ಮಡಿಕೇರಿ ಫೆ.24 NEWS DESK : ನಾಪೋಕ್ಲುವಿಗೆ ಸಂಪರ್ಕ ಕಲ್ಪಿಸುವ ಕೋಕೇರಿ-ಕೊಳಕೇರಿ ರಸ್ತೆ ತೀರಾ ಹದಗೆಟ್ಟಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ. ತಕ್ಷಣ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿರುವ ಗ್ರಾಮಸ್ಥರು, ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಕೇರಿ ಗ್ರಾಮಸ್ಥ ಗಿರೀಶ್ ಪೂಣಚ್ಚ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಡೆದಾಡುವುದೇ ಕಷ್ಟವಾಗಿದೆ, ವಾಹನಗಳ ಸಂಚಾರ ಅಸಾಧ್ಯವಾಗಿದೆ. ಆಡಳಿತ ವ್ಯವಸ್ಥೆಯ ಗಮನಕ್ಕೆ ತಂದಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಆದ್ದರಿಂದ ಮಾ.11 ರಂದು ಕೊಳಕೇರಿ-ಕಕ್ಕಬ್ಬೆವರೆಗೆ `ರಸ್ತೆ ತಡೆ’ ಪ್ರತಿಭಟನೆ ನಡೆಸಲಾಗುವುದು ಎಂದರು. ನಾಪೋಕ್ಲು ಸಂಪರ್ಕ ರಸ್ತೆಯಾಗಿರುವ ಕೋಕೇರಿ-ಕೊಳಕೇರಿ ರಸ್ತೆಯು ಸುಮಾರು 5 ಕಿ.ಮೀ ಸಂಪೂರ್ಣ ಹದಗೆಟ್ಟಿದ್ದು, ಕಳೆದ 20 ವರ್ಷಗಳಿಂದ ಅಭಿವೃದ್ಧಿಯನ್ನೇ ಕಂಡಿಲ್ಲ. ಈ ರಸ್ತೆ ಕೋಕೇರಿ, ಕೊಳಕೇರಿ, ಬಾವಲಿ, ಕಿರುಂದಾಡು, ನರಿಯಂದಡ ಗ್ರಾಮ ಮತ್ತು ವಿರಾಜಪೇಟೆ ಸಂಪರ್ಕ ರಸ್ತೆಯಾಗಿದೆ. ಪ್ರತಿನಿತ್ಯ ಶಾಲಾ ವಾಹನಗಳು ಹಾಗೂ ಖಾಸಗಿ ವಾಹನಗಳು ಸಂಚರಿಸುತ್ತಿದ್ದು, ಪಾದಾಚಾರಿಗಳು ಕೂಡ ನಡೆದಾಡಲು ಸಾಧ್ಯವಾಗದ…
ಲೇಖಕ: admin
ಗೋಣಿಕೊಪ್ಪ ಫೆ.24 NEWS DESK : ಪೊನ್ನಂಪೇಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ 8ನೇ ವಾರ್ಷಿಕ ಮಹಾಸಭೆಯು ಶಾಲೆಯ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಮೂಕಳೇರ ಕುಶಾಲಪ್ಪ, ಶಾಲೆಯ ಭಾವನಾತ್ಮಕ ಸಂಬಂಧದ ಬೇಸಿಗೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಚಿಂತನೆಯನ್ನು ಹಳೆಯ ವಿದ್ಯಾರ್ಥಿಗಳ ಸಂಘ ಹೊಂದಿದೆ ಎಂದರು. ಶತಮಾನೋತ್ಸವದ ಹಿನ್ನೆಲೆ ಶಾಲೆಗೆ ಪೂರಕವಾದ ತೆರೆದ ಸಭಾಂಗಣವನ್ನು ನಿರ್ವಹಿಸಿಕೊಡಲಾಗಿದೆ. ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು. ಹಳೆಯ ವಿದ್ಯಾರ್ಥಿಗಳ ಸಂಘ ಸುಮಾರು 300ಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದ್ದು, ಸಂಪೂರ್ಣವಾಗಿ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ ಎಂದು ಮೂಕಳೇರ ಕುಶಾಲಪ್ಪ ಹೇಳಿದರು. ಈ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಸದಸ್ಯತ್ವವನ್ನು ಪಡೆಯುವ ಮೂಲಕ ಶಾಲಾ ಅಭಿವೃದ್ಧಿಗೆ, ಶಿಕ್ಷಣದ ವ್ಯವಸ್ಥೆಗೆ ಮಹತ್ವದ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭ ಕೋಳೆರ ಗೋಕುಲ್ ಸ್ಥಾಪಿಸಿದ ದತ್ತಿ ನಿಧಿಯನ್ನು ಹೆಚ್.ಕೆ.ಪ್ರಭು ಹಾಗೂ ಮಂಜುಳಾ ದಂಪತಿಗಳ ಪುತ್ರಿ…
ಮಡಿಕೇರಿ ಫೆ.24 NEWS DESK : ಒಂದು ತಿಂಗಳ ಕಾಲ ನಡೆದ ಸಂವಿಧಾನ ಜಾಗೃತಿ ಜಾಥಾ ಯಶಸ್ವಿ ಅನುಷ್ಠಾನಕ್ಕಾಗಿ ಕೊಡಗು ಜಿಲ್ಲೆಗೆ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ಇಂದು ನಡೆದ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೊಡಗು ಜಿ.ಪಂ.ಸಿಇಒ ವರ್ಣಿತ್ ನೇಗಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್ ಪ್ರಶಸ್ತಿ ಪತ್ರ ಸ್ವೀಕರಿಸಿದರು.
ಹುಣುಸೂರು ಫೆ.24 NEWS DESK : ಇತ್ತೀಚೆಗೆ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಹುಣಸೂರು ತಾಲ್ಲೂಕಿನ ರತ್ನಪುರಿ ಬಳಿಯ ದಾಸನಪುರದ ನಿವಾಸಿ ವಿದ್ಯಾರ್ಥಿ ಮುತ್ತುರಾಜ್ ಅವರ ಮನೆಗೆ ಮೈಸೂರು- ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದರು. ಮುತ್ತುರಾಜ್ ಅವರ ತಂದೆ ರವಿಕುಮಾರ್ ಹಾಗೂ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ಸಾಂತ್ವನ ಹೇಳಿದರು. ಸೂಕ್ತ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು. ಕಾಲೇಜು ವಿದ್ಯಾರ್ಥಿ ಮುತ್ತುರಾಜ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿತ್ತು. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ.
ಮಡಿಕೇರಿ ಫೆ.24 NEWS DESK : ಗೋಣಿಕೊಪ್ಪಲು ಬೈಪಾಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲಾದ ಕಿರು ಸೇತುವೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಸ್ಥಳೀಯ ನಾಯಕರು, ಗ್ರಾಮಸ್ಥರು ಮತ್ತು ಸಾರ್ವಜನಿಕರು ಹಾಜರಿದ್ದರು.
ಮಡಿಕೇರಿ ಫೆ.24 NEWS DESK : ತಿತಿಮತಿ, ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ನಂತರ ಸಾಕಾನೆಯ ಮಾವುತರ ಯೋಗಕ್ಷೇಮವನ್ನು ವಿಚಾರಿಸಿ, ಪ್ರವಾಸಿ ತಾಣವಾಗಿ ಮಾರ್ಪಾಡಿಸುತ್ತಿರುವ ಆನೆ ಶಿಬಿರದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ಫೆ.24 NEWS DESK : ಮೇಕೇರಿಯ ಶ್ರೀ ಗೌರಿಶಂಕರ ದೇವಾಲಯದಲ್ಲಿ ಫೆ.29 ರಿಂದ ಮಾ.9ರ ವರೆಗೆ ಮಹಾಶಿವರಾತ್ರಿ ಮಹೋತ್ಸವವು ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ನಡೆಯಲಿದೆ. ಫೆ.29 ರಂದು ಬೆಳಿಗ್ಗೆ 9.30 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ಸಂಜೆ 6.30 ಗಂಟೆಗೆ ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯ ಮಹಿಳಾ ಭಜನಾ ತಂಡ ಹಾಗೂ ಮೇಕೇರಿ ಶ್ರೀ ಗೌರಿಶಂಕರ ದೇವಾಲಯದ ಭಜನಾ ಸಮಿತಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಾ.1 ರಂದು ಸಂಜೆ 6.30 ಗಂಟೆಗೆ ಹಾಕತ್ತೂರು-ತೊಂಬತ್ತುಮನೆ ಶ್ರೀ ವಿನಾಯಕ ದೇವಾಲಯ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ಮಾ.2 ರಂದು ಸಂಜೆ 6.30 ಗಂಟೆಗೆ ಭಾಗಮಂಡಲ ಸಿದ್ಧಿವಿನಾಯಕ ಭಜನಾ ಮಂಡಳಿಯಿಂದ ಕಾರ್ಯಕ್ರಮ ನಡೆಯಲಿದೆ. ಮಾ.3 ರಂದು ಸಂಜೆ 6.30ಕ್ಕೆ ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ತಂಡ, ಮಾ.4 ರಂದು ಸಂಜೆ 6.30ಕ್ಕೆ ಮಡಿಕೇರಿ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ಮಹಿಳಾ ಭಜನಾ ಸಮಿತಿ, ಮಾ.5 ರಂದು ಸಂಜೆ 6.30ಕ್ಕೆ ಮಡಿಕೇರಿ…
ಮಡಿಕೇರಿ ಫೆ.24 NEWS DESK : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ ಮತ್ತು ಪ.ಪಂ ನೌಕರರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಿತು. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಬಿ.ಜಯಶಂಕರ ಶೆಟ್ಟಿ ಉದ್ಘಾಟಿಸಿದರು. ನಂತರ ಗಣ್ಯರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ನಂದಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಎಂ.ಇ.ಎಸ್.ಕಾಲೇಜಿನ ಉಪನ್ಯಾಸಕ ಡಾ.ರವಿ ಅಪ್ಪಗೆರೆ, ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ್, ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗ ಕಾರ್ಮಿಕ ಕಲ್ಯಾಣಧಿಕಾರಿ ಕೆ.ಕೆ.ಸೋಮಶೇಖರ್, ಮಡಿಕೇರಿ ಘಟಕ ವ್ಯವಸ್ಥಾಪಕ ಹೆಚ್.ಇ.ವೀರಭದ್ರಸ್ವಾಮಿ, ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ.ಟಿ.ಸುರೇಶ್ ಕಂಠಿ, ಪುತ್ತೂರು ವಿಭಾಗ ತನಿಖೆದಳದ ಸಾರಿಗೆ ಸಂಚಾರಿ ನಿರ್ದೇಶಕ ಜಯಣ್ಣ, ಕೆ.ರಾ.ರ.ಸಾ.ನಿ ಪಾ ಜಾ/ಪ ಪಂ ವರ್ಗಗಳ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶ್ರೀನಿವಾಸ್, ಪುತ್ತೂರು ವಿಭಾಗ ಪಾ.ಜಾ/ಪ.ಪಂ ವರ್ಗಗಳ…
ಮಡಿಕೇರಿ ಫೆ.24 NEWS DESK : ಕೊಡಗು ಗೌಡ ಯುವ ವೇದಿಕೆ ವತಿಯಿಂದ ಆಯೋಜಿಸಲಾಗಿರುವ ಎರಡನೇ ವರ್ಷದ 10 ಕುಟುಂಬ 18 ಗೋತ್ರದ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಕ್ರಿಕೆಟ್ ಕ್ರೀಡಾಕೂಟದ ಬಿಡ್ಡಿಂಗ್ ಪ್ರಕ್ರಿಯೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಇಂತಹ ಕ್ರೀಡಾಕೂಟಗಳ ಮೂಲಕ ಜನಾಂಗದ ಆಸಕ್ತ ಕಿರಿಯರಿಗೆ ವೃತ್ತಿಪರ ವಾಗಿ ಬದುಕು ಕಟ್ಟಿಕೊಳ್ಳಲು ಸಹಾಯವಾಗುತ್ತದೆ ಎಂದರು. ಪಾಣತ್ತಲೆ ಜಗದೀಶ್ ಮಂದಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌಡ ಸಮಾಜದ ಖಜಾಂಜಿ ಕುಯ್ಯುಮುಡಿ ವಸಂತ್, ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್, ವೇದಿಕೆಯ ಕಾನೂನು ಸಮಿತಿ ಅಧ್ಯಕ್ಷ ಕೊಟ್ಟಕೇರಿಯನ ದಯಾನಂದ್, ಬಿಡ್ಡಿಂಗ್ ನಿರ್ವಾಹಕರಾಗಿ ಕಟ್ಟೆಮನೆ ಸೋನಾಜಿತ್ ಹಾಜರಿದ್ದರು. ಪುದಿಯನೆರವನ ರಿಶೀತ್ ಸ್ವಾಗತಿಸಿ, ಕೆದಂಬಾಡಿ ಕಾಂಚನ ಗೌಡ ಪ್ರಾರ್ಥಿಸಿ, ಪರಿಚನ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ದೇರಳ ನವೀನ್ ವಂದಿಸಿದರು. 10 ಫ್ರಾಂಚೈಸಿಗಳಿಗೆ 180 ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆಯಿತು. ಪೊನ್ನಚ್ಚನ…
ಬೆಂಗಳೂರು, ಫೆ.24 NEWS DESK : ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ, ಸಂವಿಧಾನದ ವಿರುದ್ಧದ ಅಪಪ್ರಚಾರವನ್ನು ಯಾರೂ ಸಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು. 1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ ಈ ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ ಎಂದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ :: ದೇಶದಲ್ಲಿ…






