ಲೇಖಕ: admin

ನಾಪೋಕ್ಲು ಮಾ.12 NEWS DESK :  ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು ಮಾ.23 ರಂದು ನಡೆಯಲಿದೆ ಎಂದು ದೇವಾಲಯದ ತಕ್ಕಮುಖ್ಯಸ್ಥರು, ಭಕ್ತಜನ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಯುಕ್ತ ಮಾ.10ರಂದು ಆದಿಸ್ಥಾನ ಮಲ್ಮದಲ್ಲಿ ಸಂಪ್ರದಾಯದಂತೆ ಪೂರ್ವಬಾದ್ರ ನಕ್ಷತ್ರದ ಸಮಯದಲ್ಲಿ ಕಟ್ಟುಬೀಳಲಾಯಿತು. ಮಾರ್ಚ್ 23ರ ಶನಿವಾರ ಬೆಳ್ಳಿಗೆ ದೇವತಕ್ಕರಾದ ಪರದಂಡ ಕುಟುಂಬಸ್ಥರು ಹಾಗೂ ಬಟ್ಯತ್ ವಕ್ಕ ಪೇರಿಯಂಡ ಕುಟುಂಬಸ್ಥರ ಹಾಗೂ ಸಂಬಂಧಪಟ್ಟ ಇತರ ಕುಟುಂಬಸ್ಥರ ಜೋಡೆತ್ತು ಪೋರಾಟ, ಪಾಲ್ ಬೈಯ್ಯಾಡ್ ನೊಂದಿಗೆ ಶಾಸ್ತ್ರೋಕ್ತವಾಗಿ ಕಲಾಡ್ಚ ಹಬ್ಬ ಪ್ರಾರಂಭವಾಗುವುದು. ಮಧ್ಯಾಹ್ನ ನಿತ್ಯ ಪೂಜೆಯೊಂದಿಗೆ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನೆರವೇರಲಿದೆ. ನಂತರ ಚಂಡೆ ಮದ್ದಳೆಯೊಂದಿಗೆ ದೇವರ ಉತ್ಸವ ಮೂರ್ತಿ ಯನ್ನು ಮೆರವಣಿಗೆಯಲ್ಲಿ ಆದಿಸ್ಥಾನ ಮಲ್ಮಗೆ ಕೊಂಡೊಯ್ಯುವರು. ಅಲ್ಲಿ ಸಾಂಪ್ರದಾಯಿಕ ದುಡಿಕೊಟ್ಟ್ ಪಾಟ್ ನೊಂದಿಗೆ ಪಾಡಿ, ನೆಲಜಿ, ಪೇರೂರಿನ ತಕ್ಕ ಮುಖ್ಯಸ್ತರು ಕೂಡಿ ಎತ್ತ್ ಪೋರಾಟ ಸೇವೆ, ಪಾಲ್ ಬೈಯ್ಯಾಡ್ ನ ಪಾಯಸಮಾಡಿ ಪ್ರಸಾದವಾಗಿ ಅರ್ಪಿಸುವರು. ಮುಸ್ಸಂಜೆ ವೇಳೆಗೆ ವಿವಿಧ…

Read More

ಮಡಿಕೇರಿ ಮಾ.12 NEWS DESK : ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ಸೋಮವಾರಪೇಟೆ ಮಂಡಲದ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಪದ್ಮನಾಭ ನೆಲ್ಲಿಹುದಿಕೇರಿ ಹಾಗೂ ಪ್ರಸಿದ್ಧ್ ಚಂಗಪ್ಪ ತಾಕೇರಿ ಆಯ್ಕೆಯಾಗಿದ್ದಾರೆ ಎಂದು ಸೋಮವಾರಪೇಟೆ ಯುವ ಮೋರ್ಚಾದ ಅಧ್ಯಕ್ಷ ಮೋಹಿತ್ ತಿಮ್ಮಯ್ಯ ತಿಳಿಸಿದ್ದಾರೆ. ಪಕ್ಷ ಸಂಘಟನೆಯ ದೃಷ್ಟಿಯಿಂದ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ ಹಾಗೂ ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಅವರ ಅನುಮೋದನೆ ಮೇರೆಗೆ ಇವರಿಬ್ಬರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಆಯ್ಕೆ ಮಾಡಿರುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Read More

ಪುತ್ತೂರು ಮಾ.12 NEWS DESK : ಬೆಂಕಿ ಇಲ್ಲದೆ ಬದುಕಿಲ್ಲ. ಆದರೆ ಬಳಕೆಯಲ್ಲಿ ವ್ಯತ್ಯಯ ಉಂಟಾದರೆ ಅದರಿಂದಾಗುವ ಅನಾಹುತ ಅಪಾರ ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ರುಕ್ಮಯ ಗೌಡ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತಾಡಿದರು. ಹುಲ್ಲು ಕಟ್ಟಿಗೆಗಳಿಂದ, ಎಣ್ಣೆಯಿಂದ, ಅನಿಲದಿಂದ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ ನಿವಾರಕ ವಿಧಾನಗಳನ್ನು ಅನುಸರಿಸಬೇಕು. ಸಂದರ್ಭಕ್ಕೆ ತಕ್ಕಂತೆ ಅದರ ನಿವಾರಣೆಗೆ ನೀರು, ಫೋಮ್ ಮಿಶ್ರಿತ ನೀರು ಹಾಗೂ ಇನ್ನಿತರ ಅಗ್ನಿ ಶಾಮಕಗಳನ್ನು ಬಳಸಬೇಕು ಎಂದರು. ಕೆಲವೊಂದು ಬಾರಿ ಸಾಂಪ್ರದಾಯಿಕ ವಿಧಾನಗಳೂ ಕೂಡ ಬಳಕೆಗೆ ಬರುತ್ತವೆ ಎಂದರು. ಅಗ್ನಿ ಆಕಸ್ಮಿಕಗಳು ಸಂಭವಿಸಿದಾಗ ಧೃತಿಗೆಡತೆ ನಿವಾರಣೆಗೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದರು. ವಿವಿಧ ಅಗ್ನಿಶಾಮಕ ವಿಧಾನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಟ್ಟರು. ವಿದ್ಯಾರ್ಥಿಗಳೂ…

Read More

ಕುಶಾಲನಗರ ಮಾ.12  NEWS DESK :  ಕುಶಾಲನಗರ ವಾಸವಿ ಯುವತಿಯರ ಸಂಘದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕುಶಾಲನಗರ ವಾಸವಿ ಮಹಲ್ ಹಿಂಬದಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷೆ ಕವಿತಾ ಪ್ರವೀಣ್ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜೇಸಿ ಮೈಸೂರು ವಲಯ ಅಧ್ಯಕ್ಷೆ ಆಶಾ ಜೈನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಹಿಳೆಯರಿಗೆ ಹಿತವಚನ ನುಡಿದರು. ಇದೇ ಸಂದರ್ಭ ಅಂತರರಾಷ್ಟ್ರೀಯ ಸ್ಕೇಟಿಂಗ್ ಕ್ರೀಡಾಪಟು ಕಲ್ಪನಾ ಕುಟ್ಟಪ್ಪ, ಆಶಾ ಕಾರ್ಯಕರ್ತೆಯರಾದ ರಾಧಾವತಿ, ಮೀನಾಕ್ಷಿ, ರೂಪ, ಸರಸ್ವತಿ ಅವರುಗಳನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಸ್ನೇಹ ನಿತಿನ್, ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್ ,ಆರ್ಯವೈಶ್ಯ ಸಮಾಜದ ಬಿ ಎಲ್ ಸತ್ಯನಾರಾಯಣ, ವಾಸವಿ ಯುವಜನ ಸಂಘದ ಅಧ್ಯಕ್ಷರಾದ ಪ್ರವೀಣ್, ವಾಸವಿ ಬಾಲಕಿಯರ ಸಂಘದ ಅಧ್ಯಕ್ಷ ಸ್ಪೂರ್ತಿ ಮತ್ತಿತರರು ಇದ್ದರು.

Read More

ಮಡಿಕೇರಿ ಮಾ.12 NEWS DESK : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್(ಟೈಲರಿಂಗ್) ಕುರಿತ 30 ದಿನಗಳ ಉಚಿತ ತರಬೇತಿಯು ಏ.12 ರಿಂದ ಆರಂಭವಾಗಲಿದ್ದು, ಏಪ್ರಿಲ್ 12 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಭಾಗವಹಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ…

Read More

ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ (ಪಿಎಂಎಂಎಸ್‍ವೈ) ಯೋಜನೆಯಡಿ ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೊತ್ಸಾಹಿಸಲು ಪರಿಸರ ಸ್ನೇಹಿ ಸುಸಜ್ಜಿತ ಕಿಯೋಸ್ಕ್ ಅಳವಡಿಸಲಾದ “ಮತ್ಸ್ಯವಾಹಿನಿ” ಯೋಜನೆಯ ಇ-ತ್ರಿಚಕ್ರ ವಾಹನಗಳಲ್ಲಿ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ವಾಹನಗಳನ್ನು ಪರವಾನಗಿ ಆಧಾರದಲ್ಲಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸಾಮಾನ್ಯ ವರ್ಗದ:02, ಪ.ಜಾತಿ/ಪ.ಪಂಗಡ:01 ಮತ್ತು ಮಹಿಳೆ:01 ಮೀನು ಮಾರಾಟಗಾರರು ಅರ್ಜಿ ಸಲ್ಲಿಸಲು ಮಾರ್ಚ್, 25 ಕೊನೆಯ ದಿನವಾಗಿದೆ. ಸಾಮಾನ್ಯ ವರ್ಗದ ಪರವಾನಗಿದಾರರಿಗೆ ಪ್ರಾರಂಭಿಕ ಭದ್ರತಾ ಠೇವಣಿ ರೂ. 1 ಲಕ್ಷ ಮತ್ತು ಪ.ಜಾತಿ/ಪ.ಪಂಗಡ/ಮಹಿಳಾ ಪರವಾನಗಿದಾರರಿಗೆ ಪ್ರಾರಂಭಿಕ ಭದ್ರತಾ ಠೇವಣಿ ರೂ. 50 ಸಾವಿರಗಳನ್ನು ನಿಗಧಿಪಡಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ಮಾ.12 NEWS DESK : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಸರ್ಕಾರದ ಪ್ರಮುಖ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಕುರಿತು ‘ಕಲಾಜಾಥ ಸಂಚಾರಿ ವಾಹನ ಮೂಲಕ ಪ್ರದರ್ಶನ’ಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ  ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಲಾಜಾಥ ಸಂಚಾರಿ ವಾಹನದ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಪ್ರದರ್ಶನಕ್ಕೆ ಚಾಲನೆ ನೀಡಿದರು. ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕುಗಳ ಆಯ್ದ ಗ್ರಾಮಗಳಲ್ಲಿ ಕಲಾಜಾಥ ಸಂಚಾರಿ ವಾಹನದ ಮೂಲಕ ಸರ್ಕಾರದ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳ ಪ್ರದರ್ಶನ ನಡೆಯಲಿದೆ ಎಂದು ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಮಾಹಿತಿ ನೀಡಿದರು. ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರು ಗ್ಯಾರಂಟಿ ಯೋಜನೆಗಳ ಹಾಡು ಹಾಡಿ ಗಮನ ಸೆಳೆದರು.

Read More

ಮಡಿಕೇರಿ ಮಾ.11 NEWS DESK  : ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷಾ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಇತ್ತೀಚೆಗೆ ಹೊರಡಿಸಿರುವ ಸರ್ಕಾರದ ಅಧಿಸೂಚನೆ ಹಿನ್ನೆಲೆ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25 ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ…

Read More

ಮಡಿಕೇರಿ ಮಾ.11 NEWS DESK  : ಕೊಡಗಿನ ಜನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡುವ ಮೂಲಕ ಬದಲಾವಣೆಯನ್ನು ತಂದಿದ್ದಾರೆ. ರಾಜ್ಯದ ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡ ಕಾಂಗ್ರೆಸ್ ಸರ್ಕಾರದಿಂದ ಜಿಲ್ಲೆಯಲ್ಲಿ ಅಭಿವೃದ್ಧಿಯ ಮಹಾಪೂರವೇ ಆಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ರಮಾನಾಥ್ ಬೇಕಲ್ ಬಣ್ಣಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳು ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಿಲ್ಲ. ಜಿಲ್ಲೆಯ ಸುಮಾರು 1ಲಕ್ಷ ಮಂದಿ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿದ್ದು, ಪ್ರತಿ ತಿಂಗಳು 20 ಕೋಟಿ ರೂ. ಬರುತ್ತಿದೆ. ಶಕ್ತಿ ಯೋಜನೆಯ ಮೂಲಕ ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಮಹಿಳೆಯರಿಂದ ಆರ್ಥಿಕ ಚಲಾವಣೆ ಚುರುಕುಗೊಂಡಿದ್ದು, ವ್ಯಾಪಾರ ವಹಿವಾಟು ಚೇತರಿಕೆ ಕಂಡಿದೆ, ಹಳ್ಳಿ ಹಳ್ಳಿಗಳಲ್ಲಿ ಮಂದಹಾಸವಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳೊಂದಿಗೆ ಜನರಿಗೆ ಬೇಕಾದ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಜಿಲ್ಲೆಯ ಇಬ್ಬರು ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಭಾಗಮಂಡಲ ಕ್ಷೇತ್ರ ಈ…

Read More