ಲೇಖಕ: admin

ಮಡಿಕೇರಿ ಮಾ.13 NEWS DESK  : ದೇಶದ ಒಕ್ಕೂಟ ವ್ಯವಸ್ಥೆಗೆ, ಬಲವರ್ಧನೆಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯವರ್ಧನೆಗೆ ಶ್ರೇಷ್ಠ ಸಂವಿಧಾನ ಸೂಕ್ತ ಅಡಿಪಾಯ ಹಾಕಿಕೊಟ್ಟಿದೆ ಎಂದು ಮಡಿಕೇರಿಯ ಆರ್.ಆರ್.ಆಸ್ಪತ್ರೆಯ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಭಾರತದ ಸಂವಿಧಾನದ ಬಗ್ಗೆ ವಿಚಾರ ಮಂಡನೆ ಹಾಗೂ 2022-23ನೇ ಸಾಲಿನಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅತಿ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನದ ಆಶಯಗಳ ಕುರಿತು ವಿಚಾರ ಮಂಡನೆ ಮಾಡಿದರು. ಸಂವಿಧಾನ ಎನ್ನುವುದು ದೇಶದ ಜೀವ ಸಂಕುಲಗಳನ್ನು ರಕ್ಷಿಸಿ ಉತ್ತಮವಾದ ಬದುಕು ಕಟ್ಟಿಕೊಡುವ ಆಡಳಿತಾತ್ಮಕ ಕಾನೂನು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಲ್ಲುವ ಹಕ್ಕು ಮತ್ತು ಕರ್ತವ್ಯವನ್ನು ಅಳವಡಿಸುವ ಮೂಲಕ ಜವಾಬ್ದಾರಿಯುತ ಭಾರತವನ್ನು ನಿರ್ಮಿಸಿ ಕೊಡುವಲ್ಲಿ ಸಂವಿಧಾನ…

Read More

ನಾಪೋಕ್ಲು ಮಾ.13 NEWS DESK  : ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನಾಪೋಕ್ಲು ಗ್ರಾ.ಪಂ ವ್ಯಾಪ್ತಿಯಲ್ಲಿ 1 ಕೋಟಿ 75 ಲಕ್ಷ ರೂಗಳ ಅನುದಾನದ ಹಲವು ಕಾಮಗಾರಿಗಳಿಗೆ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತವು ದೇವಾಲಯದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು. ಸದ್ಯದಲ್ಲಿಯೇ ಲೋಕಸಭಾ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇರುವುದರಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಆ ಬಳಿಕ ಕಾಮಗಾರಿಗಳಿಗೆ ಚಾಲನೆ ನೀಡಲು ಸಾಧ್ಯವಾಗುವುದಿಲ್ಲ. ಜೊತೆಯಲ್ಲೇ ಮಳೆಗಾಲ ಆರಂಭಗೊಂಡರೆ ಕಾಮಗಾರಿಗಳು ಸ್ಥಗಿತಗೊಳ್ಳಲಿವೆ. ಶೀಘ್ರಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮೂಲಸೌಕರ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು. ಗ್ರಾಮ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳ ಗುಣಮಟ್ಟ ಉತ್ತಮವಾಗಿರಬೇಕು ಹಾಗೂ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು. ಇದಕ್ಕೆ ಸಾರ್ವಜನಿಕರ ಸಂಪೂರ್ಣ ಸಹಕಾರ ಅಗತ್ಯ. ಸಾರ್ವಜನಿಕರ ಸಹಕಾರದಿಂದ ಅಭಿವೃದ್ದಿ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ…

Read More

ಮಡಿಕೇರಿ ಮಾ.13 NEWS DESK : ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳನ್ನು ಬಲಪಡಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಮಾ.15 ರಂದು ಮಡಿಕೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ತಿಳಿಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕಾವೇರಿ ಹಾಲ್ ನಲ್ಲಿ ಸಮಾವೇಶ ನಡೆಯಲಿದ್ದು, ಇದಕ್ಕೂ ಮೊದಲು ಖಾಸಗಿ ಬಸ್ ನಿಲ್ದಾಣದಿಂದ ಬೃಹತ್ ಮೆರವಣಿಗೆ ಸಾಗಲಿದೆ. ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಅಶ್ವಥ್ ನಾರಾಯಣ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್,…

Read More

ಮಡಿಕೇರಿ ಮಾ.13 NEWS DESK :  ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. :: *ಪಕ್ಷಕ್ಕೆ ಬಲ* :: ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ…

Read More

ಸಕಲೇಶಪುರ ಮಾ.13 NEWS DESK : ಅನಿಲ ಸಾಗಾಟದ ಟ್ಯಾಂಕರ್ ವೊಂದು ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾಗಿ ಆತಂಕ ಸೃಷ್ಟಿಯಾದ ಘಟನೆ ಬುಧವಾರ ಬೆಳಗ್ಗೆ ಶಿರಾಡಿಘಾಟ್ ರಸ್ತೆ ಎನ್‌ಎಚ್‌-75 ರಲ್ಲಿ ಡಬಲ್ ಕ್ರಾಸ್ ಬಳಿ ನಡೆದಿದೆ. ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿದೆ. ಮಂಗಳೂರು-ಹಾಸನ-ಬೆಂಗಳೂರು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ರಸ್ತೆಯಲ್ಲಿ ಕಳುಹಿಸಲಾಗುತ್ತಿದೆ. ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಬಹುದಾಗಿದೆ. ಘಟನಾ ಸ್ಥಳಕ್ಕೆ  ಅಗ್ನಿಶಾಮಕದಳ ಹಾಗೂ ಪೊಲೀಸರು, ಮಂಗಳೂರಿನ ಎಮ್. ಆರ್. ಪಿ. ಎಲ್ ನಿಂದ ತಜ್ಞರ ತಂಡ ಆಗಮಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿದ್ದು, ಟ್ಯಾಂಕರ್ ನ್ನು ತೆರವುಗೊಳಿಸಿದ ನಂತರವಷ್ಟೇ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗುವುದು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ ಮಾ.13 NEWS DESK : ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶವನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಸಂಸದ ಪ್ರತಾಪ್ ಸಿಂಹರಿಗೆ ಇದೀಗ ಅಭಿಮಾನಿಗಳ ಬೆಂಬಲ ದೊರೆತ್ತಿದೆ. ತಮ್ಮ ನಾಯಕ ಪ್ರತಾಪ್ ಸಿಂಹರಿಗೆ ಟಿಕೆಟ್ ನೀಡಲೇಬೇಕೆಂದು ಅಭಿಮಾನಿಗಳು ಮೈಸೂರಿನಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.  ದೇಶಕ್ಕೆ ಮೋದಿ, ಮೈಸೂರಿಗೆ ಪ್ರತಾಪ್ ಸಿಂಹ, ಪ್ರತಾಪ್ ಸಿಂಹ ಬೇಕೇ ಬೇಕು ಎಂದು ಪ್ರತಿಭಟನಾಕಾರರು  ಘೋಷಣೆ ಕೂಗುತ್ತಿದ್ದಾರೆ. ಕಳೆದ 10 ವರ್ಷಗಳ ಕಾಲ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದರೂ ಟಿಕೆಟ್ ನೀಡದೆ ಇರಲು ಕಾರಣ ಏನು ಎಂದು ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.   ಪ್ರತಾಪ್ ಸಿಂಹ ಪರ ಇಂದು ಬೆಂಬಲಿಗರು ಸಾಲು ಸಾಲು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

Read More

ಮಡಿಕೇರಿ ಮಾ.13 NEWS DESK : ವಿರಾಜಪೇಟೆಯ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.

Read More

ಸುಂಟಿಕೊಪ್ಪ ಮಾ.13 NEWS DESK : ಕೂರ್ಗ್ ವಾಟರ್ ಪಾರ್ಕ್ ವತಿಯಿಂದ 3ನೇ ಹೊನಲು ಬೆಳಕಿನ ಲೆಜೆಂಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯು ಕುಶಾಲನಗರದ ಜಾತ್ರಾ ಮೈದಾನದಲ್ಲಿ ಐದು ದಿನಗಳ ಕಾಲ ನಡೆಯಿತು. ಇತ್ತೀಚೆಗೆ ನಡೆದ ಕುಶಾಲನಗರ ಜಾತ್ರಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಐದು ದಿನಗಳ ಹೊನಲು ಬೆಳಕಿನ ಪಂದ್ಯಾವಳಿಯಲ್ಲಿ ರಾಯಲ್ ಗ್ಯಾಲಕ್ಸಿ ತಂಡ ಹಾಗೂ ಹರ್ಷಲ್ ಫ್ರೆಂಡ್ಸ್ ತಂಡಗಳ ನಡುವೆ ನಡೆದು ರಾಯಲ್ಸ್ ಗ್ಯಾಲಕ್ಸಿ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಹರ್ಷಲ್ ತಂಡವು ದ್ವಿತೀಯ ಸ್ಥಾನ ಪಡೆದರೆ, ಟೀಮ್ ಪೆಪ್ಸಿ ತೃತಿಯ ಸ್ಥಾನ ಹಾಗೂ ವೈಲ್ಡ್ ಕ್ಯಾಟ್ ನಾಲ್ಕನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ವಿಜೇತ ತಂಡಗಳಿಗೆ ಬಹುಮಾನ ವಿತರಣೆಯನ್ನು ಕ್ರೀಡಾಕೂಟ ಆಯೋಜಕರಾದ ಕೂರ್ಗ್ ವಾಟರ್ ಪಾರ್ಕ್ ಮಾಲೀಕರಾದ ಲಕ್ಷ್ಮಿ ನಾರಾಯಣ, ಕುಶಾಲನಗರ ಪುರಸಭಾ ಸದಸ್ಯ ಪ್ರಮೋದ್ ಮುತ್ತಪ್ಪ, ಅಭಿಯಂತರದ ಸೈಜನ್ ಪೀಟರ್, ಡಿಡಿ ಕಿರಣ್ ಹಾಗೂ ಎಲ್ಲಾ ತಂಡಗಳ ಮಾಲೀಕರು ನಾಯಕರು ಕ್ರೀಡಾಪಟುಗಳು ಇದ್ದರು.

Read More

ಮಡಿಕೇರಿ ಮಾ.12 NEWS DESK : ನಾಪೋಕ್ಲು ವ್ಯಾಪ್ತಿಯ ಬಲ್ಲಮಾವಟಿ ಗ್ರಾಮ ಪಂಚಾಯಿತಿಯಲ್ಲಿ 1.70 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು ಗ್ರಾಮಗಳ ಅಭಿವೃದ್ಧಿಗೆ ಪಣ ತೊಡಲಾಗಿದೆ ಎಂದು ತಿಳಿಸಿದರು. ಅಭಿವೃದ್ಧಿ ವಿಚಾರದಲ್ಲಿ ಎಲ್ಲರ ವಿಶ್ವಾಸ ಪಡೆದು ಕಾರ್ಯನಿರ್ವಹಿಸಲಾಗುವುದು. ಆ ನಿಟ್ಟಿನಲ್ಲಿ ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದರು. ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಪ್ರಮುಖರಾದ ಇಸ್ಮಾಯಿಲ್, ತೆನ್ನಿರಾ ಮೈನಾ, ಬಾಚಮಂಡ ಲವಚಿನ್ನಪ್ಪ, ತಾಪಂಡ ಅಪ್ಪಣ್ಣ, ಚೋಕಿರ ಬಾಬಿ ಭೀಮಯ್ಯ, ಮಚ್ಚುರ ರವೀಂದ್ರ, ಕೊಣಿಯಂಡ ರಾಜೀವಿ, ಮುಕ್ಕಾಟ್ಟೀರ ಸುತ ಸುಬ್ಬಯ್ಯ, ಮಣವಟ್ಟಿರ ಹರೀಶ್, ಬಾಳೆಯಡ ದೀನಾ ಪೂವಮ್ಮ, ಪಿಡಿಒ ಪೂಣಚ್ಚ, ಚೆಂಗೆಟೀರ ಕುಶಾಲಪ್ಪ, ಮಿಥುನ್, ಮಣವಟ್ಟಿರ ದಯಾ ಸೇರಿದಂತೆ ಹಲವರು ಇದ್ದರು.

Read More

ಮಡಿಕೇರಿ ಮಾ.12 NEWS DESK : ಕೊಡಗಿನ ಜನರ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಎಂಆರ್‍ಐ ಸ್ಕ್ಯಾನಿಂಗ್ ಘಟಕವನ್ನು ಹಾಗೂ ತಂತ್ರಾಂಶವನ್ನು ಶಾಸಕ ಡಾ.ಮಂತರ್ ಗೌಡ ಅವರ ಪರಿಶ್ರಮದಿಂದ ಮಡಿಕೇರಿ ಜಿಲ್ಲಾಸ್ಪತ್ರೆಗೆ ಮಂಜೂರು ಮಾಡಲಾಗಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಅಧೀನ ಜಿಲ್ಲಾ ಆಸ್ಪತ್ರೆಗೆ ಸಾರ್ವಜನಿಕ – ಖಾಸಗಿ ಸಹಭಾಗಿತ್ವ ಎಂಆರ್‍ಐ ಸ್ಕ್ಯಾನಿಂಗ್ ಕೇಂದ್ರವನ್ನು ಹಾಗೂ ವೈದ್ಯಕೀಯ ಉಪಕರಣ ಮಂಜೂರು ಮಾಡುವ ಬಗ್ಗೆ ಶಾಸಕ ಡಾ.ಮಂತರ್ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದರು. ಕೊಡಗು ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಸರ್ಕಾರಿ ಅಥವಾ ಖಾಸಗಿ ಸಂಸ್ಥೆ ಆಸ್ಪತ್ರೆಗಳಲ್ಲಿ ಎಂಆರ್‍ಐ ಸ್ಕ್ಯಾನಿಂಗ್ ಇಲ್ಲದೆ ಇರುವುದರಿಂದ ರೋಗಿಗಳು ಸ್ಕ್ಯಾನಿಂಗ್ ಗಾಗಿ ಇತರೆ ದೂರದ ಜಿಲ್ಲೆಗಳಾದ ಮೈಸೂರು, ಮಂಗಳೂರು, ಹಾಸನ, ಬೆಂಗಳೂರು ನಗರಗಳನ್ನು ಅವಲಂಬಿಸಲಾಗುತ್ತಿದ್ದು, ಎಂ.ಆರ್.ಐ ಸ್ಕ್ಯಾನಿಂಗ್ ಸೌಲಭ್ಯವಿಲ್ಲದೆ ಇರುವುದರಿಂದ ಕೊಡಗು ಜಿಲ್ಲೆಯಲ್ಲಿ ತೀವ್ರವಾದ ತೊಂದರೆಯಾಗುತಿತ್ತು. ಇತ್ತೀಚೆಗೆ ಜರುಗಿದ 2023-24 ನೇ ಸಾಲಿನ ರಾಜ್ಯ ಆಯವ್ಯಯ ಎಲ್ಲಾ ಜಿಲ್ಲೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಸಾರ್ವಜನಿಕ -…

Read More