ಲೇಖಕ: admin

ಕುಶಾಲನಗರ ಫೆ.25 NEWS DESK : ಜೀವನದಿ ಕಾವೇರಿಯನ್ನು ಕಲುಷಿತಗೊಳ್ಳದಂತೆ ಉಳಿಸಿ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಕುಶಾಲನಗರ ಬೈಚನಹಳ್ಳಿ ಶ್ರೀ ಆದಿಶಕ್ತಿ ಅಂತರ್ಗಟ್ಟೆ ಅಮ್ಮ ದೇವಾಲಯದ ಆಡಳಿತ ಮಂಡಳಿ ಪ್ರಮುಖರಾದ ಬಿ. ಎಸ್. ಪರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಬೈಚನಹಳ್ಳಿ ಶ್ರೀ ಆದಿಶಕ್ತಿ  ಅಂತರ್ಗಟ್ಟೆ ಅಮ್ಮ ದೇವಾಲಯ ಸೇವಾ ಸಮಿತಿ ಸಹಯೋಗದೊಂದಿಗೆ ಹುಣ್ಣಿಮೆ ಅಂಗವಾಗಿ ನಡೆದ 156 ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನದಿ ತಟದಲ್ಲಿ ಅವೈಜ್ಞಾನಿಕ ಬೆಳವಣಿಗೆಯೊಂದಿಗೆ ನದಿಗೆ ನೇರವಾಗಿ ಕಲುಷಿತ ತ್ಯಾಜ್ಯಗಳು ಸೇರಿದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕಾಗಿದೆ. ಈ ಸಂಬಂಧ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು. ಭರತ ಹುಣ್ಣಿಮೆ ಅಂಗವಾಗಿ ನದಿಗೆ ವಿಶೇಷ ಆರತಿ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಮಾತನಾಡಿ, ನದಿಯನ್ನು ಪೂಜಿಸುವ ಮೂಲಕ ಸಂರಕ್ಷಣೆ ಸಾಧ್ಯ, ನಾವು ನದಿಯನ್ನು ರಕ್ಷಿಸಿದರೆ ಅದು ನಮ್ಮನ್ನು ತಾಯಿಯಂತೆ ರಕ್ಷಿಸುತ್ತದೆ ಎಂದು…

Read More

ಮಡಿಕೇರಿ, ಫೆ.25 NEWS DESK :  ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ – ಇವುಗಳ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಭಾಂಗಣದಲ್ಲಿ ಭಾನುವಾರ ( ಫೆ.25 ರಂದು ) ಸುವರ್ಣ ಕರ್ನಾಟಕ- 50 ರ ಸಂಭ್ರಮದ ಅಂಗವಾಗಿ ಪ್ರಾಥಮಿಕ ಶಾಲಾ ಕನ್ನಡ ಮಾಧ್ಯಮ ಶಿಕ್ಷಕರಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.  ಇದೇ ವೇಳೆಯಲ್ಲಿ ಲೇಖಕರ ಮತ್ತು ಕಲಾವಿದರ ಬಳಗದ ವತಿಯಿಂದ ನಡೆದ ವಾರ್ಷಿಕ ಕಾರ್ಯಕ್ರಮದಲ್ಲಿ  2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಐಗೂರು ಸರ್ಕಾರಿ ಪ್ರೌಢಶಾಲೆಯ ಸಿ.ಬಿ.ಬೆಸಿಲ್ ಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.    ಸಮಾರಂಭದಲ್ಲಿ ಕಲೆ ಮತ್ತು ಸಾಹಿತ್ಯ ಬೆಳವಣಿಗೆ ಕುರಿತು ಮುಖ್ಯ ಭಾಷಣ ಮಾಡಿದ ಸಾಹಿತಿ ಡಾ ಜೆ.ಸೋಮಣ್ಣ, ಜಿಲ್ಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಸಾಹಿತಿ ಭಾರತೀಸುತ ಅವರು…

Read More

ಮಡಿಕೇರಿ ಫೆ.25 NEWS DESK : ಭೂಮಿಪೂಜೆ ಮಾಡಿದ ನಂತರ ವಿಳಂಬವಿಲ್ಲದೆ ಕಾಮಗಾರಿ ಆರಂಭಿಸಬೇಕು, ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ಎಂಜಿನಿಯರ್ ಗಳು ಗೌರವವನ್ನು ಉಳಿಸಿಕೊಳ್ಳಬೇಕು. ಕೆಲಸ ಮಾಡದ ಎಂಜಿನಿಯರ್ ಗಳು ನಮಗೆ ಬೇಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಭಾಗಮಂಡಲದ ಮೇಲು ಸೇತುವೆಯ ಕೆಳಗಿನ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ನಿಗಧಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಗೌರವ ಸಿಗುತ್ತದೆ, ಇಲ್ಲದಿದ್ದಲ್ಲಿ ಕೆಲಸ ಮಾಡದ ಎಂಜಿನಿಯರ್ ಗಳು ನಮಗೆ ಬೇಡ ಎನ್ನುವ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು. ಯಾವುದೇ ಕಾರಣಕ್ಕೂ ಕಾಮಗಾರಿ ನಿಲ್ಲಬಾರದು, ಇರುವ ಅನುದಾನದಲ್ಲಿ ಗುಣಮಟ್ಟದ ಕಾಮಗಾರಿಯನ್ನು ಮಾಡಬೇಕು. ಈಗಾಗಲೇ ಕಾಟಕೇರಿಯಲ್ಲಿ 1 ಮತ್ತು ಪೆರಾಜೆಯಲ್ಲಿ ಎರಡು ಕಾಮಗಾರಿ ಶೇ.90 ರಷ್ಟು ಪೂರ್ಣಗೊಂಡಿದೆ. ಕಾಮಗಾರಿ ಆರಂಭಿಸಲು ವಿಳಂಬ ಮಾಡಿದ ಎಂಜಿನಿಯರ್ ನ್ನು ಅಮಾನತು ಮಾಡಲು ಮುಂದಾಗಿದ್ದೆ. ಕೆಲಸ ಮಾಡದ ಎಂಜಿನಿಯರ್ ಗಳು ನಮಗೆ ಯಾಕೆ ಬೇಕು ಎಂದು ಪ್ರಶ್ನಿಸಿದರು.…

Read More

ಮಡಿಕೇರಿ ಫೆ.25 NEWS DESK : ಕೊಡಗಿನ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗಾಗಿ ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನಲ್ಲಿ ಮಾಜಿ ಸೈನಿಕರ ಸಮಾವೇಶವನ್ನು ಆಯೋಜಿಸಲಾಗಿತ್ತು. ಕರ್ನಾಟಕ ಮತ್ತು ಕೇರಳ ಉಪ ಪ್ರದೇಶದ ಕೇಂದ್ರ ಕಚೇರಿಯ ಆಶ್ರಯದಲ್ಲಿ ಎಂ.ಇ.ಜಿ ಸೆಂಟರ್‌ನಿಂದ ಆಯೋಜಿಸಲಾಗಿದ್ದ ಸಮಾವೇಶದಲ್ಲಿ 600ಕ್ಕೂ ಹೆಚ್ಚು ಮಾಜಿ ಸೈನಿಕರು ಹಾಗೂ ಅವಲಂಬಿತರು ಭಾಗವಹಿಸಿದ್ದರು. ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಮತ್ತು ಶೌರ್ಯದ ಶ್ರೀಮಂತ ಪರಂಪರೆ ಹೊಂದಿರುವ ಕೊಡಗು ಜಿಲ್ಲೆಯ ಯೋಧರಿಗೆ ಇದೇ ಸಂದರ್ಭ ವಿವಿಧ ಸೌಲಭ್ಯಗಳನ್ನು ನೀಡಲಾಯಿತು. ಸ್ಪರ್ಷ್ ಪಿಂಚಣಿ ವಿತರಣಾ ವ್ಯವಸ್ಥೆ ಮತ್ತು ಇಸಿಹೆಚ್‌ಎಸ್ ವ್ಯವಹಾರಗಳಿಗಾಗಿ ಹೊಸದಾಗಿ ನವೀಕರಿಸಲಾದ ಮೊಬೈಲ್ ಅಪ್ಲಿಕೇಶನ್, ಮಾಜಿ ಸೈನಿಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಂಟ್ರೋಲರ್ ಡಿಫೆನ್ಸ್ ಅಕೌಂಟ್(ಸಿಡಿಎ) ಪ್ರತಿನಿಧಿಗಳು, ಭಾರತೀಯ ಸೇನಾ ದಾಖಲೆಗಳ ಕಚೇರಿಗಳು ಮತ್ತು ಬ್ಯಾಂಕ್ ಸಹಾಯ ಕೇಂದ್ರಗಳು ಸ್ಥಾಪಿಸಿದ ಸ್ಟಾಲ್‌ಗಳ ಮೂಲಕ ತಮ್ಮ ಪಿಂಚಣಿ ಮತ್ತು ದಾಖಲಾತಿಗೆ ಮಾಜೀ ಸೈನಿಕರು ಸಿಬ್ಬಂದಿಗಳೊಂದಿಗೆ ನೇರವಾಗಿ ಸಂವಹನ ನಡೆಸಿದರು. ತಕ್ಷಣದ ಪರಿಹಾರಕ್ಕಾಗಿ ಕುಂದುಕೊರತೆಗಳನ್ನು…

Read More

ಮಡಿಕೇರಿ ಫೆ.25 NEWS DESK : ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯ ಬಳಿ ‘ಮಡಿಕಟ್ಟೆ’ ನಿರ್ಮಿಸುವ ಸಂಬಂಧ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ನಗರಸಭಾ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ತಿಳಿಸಿದ್ದಾರೆ. ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳರ ಅಭಿವೃದ್ಧಿ ಸಂಘ ಇವರ ಸಹಕಾರದಲ್ಲಿ ಭಾನುವಾರ ನಡೆದ ಮಡಿವಾಳರ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಡಿವಾಳ ಸಮಾಜದವರು ಕಾಯಕವೇ ಕೈಲಾಸ ಎಂಬಂತೆ ಕಾಯಕ ವೃತ್ತಿ ಮೂಲಕ ಸಮಾಜದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ ಎಂದು ತಿಳಿಸಿದರು. ಮಡಿವಾಳ ಸಮಾಜದವರು ಮಡಿವಾಳರ ಸಂದೇಶಗಳನ್ನು ತಿಳಿದುಕೊಂಡು, ಅವರ ಆದರ್ಶ, ತತ್ವಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು. ಮಹಿಳೆಯರು, ವೃತ್ತಿನಿರತ ಶ್ರಮಜೀವಿಗಳು, ಬಡವರು ಅಭಿವೃದ್ಧಿ ಹೊಂದಬೇಕು. ಎಲ್ಲರಿಗೂ ಸಮಬಾಳು-ಸಮಪಾಲು ಎಂಬ ಶರಣರ ಸಂದೇಶವನ್ನು ಸಮಾಜದಲ್ಲಿ ಹೇಳಿದವರಲ್ಲಿ ಮಡಿವಾಳ ಮಾಚಿದೇವ ಅವರು ಒಬ್ಬರು ಎಂದು…

Read More

ಮಡಿಕೇರಿ ಫೆ.25 NEWS DESK : ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಕೆಲವು ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು, ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭರವಸೆ ನೀಡಿದ್ದಾರೆ. ಪೊನ್ನಂಪೇಟೆ ಅರಣ್ಯ ಕಾಲೇಜಿಗೆ ಭೇಟಿ ನೀಡಿದ ಅವರು ಕಳೆದ 17 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಸಮಸ್ಯೆ ಹಾಗೂ ಬೇಡಿಕೆಗಳನ್ನು ಆಲಿಸಿದರು. ಬಳಿಕ ಮಾತನಾಡಿದ ಎ.ಎಸ್.ಪೊನ್ನಣ್ಣ, ಆಡಳಿತ ಮತ್ತು ಬದಲಾವಣೆ ಸಮಿತಿ ಅಧ್ಯಕ್ಷರಾಗಿದ್ದ ವಿಜಯ್ ಭಾಸ್ಕರ್ ಅವರು ಅರಣ್ಯ ಇಲಾಖೆ ನೇಮಕಾತಿಗೆ ಸಂಬAಧಿಸಿದAತೆ ಕೆಲವು ತಿದ್ದುಪಡಿಗಳನ್ನು ಸೂಚಿಸಿ ವರದಿ ನೀಡಿದ್ದಾರೆ. ಈ ವರದಿಯನ್ನು ಸರಕಾರ ಅಂಗೀಕರಿಸದAತೆ ಅರಣ್ಯ ಕಾಲೇಜು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇದರಿಂದ ಅವರ ಸೇವಾ ಸೌಲಭ್ಯ ಹಾಗೂ ಅವಕಾಶಗಳಿಂದ ವಂಚಿತರಾಗುತ್ತಾರೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯ ಶಾಸ್ತ್ರವನ್ನು ಅಧ್ಯಯನ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಬೇಡಿಕೆ ಮುಂದಿಟ್ಟಿದ್ದಾರೆ ಎಂದು…

Read More

ಮಡಿಕೇರಿ ಫೆ.24 NEWS DESK : ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿತ್ತು. ಈ ಸಮಸ್ಯೆಯನ್ನು  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಿದರು. ಸರ್ವೆ ನಂ 74 ರಲ್ಲಿ ಭಾಗಮಂಡಲ ಗ್ರಾಮ ಪಂಚಾಯತಿ ವತಿಯಿಂದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಿಸಿದ್ದು ಪಕ್ಕದ ಸರ್ವೆ ನಂ ಜಾಗ ದೇವರಕಾಡು ಅರಣ್ಯಕ್ಕೆ ಸೇರಿದ್ದಾಗಿರುತ್ತದೆ. ಸದರಿ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಅತಿಕ್ರಮಣ ಪ್ರವೇಶ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ನೀರಿನ ಪಂಪ್, ಮೋಟಾರ್ ಹಾಗೂ ಪೈಪ್’ಗಳನ್ನು ವಶಪಡಿಸಿಕೊಂಡಿತ್ತು. ಜೊತೆಗೆ ಅರಣ್ಯ ಇಲಾಖೆಯ ಅನುಮತಿ ಪಡೆಯದೆ ರಸ್ತೆ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ರಸ್ತೆ ಮಾಡಿದ್ದಾರೆ ಎಂದು ಕೇಸ್ ದಾಖಲಿಸಿದ್ದರು. ಇಂದು ಭಾಗಮಂಡಲದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲು  ಎ.ಎಸ್.ಪೊನ್ನಣ್ಣ ಅವರು ಆಗಮಿಸಿದಾಗ ಭಾಗಮಂಡಲ  ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು…

Read More

ಮಡಿಕೇರಿ ಫೆ.24 NEWS DESK : ಶ್ರೀ ರಾಮ ತನ್ನ ಜೀವನದುದ್ದಕ್ಕೂ ಪ್ರತಿಪಾದಿಸುತ್ತಾ ಅನುಸರಿಸುತ್ತಿದ್ದ ಆದಶ೯ ಮತ್ತು ಪ್ರೀತಿಯ ಅಂಶಗಳೇ ಅವನನ್ನು ಭಾರತ ಮಾತ್ರವಲ್ಲ, ವಿಶ್ವದಾದ್ಯಂತ ಅನೇಕ ದೇಶಗಳು ಆರಾಧಿಸಲು ಕಾರಣವಾಗಿದೆ. ಶ್ರೀರಾಮನನ್ನು ಮನಸ್ಸಿಗೆ ಹಚ್ಚಿಕೊಂಡಲ್ಲಿ ಆತನಲ್ಲಿದ್ದ ಮಾನವ ಗುಣದ ಅನೇಕ ಋಣಾತ್ಮಕತೆಗಳ ಬಗ್ಗೆ ಪ್ರಶ್ನೆ ಮೂಡಬಹುದು. ಆದರೆ ಶ್ರೀರಾಮನನ್ನು ಹೃದಯದಲ್ಲಿ ಇರಿಸಿಕೊಂಡಾಗ ಮಾತ್ರ ಆತನ ಉತ್ತಮ ಗುಣಗಳನ್ನು ಜೀವನದಲ್ಲಿ ಅನುಸರಿಸಲು ಸಾಧ್ಯವಾಗುತ್ತದೆ ಎಂದು ಖ್ಯಾತ ಸಾಹಿತಿ ಡಾ.ಗಜಾನನ ಶಮ೯ ಪ್ರತಿಪಾದಿಸಿದ್ದಾರೆ. ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಪತ್ರಕತ೯ ಅನಿಲ್ ಹೆಚ್.ಟಿ. ಬರೆದ ‘ಅಯೋಧ್ಯೆ ಶ್ರೀರಾಮನ ಮಂದಿರ, ಇದು ಪ್ರೀತಿಯ ಮಂದಿರ, ರಾಷ್ಟ್ರಮಂದಿರ’ ಪುಸ್ತಕವನ್ನು ಬಿಡುಗಡೆ ಮಾಡಿ ಗಜಾನನ ಶರ್ಮ ಮಾತನಾಡಿದರು. ಎಂತಹ ಕಷ್ಟವನ್ನಾದರೂ ನಗುಮೊಗದಿಂದಲೇ ಸ್ವೀಕರಿಸಬೇಕು ಎಂಬ ಗುಣವನ್ನು ಕಲಿಸಿಕೊಟ್ಟವನು ರಘುರಾಮ. ಜಗದೇಕ ಸುಂದರಿಯಾಗಿ ಬಂದ ಶೂರ್ಪನಖಿ ಹಾಗೂ ಲಂಕೆಯ ಸಿಂಹಾಸನದ ಸೆಳೆತಗಳಿಗೆ ಕೂಡ ಶ್ರೀರಾಮ ಒಳಗಾಗಲಿಲ್ಲ. ಅಶ್ವಮೇಧ ಯಾಗ ಮಾಡುವಾಗ ಎಲ್ಲರೂ ಮತ್ತೊಂದು ಮದುವೆಯಾಗು…

Read More

ಮಡಿಕೇರಿ ಫೆ.24 NEWS DESK :  ಕಮಿಷನ್ ದಂಧೆ ನಡೆಸುತ್ತಿದ್ದ ಬಿಜೆಪಿ ಸರ್ಕಾರವನ್ನು ಜನ ಮನೆಗೆ ಕಳುಹಿಸಿದ್ದಾರೆ. ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಪಾರದರ್ಶಕ ಆಡಳಿತ ನೀಡುತ್ತಿದ್ದು, ಭ್ರಷ್ಟ ವ್ಯವಸ್ಥೆಗೆ ಕಡಿವಾಣ ಹಾಕಿದ ಕಾರಣಕ್ಕಾಗಿ ನಮ್ಮ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಮಂದಿ ಪ್ರತಿಭಟನೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿರುಗೇಟು ನೀಡಿದ್ದಾರೆ. ಸುಮಾರು ರೂ.15 ಲಕ್ಷ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ನಿರ್ಮಾಣಗೊಂಡಿರುವ ಗೋಣಿಕೊಪ್ಪಲು- ಅರುವತ್ತೊಕ್ಕಲು ಸಂಪರ್ಕ ಸೇತುವೆಯನ್ನು ಉದ್ಘಾಟಿಸಿದ ನಂತರ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿದರು. ಹುದಿಕೇರಿ ಸಹಕಾರ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ನನ್ನ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ನಡೆಸಿರುವುದು ನನ್ನ ಗಮನಕ್ಕೆ ಬಂದಿದೆ. ಅವ್ಯವಹಾರದ ಬಗ್ಗೆ ಪ್ರಶ್ನಿಸುವುದು ತಪ್ಪೇ ಎಂದು ಪ್ರಶ್ನಿಸಿದ ಪೊನ್ನಣ್ಣ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದರೆ ಪ್ರತಿಭಟನೆ ನಡೆಸುತ್ತಾರೆ, ಪಾರದರ್ಶಕ ತನಿಖೆಯಿಂದ ಸತ್ಯಾಂಶ ಹೊರಬೀಳಲಿದೆ ಎಂದರು. ಬಿಜೆಪಿ ಪರ ಮತ ಚಲಾಯಿಸಿದ್ದವರು ಇಂದು ಕಾಂಗ್ರೆಸ್ ಸರ್ಕಾರದ ಪಾರದರ್ಶಕ…

Read More

ಮಡಿಕೇರಿ ಫೆ.24 NEWS DESK :  ನಗರದ ತನಲ್ ಆಶ್ರಮಕ್ಕೆ ರೋಟರಿ ಮಡಿಕೇರಿ ವುಡ್ಸ್ ನಿಂದ ಗಾಲಿ ಕುರ್ಚಿಯನ್ನು ಕೊಡುಗೆಯಾಗಿ ನೀಡಲಾಯಿತು. ತನಾಲ್ ಆಶ್ರಮದಲ್ಲಿ ನಡೆದ ಸರಳ ಸಮಾರಂಭದಲ್ಲಿ ರೋಟರಿ ಮಡಿಕೇರಿ ವುಡ್ಸ್‍ನ ಪ್ರಮುಖರು ಗಾಲಿ ಕುರ್ಚಿಯನ್ನು ಹಸ್ತಾಂತರಿಸಿದರು. ಈ ಸಂದರ್ಭ ವುಡ್ಸ್ ಅಧ್ಯಕ್ಷ ರೊ.ವಸಂತ್ ಕುಮಾರ್ ಮಾತನಾಡಿ, ರೋಟರಿಯ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾವಿಸಿದರು. ಶಿಕ್ಷಣ, ಆರೋಗ್ಯ, ಶುದ್ಧ ಕುಡಿಯುವ ನೀರಿನ ಯೋಜನೆ, ಪರಿಸರ ಸಂರಕ್ಷಣೆ ಮುಂತಾದ ಹಲವಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದು, ಮಾನವ ಸೇವೆಯೇ ಮಾಧವ ಸೇವೆ ಎಂಬಂತೆ ಆಶ್ರಮದಲ್ಲಿ ಮಾನವೀಯತೆ ಜೊತೆಗೆ ನೊಂದವರಿಗೆ ಆಸರೆಯಾಗಿ ನಿರಂತರ ಸೇವೆಯನ್ನು ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಸಲಹೆಗಾರ ರೊ. ಅನಂತ ಶಯನ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ನೊಂದವರಿಗೆ ಬೆಳಕಾಗಿ ಸೇವೆ ನೀಡುತ್ತಿರುವ ತನಾಲ್ ಆಶ್ರಮದ ಬೆಳವಣಿಗೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ರೋಟರಿ ಉಪ ರಾಜ್ಯಪಾಲ ರೊ.ದೇವಣಿರ ತಿಲಕ್ ಮಾತನಾಡಿ, “ನೊಂದವರ ಬಾಳಿಗೆ ಆಸರೆಯಾಗುವದರ ಮೂಲಕ, ಅವರ ಜೀವನದಲ್ಲಿ ಭರವಸೆಯನ್ನು ಮೂಡಿಸುವ…

Read More