ಲೇಖಕ: admin

ಮಡಿಕೇರಿ ಫೆ.23 NEWS DESK :  ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಹಾಗೂ ಎಸ್‍ಸಿ ಮೋರ್ಚಾದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಕಳೆದ 9 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿದೆ, ಉಳಿದಂತೆ ಎಲ್ಲಾ ಹಂತದಲ್ಲೂ ವಂಚಿಸುತ್ತಾ ಬಂದಿದೆ. ಪರಿಶಿಷ್ಟರಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಿದರು. ಸಮಾಜ ಕಲ್ಯಾಣ ಸಚಿವರು ಕಾಂಗ್ರೆಸ್ ಪಕ್ಷದ ಹಿತವನ್ನು ಕಾಪಾಡಿಕೊಳ್ಳಲು ಮಾತ್ರ ದಲಿತ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿ ಇಲಾಖೆಗಳ ಅನುದಾನವನ್ನು ವಿದ್ಯಾರ್ಥಿಗಳಿಗೆ ಹಾಗೂ ಅರ್ಹ ಫಲಾನುಭವಿಗಳಿಗೆ ಬಳಸದೆ ಬಲಿಪಶು ಮಾಡಲಾಗುತ್ತಿದೆ ಎಂದು ದೂರಿದರು. ದಲಿತ…

Read More

ಸೋಮವಾರಪೇಟೆ ಫೆ.23 NEWS DESK : ವಿದ್ಯುತ್ ಬಿಲ್ ಬಾಕಿ ನೆಪದಲ್ಲಿ ಸೆಸ್ಕ್ ನವರು ಕಾಫಿ ಬೆಳೆಗಾರರ 10ಎಚ್.ಪಿ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತಪರ ಸಂಘಟನೆಗಳ ಸಹಕಾರದಿಂದ ಆಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರುಗಳು ಕಾಫಿ ಬೆಳೆಗಾರರ ರಕ್ಷಣೆಗೆ ಬರಬೇಕು, ಮುಖ್ಯಮಂತ್ರಿ ಹಾಗೂ ಇಂಧನ ಸಚಿವರೊಂದಿಗೆ ಚರ್ಚಿಸಿ ಬೆಳೆಗಾರರ ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡಿಸಬೇಕು. ಯಾವುದೇ ಷರತ್ತಿಲ್ಲದೆ 10 ಎಚ್‌ಪಿ ಒಳಗಿನ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕಲ್ಪಿಸುವ ಸರ್ಕಾರದ ಅದೇಶದ ಪ್ರತಿಯನ್ನು ಬಿಡುಗಡೆ ಮಾಡಬೇಕು ಎಂದು ಸೋಮವಾರಪೇಟೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಕೊಡಗು ಜಿಲ್ಲೆ ಬರಪೀಡಿತ ತಾಲ್ಲೂಕ್ಕೆಂದು ಘೋಷಣೆಯಾಗಿದೆ. ಪ್ರಸಕ್ತ ವರ್ಷ ಅಕಾಲಿಕ ಮಳೆಯಿಂದ ಕಾಫಿ ಕೊಯ್ಲಿನ ಸಂದರ್ಭ ಕಾಫಿ ಮಣ್ಣು ಪಾಲಾಗಿದೆ. ಅತೀಯಾದ ಬಿಸಿಲಿನಿಂದ ಕಾಫಿ ಗಿಡಗಳು ಒಣಗುತ್ತಿವೆ. ಮಾರ್ಚ್ ಕೊನೆ ವಾರದಲ್ಲಿ ಕಾಫಿ ಗಿಡಗಳಲ್ಲಿ ಹೂ ಅರಳಿಸಬೇಕಾಗಿದೆ. ಈ ಸಂದರ್ಭದಲ್ಲಿ ವಿದ್ಯುತ್…

Read More

ಮಡಿಕೇರಿ ಫೆ.23 NEWS DESK :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ.ಜಾ ಮತ್ತು ಪ.ಪಂ ನೌಕರರ ಸಂಘದ ವತಿಯಿಂದ ಫೆ.24 ರಂದು ಮಡಿಕೇರಿಯಲ್ಲಿ ಸಂವಿಧಾನ ಜಾಗೃತಿ ಸಮಾವೇಶ ನಡೆಯಲಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕೆ.ಎಸ್‌.ಆರ್‌.ಟಿ.ಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಬಿ.ಜಯಶಂಕರ ಶೆಟ್ಟಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯ ನಂದಕುಮಾರ್ ವಹಿಸಲಿದ್ದಾರೆ. ಬೆಂಗಳೂರು ಎಂ.ಇ.ಎಸ್.ಕಾಲೇಜಿನ ಉಪನ್ಯಾಸಕ ಡಾ.ರವಿ ಅಪ್ಪಗೆರೆ ಆಶಯ ನುಡಿಗಳನ್ನಾಡಲಿದ್ದು, ಮುಖ್ಯ ಭಾಷಣಕಾರರಾಗಿ ಅಕ್ಕ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ.ಎಸ್‌.ಆರ್‌.ಟಿ.ಸಿ ಪುತ್ತೂರು ವಿಭಾಗ ಕಾರ್ಮಿಕ ಕಲ್ಯಾಣಧಿಕಾರಿ ಕೆ.ಕೆ.ಸೋಮಶೇಖರ್, ಮಡಿಕೇರಿ ಘಟಕ ವ್ಯವಸ್ಥಾಪಕ ಹೆಚ್.ಇ.ವೀರಭದ್ರಸ್ವಾಮಿ, ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಂ.ಟಿ.ಸುರೇಶ್ ಕಂಠಿ ಭಾಗವಹಿಸಲಿದ್ದಾರೆ.  

Read More

ಮಡಿಕೇರಿ ಫೆ.23 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭಾಷಣ ಸ್ಪರ್ಧೆ ಮತ್ತು 2022-23ನೇ ಸಾಲಿನ ಎಸ್‍ಎಸ್‍ಎಲ್‍ಸಿ ಕನ್ನಡ ಭಾಷೆ ಪರೀಕ್ಷೆಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಫೆ.25 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಿಕಾ ಭವನ ಟ್ರಸ್ಟ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎಸ್.ಐ.ಮುನಿರ್ ಅಹ್ಮದ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಲೋಕನಾಥ್ ಅಮೆಚೂರು ವಹಿಸಲಿದ್ದಾರೆ. ಅತಿಥಿಗಳಾಗಿ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್, ರೇವತಿ ರಮೇಶ್ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಪ್ರಶಸ್ತಿ ಪ್ರದಾನ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದ್ದು,…

Read More

ಮಡಿಕೇರಿ ಫೆ.23 : ಪೊನ್ನಂಪೇಟೆ ತಾಲ್ಲೂಕಿನ ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವಾಲಯದ ವಾರ್ಷಿಕೋತ್ಸವವು ಫೆ.26 ರಿಂದ ಮಾ.5ರ ವರೆಗೆ ನಡೆಯಲಿದೆ ಎಂದು ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಫೆ.26 ರಂದು ಸಂಜೆ 7 ಗಂಟೆಗೆ ಕೊಡಿಮರ ನಿಲ್ಲಿಸುವ ಮೂಲಕ ಆರಂಭವಾಗಲಿದ್ದು, ಮಾ.4 ರಂದು ನೆರ್ಪು ಹಾಗೂ ಮಾ.5 ರಂದು ದೇವರ ಅವಭೃತ ಸ್ನಾನ(ದೇವ ಕುಳಿಪೊ) ಕಾರ್ಯಕ್ರಮ ನಡೆಯಲಿದೆ. ಒಂಬತ್ತು ದಿನಗಳ ಕಾಲ ನಡೆಯುವ ವಾರ್ಷಿಕ ಉತ್ಸವದಲ್ಲಿ ಮಾ.2 ರಿಂದ ಪರಕೆ ಬೊಳಕ್ ಆರಂಭವಾಗಲಿದೆ. ಉತ್ಸವ ಮುಗಿಯುವವರೆಗೂ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತರು ಅನ್ನಸಂತರ್ಪಣೆಗೆ ಬೇಕಾದ ಸಾಮಗ್ರಿಗಳನ್ನು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9901262398, 8105401819, 9448620974  ಸಂಪರ್ಕಿಸಬಹುದಾಗಿದೆ ಎಂದು ತಕ್ಕಮುಖ್ಯಸ್ಥರು ತಿಳಿಸಿದ್ದಾರೆ. ಕುಂದಾ ಬೆಟ್ಟದ ತಪ್ಪಲಿನ ಮುಗಟಗೇರಿ ಗ್ರಾಮದಲ್ಲಿರುವ ಶ್ರೀ ಈಶ್ವರ ದೇವಸ್ಥಾನಕ್ಕೆ (ನಾಡ್ ದೇವಸ್ಥಾನ) ಅದರದೇಯಾದ ಇತಿಹಾಸವಿದ್ದು ಮುಗಟಗೇರಿ, ಕುಂದಾ, ಹುದೂರು, ಹಳ್ಳಿಗಟ್ಟು, ಈಚೂರು, ಆರ್ವತೋಕ್ಲು ಸೇರಿದಂತೆ ಈ ಸುತ್ತಾಮುತ್ತಲ ಗ್ರಾಮಗಳು ಸೇರುತ್ತದೆ ಎಂದು…

Read More

ಮಡಿಕೇರಿ ಫೆ.23 NEWS DESK : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಾಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ಪಡೆದುಕೊಳ್ಳಲು ಈ ಕಚೇರಿಯಲ್ಲಿ ಲಭ್ಯವಿರುವ ನಿಗಧಿತ ನಮೂನೆಯ ಅರ್ಜಿ ಪಡೆದು ಫೆ.29 ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ https://kmvstdcl.karnataka.gov.in ಮೂಲಕ ಪಡೆದುಕೊಳ್ಳುವುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಹೊಸ ಬಡಾವಣೆ, ರೇಸ್‍ಕೋರ್ಸ್ ರಸ್ತೆ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Read More

ಮಡಿಕೇರಿ ಫೆ.23 NEWS DESK : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಇಂಡಿಜೀನಿಯಸ್ ಟೆಕ್ನಾಲಜೀಸ್ ಫಾರ್ ಸೊಸೈಟಲ್ ಡೆವಲಪ್‍ಮೆಂಟ್ ಎಂಬ ವಿಷಯ ಕುರಿತು 2024 ರ ಫೆಬ್ರವರಿ, 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅಕಾಡೆಮಿ ಕಚೇರಿಯಲ್ಲಿ (ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಮೇ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದು. ಡ್ರಾಯಿಂಗ್ ಮತ್ತು ಪೆಯಿಟಿಂಗ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಗೂಗಲ್ ಫಾರ್ಮ್ https://forms.gie/e5UbmGWkkaC1utgLA ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್  http://www.kstacademy.in ನ್ನು ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ತಿಳಿಸಿದ್ದಾರೆ.

Read More

ಬೆಂಗಳೂರು ಫೆ.22 NEWS DESK : ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲ್ಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ. ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ…

Read More

ಮಡಿಕೇರಿ ಫೆ.22 NEWS DESK : ಇತಿಹಾಸ ಪ್ರಸಿದ್ಧ ಕುಂಜಿಲ ಪೈನರಿ ಮಖಾಂ ಉರೂಸ್ ಸಮಾರಂಭವು ಫೆ.23 ರಿಂದ 27ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪೈನರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಸೌಕತ್ ಅಲಿ ತಿಳಿಸಿದ್ದಾರೆ. ಕುಂಜಿಲ ಪೈನರಿ ಜಮಾಅತ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಉರೂಸ್ ಸಮಾರಂಭ ಕಾರ್ಯಕ್ರಮದಲ್ಲಿ ಹಲವಾರು ಸಾಮಾಜಿಕ ಧಾರ್ಮಿಕ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದು ಸರ್ವರೂ ಜಾತಿ ಧರ್ಮ ಭೇದ ಮರೆತು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಜಮಾಅತ್ ಕಾರ್ಯದರ್ಶಿ ಸಹೀದ್ ಪಯ್ಯಡತ್ ಮಾತನಾಡಿ ತಾ.23 ಶುಕ್ರವಾರ ಜುಮಾ ನಮಾಜ್ ಬಳಿಕ ಪೈನರಿ ಸುನ್ನಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಎ.ಸೌಕತ್ ಅಲಿ ದ್ವಜಾರೋಹಣ ನೆರವೇರಿಸುವುದರ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಅಂದು ರಾತ್ರಿ ಕಾಂತಪುರಂ ಅಬ್ದುಲ್ ಲತೀಫ್ ಸಖಾಫಿ ಅವರ ನೇತೃತ್ವದಲ್ಲಿ ಆತ್ಮೀಯ ಮದನಿಯಂ ಮಜ್ಲಿಸ್ ನಡೆಯಲಿದೆ. ಫೆ.24 ರ ರಾತ್ರಿ ಸ್ವಲಾತ್ ವಾರ್ಷಿಕ ಮತ್ತು…

Read More

ಮಡಿಕೇರಿ ಫೆ.22 NEWS DESK :  ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಶಿಕ್ಷಣ ಇಲಾಖೆ ಅಧಿಕಾರಿ ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ ಅವರು ಬಿಸಿ ಹಾಲಿನೊಂದಿಗೆ ಬೆರೆಸಿ ಕುಡಿಯಲು ‘ರಾಗಿ ಮಾಲ್ಟ್’ ವಿತರಿಸುವ ಕಾರ್ಯಕ್ರಮಕ್ಕೆ ‘ವಿದ್ಯಾರ್ಥಿಗಳಿಗೆ ರಾಗಿ ಮಾಲ್ಡ್’ ವಿತರಿಸುವ ಮೂಲಕ ಚಾಲನೆ ನೀಡಿದರು. ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಿಸಿ ಮಾತನಾಡಿದ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶಶಿಕಲಾ, ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಒಟ್ಟು 474 ಶಾಲೆಯ 29,584 ವಿದ್ಯಾರ್ಥಿಗಳಿಗೆ ರಾಗಿ ಮಾಲ್ಟ್ ವಿತರಿಸಲಾಗುತ್ತದೆ ಎಂದು ಹೇಳಿದರು. ಬೆಳಗ್ಗೆ ಕೆನೆ ಭರಿತ ಸಕ್ಕರೆ ಹಾಕಿದ ಹಾಲು, ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ಹಾಗೂ ಸಕ್ಕರೆ ಮಿಶ್ರಿತ ಹಾಲಿಗೆ ರಾಗಿ ಹೆಲ್ತ್ ಮಿಕ್ಸ್ ಒಳಗೊಂಡ ಮಾಲ್ಟ್‍ನ್ನು ವಿತರಿಸಲಾಗುತ್ತದೆ. ಜೊತೆಗೆ ಮಧ್ಯಾಹ್ನದ ಬಿಸಿಊಟ ನೀಡಲಾಗುತ್ತದೆ ಎಂದು ಹೇಳಿದರು.…

Read More