ಮಡಿಕೇರಿ ಫೆ.23 NEWS DESK : 2018 ರಲ್ಲಿ ವಿಶ್ವದ ಅತ್ಯಂತ ಎತ್ತರದ ಶಿಖರದ ತುತ್ತ ತುದಿಯನ್ನು ಏರಿ ಕನ್ನಡ ಬಾವುಟ ಹಾರಿಸಿದ ಪ್ರಥಮ ಕನ್ನಡಿಗ ವಿಕ್ರಮ್ ಚಂದ್ರನಾಯಕ್ ರವರು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿ ಆಡಳಿತಾತ್ಮಕ ನೆರವು ಕೋರಿದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಸಾಹಸಿ ಯುವಕನಾದ ಸಿ.ವಿಕ್ರಮ್ ಗಸ್ತು ಅರಣ್ಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು 2018 ರಲ್ಲಿ 8848.86 ಮೀ ಎತ್ತರದ ಜಗತ್ತಿನ ಅತ್ಯಂತ ತುತ್ತ ತುದಿಯಲ್ಲಿರುವ ಮೌಂಟ್ ಎವರೆಷ್ಟ್ ಶಿಖರವನ್ನು ಏರಿದ ಪ್ರಥಮ ಕನ್ನಡಿಗನಾಗಿ ಸಾಧನೆ ಮಾಡಿದ್ದರು. ಈಗ ಅವರಿಗೆ ಸರ್ಕಾರಿ ಸೇವೆಯಲ್ಲಿ ಪದೋನ್ನತಿ ಸಂಭಂದಿಸಿದಂತೆ ಕ್ಯಾಬಿನೆಟ್ ನಿಂದ ಅನುಮೋದನೆ ಬೇಕಾಗಿರುವುದರಿಂದ ಎ.ಎಸ್.ಪೊನ್ನಣ್ಣ ನವರಿಂದ ನೆರವು ಕೋರಲು ಬಂದಿದ್ದರು. ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದ ಸಾಧಕನಿಗೆ ನೆರವು ನೀಡುವುದು ರಾಜ್ಯಕ್ಕೆ ನೀಡುವ ಗೌರವವಾಗಿದೆ. ಆದ್ದರಿಂದ ವಿಕ್ರಮ್ ಗೆ ಸಂಭಂದಿಸಿದಂತೆ ಆಡಳಿತಾತ್ಮಕ ನೆರವು ನೀಡಲು ತಾವು…
ಲೇಖಕ: admin
ಮಡಿಕೇರಿ ಫೆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳರ ಅಭಿವೃದ್ಧಿ ಸಂಘ ಇವರ ಸಹಕಾರದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವು ಫೆ.25 ರಂದು ಬೆಳಗ್ಗೆ 11.30 ಗಂಟೆಗೆ ನಗರದ ದಾಸವಾಳ ರಸ್ತೆಯ ಮಡಿಕಟ್ಟೆ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಫೆ.23 NEWS DESK : ಕೊಡಗು ಜಿಲ್ಲೆಯ ಹಲವು ಬೆಳೆಗಾರರ ಮೇಲೆ ಜಾತಿ ನಿಂದನೆ ಮತ್ತು ಜೀತ ಪದ್ಧತಿ ಆರೋಪದಡಿ ಸತ್ಯಕ್ಕೆ ದೂರವಾದ ಪ್ರಕರಣವನ್ನು ದಾಖಲಿಸಲಾಗಿದೆ. ಈ ರೀತಿಯ ದೂರುಗಳು ಬಂದ ಸಂದರ್ಭ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಲಂಕುಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕುಟ್ಟ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಒತ್ತಾಯಿಸಿದ್ದಾರೆ. ಕುಟ್ಟ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಕುಟ್ಟ ಕೊಡವ ಸಮಾಜದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಹಳ ಹಿಂದಿನಿಂದಲೂ ಬೆಳೆಗಾರರು ಹಾಗೂ ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯವಿದೆ. ಆದರೆ ಕೆಲವು ಎನ್ಜಿಒಗಳು ಕಾರ್ಮಿಕರ ಹಾದಿ ತಪ್ಪಿಸಿ ಬೆಳೆಗಾರರನ್ನು ಸುಲಿಗೆ ಮಾಡಲು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಜಾತಿ ನಿಂದನೆ ಹಾಗೂ ಜೀತ ವಿಮುಕ್ತಿ ಪ್ರಕರಣದ ದೂರುದಾರರು ಆಧಾರ್ ಕಾರ್ಡ್ಗಳನ್ನು ಹೊಂದಿದ್ದು, ಚುನಾವಣಾ ಗುರುತಿನ ಪತ್ರ ಹೊಂದಿದ್ದಾರೆ. ಪಡಿತರ ಚೀಟಿಯಲ್ಲಿ ತಮ್ಮ ಬೆರಳಚ್ಚನ್ನು ನೀಡಿ…
ಮಡಿಕೇರಿ ಫೆ.23 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಫೆಬ್ರವರಿ, 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗವನ್ನು ಬಯಸುವಂತಹ ಕೊಡಗು ಜಿಲ್ಲೆಯ ವಿಕಲಚೇತನರು ಉದ್ಯೋಗ ಮೇಳದಲ್ಲಿ https://udyoga.skillconnet.kaushalkar.com/ ಲಿಂಕ್ ನಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬೇಕೆಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಕೋರಿದ್ದಾರೆ.
ಮಡಿಕೇರಿ ಫೆ.23 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಸೇವಾ ಮತ್ತು ಕ್ರೀಡಾ ಇಲಾಖೆ, ಕೊಡಗು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ 2023-24 ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಫೆಬ್ರವರಿ, 24 ಮತ್ತು 25 ರಂದು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯಲಿದೆ. ಆಸಕ್ತ ಸರ್ಕಾರಿ ನೌಕರ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ದೂ.ಸಂ. 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಹಾಗೂ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ನೋಂದಣಿ https://forms.gle/3arj7sBogh2kieAKA ನೋಂದಣಿ ಮಾಡಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
ಮಡಿಕೇರಿ ಫೆ.23 NEWS DESK : ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಬೇಟಿ ಬಚಾವೋ, ಬೇಟಿ ಪಡಾವೋ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಮಿಷನ್ ಶಕ್ತಿಯು ಮಹಿಳೆಯ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಮಧ್ಯಸ್ಥಿಕೆ ಕ್ರಮಗಳನ್ನು ಬಲಪಡಿಸುವ ಗುರಿ ಹೊಂದಿದೆ ಎಂದು ತಿಳಿಸಿದರು. ಮಹಿಳಾ ಮುಂಚೂಣಿ ಅಭಿವೃದ್ಧಿಗಾಗಿ ಮಿಷನ್ ಶಕ್ತಿಯು ಮಹಿಳೆಯರ ಸುರಕ್ಷತೆ ಮತ್ತು ಮಹಿಳೆಯರ ಸಬಲೀಕರಣ ಎಂಬ ಎರಡು ಉಪ ಯೋಜನೆಗಳನ್ನು ಹೊಂದಿದೆ ಎಂದು ನಟರಾಜು ಮಾಹಿತಿ ನೀಡಿದರು. ಮಿಷನ್ ಶಕ್ತಿ ಸೇವೆಗಳಲ್ಲಿ ಪ್ರಮುಖವಾಗಿ ಹಿಂಸೆಯಿಂದ ಬಾಧಿತರಾದ ಮಹಿಳೆಯರಿಗೆ ಒನ್ ಸ್ಟಾಪ್ ಸೆಂಟ್ರಲ್ಗಳ ಮುಖಾಂತರ ತಾತ್ಕಾಲಿಕ ಆಶ್ರಯ ಕಾನೂನು ನೆರವು, ಮಾನಸಿಕ, ಸಾಮಾಜಿಕ, ಸಮಾಲೋಚನೆ, ವೈದ್ಯಕೀಯ ನೆರವು ಪೊಲೀಸ್ ಸೌಲಭ್ಯಗಳ ಮೂಲಕ ನಿರಂತರ ಸೌಲಭ್ಯ ಮತ್ತು ರಕ್ಷಣೆ ಒದಗಿಸಲಾಗುತ್ತದೆ ಎಂದು ಹೇಳಿದರು. ಮಹಿಳೆಯರ…
ಮಡಿಕೇರಿ ಫೆ.23 NEWS DESK : ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯನ್ನು ನಡೆಸಲು ತಕ್ಷಣ ಆದೇಶ ನೀಡುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಸಹಕಾರ ಕಚೇರಿ ಎದುರು ಸರಕಾರ ಮತ್ತು ಸಹಕಾರ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಪ್ರಮುಖರು, ನಿಗಧಿತ ಸಮಯದಲ್ಲಿ ಚುನಾವಣೆ ನಡೆಸದೆ ಇರುವುದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ರಾಜ್ಯದಲ್ಲಿ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಈಗಾಗಲೇ ಪೂರ್ಣಗೊಳ್ಳಬೇಕಿತ್ತು. ವೈದ್ಯನಾಥನ್ ಆಯೋಗದ ಶಿಫಾರಸ್ಸಿನ ಮೇರೆಗೆ ಅದಕ್ಕೆ ಪ್ರತ್ಯೇಕ ಚುನಾವಣಾ ಆಯೋಗವನ್ನು ಕೂಡ ಮಾಡಲಾಗಿದೆ. ಅದರಂತೆ ಹುದಿಕೇರಿ ಸಂಘಕ್ಕೂ ಚುನಾವಣಾ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಆಡಳಿತ ಮಂಡಳಿ ಅವಧಿ ಮುಗಿದ ನಂತರ ಕ್ಲರ್ಕ್ವೊಬ್ಬರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸುವ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಳ್ಳಾಗಿದೆ ಎಂದು ಟೀಕಿಸಿದರು. ಜಿಲ್ಲೆಯಲ್ಲಿ ಇತರ ಸಹಕಾರ ಸಂಘಗಳ ಚುನಾವಣೆಯಲ್ಲಿ ಹೀನಾಯ…
ವಿರಾಜಪೇಟೆ ಫೆ.23 NEWS DESK : ಕರ್ನಾಟಕ ಸ್ಪೋರ್ಟ್ಸ್ ಡಾನ್ಸ್ ಅಸೋಸಿಯೇಷನ್ ಹಾಗೂ ಏಷ್ಯಾನ್ ಸ್ಪೋರ್ಟ್ಸ್ ಡಾನ್ಸ್ ಕೌನ್ಸಿಲ್ ವತಿಯಿಂದ ಜಮ್ಮು ಕಾಶ್ಮೀರದಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪೋರ್ಟ್ಸ್ ಡಾನ್ಸ್ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ 19 ವಿದ್ಯಾರ್ಥಿಗಳು ಸೋಲೋ, ಡಬಲ್ಸ್ ಹಾಗೂ ಗ್ರೂಪ್ ಡಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಒಟ್ಟು 31 ಚಿನ್ನ, 5 ಬೆಳ್ಳಿ, 8 ಕಂಚು ಪದಕಗಳನ್ನು ಪಡೆದು ಚಾಂಪಿಯನ್ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮೇ ತಿಂಗಳಿನಲ್ಲಿ ಭೂತಾನ್ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ಶಿಪ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಗುರುಗಳಾದ ಹೇಮಾವತಿ ಕಾಂತ್ ರಾಜ್ ಹಾಗೂ ಕಾವ್ಯಶ್ರೀ ಕಾಂತ್ ರಾಜ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.
ಮಡಿಕೇರಿ ಫೆ.23 NEWS DESK : ಕರ್ನಾಟಕ ರಾಜ್ಯ ಸುಭಿಕ್ಷವಾಗಬೇಕು ಎಂದರೆ ಕೊಡಗು ಸುಭಿಕ್ಷವಾಗಿರಬೇಕು ಎಂದು ಆರ್ಯವೈಶ್ಯ ಮಹಾಸಭಾದ ರಾಜ್ಯಾಧ್ಯಕ್ಷ ಆರ್.ಪಿ.ರವಿಶಂಕರ್ ಅಭಿಪ್ರಾಯಪಟ್ಟರು. ಕುಶಾಲನಗರದ ಶ್ರೀಮದ್ ಕನ್ನಿಕಾಪರಮೇಶ್ವರಿ ದೇವಾಲಯದ 10ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ದೇವಿಗೆ ಸ್ವರ್ಣ ಮುಖ ಕವಚ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗಿನಲ್ಲಿ ಹುಟ್ಟಿ ರಾಜ್ಯದ ಲಕ್ಷಾಂತರ ಜನರ ಬಾಯಾರಿಕೆ ನೀಗಿಸುವ, ಲಕ್ಷಾಂತರ ಎಕರೆಯಲ್ಲಿ ಬೆಳೆ ಬೆಳೆಯಲು ಕಾವೇರಿ ಮಾತೆಯ ಕೊಡುಗೆ ಅನನ್ಯವಾದದ್ದು. ಅಂತಹ ಶ್ರೇಷ್ಠ ಸ್ಥಳದಲ್ಲಿ ವಾಸವಿ ಮಾತೆಯ ವಿಗ್ರಹದ ಮುಖಕ್ಕೆ ಸ್ವರ್ಣದ ಮುಖವಾಡ ಅರ್ಪಿಸಿದ್ದು ನಮ್ಮೆಲ್ಲರ ಭಾಗ್ಯ. ವಿಶ್ವದಲ್ಲಿ ಭಾರತದ ಘನತೆ ಹೆಚ್ಚಾಗುತ್ತಿರುವ ಹಾಗೆಯೇ ದೇಶದ ಹಿಂದೂ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆಯೂ ವಿಶ್ವ ತಿಳಿಯಲು ಪ್ರೇರೇಪಣೆ ಆಗುತ್ತಿದೆ ಎಂದರು. ನಿರಾಡಂಭರ ಮೂರ್ತಿಗೆ ಆಡಂಭರದ ಪೂಜೆ ಎಂದು ನಾಸ್ತಿಕರು ಹೇಳುತ್ತಾರೆ. ನಾವು ದೇವಸ್ಥಾನಗಳನ್ನು ಅತ್ಯಂತ ಉನ್ನತ ಮಟ್ಟದಲ್ಲಿ ನೋಡುತ್ತೇವೆ. ನಾವು ಇವರುವುದಕ್ಕಿಂತ ಹೆಚ್ಚಿನ ಉನ್ನತ ಮಟ್ಟದಲ್ಲಿ ದೇವರನ್ನು ನೋಡಲು ಬಯಸುವವರು ನಾವುಗಳು.…
ಕಡಂಗ ಫೆ.23 NEWS DESK : ಮುಸ್ಲಿ0 ಸಮುದಾಯದ ಪ್ರಭಾವಿ ನಾಯಕ, ಸಮಸ್ತ ಪಂಡಿತ ಅಧ್ಯಕ್ಷ ಈ.ಸುಲೈಮಾನ್ ಉಸ್ತಾದ್ ಫೆ.24 ರಂದು ಕೊಡಗು ಜಿಲ್ಲೆ ಕೊಡಗಿಗೆ ಭೇಟಿ ನೀಡಲಿದ್ದಾರೆ. ಸಂಜೆ 4 ಗಂಟೆಗೆ ವಿರಾಜಪೇಟೆಯ ಅನ್ವರುಲ್ ಹುದಾ ವಿದ್ಯಾ ಸಂಸ್ಥೆಗೆ ಮತ್ತು ಸಂಜೆ 7 ಗಂಟೆಗೆ ಕುಂಜಿಲ ಫೈನರಿ ಉರೂಸ್ ನಲ್ಲಿ ಪಾಲ್ಗೊಲಿದ್ದಾರೆ. ವರದಿ : ನೌಫಲ್






