ಮಡಿಕೇರಿ ಮಾ.13 NEWS DESK : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಅವಧಿಯಲ್ಲಿ ಕಳಪೆ ಮತ್ತು ಅವೈಜ್ಞಾನಿಕ ಕಾಮಗಾರಿಯ ಮೂಲಕ ಭಾರೀ ವಿವಾದ ಸೃಷ್ಟಿಸಿದ್ದ ಜಿಲ್ಲಾಧಿಕಾರಿಗಳ ಕಚೇರಿಯ ತಡೆಗೋಡೆಯನ್ನು ಕೆಡವಲು ಕ್ರಮ ಕೈಗೊಳ್ಳಲಾಗಿದ್ದು, ಮಾ.14 ರಂದು ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ನೇತೃತ್ವದ ಸಮಿತಿ ಸ್ಥಳ ಪರಿಶೀಲನೆ ನಡೆಸಲಿದೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ನಡೆದ ತಡೆಗೋಡೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಮತ್ತು ಅಪಾಯಕಾರಿಯಾಗಿದೆ ಎಂದು ಆರೋಪಿಸಿ ಅಂದು ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ಹೋರಾಟ ನಡೆಸಿತ್ತು. ಅಲ್ಲದೆ ಮಳೆಗಾಲದಲ್ಲಿ ತಡೆಗೋಡೆ ಕುಸಿಯುವ ಆತಂಕವೂ ಎದುರಾಗಿತ್ತು. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯ ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದ ಫಲವಾಗಿ ತಡೆಗೋಡೆ ನಿರ್ವಹಣೆ ಹೊತ್ತ ಇಂಜಿನಿಯರ್ ಅಮಾನತಿಗೆ ಒಳಗಾದರು. ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇನ್ನೂ ಕೆಲವು ಅಧಿಕಾರಿಗಳು ವರ್ಗಾವಣೆ ಶಿಕ್ಷೆಗೆ ಗುರಿಯಾದರು. ಮಡಿಕೇರಿ ಕ್ಷೇತ್ರದ ಶಾಸಕ…
ಲೇಖಕ: admin
ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಾ.ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಥಾಸ್ಪರ್ಧೆ ಕಾರ್ಯಕ್ರಮವು ಮಡಿಕೇರಿ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಥೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಕಥಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು 3 ಮಂದಿ ತೀರ್ಪುಗಾರರು ಮೌಲ್ಯಮಾಪನ ಮಾಡಿ ನೀಡಿದ ಫಲಿತಾಂಶದಂತೆ ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ವೈಷ್ಣವಿ ಡಿ.ಪಿ.(ಪ್ರಥಮ), ಮದೆ ಮಹೇಶ್ವರ ಪದವಿ ಪೂರ್ವ ಕಾಲೇಜಿನ ಮೇಘ ಶ್ರೀ ಕೆ.(ದ್ವಿತೀಯ) ಹಾಗೂ ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೋನಿಷಾ(ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ. ನಾ.ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಮಾರ್ಚ್, 22 ರಂದು ಬೆಳಗ್ಗೆ 10 ಗಂಟೆಗೆ ಮುತ್ತಪ್ಪ ದೇವಾಲಯದ ಬಳಿ ಇರುವ ಸಹಕಾರಿ ತರಬೇತಿ ಕೇಂದ್ರದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ.ಕೇಶವ್ ಕಾಮತ್ ಅವರ…
ಮಡಿಕೇರಿ ಮಾ.14 NEWS DESK : ನಗರಸಭೆಯ 2024-25 ನೇ ಸಾಲಿನ ಆಯವ್ಯಯ ಮಂಜೂರಾತಿಗೆ ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಮಾ.15 ರಂದು ಬೆಳಗ್ಗೆ 11.30 ಗಂಟೆಗೆ ನಗರಸಭೆ ಕೌನ್ಸಿಲ್ ವಿಶೇಷ ಸಭೆಯು ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರಾದ ವಿಜಯ್ ತಿಳಿಸಿದ್ದಾರೆ.
ಮಡಿಕೇರಿ ಮಾ.13 NEWS DESK : ಭಾರತದ ಕಾಫಿ ಬೆಳೆಗಾರರಿಗೆ ಆಶಾದಾಯಕವಾದ “ಫಾರ್ಮ್ 360” ಹೆಸರಿನ ಕಾರ್ಬನ್ ಮಾನಿಟರಿಂಗ್ ಫ್ಲಾಟ್ಫಾರ್ಮ್ ಅಂಡ್ ಅಸೆಸ್ಮೆಂಟ್ ಟೂಲ್ಸ್ ನ್ನು ಮಡಿಕೇರಿ ನಗರದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಕೊಡಗಿನ ಪ್ರತಿಷ್ಠಿತ ಸಾಯಿಲ್ ಹೆಲ್ತ್ ಅನಾಲೈಸಸ್ ಅಂಡ್ ಇಕೋಲಾಜಿಕಲ್ ಅಗ್ರಿಕಲ್ಚರಲ್ ಪ್ರಾಕ್ಟಿಸ್ ಸಂಸ್ಥೆಯಾದ ಐಮರ ಇಕೋಲಾಜಿಕಲ್ ಫಾರ್ಮಿಂಗ್ ಟೆಕ್ನಾಲಜೀಸ್ ವತಿಯಿಂದ ನಗರದ ಕ್ರಿಸ್ಟಲ್ ಕೋರ್ಟ್ನಲ್ಲಿ ಕಾಫಿ ಬೆಳೆಗಾರರ ಸಮ್ಮುಖದಲ್ಲಿ “ಫಾರ್ಮ್ 360” ನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಂಪನ್ಮೂಲ ವ್ಯಕ್ತಿಗಳು, ಭೂಮಿಯ ವಾತಾವರಣದಲ್ಲಿ ಇಂಗಾಲದ ಪ್ರಮಾಣ ವರ್ಷದಿಂದ ವರ್ಷಕ್ಕೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಭೂಮಿಯ ತಾಪಮಾನ ಅಪಾಯದ ಮಟ್ಟ ಮೀರುತ್ತಿದೆ ಎಂದರು. “ಫಾರ್ಮ್ 360” ಭಾರತ ದೇಶದಲ್ಲಿ ಮಣ್ಣು ಆರೋಗ್ಯ ಪರೀಕ್ಷೆ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆಯಾದ ಕೃಷಿತಂತ್ರ, ಭಾರತ ಸರ್ಕಾರದ ಅಧೀನ ಸಂಸ್ಥೆಯಾದ ಇಂಡಿಯನ್ ಕೌನ್ಸಿಲ್ ಫಾರ್ ಅಗ್ರಿಕಲ್ಚರ್ ರಿಸರ್ಚ್ ನ ಅಂಗಸಂಸ್ಥೆ National Bureau of Soil Survey & Land Use Planning ಹಾಗೂ ಜಪಾನ್…
ಮಡಿಕೇರಿ ಮಾ.13 NEWS DESK : ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮಾ.14 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಉಪ ಸಭಾಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮಾ.14 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಸಭೆ ನಡೆಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ಜಿಲ್ಲಾಡಳಿತ ಭವನದ ಮುಂದೆ ಕಟ್ಟಿರುವ ತಡೆಗೋಡೆ ಸಂಬಂಧ ಸ್ಥಳ ಪರಿವೀಕ್ಷಣೆ ಮಾಡಲಿದ್ದಾರೆ ಎಂದು ಉಪ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ಎಸ್.ಬಿ.ಶ್ರೀಪಾದ ತಿಳಿಸಿದ್ದಾರೆ.
ನಾಪೋಕ್ಲು ಮಾ.13 : ಕೊಟ್ಟಮುಡಿ ಮಾರ್ಕಝುಲ್ ಹಿದಾಯದ ಸಂಸ್ಥೆಯ ಅಧೀನದಲ್ಲಿ ಆರ್ಸಿಎಫ್ಐ ಅನುದಾನದಡಿ ನಿರ್ಮಿಸಿದ “ಕಾಫಿಲ “ಸಂಸ್ಥೆಯನ್ನು ಮರ್ಕಝ್ ನಾಲೆಜ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮರ್ಕಝುಲ್ ಹಿದಾಯ ಕೊಡಗು ಸಂಸ್ಥೆಯ ಅಧ್ಯಕ್ಷ ಡಾ. ಮೊಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅನಾಥ ಮಕ್ಕಳಿಗೆ ಅನ್ನ ಮತ್ತು ವಸತಿಯನ್ನು ಮಾತ್ರ ನೀಡಿದರೆ ಸಾಲದು , ಅವರಿಗೆ ಉತ್ತಮವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಉತ್ತಮ ಶಿಕ್ಷಣ ಹಾಗೂ ಉತ್ತಮ ನಡತೆಯನ್ನು ಕಲಿಸಬೇಕಾದ ಜವಾಬ್ದಾರಿ ಸಮಾಜದ ಮೇಲಿದೆ. ಆ ಕೆಲಸವನ್ನು ಮರ್ಕಝುಲ್ ಸಂಸ್ಥೆ ಮಾಡಲಿದೆ ಅದಕ್ಕೆ ದಾನಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಭಾ ಕಾರ್ಯಕ್ರಮವನ್ನು ಎಸ್ವೈಎಸ್ ರಾಜ್ಯ ನಾಯಕ ಸೈಯದ್ ಇಲ್ಯಾಸ್ ತಙಳ್ ಉದ್ಘಾಟಿಸಿದರು. ಸಂಸ್ಥೆಯ ಉಪಾಧ್ಯಕ್ಷ ಅಹಮದ್ ಹಾಜಿ, ಮೊಹಿದ್ದೀನ್ ಕುಟ್ಟಿ ಹಾಜಿ, ಕಾರ್ಯದರ್ಶಿ ಯೂಸುಫ್ ಹಾಜಿ ಕೋಶಾಧಿಕಾರಿ ಅಬ್ದುಲ್ಲಾ, ನಿರ್ದೇಶಕರಾದ ಮಹಮ್ಮದ್ ಹಾಜಿ ಕುಂಜಿಲ, ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್ ಅಧ್ಯಕ್ಷ ಹಾಗೂ ನಿರ್ದೇಶಕ ಲತೀಫ್…
ಸಿದ್ದಾಪುರ ಮಾ.13 NEWS DESK : ಧಾರ್ಮಿಕ ಆಚರಣೆಗಳ ಮೂಲಕ ಆಚಾರ ವಿಚಾರ ಸಂಸ್ಕೃತಿ ಪರಂಪರೆಯೊಂದಿಗೆ ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆದಲ್ಲಿ ಸಂಸ್ಕೃತಿಯನ್ನು ಬೆಳೆಸಲು ಸಾಧ್ಯವಾಗಲಿದೆ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಅಮ್ಮತ್ತಿ ಸಮೀಪದ ಪುಲಿಯೇರಿ ಗ್ರಾಮದಲ್ಲಿರುವ ಮಂಗುಯಿಯಿಲ್ ಶ್ರೀ ಭಗವತಿ ಕ್ಷೇತ್ರದ ವಾರ್ಷಿಕ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಗ್ರಾಮಗಳಲ್ಲಿರುವ ದೇವಾಲಯಗಳಲ್ಲಿ ಭಕ್ತಿ ಪೂರಕವಾಗಿ ಇಷ್ಟಾರ್ಥ ಪ್ರಾರ್ಥನೆ ಮಾಡಿದರೆ ಉತ್ತಮ ಮಳೆ ಬೆಳೆ ಅಭಿವೃದ್ಧಿಯೊಂದಿಗೆ ಶಾಂತಿ ಸಹ ಬಾಳ್ವೆಯ ಜೀವನ ನಡೆಸಲು ಸಾಧ್ಯವಾಗಲಿದೆ. ಇಂತಹ ಆಚರಣೆಗಳ ಮೂಲಕ ಎಲ್ಲರೂ ಒಗ್ಗೂಡಿ ಧಾರ್ಮಿಕ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸಲು ಮುಂದಾಗಬೇಕೆಂದರು. ಎಸ್.ಎನ್.ಡಿ.ಪಿ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶ್ರೀ ಭಗವತಿ ದೇವಸ್ಥಾನ ಪ್ರಾರಂಭಿಸಿ ಧಾರ್ಮಿಕ ಪೂಜಾ ಕಾರ್ಯಗಳನ್ನು ಮಾಡುವುದರೊಂದಿಗೆ ವಾರ್ಷಿಕ ಪೂಜಾ ಮಹೋತ್ಸವವನ್ನು ಆಚರಣೆ ಮಾಡುವ ಮೂಲಕ ಈ ಭಾಗದ ಹೆಚ್ಚಿನ ಸಂಖ್ಯೆಯ ಭಕ್ತರ ಇಷ್ಟಾರ್ಥ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಿರುವ ಮಂಗುಯಿಯಿಲ್ ಕುಟುಂಬಸ್ಥರ ಸೇವಾ ಕಾರ್ಯ ಜಿಲ್ಲೆಗೆ…
ಮಡಿಕೇರಿ ಮಾ.13 NEWS DESK : ನಾಡಿನ ಹೆಸರಾಂತ ಚಿನ್ನಾಭರಣ ಸಂಸ್ಥೆಯಾಗಿರುವ ಮುಳಿಯ ಜ್ಯುವೆಲ್ಲರ್ಸ್ ನ ಅಂಗಸಂಸ್ಥೆಯಾದ ಮುಳಿಯ ಪ್ರತಿಷ್ಠಾನದ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆಯ ವಿವಿಧ ಕ್ಷೇತ್ರಗಳ 9 ಸಾಧಕಿಯರಿಗೆ ಮುಳಿಯ ನವರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕೃಷಿ, ಸಾಹಿತ್ಯ, ಶಿಕ್ಷಣ, ಉದ್ಯಮ, ಸಮಾಜಸೇವೆ, ಕ್ರೀಡೆ, ಕಲಾವಿದೆ, ಬಾಲಪ್ರತಿಭೆ ಮತ್ತು ಮಹಿಳಾ ಸಂಘ-ಸಂಸ್ಥೆಗಳಿಗೆ ನವರತ್ನ ಪ್ರಶಸ್ತಿಯನ್ನು ಮುಳಿಯ ಪ್ರತಿಷ್ಠಾನದ ವತಿಯಿಂದ ನೀಡಿ ಗೌರವಿಸಲಾಗುತ್ತದೆ. ಆಯ್ಕೆಯಾದ ಸಾಧಕಿಯರಿಗೆ ಚಿನ್ನದ ಪದಕ, 5 ಸಾವಿರ ರು. ನಗದು ನೀಡಿ ಪುರಸ್ಕರಿಸಲಾಗುತ್ತದೆ. ಸಾಧಕಿಯರ ಆಯ್ಕೆಗೆ ಸಾವ೯ಜನಿಕ ವಲಯದಿಂದ ಪ್ರತ್ಯೇಕ ಸಮಿತಿಯನ್ನು ರಚಿಸಲಾಗಿದ್ದು, ಅತ್ಯಂತ ಪಾರದಶ೯ಕವಾಗಿ ಈ ಸಮಿತಿಯು ಮುಳಿಯ ನವರತ್ನ ಪ್ರಶಸ್ತಿಗೆ ಸಾಧಕಿಯರನ್ನು ಆಯ್ಕೆ ಮಾಡಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ. ಈ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಸಾಧಕಿಯರಿಂದ ಮಾಹಿತಿ ಆಹ್ವಾನಿಸಲಾಗಿದೆ. ಸಾಧಕಿಯರು ತಮ್ಮ ಸಾಧನೆಗಳನ್ನು ಸೂಕ್ತ ಮಾಹಿತಿಯೊಂದಿಗೆ ನೀಡಬಹುದಾಗಿದೆ. ಅಂತೆಯೇ ತಮಗೆ ಪರಿಚಯವಿರುವ ಅಹ೯ ಸಾಧಕಿಯರ ಬಗ್ಗೆಯೂ ಇತರರೂ ಮಾಹಿತಿ…
ಮಡಿಕೇರಿ ಮಾ.13 NEWS DESK : ಕೊಡಗಿನ ಗಡಿ ಗ್ರಾಮ ಕರಿಕೆಯ ಕೆಲವು ಭಾಗದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಕಂಡು ಬರುತ್ತಿದ್ದು, ಇದು ಕೇರಳದ ತ್ಯಾಜ್ಯವೆಂದು ಸ್ಥಳೀಯ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ಲಾಸ್ಟಿಕ್ ಮತ್ತು ಮಾಂಸದ ತ್ಯಾಜ್ಯಗಳು, ಮಾರಾಟವಾಗದ ಹಳೆಯ ಆಹಾರ ಪದಾರ್ಥಗಳು ಸೇರಿದಂತೆ ನಿಷ್ಪ್ರಯೋಜಕ ವಸ್ತುಗಳನ್ನು ಚೆಂಬೇರಿ ಗ್ರಾಮ ವ್ಯಾಪ್ತಿಯ ಸುತ್ತಮುತ್ತ ಸುರಿಯಲಾಗಿದೆ. ಕೇರಳದ ವ್ಯಕ್ತಿಗಳು ಮಾತ್ರವಲ್ಲದೆ ಅಕ್ಕಪಕ್ಕದ ಗ್ರಾಮದವರೂ ಕಸ ತಂದು ಹಾಕುತ್ತಿರುವ ಬಗ್ಗೆ ಸ್ಥಳೀಯ ಗ್ರಾಮಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಕಸ ವಿಲೇವಾರಿ ಘಟಕವಿದ್ದರೂ ನಿಷ್ಪ್ರಯೋಜಕವಾಗಿದೆ. ಎಲ್ಲೆಂದರಲ್ಲಿ ಕಸದ ರಾಶಿ ಇರುವುದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅಡಚಣೆಯಾಗಿದೆ. ಈ ಬಗ್ಗೆ ಹಲವು ಬಾರಿ ಗ್ರಾ.ಪಂ ಗೆ ದೂರು ನೀಡಿದ್ದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲ. ಕರಿಕೆ- ಕೇರಳ ಗಡಿಯಲ್ಲಿ ಸಿಸಿ ಕ್ಯಾಮರಾಗಳಿದ್ದರೂ ಕಸ ತಂದು ಹಾಕುತ್ತಿರುವವರನ್ನು ಪತ್ತೆ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹಿರಿಯ ಅಧಿಕಾರಿಗಳು ಕಸದ ಸಮಸ್ಯೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ ಮಾ.13 NEWS DESK : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳ ವಿವರ ಹೀಗಿದೆ >>>






