, ಸಾವಯವ ಕೃಷಿಗೆ ಒತ್ತು ನೀಡುವ ಮೂಲಕ ಇಲ್ಲಿನ ಪರಿಸರ ಸಂರಕ್ಷಣೆಯ ಜೊತೆಯಲ್ಲೇ ಅಭಿವೃದ್ಧಿಯನ್ನು ಕಾಣುವ ಅಗತ್ಯವಿದೆ…

Read More

ಮಡಿಕೇರಿ ಮಾ.15 NEWS DESK : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆಯ ವತಿಯಿಂದ ಮಾ.18ರ ವರೆಗೆ ಪುಣೆಯ ಸಂಗಮ್ಮ ವಿಶ್ವ ಕೇಂದ್ರದಲ್ಲಿ ನಡೆಯುತ್ತಿರುವ ಗೈಡ್ ಕ್ಯಾಪ್ಟನ್ಸ್ ಸಮಾವೇಶದಲ್ಲಿ ವಿರಾಜಪೇಟೆ ಅರಮೇರಿ ಎಸ್.ಎಂ.ಎಸ್ ವಿದ್ಯಾಸಂಸ್ಥೆಯ ಶಿಕ್ಷಕಿ ಮೈಥಿಲಿರಾವ್ (ಂಐಖಿ) ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ರಾಜ್ಯದಲ್ಲೇ ಉತ್ತಮ ತರಬೇತಿ ನಾಯಕಿ ಆಗಿದ್ದು. ಕೊಡಗು ಜಿಲ್ಲಾ ಸಂಸ್ಥೆಯಲ್ಲಿ ಗೈಡ್ ವಿಭಾಗದ ತರಬೇತಿ ನಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಹಂತದ ಹಲವು ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದವರಾಗಿದ್ದು, ಅನೇಕ ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ಮತ್ತು ರಾಜ್ಯ ಪುರಸ್ಕಾರವನ್ನು ಕೊಡಗಿಸುವಲ್ಲಿ ಮುಖ್ಯಪಾತ್ರ ವಹಿಸಿದ್ದಾರೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಮಾ.15 NEWS DESK  : ಬದಲಾವಣೆಯನ್ನು ತಂದುಕೊಟ್ಟ ಜನತೆಗೆ ನಾವು ಅಭಿವೃದ್ಧಿಯನ್ನು ತಂದುಕೊಡುತ್ತೇವೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಭಾಗಮಂಡಲ ಗ್ರಾ.ಪಂ ವ್ಯಾಪ್ತಿಯ ಚೇರಂಗಾಲ-ಮತ್ತಾರಿ-ಪರಿವಾರ ಮನೆ ನೂತನ ಸಂಪರ್ಕ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಗ್ರಾಮೀಣ ಜನರಿಗೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ನಾನು ಮತ್ತು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟಾರೆ ರೂ.250 ಕೋಟಿಗೂ ಹೆಚ್ಚು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಸಾಕಷ್ಟು ಕೆಲಸಗಳು ಪೂರ್ಣಗೊಂಡು ಜನರಿಗೆ ಒಳಕೆಯಾಗುತ್ತಿದೆ. ಉಳಿದಂತೆ ಮತ್ತಷ್ಟು ಕಾರ್ಯಗಳಿಗೆ ಭೂಮಿ ಪೂಜೆ ಮಾಡಿದ್ದೇವೆ ಎಂದರು. ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು, ಮುಂಗಾರು ಮಳೆ ಪ್ರಾರಂಭವಾಗುವ ಕಾರಣ ಅಭಿವೃದ್ಧಿ ಕೆಲಸಗಳು ಮುಂದೂಡಬಾರದು ಎಂಬ ಕಾರಣಕ್ಕೆ ಈಗಾಗಲೇ ಚಾಲನೆಯನ್ನು ನೀಡಲಾಗಿದೆ. ಎಲ್ಲರ ಸಹಕಾರ ಮತ್ತು ಬೆಂಬಲವನ್ನು ಮುಂದೆಯೂ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭ…

Read More

ಸೋಮವಾರಪೇಟೆ ಮಾ.15 NEWS DESK : ವಚನ ಸಾಹಿತ್ಯ ಜೀವನದ ಅವಿಭಾಜ್ಯ ಅಂಗವಾದಲ್ಲಿ ಪ್ರತಿಯೊಬ್ಬರ ಬದುಕು ಸುಂದರವಾಗಿ ರೂಪುಗೊಳ್ಳುತ್ತದೆ ಎಂದು ಸೋಮವಾರಪೇಟೆ ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಕೆ.ಎನ್.ಧನಲಕ್ಷ್ಮಿ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಯಜಮಾನ್ ಪುಟ್ಟಮಲ್ಲಪ್ಪ ಚೆನ್ಬವೀರಮ್ಮ ಸ್ಮರಣಾರ್ಥ ಕಾಫಿ ಬೆಳೆಗಾರ ಸೋಮವಾರಪೇಟೆಯ ಎ.ಪಿ.ಶಂಕರಪ್ಪ ಅವರು ಸ್ಥಾಪಿಸಿರುವ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ವಚನ ಸಾಹಿತ್ಯವನ್ನು ತಪ್ಪದೇ ಅಧ್ಯಯನ ಮಾಡುವ ಮೂಲಕ ಸಮಾಜದಲ್ಲಿ ಸತ್ಪ್ರಜೆಗಳಾಗಬೇಕೆಂದು ಪ್ರಾಂಶುಪಾಲರು ಕರೆ ನೀಡಿದರು. ದತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯ ಹಾನಗಲ್, ಮನುಷ್ಯನ ಬದುಕಿಗೆ ದಾರಿದೀಪವಾಗಿರುವ ವಚನ ಸಾಹಿತ್ಯವನ್ನು ಇಂದಿನ ಪೀಳಿಗೆಗೆ ಹೆಚ್ಚಾಗಿ ತಿಳಿಸುವ ಕೆಲಸವಾಗಬೇಕಿದೆ. ವೈಜ್ಞಾನಿಕವಾಗಿ ನಾವು ಎಷ್ಟೇ ಮುಂದುವರೆದರೂ ಕೂಡ, ನಿಸರ್ಗ ನಮಗೆ ನೀಡಿರುವ ಅಮೂಲ್ಯ ನೀರು, ಗಾಳಿ, ಮಣ್ಣು ಮೊದಲಾದ ಸಂಪತ್ತನ್ನು ನಾಶ ಮಾಡದ ಹಾಗೆ ಸಂರಕ್ಷಣೆ ಮಾಡಿದಲ್ಲಿ ಮಾತ್ರ ಮನುಷ್ಯ ನೆಮ್ಮದಿಯಿಂದ…

Read More

ಕುಶಾಲನಗರ, ಮಾ.15 NEWS DESK :  ಕೊಡಗು ಜಿ.ಪಂ ಹಾಗೂ ಕೂಡುಮಂಗಳೂರು ಗ್ರಾ.ಪಂ ವತಿಯಿಂದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ರೂ.5.20 ವೆಚ್ಚದಲ್ಲಿ ಕೈಗೊಂಡಿರುವ ಶೌಚಾಲಯ ನಿರ್ಮಾಣ ಕಾಮಗಾರಿಗೆ ಗ್ರಾ.ಪಂ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್  ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಭಾಸ್ಕರ್ ನಾಯಕ್, ಭಾರತ ಸರ್ಕಾರವು ಬಯಲು ಶೌಚವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಷ್ಟ್ರವ್ಯಾಪಿ ಸ್ವಚ್ಛ ಭಾರತ್ ಮಿಷನ್ ಅನ್ನು ಪ್ರಾರಂಭಿಸುವ ಮೂಲಕ ಶೌಚಾಲಯ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಿದೆ. ಮಕ್ಕಳು ಶೌಚಾಲಯವನ್ನು ಸಮರ್ಪಕವಾಗಿ ಬಳಕೆಯನ್ನು ಮಾಡಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಸರ್ಕಾರ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದರು. ಈ ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ಗುಣಮಟ್ಟದ ಕಲಿಕಾ ಪ್ರಗತಿ ಇದೆ. ಈ ಶಾಲೆಗೆ ಮುಂದಿನ ದಿನಗಳಲ್ಲಿ ಸುಸಜ್ಜಿತ ಉದ್ಯಾನವನ ನಿರ್ಮಾಣ ಮಾಡುವ ಮೂಲಕ ಶಾಲೆಯನ್ನು ಆಕರ್ಷಣೀಯವಾಗಿ ಮಾಡಲಾಗುವುದು…

Read More

ಮಡಿಕೇರಿ ಮಾ.14 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಮಾ.15 ರಂದು ಮಡಿಕೇರಿಗೆ ಭೇಟಿ ನೀಡಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ತಿಳಿಸಿದ್ದಾರೆ. ಸಮಾವೇಶ ಕಾವೇರಿ ಹಾಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

Read More

ಸೋಮವಾರಪೇಟೆ ಮಾ.14 NEWS DESK  : ಪಟ್ಟಣದಲ್ಲಿ ಕಸವಿಲೇವಾರಿ ಕಗ್ಗಂಟಾಗಿ ಪರಿಣಮಿಸಿದ್ದು, ಸಿಕ್ಕ ಸಿಕ್ಕವರು ಕಸತಂದು ಹಾಕುತ್ತಿರುವುದರಿಂದ ವಿರಕ್ತ ಮಠದ ಜಮೀನು ಕಸದಕೊಂಪೆಯಾಗಿದೆ ಆದರೆ ಮಠದ ವ್ಯವಸ್ಥಾಪಕರಾಗಲಿ, ಪಟ್ಟಣ ಪಂಚಾಯಿತಿಯಾಗಲಿ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಜನವಸತಿ ಪ್ರದೇಶ, ಪಕ್ಕದಲ್ಲಿಯೇ ಶಾಲೆ ಹಾಗೂ ದೇವಾಲಯ ಅದರ ಸುತ್ತಾಮುತ್ತಾ ಪಾಳುಬಿದ್ದ ಜಮೀನು ಕೆಲವು ಪುಂಡ ಪೋಕರಿಗಳಿಗೆ ಹಾಗೂ ಕಸಹಾಕುವವರಿಗೆ ಇನ್ನೇನು ಬೇಕು ಇದು ಪಟ್ಟಣದ ವಾರ್ಡ್ ನ0. 3ರ ಕರ್ಕಳ್ಳಿ ರಸ್ತೆಯ ಮಠದ ಶಾಲೆ ಹಾಗೂ ಕಟ್ಟೆ ಬಸವೇಶ್ವರ ದೇವಾಲಯದ ಸಮೀಪದ ಕಥೆ-ವ್ಯಥೆ. ಸಿಕ್ಕ ಸಿಕ್ಕವರೆಲ್ಲಾ ತಮ್ಮ ಮನೆಯ ಅನುಪಯುಕ್ತ ವಸ್ತುಗಳು, ದಿನನಿತ್ಯದ ತ್ಯಾಜ್ಯಗಳನ್ನು ತಂದು ಸುರಿಯುತ್ತಿರುವುದರಿಂದ ಅಕ್ಕಪಕ್ಕದ ಮನೆಯವರು, ಶಾಲೆಯ ಮಕ್ಕಳು ಮೂಗುಮುಚ್ಚಿ ಕುಳಿತುಕೊಳ್ಳಬೇಕಾಗಿದೆ. ಮಠದ ಜಮೀನಿನಲ್ಲಿ ಹಲವು ವರ್ಷಗಳಿಂದ ಶುಂಠಿ ಕೃಷಿ ಮಾಡಿಕೊಂಡಿರುವವರು ಪಂಚಾಯಿತಿಯ ಚರಂಡಿಯನ್ನು ಮುಚ್ಚಿ ರಸ್ತೆ ಮಾಡಿಕೊಂಡಿರುವುದರಿಂದ ವಾಹನಗಳಲ್ಲಿ ಕಸವನ್ನು ತಂದು ಸುರಿಯುತ್ತಿದ್ದಾರೆ. ಕಟ್ಟಡ ಒಡೆದ ಇಟ್ಟಿಗೆ, ಸಿಮೆಂಟ್ ವಸ್ತುಗಳು, ಸಮೀಪದ ಕೋಳಿಮಾಂಸ ಅಂಗಡಿಯವರು ಚೀಲ, ಚೀಲಗಳಲ್ಲಿ ರೆಕ್ಕೆ,…

Read More

ಮಡಿಕೇರಿ ಮಾ.14 NEWS DESK :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಸಿಸಿ ಟಿವಿ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಯು ಏ.15 ರಿಂದ ಆಯೋಜಿಸಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುತ್ತದೆ. ಅರ್ಜಿ ಸಲ್ಲಿಸಲು ಏ.10 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು…

Read More