ನಾಪೋಕ್ಲು ಮಾ.14 NEWS DESK : ಹೊದ್ದೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಭಗವತಿ ದೇವಾಲಯದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆಯು ಶ್ರದ್ಧಾಭಕ್ತಿಯಿಂದ ನೆರವೇರಿತು. ಅಧಿಕ ಸಂಖ್ಯೆಯ ಗ್ರಾಮಸ್ಥರು ಪ್ರತಿಷ್ಠಾಪನೆ ಕಾರ್ಯಕ್ಕೆ ಸಾಕ್ಷಿಯಾದರು. ಬೆಳಗ್ಗೆ ಮೇಷಲಗ್ನ, ಶುಕ್ಲ ಪಕ್ಷ, ಚತುರ್ಥ ತಿಥಿ ಸುಮುಹೂರ್ತದಲ್ಲಿ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ ,ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ , ಸಂಜೆ ಆದಿವಾಸ ಹೋಮ , ದೀಪಾರಾಧನೆ, ಮಹಾಬಲಿ ಪೀಠ, ಆದಿವಾಸ, ತ್ರಿಕಾಲ ಪೂಜೆ, ಕಲಶಾದಿ ವಾಸ ರಾತ್ರಿ ಪೂಜಾ ಮತ್ತಿತರ ಪೂಜಾ ಕೈಂಕರ್ಯಗಳು ಜರುಗಿತು. ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ದೇವಾಲಯ ಗ್ರಮದ ದೈವಿಕ ತಾಣವಾಗಿ ರೂಪುಗೊಂಡಿತು. ಮರಕಡ ಶ್ರೀ ಗುರಪರಾಶಕ್ತಿ ಮಠದ ಪರಮಪೂಜ್ಯ ನರೇಂದ್ರನಾಥ ಯೋಗೇಶ್ವರ ಮಹಾಸ್ವಾಮಿಯವರ ಪೂರ್ಣ ಅನುಗ್ರಹದೊಂದಿಗೆ ನಿತಿನ್ ನರೇಂದ್ರನಾಥ ಯೋಗೇಶ್ವರ ಸ್ವಾಮಿ ಮತ್ತು ಮಾತೆ ಶಕುಂತಲಾ ಅಮ್ಮ ನವರ ದಿವ್ಯ ನೇತೃತ್ವದಲ್ಲಿ ನೂತನವಾಗಿ ಜೀರ್ಣೋದ್ಧಾರ ಗೊಂಡಿದೆ. ಬ್ರಹ್ಮ ಶ್ರೀ ಕೆ.ಯು.ಪದ್ಮನಾಭ ತಂತ್ರಿಗಳು ಮತ್ತು…
ಲೇಖಕ: admin
ಮಡಿಕೇರಿ ಮಾ.14 NEWS DESK : ಇತ್ತೀಚೆಗೆ ಮಡಿಕೇರಿ ಸಮೀಪ ತಾಳತ್ತಮನೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬೈಕ್ ಚಾಲಕ ಕಾಟಕೇರಿಯ ಚರಣ್ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗಾಗಿ ಲಕ್ಷಾಂತರ ರೂ.ಗಳ ಅಗತ್ಯವಿದ್ದು, ಬಡ ಕುಟುಂಬ ಇದನ್ನು ಭರಿಸಲು ಸಾಧ್ಯವಾಗದ ಅಸಹಾಯಕ ಸ್ಥಿತಿಯಲ್ಲಿದೆ. ಮಡಿಕೇರಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಚರಣ್ ಈಗ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದಾರೆ. ದಾನಿಗಳು ಆರ್ಥಿಕ ಸಹಕಾರವನ್ನು ನೀಡುವಂತೆ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ.
ಮಡಿಕೇರಿ ಮಾ.14 NEWS DESK : ಪೊನ್ನಂಪೇಟೆಯ ತಾಲ್ಲೂಕು ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆಯ ಶಾಸಕ ಎ.ಎಸ್.ಪೊನ್ನಣ್ಣ 94 ಸಿ ಫಲಾನುಭಾವಿಗಳಿಗೆ ಹಕ್ಕು ಪತ್ರ ಮತ್ತು ಸಾಗುವಳಿ ಚೀಟಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಕ್ಕುಪತ್ರ ವಿತರಿಸಿದರು.
ಬೆಂಗಳೂರು ಮಾ.14 NEWS DESK : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಯದುವೀರ್ ಅವರನ್ನು ಸ್ವಾಗತಿಸಿದರು. ಬಳಿಕ ಯದುವೀರ್ ಒಡೆಯರ್ ಅವರು ಭಾರತಮಾತೆಯ ಭಾವಚಿತ್ರಕ್ಕೆ ಹಾಗೂ ಜಗನ್ನಾಥ್ ರಾವ್ ಜೋಶಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್, ಪ್ರೀತಂ ಗೌಡ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಮಾಜಿ ಸಚಿವರಾದ ಸಿ.ಟಿ.ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಕುಶಾಲನಗರ NEWS DESK 14 : ಶರಣರ ಚಳುವಳಿ ನಡೆದು 900 ವರ್ಷಗಳು ಕಳೆದರೂ ಕೂಡ ಇಂದಿಗೂ ಮನುಕುಲದ ಉದ್ಧಾರಕ್ಕೆ ಸಾಧನವಾಗಿರುವ ವಚನ ಚಳುವಳಿ ಇಂದಿನ ಮನುಕುಲಕ್ಕೆ ಬಳುವಳಿಯಾಗಿದೆ ಎಂದು ಕುಶಾಲನಗರ ಪುರಸಭೆ ಸದಸ್ಯೆ ಜಯಲಕ್ಷ್ಮಿ ಬಣ್ಣಿಸಿದರು. ಕುಶಾಲನಗರದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಸುತ್ತೂರು ಜಗದ್ಗುರು ಗುರುಚನ್ನಬಸವ ಶಿವಾಚಾರ್ಯ ದತ್ತಿ ಕಾರ್ಯಕ್ರಮದಲ್ಲಿ “ಶರಣ ಸಾಹಿತ್ಯ ಪ್ರಸಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದ ಜನರಲ್ಲಿದ್ದ ಮೌಡ್ಯಗಳು, ಮೂಢನಂಬಿಕೆಗಳು ಮೊದಲಾದ ಕಂದಾಚಾರಗಳ ವಿರುದ್ಧ ಬಸವಾದಿ ಶರಣರು ಸಮರ ಸಾರುವ ಮೂಲಕ ಜನಸಮಾನ್ಯರ ಬವಣೆಗಳ ಊರುಗೋಲಾದರು ಎಂದು ವಿಶ್ಲೇಷಿಸಿದ ಜಯಲಕ್ಷ್ಮಿ , ವಚನಕಾರ್ತಿಯರಾದ ಅಕ್ಕಮಹಾದೇವಿ, ಸತ್ಯಕ್ಕ, ಸಂಕವ್ವಾ ಮೊದಲಾದ ಶರಣೆಯ ಹೋರಾಟದ ಮಜಲುಗಳನ್ನು ವಿದ್ಯಾರ್ಥಿಗಳ ಮುಂದೆ ವಿವರಿಸಿದರು. ರಂಗಕರ್ಮಿ, ಉಪನ್ಯಾಸಕ ಎಂ.ನಂಜುಂಡಸ್ವಾಮಿ ಮಾತನಾಡಿ, 12 ನೇ ಶತಮಾನದಲ್ಲಿ ಮೇಲು-ಕೀಳು, ಬಡವ – ಬಲ್ಲಿದ ಮೊದಲಾದ ಶೋಷಣೆಯುಕ್ತ ಪರಿಸರ, ಅಂದಿನ ಜನರ ನೆಮ್ಮದಿಯನ್ನು…
ಮಡಿಕೇರಿ ಮಾ.14 NEWS DESK : ಇತಿಹಾಸ ಪ್ರಸಿದ್ಧ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲಕ್ಕೆ ಇಂದು ಮುಹೂರ್ತದ ಕೊಳ್ಳಿ ಕಡಿಯುವ ಮೂಲಕ ಚಾಲನೆ ನೀಡಲಾಯಿತು. ಪ್ರತಿವರ್ಷದಂತೆ ಈ ಬಾರಿ ಕೂಡ ಮಾ.28 ರಿಂದ 30 ರವರೆಗೆ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ, ಕಲ್ಲುರ್ಟಿ, ಗುಳಿಗ ಹಾಗೂ ರಕ್ತೇಶ್ವರಿ ದೈವಗಳ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಮಾ.21 ರಂದು ಬೆಳಿಗ್ಗೆ ಗೊನೆ ಕಡಿಯುವುದು, ಮಾ.27 ರಂದು ಬೆಳಿಗ್ಗೆ 5.30 ಗಂಟೆಗೆ ದೈವಸ್ಥಾನದಲ್ಲಿ ಗಣಹೋಮ, ಮಾ.28 ರಂದು ರಾತ್ರಿ 7.30 ಗಂಟೆಗೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಿಂದ ಭಂಡಾರ ಹೊರಡುವುದು, 9 ಗಂಟೆಗೆ ಮೇಲೇರಿಗೆ ಅಗ್ನಿ ಸ್ಪರ್ಷ, 12.30 ಗಂಟೆಗೆ ಕುಲ್ಚಾಟ ಹೊರಡುವುದು, ಮಾ.29 ರಂದು ಬೆಳಿಗ್ಗೆ 6 ಗಂಟೆಗೆ ಅಗ್ನಿ ಪ್ರವೇಶ, 7 ಗಂಟೆಗೆ ಪ್ರಸಾದ ವಿತರಣೆ, 8 ಗಂಟೆಗೆ ಮಾರಿಕಳ ಪ್ರವೇಶ ಹಾಗೂ ಮಾರಿಕಳದಿಂದ ಬಂದ ನಂತರ ಹರಕೆಯ ಸುರಿಗೆಗಳನ್ನು ಒಪ್ಪಿಸುವುದು. ನಂತರ ಪ್ರಸಾದ ವಿತರಣೆ…
ಮಡಿಕೇರಿ ಮಾ.14 NEWS DESK : ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ವಿರಾಜಪೇಟೆಯಲ್ಲಿ ಹೊಲಿಗೆ ಯಂತ್ರಗಳನ್ನು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಬ್ಸಿಡಿ ಲೋನ್ ಮತ್ತು ಟ್ಯಾಕ್ಸಿಯನ್ನು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ವಿತರಿಸಿದರು.
ಸುಂಟಿಕೊಪ್ಪ ಮಾ.14 NEWS DESK : ಸುಂಟಿಕೊಪ್ಪ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ನಡೆಯಿತು. ಶ್ರೀ ಮಂಜುನಾಥಯ ಮೀನಾಕ್ಷಿಮ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಸಭೆಯನ್ನು ಉದ್ದೇಶಿಸಿ ನಿಕಟ ಪೂರ್ವ ಅಧ್ಯಕ್ಷ ಮನುಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸೋಮವಾರಪೇಟೆ ತಾಲೂಕು ಮಂಡಲ ಅಧ್ಯಕ್ಷರಾದ ಗೌತಮ್ ಸಮ್ಮುಖದಲ್ಲಿ ಸುಂಟಿಕೊಪ್ಪ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಸುಂಟಿಕೊಪ್ಪದ ನಗರಾಧ್ಯಕ್ಷರಾಗಿ ಧನು ಕಾವೇರಪ್ಪ, ಪ್ರಧಾನ ಕಾರ್ಯದರ್ಶಿಯಾಗಿ ವಿ.ಕೆ.ರಾಜು ಅವರನ್ನು ಆಯ್ಕೆ ಮಾಡಲಾಯಿತು. ಸೋಮವಾರಪೇಟೆ ಮಂಡಳ ಒಬಿಸಿ ಅಧ್ಯಕ್ಷರಾಗಿ ಆಯ್ಕೆಗೊಂಡ ಪಿ.ಆರ್.ಸುನಿಲ್ ಕುಮಾರ್ ಅವರನ್ನು ಯುವ ಮೋರ್ಚಾದ ಅಧ್ಯಕ್ಷರಾದ ವಿಜ್ಞೇಶ್ ಸೇರಿದಂತೆ ಹಿರಿಯರು ಸನ್ಮಾನಿಸಿ, ಗೌರವಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಶಾಂತ್ (ಕೋಕ) ವಹಿಸಿದ್ದರು ಗ್ರಾ.ಪಂ ಮಾಜಿ ಅಧ್ಯಕ್ಷೆ ಬಿ.ಐ.ಭವಾನಿ, ಒಬಿಸಿ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್ ಗ್ರಾಮ ಪಂಚಾಯಿತಿ ಸದಸ್ಯಗಳಾದ ಬಿ.ಎಂ.ಸುರೇಶ್, ಮಂಜುನಾಥ್, ಹಿರಿಯರಾದ ಲೀಲಾ ಮೇದಪ್ಪ, ವಿ.ಎ.ಸಂತೋಷ್ ಹಾಗೂ ಎಲ್ಲಾ ಕಾರ್ಯಕರ್ತರು ಉಪಸ್ಥಿದ್ದರು.
ಸುಂಟಿಕೊಪ್ಪ ಮಾ.14 NEWS DESK : ಕಾಜೂರಿನ ಶ್ರೀ ಹರಿಹರ ಯುವಕ ಸಂಘದ 33ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶಿವರಾತ್ರಿ ಉತ್ಸವ ಕಾರ್ಯಕ್ರಮವನ್ನು ಐಗೂರು ಗ್ರಾ.ಪಂ ಅಧ್ಯಕ್ಷ ಜಿ.ಕೆ.ವಿನೋದ್, ಕಾಜೂರು ಕಾಫಿ ತೋಟದ ವ್ಯವಸ್ಥಾಪಕ ರಾಬಿನ್ ಪೆಮ್ಮಯ್ಯ ಉದ್ಘಾಟಿಸಿದರು. ಕ್ರೀಡಾಕೂಟಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ರಾಬಿನ್ ಪೆಮ್ಮಯ್ಯ ಗ್ರಾಮೀಣ ಕ್ರೀಡಾಕೂಟಗಳು ಉಳಿಯಬೇಕಾದರೆ, ಪ್ರತಿ ಗ್ರಾಮಗಳಲ್ಲಿಯೂ ಹೆಚ್ಚಿನ ಗ್ರಾಮೀಣ ಕ್ರೀಡಾಕೂಟಗಳು ಆಯೋಜನೆಗೊಳ್ಳಬೇಕು, ಕ್ರೀಡಾಕೂಟದಿಂದ ಮಾನಸಿಕ ಸ್ಥರ್ಯ, ಬಾಂಧವ್ಯ ಬೆಸೆಯಲು ಸಹಕಾರಿಯಾಗಲಿದೆ ಎಂದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಳೆದ 33ವರ್ಷಗಳಿಂದ ಸಂಘವೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತ ಬಂದಿರುವ ಬಗ್ಗೆ ಶ್ಲಾಘಿಸಿದರು, ರಾಜಕೀಯ ಬದಿಗಿರಿಸಿ ಗ್ರಾಮದ ಅಭಿವೃದ್ಧಿಗೆ ಜೊತೆಯಾಗಿ ನಿಲ್ಲುವುದರೊಂದಿಗೆ ಸಂಘದ ಮುಂದುವರೆದ ಕಾಮಗಾರಿಗೆ ಸರ್ಕಾರದಿಂದ ಅನುದಾನ ಕೊಡಿಸಿಕೊಡುವುದಾಗಿ ಭರವಸೆ ನೀಡಿದರು. ರಾಮನಗರ ಜಿಲ್ಲೆಯ ಮುರಾರಿ ಸ್ವಾಮಿಗಳ ಪುಣ್ಯಕ್ಷೇತ್ರದ ಪೀಠಾಧಿಪತಿಗಳಾದ ಶ್ರೀ ಕುಮಾರಸ್ವಾಮಿಗಳು ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸೋಮವಾರಪೇಟೆ ತಾಲ್ಲೂಕಿನ…
ಮಡಿಕೇರಿ ಮಾ.13 NEWS DESK : ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಜಬಾನು (37) ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಸ್ಥಳಿಯ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭ ತೀವ್ರವಾಗಿ ಗಾಯಗೊಂಡ ಅಜಬಾನು ಅವರನ್ನು ಪಾಲಿಬೆಟ್ಟ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಘಟನೆಯಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಹಾಗೂ ಕಾರ್ಮಿಕರು ಅರಣ್ಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದು, ಮುಗ್ಧ ಜೀವಗಳು ಬಲಿಯಾಗುತ್ತಿವೆ. ಅರಣ್ಯ ಅಧಿಕಾರಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು.






